ಬೈಂದೂರು: ಟವರ್‌ ಸಿದ್ಧ- ನೆಟ್‌ವರ್ಕ್‌ಗೆ ಗುಡ್ಡ ಹತ್ತಬೇಕು!


Team Udayavani, May 22, 2024, 5:55 PM IST

ಬೈಂದೂರು: ಟವರ್‌ ಸಿದ್ಧ- ನೆಟ್‌ವರ್ಕ್‌ಗೆ ಗುಡ್ಡ ಹತ್ತಬೇಕು!

ಬೈಂದೂರು: ಬೈಂದೂರಿನ ಗ್ರಾಮೀಣ ಭಾಗದಲ್ಲಿ ಕಳೆದೊಂದು ವರ್ಷದಿಂದ ನಿರೀಕ್ಷೆಯಲ್ಲಿದ್ದ ಮೊಬೈಲ್‌ ಟವರ್‌ ಗಳ ಕಾಮಗಾರಿ ಏನೋ ಪೂರ್ಣಗೊಂಡಿದೆ. ಆದರೆ ಇಲ್ಲಿನ ಜನ ನೆಟ್‌ವರ್ಕ್‌ಗಾಗಿ ಗುಡ್ಡ ಬೆಟ್ಟ ಹತ್ತುವುದು ನಿಂತಿಲ್ಲ. ಹತ್ತಿರದಲ್ಲೇ
ಟವರ್‌ ಇದ್ದರೂ ಹಲೋ ಅನ್ನಲು ದೂರದ ಬೆಟ್ಟ ಹತ್ತುವ ಶಿಕ್ಷೆಯನ್ನು ಇಲ್ಲಿನವರು ಅನುಭವಿಸಬೇಕಾಗಿದೆ.

ಹಲವು ವರ್ಷದ ಸಮಸ್ಯೆ ಬೈಂದೂರು ತಾಲೂಕು ಸೇರಿದಂತೆ ಉಡುಪಿ ಜಿಲ್ಲೆಯ ಬಹುತೇಕ ಗ್ರಾಮೀಣ ಭಾಗಗಳು ಇಂದಿಗೂ ನೆಟ್‌ ವರ್ಕ್‌ ಗಾಗಿ ಪರದಾಡಬೇಕಾಗಿದೆ. ಬೈಂದೂರು ಭಾಗದ ಜನರ ಬಹು ವರ್ಷದ ಬೇಡಿಕೆಯನ್ನೇ ಗಂಭೀರವಾಗಿ ಪರಿಗಣಿಸಿದ ಸಂಸದ ಬಿ.ವೈ. ರಾಘವೇಂದ್ರ ಕೇಂದ್ರ ಟೆಲಿಕಾಂ ಸಚಿವರನ್ನು ಬೇಟಿಯಾಗಿ ಇಲ್ಲಿನ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದರು. ಉಡುಪಿ ಜಿಲ್ಲೆಯಲ್ಲಿ ಗರಿಷ್ಠ ಟವರ್‌ ಗಳನ್ನು ಬೈಂದೂರು ಕ್ಷೇತ್ರಕ್ಕೆ ಮಂಜೂರು ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ಟವರ್‌ ಸಿದ್ಧಗೊಂಡು 4 ತಿಂಗಳು ಆರಂಭದಲ್ಲಿ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆಯಿಂದ ಸಾಕಷ್ಟು ವಿಳಂಬವಾದರೂ ಕಳೆದ ನಾಲ್ಕು ತಿಂಗಳ ಹಿಂದೆ ಟವರ್‌ ನಿರ್ಮಾಣದ ಪ್ರಕ್ರಿಯೆ ಪೂರ್ಣಗೊಂಡಿದೆ. ಆದರೆ ನೆಟ್‌ವರ್ಕ್‌ ಸಂಪರ್ಕ ಮಾತ್ರ ಇದುವರೆಗೆ ದೊರೆತಿಲ್ಲ. ಹೀಗಾಗಿ ಗ್ರಾಮೀಣ ಭಾಗಗಳ ಜನರು ಶೀಘ್ರ ಮೊಬೈಲ್‌ ನೆಟ್‌ ವರ್ಕ್‌ ಸಂಪರ್ಕ ನೀಡಲು ಆಗ್ರಹಿಸುತ್ತಿದ್ದಾರೆ.
ಒಟ್ಟಾರೆಯಾಗಿ ಮೊಬೈಲ್‌ ಟವರ್‌ ನಿರ್ಮಾಣ ಗೊಂಡರೂ ಸಹ ನೆಟ್‌ವರ್ಕ್‌ ಸಂಪರ್ಕ ಸಿಗದಿರುವುದು ಹಳ್ಳಿ ಭಾಗದ ಬೆಳವಣಿಗೆಯನ್ನು ಒಂದಿಷ್ಟು ಕುಂಠಿತಗೊಳಿಸಿದೆ.

