ಸಾಕಾರಗೊಳ್ಳುತ್ತಿದೆ ಬೈಂದೂರು ತಾ| ಕೇಂದ್ರದ ಪೂರ್ಣತೆಯ ಕನಸು


Team Udayavani, Aug 11, 2021, 3:00 AM IST

Untitled-1

ಬೈಂದೂರು: ಜಿಲ್ಲೆಯ ಗಡಿಭಾಗ ವಾದ ಬೈಂದೂರು ತಾ|  ಕೇಂದ್ರದ ಮಹತ್ತರ ಯೋಜನೆಗಳು ಹಂತ ಹಂತವಾಗಿ ಸಾಕಾರಗೊಳ್ಳುತ್ತಿದೆ. ಸಂಸದರು, ಶಾಸಕರ ಪ್ರಯತ್ನದ ಫಲವಾಗಿ ಒಂದೊಂದೇ ಕನಸುಗಳು ನನಸಾಗುತ್ತಿವೆ.

ಕೆಲವು ಇಲಾಖೆಗಳನ್ನು  ಹೊರತುಪಡಿಸಿದರೆ ಉಳಿದ ಯೋಜನೆಗಳ ಪ್ರಗತಿ ವೇಗ ಕಂಡಿದೆ. ಮಿನಿ ವಿಧಾನಸೌಧ, ಪ.ಪಂ, ಅಗ್ನಿಶಾಮಕ ಠಾಣೆ, ಆಹಾರ ಇಲಾಖೆ ಸೇರಿದಂತೆ ಬಹುತೇಕ ಎಲ್ಲ ಮೂಲಸೌಕರ್ಯಗಳನ್ನು ಒಳಗೊಂಡು ಪೂರ್ಣ ಪ್ರಮಾಣದ ತಾ| ಕೇಂದ್ರವಾಗಿ ಮಾರ್ಪಾಡುಗೊಳ್ಳುವ ಹಂತದಲ್ಲಿದೆ.

ಕಳೆದ ನಾಲ್ಕು ವರ್ಷದ ಹಿಂದೆ ಅಂದಿನ ಶಾಸಕ ಕೆ. ಗೋಪಾಲ ಪೂಜಾರಿ ಅವರ ವಿಶೇಷ ಕಾಳಜಿಯಿಂದಾಗಿ ರಾಜ್ಯದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೈಂದೂರು ಸೇರಿದಂತೆ 43 ನೂತನ ತಾಲೂಕನ್ನು ರಚನೆ ಮಾಡಿದ್ದರು, ಆದರೆ ನೂತನ ತಾಲೂಕು ಕೇಂದ್ರಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸುವ ಮುನ್ನ ಅವರ ಅವಧಿ ಪೂರ್ಣಗೊಂಡಿತ್ತು.  ಆ ಬಳಿಕ ಸಿಎಂ ಆಗಿದ್ದ ಯಡಿಯೂರಪ್ಪ ಮುಂದಾಳತ್ವದಲ್ಲಿ ಸಂಸದ ಬಿ.ವೈ. ರಾಘವೇಂದ್ರ,  ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ  ಅವರ ವಿಶೇಷ ಮುತುರ್ವಜಿ ವಹಿಸಿದ್ದರು. ಇದೀಗ ನೂತನ ಬೈಂದೂರು ಅಭಿವೃದ್ಧಿಯೆಡೆಗೆ ದಾಪುಗಾಲಿಡುತ್ತಿದೆ. ಪೂರ್ಣ ಪ್ರಮಾಣದ ತಾಲೂಕಾಗಿ ಮೇಲ್ದರ್ಜೆಗೇರುವ ನಿರೀಕ್ಷೆ ಮೂಡಿಸುತ್ತಿದೆ.

ಸಿಬಂದಿಯನ್ನು  ನಿಯೋಜನೆ:

ತಾ| ಕೇಂದ್ರದಲ್ಲಿ ಹಲವು ತಿಂಗಳುಗಳಿಂದ ತಹಶೀಲ್ದಾರ್‌ ಸೇರಿದಂತೆ ಹಲವು ಸಿಬಂದಿಯ ಕೊರತೆ ಕಂಡು ಬಂದಿತ್ತು, ಉದಯವಾಣಿ ಈ ಕುರಿತು ಗಮನ ಸೆಳೆದಿತ್ತು, ಇದಕ್ಕೆ ಸ್ಪಂದಿಸಿದ ಶಾಸಕ, ಸಂಸದರು ನೂತನ ತಹಶೀಲ್ದಾರ್‌ ಸೇರಿದಂತೆ ಅಗತ್ಯ ಸಿಬಂದಿಯನ್ನು  ನಿಯೋಜಿಸಲಾಗಿದೆ. ಪ. ಪಂ.ಗೆ ಎಂಜಿನಿಯರ್‌, ಕಂದಾಯ ನಿರೀಕ್ಷಕರು ಸೇರಿದಂತೆ ಖಾಲಿಯಿರುವ ಎಲ್ಲ ಸಿಬಂದಿ ನಿಯೋಜನೆಗೊಂಡಿದ್ದಾರೆ.

