ಇನ್ನೂ  ಪೂರ್ಣ ಪ್ರಮಾಣದಲ್ಲಿ ಆರಂಭವಾಗದ ಬಸ್‌ ಸಂಚಾರ


Team Udayavani, Jul 28, 2021, 3:20 AM IST

ಇನ್ನೂ  ಪೂರ್ಣ ಪ್ರಮಾಣದಲ್ಲಿ ಆರಂಭವಾಗದ ಬಸ್‌ ಸಂಚಾರ

ಕುಂದಾಪುರ:  ಪದವಿ ಕಾಲೇಜುಗಳು ಸೋಮವಾರದಿಂದ ಆರಂಭಗೊಂಡಿದ್ದು, ಆದರೆ ಮೊದಲ ದಿನವೇ ಕುಂದಾಪುರದ ಬೇರೆ ಬೇರೆ ಕಡೆಗಳಿಂದ ಕಾಲೇಜಿಗೆ ಬರಲು ಬಸ್‌ ಇಲ್ಲದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದಾರೆ. ಕೋವಿಡ್‌ ಎರಡನೇ ಅಲೆ, ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡ ಬಸ್‌ಗಳು ಮತ್ತೆ ಪೂರ್ಣ ಪ್ರಮಾಣದಲ್ಲಿ ಇನ್ನೂ ಸಹ ಸಂಚಾರ ಆರಂಭಿಸದ ಹಿನ್ನೆಲೆಯಲ್ಲಿ ಈ ಸಮಸ್ಯೆ ಉಂಟಾಗಿದೆ.

ಕುಂದಾಪುರದ ಅಮಾಸೆಬೈಲು, ಹಾಲಾಡಿ, ಹೊಸಂಗಡಿ, ಹಳ್ಳಿಹೊಳೆ, ಸಿದ್ದಾಪುರ, ಕೊಲ್ಲೂರು, ವಂಡ್ಸೆ, ನೇರಳಕಟ್ಟೆ, ಹಟ್ಟಿಯಂಗಡಿ, ತ್ರಾಸಿ, ಮುಳ್ಳಿಕಟ್ಟೆ, ಹೆಮ್ಮಾಡಿ, ತಲ್ಲೂರು ಸೇರಿದಂತೆ ಬಹುತೇಕ ಗ್ರಾಮೀಣ ಭಾಗಗಳ ವಿದ್ಯಾರ್ಥಿಗಳು ಬಸ್‌ಗಾಗಿ ಪರದಾಟ ನಡೆಸಿದ್ದು ಕಂಡು ಬಂತು.

ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವ ಸಾರ್ವಜನಿಕರು ಬಸ್‌ ಇಲ್ಲದೆ  ನಿಲ್ದಾಣಗಳಲ್ಲಿ ಗಂಟೆ ಗಟ್ಟಲೆ ಕಾಯುವ ಸ್ಥಿತಿಯಿದೆ. ಬಸ್‌ ಬಂದರೂ ಆಗಲೇ ಭರ್ತಿ ಆಗಿದ್ದರಿಂದ ಅದಕ್ಕೆ ಹತ್ತಲು ಸಾಧ್ಯವಾಗದೆ ಬೇರೆ ಬಸ್‌ಗೆ ಕಾಯುವ ಅಥವಾ ಇನ್ನಿತರ ವಾಹನ ಬಾಡಿಗೆ ಮಾಡಿಕೊಂಡು ತೆರಳಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ. ಕೆಲವು ವಿದ್ಯಾರ್ಥಿಗಳು ಖಾಸಗಿ ವಾಹನಗಳಲ್ಲಿ ಡ್ರಾಪ್‌ ಪಡೆದುಕೊಂಡರೆ, ಇನ್ನು ಕೆಲವು ವಿದ್ಯಾರ್ಥಿಗಳು ಜತೆಗೂಡಿ ಆಟೋ ರಿûಾ ಬಾಡಿಗೆ ಮಾಡಿಕೊಂಡು ತೆರಳಿದ ಪ್ರಸಂಗ ನಡೆಯಿತು. ಕೇವಲ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಈ ಸ್ಥಿತಿಯಾದರೆ, ಇನ್ನೂ ಪಿಯುಸಿ, ಪ್ರೌಢಶಾಲೆಗಳೆಲ್ಲ ಆರಂಭವಾದರೆ ಆಗ ಈ ಸಮಸ್ಯೆ ಇನ್ನಷ್ಟು ಉಲ½ಣಗೊಳ್ಳುವ ಸಾಧ್ಯತೆಗಳಿವೆ.

