ಇಂದು ಸಿಎಂ ಬೊಮಾಯಿ ಭೇಟಿ; ಗರಿಗೆದರಿದ ನಿರೀಕ್ಷೆ

ಗ್ರಾಮೀಣ ಬಸ್‌ ಸಮಸ್ಯೆ, ಸಿಬಂದಿ ಕೊರತೆ ಇತ್ಯರ್ಥಗೊಳ್ಳುವುದೇ?

Team Udayavani, Nov 7, 2022, 9:27 AM IST

2

ಕುಂದಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರಮುಖ ಸಚಿವರ ದಂಡೇ ನ. 7ರಂದು ಬೈಂದೂರಿನ ಮುಳ್ಳಿಕಟ್ಟೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ಕುಂದಾಪುರ, ಬೈಂದೂರು ಭಾಗದಲ್ಲಿ ಹಲವು ವರ್ಷಗಳಿಂದ ಕಾಡುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸಿಗಬಹುದು ಎನ್ನುವ ನಿರೀಕ್ಷೆ ಜನರಲ್ಲಿ ಮೂಡಿದೆ.

ಸಿಎಂದ ಬಳಿಕ ಬೊಮ್ಮಾಯಿ ಅವರು 2ನೇ ಬಾರಿಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಆಗಮಿಸುತ್ತಿದ್ದು, ಇದಕ್ಕೂ ಹಿಂದೆ ಕಳೆದ ಜು.13ರಂದು ಮಳೆ, ಕಡಲ್ಕೊರೆತದಿಂದ ಹಾನಿಯಾದ ಮರವಂತೆಗೆ ಭೇಟಿ ನೀಡಿ, ಮೀನುಗಾರರ ಸಮಸ್ಯೆ ಆಲಿಸಿದ್ದರು.

ಕೋಡಿ – ಗಂಗೊಳ್ಳಿ ಸೇತುವೆ

ಕೇವಲ 5 ಕಿ.ಮೀ. ದೂರವಿರುವ ಕುಂದಾಪುರ – ಗಂಗೊಳ್ಳಿ ಅಂತರವು ಸೇತುವೆಯಿಲ್ಲದೆ ಬರೋಬ್ಬರಿ 17-18 ಕಿ.ಮೀ. ಸಂಚರಿಸಬೇಕಾದ ಸ್ಥಿತಿ ಜನರದ್ದಾಗಿದೆ. ಕೋಡಿ – ಗಂಗೊಳ್ಳಿ ಸಂಪರ್ಕ ಸೇತುವೆ 3 ದಶಕಗಳಿಗೂ ಹೆಚ್ಚು ಕಾಲದ್ದಾಗಿದ್ದು, ಸೇತುವೆಯಾದರೆ ಮೀನುಗಾರಿಕೆ, ಆರ್ಥಿಕ ವಹಿವಾಟು, ಪ್ರವಾಸೋದ್ಯಮ, ಜನರಿಗೆ ಪ್ರಯೋಜನವಾಗಲಿದೆ.

ಪ್ರಾದೇಶಿಕ ಸಾರಿಗೆ ಕಚೇರಿ

ಕುಂದಾಪುರ, ಬೈಂದೂರು ಭಾಗದ ಜನರು ಅದರಲ್ಲೂ ಗ್ರಾಮೀಣ ಪ್ರದೇಶದವರು ಚಾಲನಾ ಪರವಾನಗೆ, ವಾಹನ ನೋಂದಣಿ, ನವೀಕರಣ ಮತ್ತಿತರ ಕಾರ್ಯಗಳಿಗಾಗಿ 60-70 ಕಿ.ಮೀ.ದೂರದ ಮಣಿಪಾಲಕ್ಕೆ ತೆರಳಬೇಕಾದ ಅನಿವಾರ್ಯತೆಯಿದೆ. ಕುಂದಾಪುರ ಭಾಗದಲ್ಲಿ 72 ಸಾವಿರಕ್ಕೂ ಮಿಕ್ಕಿ ವಾಹನಗಳಿದ್ದು, ವಾರದಲ್ಲಿ 1 ದಿನದ ಶಿಬಿರದಲ್ಲಿ ಸರಾಸರಿ 600 ಕ್ಕೂ ಅಧಿಕ ಮಂದಿ ಪ್ರಯೋಜನ ಪಡೆಯುತ್ತಿದ್ದಾರೆ. ಈ ಭಾಗದಿಂದಲೇ ವಾರ್ಷಿಕ 20 ಕೋ.ರೂ.ಗಿಂತ ಅಧಿಕ ತೆರಿಗೆ ಸಂಗ್ರಹವಾಗುತ್ತಿದೆ. ವಾರ್ಷಿಕ 58 ಸಾವಿರ ನೋಂದಣಿ ನೀಡಲಾಗುತ್ತಿದೆ. ಅದಕ್ಕಾಗಿ ಕುಂದಾಪುರದಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿಯಾದರೆ ಜನರ ಅಲೆದಾಟ ತಪ್ಪಲಿದೆ.

