ಪರಿಹಾರ ಕಾಣದ ಬಿಸಿಎಂ ಹಾಸ್ಟೆಲ್‌ ಅವ್ಯವಸ್ಥೆ!


Team Udayavani, Jan 24, 2021, 6:30 AM IST

ಪರಿಹಾರ ಕಾಣದ ಬಿಸಿಎಂ ಹಾಸ್ಟೆಲ್‌ ಅವ್ಯವಸ್ಥೆ!

ಕುಂದಾಪುರ: ಇಲ್ಲಿನ ಶಾಸ್ತ್ರಿ ಸರ್ಕಲ್‌ ಬಳಿ ಇರುವ ಬಿಸಿಎಂ ಹಾಸ್ಟೆಲ್‌ನ ತ್ಯಾಜ್ಯ ನೀರು ಸಮಸ್ಯೆ ಬಗೆಹರಿಸಲು ಇಂದಿನವರೆಗೂ ಯಾರಿಗೂ ಸಾಧ್ಯವಾಗಿಲ್ಲ. ಜಿ.ಪಂ. ಉಪಾಧ್ಯಕ್ಷರು, ಪುರಸಭೆ ಸದಸ್ಯರು, ಮುಖ್ಯಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗದ ಅಧ್ಯಕ್ಷರೇ ಪರಿಶೀಲಿಸಿದರೂ ಸಮಸ್ಯೆ ಮಾತ್ರ ಪರಿಹಾರವಾಗಿಲ್ಲ. ಸದ್ಯಕ್ಕೆ ಕೇಳಿಬರುತ್ತಿರುವ ಉತ್ತರ ಒಂದೇ ಪರಿಹಾರವಾಗಲಿದೆ, ಆದರೆ ಈಗ ಅನುದಾನ ಇಲ್ಲ!

ಏನಿದು ಸಮಸ್ಯೆ? :

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ಡಿ. ದೇವರಾಜ ಅರಸು ಬಿಸಿಎಂ ಮೆಟ್ರಿಕ್‌ ಅನಂತರದ ಬಾಲಕಿಯರ ಹಾಸ್ಟೆಲ್‌ 2001ರಲ್ಲಿ ಮಂಜೂರಾಗಿದೆ. ಇಲ್ಲಿನ ತಾಲೂಕು ಪಂಚಾಯತ್‌ ಬಳಿಯ ರಸ್ತೆಯಲ್ಲಿ ಹೋಗುವಾಗ ಹಾಸ್ಟೆಲ್‌ನ ಹೊಸ ಕಟ್ಟಡ ಕಾಣುತ್ತದೆ. ಅಲ್ಲಿಂದ ಮುಂದೆ ಸಾಗಿದಾಗ ವಾಸನೆ ಮೂಗಿಗೆ ಅಡರುತ್ತದೆ. ಹಾಗೆ ಮೂಗು ಮುಚ್ಚಿಕೊಂಡು ಹೋದರೆ ಸಿಗುವುದೇ ಬಿಸಿಎಂ ಹಳೆ ಹಾಸ್ಟೆಲ್‌!  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ಹಳೆ ಕಟ್ಟಡದಲ್ಲಿ ಈ ಹಿಂದೆ ಮಿತಿಗಿಂತ ಹೆಚ್ಚಿನ ಸಂಖ್ಯೆ ವಿದ್ಯಾರ್ಥಿಗಳು ಇದ್ದರು. 100 ಮಕ್ಕಳ ಸಾಮರ್ಥ್ಯ ಇದ್ದಾಗ 200 ಮಕ್ಕಳನ್ನು  ತುಂಬಿಸಲಾಗಿತ್ತು. ಅಷ್ಟು ಮಂದಿ ಇರುವ ಜಾಗದಲ್ಲಿ ಸೀಮಿತ ಸಂಖ್ಯೆಯ ಶೌಚಾಲಯ, ಸ್ನಾನದ ಕೋಣೆ, ಬಟ್ಟೆ  ಒಗೆಯುವ ಸ್ಥಳವನ್ನು ಬಳಸಿ ಉಳಿದು ಕೊಳ್ಳಬೇಕಿತ್ತು. ಆ ಬಳಿಕ ಕೆಲವು ಮಕ್ಕಳನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು.

ದುರ್ಗಂಧ :

ಸ್ನಾನಗೃಹದ, ಬಟ್ಟೆ ಒಗೆದ ನೀರು ರಸ್ತೆ  ಬದಿಯ ಚರಂಡಿ ಸೇರುತ್ತದೆ. ಇದು ಅಸಾಧ್ಯ  ವಾತಾವರಣ ಉಂಟು ಮಾಡುತ್ತದೆ. ಇಲ್ಲೇ ಸನಿಹದಲ್ಲಿ ಮಹಿಳಾ ಮಂಡಳಗಳ ಒಕ್ಕೂಟ, ಸಾಂತ್ವನ ಕೇಂದ್ರ, ರೋಟರಿ ಸಭಾಂಗಣ, ಅಂಬೇಡ್ಕರ್‌ ಸಭಾಭವನ ಇದ್ದು ಸಾರ್ವಜನಿಕರು ಬರುತ್ತಾರೆ. ಇಲ್ಲಿಗೆ ಬರುವವರಿಗೆಲ್ಲ ನೀರು ಹರಿವ ವೇಳೆ ವಾಸನೆ ಸಹಿಸಿಕೊಳ್ಳಬೇಕಾದ್ದು ಅನಿವಾರ್ಯ.