ಎಲ್ಲ  ಬಸ್‌ಗಳು ರಸ್ತೆಗಿಳಿದಿಲ್ಲ  :

ಲಾಕ್‌ಡೌನ್‌ನಿಂದಾಗಿ ಸ್ಥಗಿತಗೊಂಡಿದ್ದ ಬಸ್‌ ಸಂಚಾರವು ಜೂನ್‌ ಕೊನೆ ಹಾಗೂ ಜುಲೈ ಮೊದಲ ವಾರದಲ್ಲಿ ಆರಂಭಗೊಂಡಿತ್ತು. ಆದರೆ ಇನ್ನೂ ಕೂಡ ಲಾಕ್‌ಡೌನ್‌ಗಿಂತ ಮುಂಚೆ ಸಂಚರಿಸುತ್ತಿದ್ದ ಎಲ್ಲ ಬಸ್‌ಗಳು ರಸ್ತೆಗಿಳಿದಿಲ್ಲ. ಕೆಲವು ನಿಲ್ಲಿಸಿದ್ದ ಬಸ್‌ಗಳು ಅಲ್ಲಿಯೇ ಇವೆ. ಕುಂದಾಪುರ ಡಿಪೋ ವ್ಯಾಪ್ತಿಯಲ್ಲಿ ಲಾಕ್‌ಡೌನ್‌ಗಿಂತ ಮುಂಚೆ ಸಿದ್ದಾಪುರ, ಬೈಂದೂರು, ಗಂಗೊಳ್ಳಿ, ಹಾಲಾಡಿ, ಉಡುಪಿ ಕಡೆಗೆ ಸೇರಿದಂತೆ 33 ಬಸ್‌ಗಳು ಸಂಚರಿಸುತ್ತಿದ್ದವು. ಈಗ 20 ಬಸ್‌ಗಳಷ್ಟೇ ಸಂಚರಿಸುತ್ತಿವೆ. ಇನ್ನೂ ಖಾಸಗಿ ಸಹ ಕೆಲವು ಬಸ್‌ಗಳು ಮಾತ್ರ ಸಂಚರಿಸುತ್ತಿವೆ.

ಗ್ರಾಮೀಣ ಭಾಗಗಳಿಂದ ಕುಂದಾಪುರಕ್ಕೆ ಬೆಳಗ್ಗೆ ಬರುವ ಬಹುತೇಕ ಎಲ್ಲ ಬಸ್‌ಗಳು ಜನರಿಂದ ತುಂಬಿರುತ್ತವೆ. ಇದರಿಂದ ನಾವು ಬೇರೆ ಬಸ್‌ ಇಲ್ಲದೆ ನೇತಾಡಿಕೊಂಡು ಬರುವಂತಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಪಿಯುಸಿ, ಪ್ರೌಢಶಾಲೆ ತರಗತಿಗಳು ಆರಂಭವಾಗುವುದರಿಂದ ನಮಗೆಲ್ಲ ಸಮಸ್ಯೆಯಾಗಲಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆ ಹೆಚ್ಚುವರಿ ಬಸ್‌ಗಳು ಸಂಚರಿಸಲು ಆದಷ್ಟು  ಶೀಘ್ರದಲ್ಲಿ  ವ್ಯವಸ್ಥೆ ಮಾಡಲಿ. -ನೊಂದ ಕಾಲೇಜು ವಿದ್ಯಾರ್ಥಿಗಳು 

ಈಗಾಗಲೇ ಕುಂದಾಪುರ ಭಾಗದಲ್ಲಿ ಬಹುತೇಕ ಎಲ್ಲ ಕಡೆಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿವೆ. ಎಲ್ಲೆಲ್ಲ ಬಸ್‌ಗೆ ಬೇಡಿಕೆ ಇದೆ ಆ ಬಗ್ಗೆ ಗಮನಕ್ಕೆ ತರಲಿ. ಮುಂದಿನ ದಿನಗಳಲ್ಲಿ ಎಲ್ಲ ಶೈಕ್ಷಣಿಕ ಸಂಸ್ಥೆಗಳು, ಶಾಲಾ- ಕಾಲೇಜುಗಳು ಪೂರ್ಣಪ್ರಮಾಣದಲ್ಲಿ ತೆರೆದುಕೊಂಡ ಅನಂತರ ಪರಿಸ್ಥಿತಿ ನೋಡಿಕೊಂಡು ಹೆಚ್ಚುವರಿ ಬಸ್‌ಗಳನ್ನು ಆರಂಭಿಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು. – ರಾಜೇಶ್‌, ಕುಂದಾಪುರ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್‌

ಟಾಪ್ ನ್ಯೂಸ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು

Kundapura: ಕಿರುಕುಳ; ಆರೋಪಿಗೆ ನಿರೀಕ್ಷಣ ಜಾಮೀನು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.