ನಗರಸಭೆ ಬೇಡಿಕೆ

ಕುಂದಾಪುರ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಯಾಗಿಸುವ ಪ್ರಸ್ತಾವ ಅನೇಕ ವರ್ಷಗಳಿಂದ ಇದ್ದು, ಅದಿನ್ನು ಕೈಗೂಡಿಲ್ಲ. ಕೋಟೇಶ್ವರ, ಬೀಜಾಡಿ, ಹಂಗಳೂರು, ಕಂದಾವರ ಗ್ರಾ.ಪಂ. ಗಳೊಂದಿಗೆ ಕಂದಾವರ, ಕೋಣಿ, ಆನಗಳ್ಳಿ, ಬಸ್ರೂರು ಗ್ರಾ.ಪಂ. ಗಳನ್ನು ಸೇರಿಸಿ, ನಗರಸಭೆಯಾಗಿಸುವ ಬೇಡಿಕೆಯಿದೆ.

ಸಿಬಂದಿ ಕೊರತೆ

ಕುಂದಾಪುರ, ಬೈಂದೂರಿನ ತಾಲೂಕು ಕಚೇರಿ, ಕಂದಾಯ, ಕೃಷಿ ಇಲಾಖೆ, ಉಪ ನೋಂದಣಿ ಕಚೇರಿ, ಸಹಿತ ಗ್ರಾ.ಪಂ.ಗಳು, ಪೌರಾಡಳಿತ ಸಂಸ್ಥೆಗಳು, ಸರಕಾರಿ ಆಸ್ಪತ್ರೆ, ಪಶು ವೈದ್ಯಕೀಯ ಆಸ್ಪತ್ರೆಗಳಲ್ಲಿ ಸಿಬಂದಿ ಕೊರತೆ ಬಹಳಷ್ಟಿದೆ. ಬಹುತೇಕ ಎಲ್ಲ ಸರಕಾರಿ ಕಚೇರಿಗಳಲ್ಲೂ ಸಿಬಂದಿ ಕೊರತೆಯಿದೆ. ಇದರ ಪರಿಣಾಮ ಜನಸಾಮಾನ್ಯರಿಗೆ ತಟ್ಟುತ್ತಿದೆ.

ಗಂಗೊಳ್ಳಿ ಬಂದರು ಅಭಿವೃದ್ಧಿ

ಜಿಲ್ಲೆಯಲ್ಲಿ ಅತ್ಯಂತ ನಿರ್ಲಕ್ಷಿತ ಬಂದರುಗಳಲ್ಲಿ ಗಂಗೊಳ್ಳಿಯೂ ಒಂದು. ಮಲ್ಪೆ ಹೊರತುಪಡಿಸಿದರೆ ಹೆಚ್ಚಿನ ವಹಿವಾಟು, ಮೀನಿನ ಉತ್ಪಾದನೆ ಆಗುವ ಬಂದರು ಸಹ ಹೌದು. ಆದರೆ ಇತರ ಬಂದರುಗಳಿಗೆ ಹೋಲಿಸಿದರೆ ಇಲ್ಲಿನ ಅಭಿವೃದ್ಧಿ ಸಾಲದು. ಜೆಟ್ಟಿ ಕುಸಿತದಿಂದಾಗಿ ಬೋಟು, ದೋಣಿಗಳನ್ನು ನಿಲ್ಲಿಸಲು ಸಹ ಮೀನುಗಾರರು ಸಂಕಷ್ಟಪಡುವಂತಾಗಿದೆ. ಇಲ್ಲಿನ ಬಂದರು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಸಿಕ್ಕರೆ ವರದಾನವಾಗಲಿದೆ.