ಸ್ವಚ್ಛತೆ ಇಲ್ಲ :

ಸ್ವಚ್ಛ ಕುಂದಾಪುರ ಎಂದು ಘೋಷಣೆ ಹಾಕುವ ಕುಂದಾಪುರ ಪುರಸಭೆಗೆ ಈ ಕೊಳಚೆಯಿಂದಾಗಿ  ಕಪ್ಪುಚುಕ್ಕಿ ಇಟ್ಟಂತಾ ಗಿದೆ. ತಾ.ಪಂ. ಸನಿಹ ದಾಟಿ ಬಂದವರಿಗೆಲ್ಲ ಈ ದುರ್ನಾತವೇ ಮೊದಲ ಸ್ವಾಗತವಾಗಿದೆ. ಬಿಸಿಎಂ ಇಲಾಖೆ ಕೂಡಾ ಮಕ್ಕಳ ಆರೋಗ್ಯದ ದೃಷ್ಟಿಯಿಂದ, ಸಾರ್ವಜನಿಕ ಹಿತದೃಷ್ಟಿಯಿಂದ ಯೋಚಿಸಬೇಕಿದೆ.

ನಿಂತಿಲ್ಲ ವಾಸನೆ :

ಕೋವಿಡ್ ಎಂದು ಹಾಸ್ಟೆಲ್‌ಗ‌ಳು ಭಣಗುಟ್ಟಿತು. ಆದರೆ ಕೋವಿಡ್ ಸಂದರ್ಭ ಕ್ವಾರಂಟೈನ್‌ ಸೆಂಟರ್‌ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದವು. ಹಾಗಾಗಿ ಹಾಸ್ಟೆಲ್‌ಗ‌ಳು ಭಣಗುಟ್ಟಲಿಲ್ಲ. ಜನ ತಪ್ಪಲಿಲ್ಲ. ಜನರಿಗೆ ತ್ಯಾಜ್ಯ ನೀರಿನ ತೊಂದರೆಯೂ ತಪ್ಪಲಿಲ್ಲ.

ಭರವಸೆ :

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅವರು ಕೆಲ ದಿನಗಳ ಹಿಂದೆ ಭೇಟಿ ನೀಡಿ ತ್ಯಾಜ್ಯ ನೀರಿನ ಸಮಸ್ಯೆ ಪರಿಹರಿಸುವಂತೆ ಸೂಚಿಸಿದ್ದಾರೆ. ಪ್ರಸ್ತುತ ಸಮಸ್ಯೆ ಇದ್ದರೆ ಪುರಸಭೆಯಿಂದ ತ್ಯಾಜ್ಯವನ್ನು ಕೊಡೊಯ್ಯುವ ವ್ಯವಸ್ಥೆ ಮಾಡಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ. ತ್ಯಾಜ್ಯ ನೀರು ರಸ್ತೆ ಬದಿಗೆ ಚರಂಡಿಗೆ ಹೋಗದಂತೆ ಮಾಡಿ ಇಲ್ಲೇ ಶುದ್ಧಗೊಳ್ಳುವ ಪ್ರಕ್ರಿಯೆಗೆ ಬೇಕಾದ ಯೋಜನೆಗೆ ನೀಲನಕಾಶೆ ತಯಾರಾಗಿಲ್ಲ. ಅನುದಾನಕ್ಕೆ ಬೇಡಿಕೆ ಇಟ್ಟಿಲ್ಲ ಎಂದು ಜನ  ಇಲ್ಲಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಸಮಸ್ಯೆ ಕುರಿತು “ಉದಯವಾಣಿ’ “ಸುದಿನ’ ವರದಿ ಮಾಡಿತ್ತು.

ಈಗಾಗಲೇ ಬಂದ ಅನುದಾನ ಲಭ್ಯ ಇಲ್ಲ. ಯೋಜನೆ ತಯಾರಾದ ಕೂಡಲೇ ಅನುದಾನ‌ಕ್ಕೆ ಬರೆಯಲಾಗುವುದು. ಶೀಘ್ರವೇ ಕಾಮಗಾರಿ ಮಾಡಲಾಗುವುದು. -ನರಸಿಂಹ ಪೂಜಾರಿ,  ತಾಲೂಕು ವಿಸ್ತರಣಾಧಿಕಾರಿ,  ಬಿಸಿಎಂ ತಾಲೂಕು ಕಲ್ಯಾಣಾಧಿಕಾರಿ (ಪ್ರಭಾರ) 

ಎಂಜಿನಿಯರ್‌ ಮೂಲಕ ನಕ್ಷೆ ಯೋಜನೆಯ ರೂಪರೇಷೆ ನಡೆಯುತ್ತಿದ್ದು ತ್ಯಾಜ್ಯ ನೀರು ಕಟ್ಟಡದ ಆವರಅಣದಿಂದ ಹೊರಗೆ ಹೋಗದೇ ಒಳಗೇ ಶುದ್ಧಗೊಳ್ಳುವಂತೆ ಮಾಡಲಾಗುವುದು. ತ್ಯಾಜ್ಯ ನೀರಿಗೆ ಹೊಸ ಟ್ಯಾಂಕ್‌ ಕೂಡಾ ರಚನೆಯಾಗಲಿದೆ. ವಾಸನೆ ಬರದಂತೆ ಮಾಡಲು ಪುರಸಭೆಯಿಂದ ಸ್ವಚ್ಛಗೊಳಿಸಲಾಗುವುದು. -ಗಿರೀಶ್‌ ಜಿ.ಕೆ. ಸದಸ್ಯರು, ಪುರಸಭೆ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.