ಸಿಒಡಿ ತನಿಖೆಗೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಕೋಟದ ಮೆಹಂದಿ ಮನೆಯಲ್ಲಿ ಲಾಠಿಚಾರ್ಜ್ ಪ್ರಕರಣ
Team Udayavani, Jan 2, 2022, 5:32 AM IST
ಕೋಟ: ಮೆಹಂದಿ ಮನೆ ಯಲ್ಲಿ ಡಿ.ಜೆ. ಶಬ್ದಕ್ಕೆ ಸಂಬಂಧಿಸಿ ದೌರ್ಜನ್ಯ ನಡೆದ ಕೋಟ ಚಿಟ್ಟಿಕಟ್ಟೆಯ ಕೊರಗ ಕಾಲನಿಗೆ ಶನಿವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜತೆ ಭೇಟಿ ನೀಡಿ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸುವುದಾಗಿ ಘೋಷಿಸಿದರು ಹಾಗೂ ಸಂತ್ರಸ್ತ ಆರು ಮಂದಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿ, 50 ಸಾವಿರ ರೂ.ಗಳ ಮುಂಗಡ ಚೆಕ್ ಸ್ಥಳದಲ್ಲೇ ಹಸ್ತಾಂತರಿಸಿದರು
ಉಪನಿರೀಕ್ಷಕರ ಅಮಾನತು
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಉಪನಿರೀಕ್ಷಕರನ್ನು ಅಮಾನತು ಮಾಡಲಾಗಿದೆ. ಉಳಿದವರ ವರ್ಗ ಮಾಡಲಾಗಿದ್ದು ಮುಂದಿನ ಕ್ರಮದ ಬಗ್ಗೆ ಅವಲೋಕನ ಮಾಡಲಾಗುತ್ತದೆ. ಪ್ರಕರಣದ ತನಿಖೆ ಕೂಲಂಕಷವಾಗಿ ನಡೆಯಲಿದೆ. ಘಟನೆ ನಡೆದ 2-3 ದಿನಗಳ ಬಳಿಕ ಪೊಲೀಸ್ ಸಿಬಂದಿ ಕೊರಗರು ಸಹಿತ ಇನ್ನು ಕೆಲವರ ಮೇಲೆ ಕೇಸು ದಾಖಲಿಸಿದ್ದು ಇದೊಂದು ಸುಳ್ಳು ಪ್ರಕರಣ ಎಂದು ಎಲ್ಲರಿಗೂ ತಿಳಿಯುತ್ತದೆ. ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ಅವರು ತಿಳಿಸಿದರು.
ಪ್ರತೀ ದಿನ ಮಾಹಿತಿ ಪಡೆದಿದ್ದೆ
ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರತೀ ದಿನ ಮಾಹಿತಿ ನೀಡುತ್ತಿದ್ದರು. ಎಸ್ಪಿ ಅವರೊಂದಿಗೆ ಮಾತುಕತೆ ನಡೆಸಿದ್ದೆ ಎಂದರು.
ಬಿಜೆಪಿ ಮುಖಂಡರಾದ ಕಿರಣ್ ಕುಮಾರ್ ಕೊಡ್ಗಿ, ಡಿಸಿ ಕೂರ್ಮಾ ರಾವ್ ಎಂ., ಎಸ್ಪಿ ವಿಷ್ಣು ವರ್ಧನ್, ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಮೊದಲಾದವರು ಉಪಸ್ಥಿತರಿದ್ದರು.
ಕೋಟ ಠಾಣೆ ಬಗ್ಗೆ ದೂರು
ಕೋಟ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್, ಮಟ್ಕಾ, ಮರಳುಗಾರಿಕೆ ಮುಂತಾದ ದಂಧೆಗಳು ಪೊಲೀಸರ ನೆರಳಲ್ಲೇ ನಡೆಯುತ್ತಿವೆ. ಈ ಬಗ್ಗೆ ದೂರು ನೀಡಿದರೂ ಕ್ರಮ ಕೈಗೊಳ್ಳುತ್ತಿಲ್ಲ. ಪೊಲೀಸರಿಂದ ದೌರ್ಜನ್ಯ ನಡೆದ ಈ ಹಿಂದಿನ 3 ಘಟನೆ ಗಳಲ್ಲಿ ದೂರು ನೀಡಿದರೂ ದಾಖಲಿಸಿಕೊಂಡಿಲ್ಲ ಎಂದು ಸಾಮಾಜಿಕ ಕಾರ್ಯ ಕರ್ತ ದಿನೇಶ್ ಗಾಣಿಗ ಕೋಟ ಆರೋಪಿಸಿದರು. ಠಾಣೆಯ ಬಹುತೇಕ ಎಲ್ಲ ಸಿಬಂದಿ ಬದಲಾಯಿಸಲು ತಿಳಿಸಿದ್ದೇನೆ ಎಂದು ಗೃಹ ಸಚಿವರು ಹೇಳಿದರು.
ಹತ್ತು ದಿನ ಕಾಲಾವಕಾಶ
ಪೊಲೀಸರು ದಾಖಲಿಸಿರುವ ದೂರನ್ನು ಹಿಂಪಡೆಯುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ. ಸಂತ್ರಸ್ತರಿಗೆ ಪರಿಹಾರವನ್ನು ಘೋಷಿಸಿದ್ದಾರೆ. ಅವರ ಮೇಲೆ ನಂಬಿಕೆ ಇಟ್ಟು, ನಾವು ಉದ್ದೇಶಿತ ಪ್ರತಿಭಟನೆಯನ್ನು ಹತ್ತು ದಿನ ಮುಂದೂಡಿದ್ದೇವೆ. ಆಬಳಿಕ ಒಂದು ವೇಳೆ ಕೊರಗರ ಮೇಲಿನ ಪ್ರಕರಣಗಳನ್ನು ಹಿಂದೆ ಪಡೆಯದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತೇವೆ ಎಂದು ಕೊರಗ ಮುಖಂಡ ವಿ. ಗಣೇಶ್ ಕುಂದಾಪುರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ
Kundapura ಕಾರು ಡಿವೈಡರ್ ಏರಿ ಪಲ್ಟಿ; ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