ನೆಟ್‌ವರ್ಕ್‌ ವಿಳಂಬಕ್ಕೆ ಏನು ಕಾರಣ?
ಆರಂಭದಲ್ಲಿ ಸರಕಾರಿ ಜಾಗದ ಕೊರತೆಯಿಂದ ಖಾಸಗಿ ಜಾಗ ಹುಡುಕುವುದು ಜೊತೆಗೆ ಹಳ್ಳಿ ಭಾಗದಲ್ಲಿ ಭೂ ದಾಖಲೆ ಪರಿಪೂರ್ಣತೆ ಕೊರತೆ ಪಟ್ಟಣ ಪಂಚಾಯತ್‌ ಮತ್ತು ಗ್ರಾ.ಪಂ ಅನುಮತಿ ಜತೆಗೆ, ಮೆಸ್ಕಾಂ ಸಂಪರ್ಕ ಈ ಪ್ರಕ್ರಿಯೆಗಳನ್ನು ಖುದ್ದು ಸಂಸದರ ಕಚೇರಿ ಸಿದ್ಧಪಡಿಸಿಕೊಟ್ಟಿದೆ. ಟೆಲಿಕಾಂ ಇಲಾಖೆ ಅಧಿಕಾರಿಗಳ ವಿಳಂಬದ ಕಾರಣ ಟವರ್‌ ನಿರ್ಮಾಣ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿದೆ. ಈಗಾಗಲೇ ಉಡುಪಿ ಜಿಲ್ಲೆಯಲ್ಲಿ ನೂರಕ್ಕೂ ಅಧಿಕ ಟವರ್‌ಗಳಿದ್ದು ಬೈಂದೂರಿನಲ್ಲಿ 10 ಟವರ್‌ಗಳು ನಿರ್ಮಾಣವಾಗುತ್ತಿದೆ. ಗುತ್ತಿಗೆಯಲ್ಲಿ ಹೈದ್ರಾಬಾದ್‌ ಪಡೆದಿದೆ. ನೆಟ್‌ವರ್ಕ್‌ ಸಂಪರ್ಕ ಸಾಧನಗಳು ದೆಹಲಿದಿಂದ ಬರಬೇಕಾಗಿದೆ. ಎಲ್ಲ ಕಡೆಗಳಲ್ಲಿ ಒಂದೇ ಬಾರಿ ಸಂಪರ್ಕ ಕಲ್ಪಿಸುವ ಕಾರಣ ಸಿದ್ಧಗೊಂಡಿರುವ ಟವರ್‌ಗಳು ಕೂಡ ಸಂಪರ್ಕಕ್ಕಾಗಿ
ಕಾಯಬೇಕಾಗಿದೆ. ಇದರ ಜತೆಗೆ ಕೇಬಲ್‌ಗ‌ಳು ಬಹುದೂರದಿಂದ ತರಬೇಕಾದ ಸಮಸ್ಯೆ ಕೂಡ ಇದೆ.

ಪ್ರಕ್ರಿಯೆ ಪೂರ್ಣ
ಈಗಾಗಲೇ ಬೈಂದೂರು ವ್ಯಾಪ್ತಿಯಲ್ಲಿ ಟವರ್‌ ಕಾಮಗಾರಿ ಪೂರ್ಣಗೊಂಡಿದ್ದು ನೆಟ್‌ವರ್ಕ್‌ ಸಂಪರ್ಕ ಸಾಧನಗಳು ಶೀಘ್ರ ಬರಲಿದೆ. ಕೇಬಲ್‌ ಸಂಪರ್ಕ ಅಥವಾ ಟವರ್‌ ನೆಟ್‌ವರ್ಕ್‌ ಕುರಿತು ಪರೀಕ್ಷೆ ನಡೆಸಿ ಸಂಪರ್ಕ ನೀಡಲಿದ್ದೇವೆ. ಇನ್ನುಳಿದಂತೆ ಎಲ್ಲ ಪ್ರಕ್ರಿಯೆ ಪೂರ್ಣಗೊಂಡಿದೆ.
*ವಿರಾಜ್‌ ನಾಯ್ಕ, ಅಧಿಕಾರಿ,
ದೂರವಾಣಿ ಇಲಾಖೆ ಬೈಂದೂರು

ಶೀಘ್ರ ಕಲ್ಪಿಸಿಕೊಡಿ
ಬೈಂದೂರು ವ್ಯಾಪ್ತಿಯಲ್ಲಿ ಗ್ರಾಮೀಣಭಾಗಗಳಲ್ಲಿ ಬಹುದಿನದಿಂದ ಮೊಬೈಲ್‌ ಸಂಪರ್ಕಕ್ಕಾಗಿ ಕಾಯುತ್ತಿದ್ದಾರೆ. ಟವರ್‌ ನಿರ್ಮಾಣವಾಗಿರುವುದು ಸಂತಸ ತಂದರೂ ಇದುವರೆಗೆ ನೆಟ್‌ವರ್ಕ್‌ ಬಂದಿಲ್ಲ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಶೀಘ್ರ ಪ್ರಯತ್ನಿಸಬೇಕಿದೆ.
*ನಾಗಪ್ಪ ಮರಾಠಿ, ಹೊಸೂರು

*ಅರುಣ್‌ ಕುಮಾರ್‌ ಶಿರೂರು

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

Screenshot (3) copy

Kundapura: ಮಕ್ಕಳನ್ನು ಹೊತ್ಕೊಂಡೇ ಹೊಳೆ ದಾಟಿಸಬೇಕು!ಅಮಾಸೆಬೈಲಿನ ಕುಡಿಸಾಲು ಪರಿಸರದ ಸಮಸ್ಯೆ

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.