ಬೆಳ್ವೆ : ಪೆಟ್ರೋಲ್ ಬಂಕ್ನಿಂದ ನಗದು ಕಳವು, ಆರೋಪಿಗಾಗಿ ಪೊಲೀಸರ ಶೋಧ ಕಾರ್ಯ
Team Udayavani, Jun 29, 2022, 12:17 AM IST
ಸಿದ್ದಾಪುರ : ಬೆಳ್ವೆ ತಾರಿಕಟ್ಟೆ ಕ್ರಾಸ್ ಸಮೀಪದ ರಾ.ಹೆ.ಗೆ ತಾಗಿಕೊಂಡಿರುವ ಶ್ರೀ ಗಣೇಶ್ ಫ್ಯೂಯಲ್ಸ್ ಸರ್ವೀಸ್ ಪೆಟ್ರೋಲ್ ಬಂಕ್ನ ಕಚೇರಿಗೆ ನುಗ್ಗಿದ ಕಳ್ಳ 1,89,000 ರೂ. ನಗದು ದೋಚಿಕೊಂಡು ಪರಾರಿಯಾದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಶ್ರೀ ಗಣೇಶ್ ಫ್ಯೂಯಲ್ಸ್ ಸರ್ವೀಸ್ ಪೆಟ್ರೋಲ್ ಬಂಕ್ ಶೇಡಿಮನೆ ಪ್ರಭಾವತಿ ಪಿ.ಶೆಟ್ಟಿ ಮಾಲಕತ್ವದಾಗಿದ್ದು, ಇದನ್ನು ಪ್ರಕಾಶ ಶೆಟ್ಟಿ ಎನ್ನುವವರು ನಡೆಸುತ್ತಿದ್ದರು. ಬೆಳಗ್ಗಿನ ಪಾಳಿಯಲ್ಲಿ ಕೆಲಸ ಮಾಡುವ ಪ್ರಭಾಕರ ಶೆಟ್ಟಿ ಅವರು ಮಂಗಳವಾರ ಬೆಳಗ್ಗೆ 6.30ರ ಸುಮಾರಿಗೆ ಬಂಕ್ಗೆ ಬಂದು ಕಚೇರಿ ಬಳಿ ಹೋದಾಗ ಕಚೇರಿಯ ಬಾಗಿಲು ತೆರದು ಕೊಂಡಿರುವುದನ್ನು ಗಮನಿಸಿದ್ದಾರೆ. ಕಳ್ಳ ಬಂಕ್ ಹಿಂಭಾಗದ ಮೂಲಕ ಬಂದು ಬಾಗಿಲು ಒಡೆದು ಒಳಪ್ರವೇಶಿಸಿದ್ದಾನೆ. ಒಟ್ಟು ಅಂದಾಜು 1,89,000 ರೂ. ನಗದು ಹಾಗೂ ಚಿಕ್ಕ 10 ಆಯಿಲ್ ಪ್ಯಾಕೆಟ್ಗಳನ್ನು ದೋಚಿಕೊಂಡು ಪರಾರಿಯಾಗಿದ್ದಾನೆ. ಅಕೌಂಟೆಂಟ್ ಪೂರ್ಣಿಮಾ ಅವರು ಘಟನೆಯ ಕುರಿತು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಕುಂದಾಪುರ ವೃತ್ತ ನೀರಿಕ್ಷಕ ಗೋಪಿಕೃಷ್ಣ ಕೆ. ಆರ್., ಶಂಕರನಾರಾಯಣ ಪೊಲೀಸ್ ಠಾಣೆ ಉಪನಿರೀಕ್ಷಕ ಶ್ರೀಧರ ನಾಯ್ಕ ಮತ್ತು ಸಿಬಂದಿ ಭೇಟಿ ನೀಡಿದ್ದಾರೆ. ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳವರು ಬಂದು ಶೋಧ ಕಾರ್ಯ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಡುಪಿಯಲ್ಲಿ ನಾಳೆ ಕೃಷ್ಣಾಷ್ಟಮಿ, ನಾಡಿದ್ದು ವಿಟ್ಲ ಪಿಂಡಿ
ಕೋಡಿ ಹೊಸಬೆಂಗ್ರೆಯಲ್ಲಿ ಕಡಲ್ಕೊರೆತ : ಮನೆ, ರಸ್ತೆ ಅಪಾಯದಲ್ಲಿ; ತಾತ್ಕಾಲಿಕ ಪರಿಹಾರ
ಶಿರ್ವ: ಮನೆಗೆ ನುಗ್ಗಿ ಹಲ್ಲೆ, ಹಾನಿ;ಮೂವರ ವಿರುದ್ಧ ಪ್ರಕರಣ ದಾಖಲು
ಉಡುಪಿ: ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್, ಕೋಮು ಸೌಹಾರ್ದತೆಗೆ ಆದ್ಯತೆ; ನೂತನ ಎಸ್ಪಿ
ಉಡುಪಿ: ಸಾರ್ವಕರ್ ಫ್ಲೆಕ್ಸ್: ಬಿಜೆಪಿ ಯುವ ಮೋರ್ಚದಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ
MUST WATCH
ಹೊಸ ಸೇರ್ಪಡೆ
ನಕಲಿ ಸುದ್ದಿ ಹರಡುತ್ತಿದ್ದ ಭಾರತದ 7 ಮತ್ತು ಪಾಕ್ ನ 1 ಯೂಟ್ಯೂಬ್ ಚಾನೆಲ್ ನಿಷೇಧಿಸಿದ ಕೇಂದ್ರ
ಅಕ್ರಮ ಹುಲಿ ಉಗುರು ಮಾರಾಟಕ್ಕೆ: ಇಬ್ಬರ ಬಂಧನ
ಮೂಡಿಗೆರೆ: ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ : ಆರು ಮಂದಿ ಬಂಧನ, ನಗದು ವಶ
ಈಜಲು ಹೋಗಿ ನಿರುಪಾಲಾದ ಇಂಜಿನಿಯರ್ : ಎರಡನೇ ದಿನಕ್ಕೆ ಮುಂದುವರೆದ ಶೋಧ ಕಾರ್ಯ
ರಾಯಚೂರನ್ನು ತೆಲಂಗಾಣದೊಳಕ್ಕೆ ವಿಲೀನಗೊಳಿಸಲು ಜನರು ಒತ್ತಾಯಿಸುತ್ತಿದ್ದಾರೆ: ಸಿಎಂ ಕೆಸಿಆರ್