ಗಂಗೊಳ್ಳಿ ಪ.ಪಂ.ಬೇಡಿಕೆ

ಅತೀ ದೊಡ್ಡ ಗ್ರಾ.ಪಂ.ಗಳಲ್ಲಿ ಒಂದಾದ ಗಂಗೊಳ್ಳಿಯನ್ನು ಪಟ್ಟಣ ಪಂಚಾಯತ್‌ ಆಗಿ ಮೇಲ್ದರ್ಜೆಗೇರಿಸಬೇಕು ಅನ್ನುವ ಬೇಡಿಕೆ ಹಲವು ವರ್ಷದ್ದಾಗಿದೆ. ಅದಕ್ಕಾಗಿ ಬೇಕಾದ ಜನಸಂಖ್ಯೆಯೂ ಇದೆ. 2011 ನೇ ಜನಗಣತಿ ಪ್ರಕಾರ 13 ಸಾವಿರವಿದ್ದರೆ, ಈಗದು 21 ಸಾವಿರಕ್ಕೂ ಮಿಕ್ಕಿ ಇದೆ. ಮೀನುಗಾರಿಕೆಯನ್ನೇ ಬಹುಭಾಗ ನೆಚ್ಚಿಕೊಂಡಿರುವ ಗಂಗೊಳ್ಳಿ ಪ.ಪಂ.ಆದರೆ ಅಭಿವೃದ್ಧಿಗೂ ವೇಗ ಸಿಗಬಹುದು.

ಶಂಕರನಾರಾಯಣ ಹೋಬಳಿ ರಚನೆ

ಅವಿಭಜಿತ ಕುಂದಾಪುರ ತಾಲೂಕಿನಲ್ಲಿ ಈಗಿರುವ ಕುಂದಾಪುರ, ವಂಡ್ಸೆ, ಬೈಂದೂರು ಹೋಬಳಿಯೊಂದಿಗೆ ಆಡಳಿತಾತ್ಮಕ ಅನುಕೂಲಕ್ಕಾಗಿ ಶಂಕರನಾರಾಯಣ ಹೋಬಳಿ ರಚಿಸಬೇಕೆಂಬ ಬೇಡಿಕೆಯಿದೆ. ಕುಂದಾಪುರ ಹಾಗೂ ವಂಡ್ಸೆಯಿಂದ 28 ಗ್ರಾಮಗಳನ್ನು ಸೇರಿಸಿ ಗ್ರಾಮೀಣ ಭಾಗವಾದ ಶಂಕರನಾರಾಯಣ ಹೋಬಳಿ ರಚಿಸಿದರೆ ಅನುಕೂಲವಾಗಲಿದೆ. ಇದರೊಂದಿಗೆ 42 ಗ್ರಾಮಗಳನ್ನು ಸೇರಿಸಿ, ಶಂಕರನಾರಾಯಣ ತಾಲೂಕಿಗೂ ಅನೇಕ ವರ್ಷಗಳ ಬೇಡಿಕೆಯಿದೆ.

ಬಸ್‌ ಬೇಡಿಕೆ

ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಹಲವು ಗ್ರಾಮೀಣ ಭಾಗಗಳಿಂದ ಬಸ್‌ ವ್ಯವಸ್ಥೆಯಿಲ್ಲ. ಅದರಲ್ಲೂ ಕೊರೊನಾದ ಅನಂತರದಿಂದ ಅಂತೂ ಬಹುತೇಕ ಬಸ್‌ಗಳು ಸಂಚಾರವನ್ನು ಸ್ಥಗಿತಗೊಳಿಸಿವೆ. ಇದರಿಂದ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳು ಶಾಲಾ – ಕಾಲೇಜಿಗೆ ತೆರಳಲು, ಸಾರ್ವಜನಿಕರು ತಾಲೂಕು ಕೇಂದ್ರ, ಪೇಟೆಗಳಿಗೆ ಬರಲು ಸಂಕಷ್ಟ ಅನುಭವಿಸುತ್ತಿದ್ದಾರೆ.

 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.