ಪಡಿತರ ಚೀಟಿಗಾಗಿ ಅಲೆದಾಟವಿಲ್ಲ:

ಸಂಸದರು, ಶಾಸಕರು ಕಳೆದ ಒಂದು ತಿಂಗಳ ಹಿಂದೆ  ಆಹಾರ ಇಲಾಖೆ  ಬೈಂದೂರಿನಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅಗತ್ಯ ವ್ಯವಸ್ಥೆ ಕಲ್ಪಿಸಿಕೊಟ್ಟರು. ಇದರಿಂದ  ಇಲ್ಲಿನ ಜನ ಪಡಿತರ ಚೀಟಿಗಾಗಿ ದೂರದ ಕುಂದಾಪುರಕ್ಕೆ ಅಲೆಯುವುದು ತಪ್ಪಿದಂತಾಗಿದೆ.

ವಸತಿಗೃಹ ನಿರ್ಮಾಣಕ್ಕಾಗಿ ಜಾಗ ಗುರುತು:

ಬೈಂದೂರಿನಲ್ಲಿ ನ್ಯಾಯಾಲಯ ನಿರ್ಮಾಣ, ನ್ಯಾಯಾಧೀಶರ ವಸತಿಗೃಹ ನಿರ್ಮಾಣಕ್ಕಾಗಿ ಇಲ್ಲಿನ ಕೇಂದ್ರಸ್ಥಾನದಲ್ಲಿ  ಈಗಾಗಲೇ ಎರಡು ಎಕ್ರೆ ಜಾಗ ಗುರುತಿಸುವ ಕಾರ್ಯ ನಡೆದಿದೆ, ಶೀಘ್ರ ನ್ಯಾಯಾಲಯ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆ ಹಸುರು ನಿಶಾನೆ ತೋರಿಸಿದೆ. ಇದರ ಜತೆಗೆ ರಥಬೀದಿ ಸಂಚಾರ ಸಮಸ್ಯೆ, ಪಟ್ಟಣ ವ್ಯಾಪ್ತಿಯ ಟ್ರಾಫಿಕ್‌ ಗೊಂದಲ , ಪ.ಪಂ., ಪೊಲೀಸ್‌,  ತಹಶೀಲ್ದಾರ್‌ ಜಂಟಿಯಾಗಿ ಇದುವರೆಗೂ ಕ್ರಮ ಕೈಗೊಂಡಿಲ್ಲ. ಒಟ್ಟಾರೆ ಬೈಂದೂರು ತಾ|  ನಿರೀಕ್ಷಿತ ವೇಗ ಕಾಣಲು ಸಂಸದರ ವೇಗದ ಜತೆಗೆ ಅಧಿಕಾರಿಗಳೂ ಹೆಜ್ಜೆ ಹಾಕಬೇಕಿದೆ.

 ಮಿನಿ ವಿಧಾನಸೌಧ :

ತಾ| ಮಟ್ಟದ ಎಲ್ಲ  ಇಲಾಖೆಗಳು ಒಂದೇ ಸೂರಿನಡಿಯಲ್ಲಿ ಕರ್ತವ್ಯ ನಿರ್ವಹಿಸಲು ಅನುಕೂಲ ವಾಗುವಂತೆ ಬೈಂದೂರಿನಲ್ಲಿ ಸುಮಾರು 10 ಕೋ.ರೂ. ವೆಚ್ಚದಲ್ಲಿ ಸುಸಜ್ಜಿತ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ, ಇದರ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಬಳಿಕ ತಾ| ಮಟ್ಟದ ಎಲ್ಲ ಇಲಾಖೆಗಳು ಇಲ್ಲಿ  ಕಾರ್ಯನಿರ್ವಹಿಸಲು ಅನುಕೂಲವಾಗಲಿದೆ.

ಬೈಂದೂರು ತಾ| ಪೂರ್ಣ ಪ್ರಮಾಣದ ತಾಲೂಕಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಈಗಾಗಲೇ ತಾ|  ಕೇಂದ್ರಕ್ಕೆ ಅಗತ್ಯ ಸಿಬ್ಬದಿ, ಮಿನಿ ವಿಧಾನಸೌಧ ಸೇರಿದಂತೆ ಬಹುತೇಕ ಎಲ್ಲ  ಮೂಲಸೌಕರ್ಯ ಕಲ್ಪಿಸಲಾಗಿದೆ, ಇಲ್ಲಿನ ಮಿನಿ ವಿಧಾನಸೌಧ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ಬಳಿಕ ತಾಲೂಕು ಮಟ್ಟದ ಎಲ್ಲ  ಇಲಾಖೆಗಳು ಕಾರ್ಯಾರಂಭಗೊಳ್ಳಲು ಅಗತ್ಯ ಕ್ರಮ ಕೈಗೊಂಡು ಇದನ್ನು ಮಾದರಿ ಗ್ರಾಮವಾಗಿ ರೂಪಿಸಲಾಗುವುದು .-ಬಿ. ವೈ. ರಾಘವೇಂದ್ರ, ಸಂಸದರು, ಶಿವಮೊಗ್ಗ  ಲೋಕಸಭಾ ಕ್ಷೇತ್ರ

 

– ಅರುಣಕುಮಾರ್‌ ಶಿರೂರು

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.