ಕರಾವಳಿ ಕಾವಲು ಪಡೆ ಎಡಿಜಿಪಿ ಭೇಟಿ
Team Udayavani, May 29, 2020, 5:09 AM IST
ಗಂಗೊಳ್ಳಿ: ಕರಾವಳಿ ಕಾವಲು ಪೊಲೀಸ್ ಪಡೆಯ ಎಡಿಜಿಪಿ ಪಿ.ಎ. ಸಂಧು ಅವರು ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಗೆ ಬುಧವಾರ ಸಂಜೆ ಅಧಿಕೃತ ಭೇಟಿ ನೀಡಿದರು.
ಕರಾವಳಿ ಕಾವಲು ಪೊಲೀಸ್ ಉಡುಪಿ ಜಿಲ್ಲಾ ಎಸ್ಪಿ ಚೇತನ್ ಕುಮಾರ್, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಜಿಲ್ಲಾ ಕರಾವಳಿ ಕಾವಲು ಪೊಲೀಸ್ ಡಿವೈಎಸ್ಪಿ ಪ್ರವೀಣ ನಾಯ್ಕ, ಕುಂದಾಪುರ ಪೊಲೀಸ್ ಉಪ ವಿಭಾಗದ ಎಎಸ್ಪಿ ಹರಿರಾಮ್ ಶಂಕರ್, ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೀಪ ಜಿ.ಎಸ್., ಕುಮಟಾ ಕರಾವಳಿ ಕಾವಲು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಾರುತಿ ನಾಯಕ್, ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಭೀಮಾಶಂಕರ ಎಸ್. ಮತ್ತಿತರರು ಉಪಸ್ಥಿತರಿದ್ದರು.