ಕಸ ವಿಲೇವಾರಿ ಘಟಕವಾದ ಸಮುದಾಯ ಭವನ!


Team Udayavani, Sep 3, 2021, 3:00 AM IST

ಕಸ ವಿಲೇವಾರಿ ಘಟಕವಾದ ಸಮುದಾಯ ಭವನ!

ಗೋಳಿಯಂಗಡಿ: ಜನರು, ಸಂಘ-ಸಂಸ್ಥೆಗಳಿಗೆ ಕಾರ್ಯಕ್ರಮ ಆಯೋಜಿಸಲು ಸರಕಾರದ ಲಕ್ಷಾಂತರ ರೂ. ಅನುದಾನದಲ್ಲಿ ನಿರ್ಮಿಸಿದ ಸಮುದಾಯ ಭವನವನ್ನು ಕಸ ವಿಲೇವಾರಿ ಘಟಕವಾಗಿ ಮಾಡಲಾಗಿದ್ದು, ಇದು ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಶಾಲೆ, ಸಹಕಾರಿ ಸಂಘ, ಇನ್ನಿತರ ಜನವಸತಿ ಪ್ರದೇಶವಿರುವ ಜಾಗದಲ್ಲಿ ಈ ರೀತಿ ಕಸ ವಿಲೇವಾರಿ ಮಾಡುತ್ತಿರುವುದು ಸರಿಯಲ್ಲ ಅಭಿಪ್ರಾಯ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ.

ಬೆಳ್ವೆ ಗ್ರಾ.ಪಂ. ವ್ಯಾಪ್ತಿಯ ಅಲಾºಡಿ ಗ್ರಾಮದ ಆರ್ಡಿಯಲ್ಲಿ ಸುಮಾರು 10 ವರ್ಷಗಳ ಹಿಂದೆ ನಿರ್ಮಿಸಿದ ಸಮುದಾಯ ಭವನದಲ್ಲಿ ಈಗ ಬೆಳ್ವೆ, ಮಡಾಮಕ್ಕಿ ಹಾಗೂ ಹೆಂಗವಳ್ಳಿ ಈ 3 ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ  ಒಣ ಕಸವನ್ನು ಸಂಗ್ರಹಿಸಲಾಗುತ್ತಿದೆ. ಇದಕ್ಕೆ ನಾಗರಿಕರಿಂದ ವಿರೋಧ ವ್ಯಕ್ತವಾಗಿದೆ.

10 ವರ್ಷಗಳ‌ ಹಿಂದೆ ನಿರ್ಮಾಣ:

2009- 10ನೇ ಸಾಲಿನಲ್ಲಿ ಜಿಲ್ಲಾ ಪಂಚಾಯತ್‌ ಅನುದಾನದಲ್ಲಿ ಅಲಾºಡಿ ಗ್ರಾಮದ ಆರ್ಡಿಯಲ್ಲಿ ಈ ಸಮುದಾಯ ಭವನವನ್ನು ನಿರ್ಮಿಸಲಾಗಿತ್ತು. ನಿರ್ಮಾಣಗೊಂಡು, ಉದ್ಘಾಟನೆ ಬಳಿಕ ಅನೇಕ ವರ್ಷಗಳವರೆಗೆ ಈ ಸಮುದಾಯ ಭವನದಲ್ಲಿ ಹಲವಾರು ಸಂಘ-ಸಂಸ್ಥೆಗಳ ಕಾರ್ಯಕ್ರಮಗಳು, ಸಾರ್ವಜನಿಕ ಆಚರಣೆ ಕುರಿತ ಪೂರ್ವಭಾವಿ ಸಭೆಗಳೆಲ್ಲ ನಡೆಯುತ್ತಿತ್ತು. ಆದರೆ ಕಳೆದ ಒಂದೆರಡು ವರ್ಷಗಳಿಂದ ಇಲ್ಲಿ ಯಾವುದೇ ಕಾರ್ಯಕ್ರಮ ನಡೆಯುತ್ತಿರಲಿಲ್ಲ.

