ಕುಂದಾಪುರ: ಆಪರೇಷನ್ ಚೀತಾ ಕಾರ್ಯಾಚರಣೆ ಯಶಸ್ವಿ: ಹೆಣ್ಣು ಚಿರತೆ ಸೆರೆ
ಒಂದು ತಿಂಗಳ ಕಾಲ ಅರಣ್ಯಾಧಿಕಾರಿಗಳ ಕಾರ್ಯಾಚರಣೆ: ಮತ್ತೆ ಕಪ್ಪು ಚಿರತೆ ಸಂಚಾರ!
Team Udayavani, Apr 28, 2022, 10:32 AM IST
ತೆಕ್ಕಟ್ಟೆ: ಕುಂದಾಪುರ ತಾಲೂಕಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಅರೆಬೈಲು ತೋಳಾರ್ ಎಂಬಲ್ಲಿ ಕಳೆದ ಹಲವು ದಿನಗಳಿಂದ ಮಾವಿನ ತೋಪಿನಲ್ಲಿ ಓಡಾಡುತ್ತಿದ್ದ ಚಿರತೆಯನ್ನು ಕುಂದಾಪುರ ಅರಣ್ಯಾ ಇಲಾಖೆ ಸಿಬ್ಬಂದಿಗಳು ಚಿರತೆ ಸೆರೆ ಹಿಡಿದಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಮಾವಿನ ತೋಪಿನಲ್ಲಿ ಚಿರತೆಯೊಂದು ಸಂಚರಿಸುತ್ತಿತ್ತು, ಇದರಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿತ್ತು. ಸುಮಾರು ಒಂದು ತಿಂಗಳ ಕಾಲ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಎರಡೂವರೆ ವರ್ಷದ ಹೆಣ್ಣು ಚಿರತೆಯೊಂದು ಸೆರೆ ಹಿಡಿದಿದ್ದಾರೆ. ಒಟ್ಟಿನಲ್ಲಿ ಇದೇ ಪರಿಸರದಲ್ಲಿ ಐದನೆಯ ಚಿರತೆಯೊಂದು ಸೆರೆಯಾದಂತಾಗಿದೆ.
ಮತ್ತೆ ಕಪ್ಪು ಚಿರತೆ ಸಂಚಾರ!
ಗ್ರಾ.ಪಂ.ಮಾಲಾಡಿ, ಸುಳಿಗುಂಡಿ ಹಾಗೂ ಅಸೋಡು ಪರಿಸರದಲ್ಲಿ ಕಪ್ಪು ಚಿರತೆ ಸಂಚಾರವಿದೆ ಎನ್ನುವ ಅನುಮಾನಗಳು ವ್ಯಕ್ತವಾಗಿದೆ. ಪರಿಸರದಲ್ಲಿರುವ ನಾಯಿ ಮರಿಗಳ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಪ್ರಸ್ತುತ ಸ್ಥಳೀಯರು ಆತಂಕದಿಂದ ಸಂಚರಿಸಬೇಕಾದ ಅನಿವಾರ್ಯ ಪರಿಸ್ಥಿತಿ ಇದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಹರ್ಷ ಕೊಲೆ: ಜೈಲಿನ ಗೋಡೆಗೆ ತಲೆ ಜಜ್ಜಿಕೊಂಡು ಆರೋಪಿಗಳ ಹೈಡ್ರಾಮಾ
ಈ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್, ಉಪ ವಲಯ ಅರಣ್ಯಾಧಿಕಾರಿ ಉದಯ ಬಿ., ಗ್ರಾ.ಪಂ. ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ತೆಕ್ಕಟ್ಟೆ ಗ್ರಾ.ಪಂ. ಅಧ್ಯಕ್ಷೆ ಮಮತಾ ದೇವಾಡಿಗ, ಗ್ರಾ.ಪಂ.ಸದಸ್ಯರಾದ ಸಂಜೀವ ದೇವಾಡಿಗ, ಸುರೇಶ್ದೇವಾಡಿಗ, ಸತೀಶ್ ದೇವಾಡಿಗ, ಲಕ್ಷ್ಮಣ ಪೂಜಾರಿ, ಶರತ್ ಶೆಟ್ಟಿ ಮಾಲಾಡಿ ಹಾಗೂ ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು
Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