ಶಾಲೆ, ಸೊಸೈಟಿಗೆ ಸಂಕಷ್ಟ:

ಆರ್ಡಿಯ ಈ ಸಮುದಾಯ ಭವನದ ಸಮೀಪವೇ ಸರಕಾರಿ ಪ್ರೌಢಶಾಲೆಯಿದ್ದು, ಇದಲ್ಲದೆ ಪಡಿತರ ವಿತರಣೆಯ ಸೊಸೈಟಿ, ಸರಕಾರಿ ಅಧಿಕಾರಿಗಳ ಮನೆಗಳಿರುವ ಕಾಲನಿ ಸಹ ಇಲ್ಲಿದೆ. ಆಸುಪಾಸಿನಲ್ಲಿ ಮನೆಗಳಿದ್ದು, ಇದು ಜನವಸತಿ ಪ್ರದೇಶವಾಗಿರುವುದರಿಂದ ಈ ಸಮುದಾಯ ಭವನದಲ್ಲಿ ಕಸ ವಿಲೇವಾರಿ ಮಾಡುವುದು ಸರಿಯಲ್ಲ ಎನ್ನುವ ಅಭಿಪ್ರಾಯ ಸ್ಥಳೀಯರದ್ದಾಗಿದೆ.

ಬಹುಗ್ರಾಮ ಕಸ ವಿಲೇವಾರಿ ಘಟಕ :

ಬೆಳ್ವೆ, ಮಡಾಮಕ್ಕಿ ಹಾಗೂ ಹೆಂಗವಳ್ಳಿ ಈ ಮೂರು ಗ್ರಾ.ಪಂ.ಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ವೆಯ ಗುಮ್ಮೊàಲದ 10 ಎಕರೆ ಜಾಗದಲ್ಲಿ ಬಹುಗ್ರಾಮ ಘನ ತ್ಯಾಜ್ಯ ಸಂಪನ್ಮೂಲ ನಿರ್ವಹಣ ಘಟಕ ನಿರ್ಮಾಣಗೊಳ್ಳುತ್ತಿದೆ. ಆದರೆ ಅದರ ನಿರ್ಮಾಣ ಪ್ರಕ್ರಿಯೆ ನಡೆಯುತ್ತಿರುವುದರಿಂದ ಈಗ ಸಂಗ್ರಹಿಸುತ್ತಿರುವ ಒಣ ಕಸವನ್ನು ತಾತ್ಕಾಲಿಕವಾಗಿ ಈ ಸಮುದಾಯ ಭವನದಲ್ಲಿ ಸಂಗ್ರಹಿಸಲಾಗುತ್ತಿದೆ ಎನ್ನುವುದು ಪಂಚಾಯತ್‌ ಸ್ಪಷ್ಟನೆಯಾಗಿದೆ.

ನಮ್ಮ ಈ ಬಾರಿಯ ಆಡಳಿತಾವಧಿಯ ಮುನ್ನವೇ ಇಲ್ಲಿ ಕಸ ವಿಲೇವಾರಿ ಮಾಡಲಾಗುತ್ತಿತ್ತು. ನಾನು ಸದಸ್ಯನಾದ ಬಳಿಕ ಇಲ್ಲಿ ಕಸ ವಿಲೇವಾರಿ ಮಾಡುವುದು ಸರಿಯಲ್ಲ. ಇಲ್ಲಿ ಶಾಲೆ, ಸೊಸೈಟಿಗಳೆಲ್ಲ ಇರುವುದರಿಂದ ಇಲ್ಲಿಂದ ತೆರವು ಮಾಡಿ ಎಂದು ಗ್ರಾ.ಪಂ.ಗೆ ಮನವಿ ಪತ್ರವನ್ನು ಸಹ ಸಲ್ಲಿಸಲಾಗಿದೆ. ರೋಹಿತ್‌ ಕುಮಾರ್‌ ಶೆಟ್ಟಿ, ಸ್ಥಳೀಯ ಗ್ರಾ.ಪಂ. ಸದಸ್ಯ

ಬೆಳ್ವೆ, ಮಡಾಮಕ್ಕಿ ಹಾಗೂ ಹೆಂಗವಳ್ಳಿ ಗ್ರಾ.ಪಂ. ಸಹಯೋಗದಲ್ಲಿ ಸುಸಜ್ಜಿತ ಘನ ತ್ಯಾಜ್ಯ ವಿಲೇವಾರಿ ಘಟಕ ತಯಾರಾಗುತ್ತಿದೆ. ಆದರೆ ಸದ್ಯಕ್ಕೆ ಆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಇಲ್ಲಿ ತಾತ್ಕಾಲಿಕವಾಗಿ ಕಸವನ್ನು ಸಂಗ್ರಹಿಸಲಾಗುತ್ತಿದೆ. ಇಲ್ಲಿ ಶಾಶ್ವತ ಕಸ ವಿಲೇವಾರಿ ಘಟಕವಲ್ಲ. ಹಸಿ ಕಸವನ್ನು ಇಲ್ಲಿ ವಿಲೇವಾರಿ ಮಾಡುತ್ತಿಲ್ಲ. ಒಣ ಕಸವನ್ನು ಮಾತ್ರ ಸಂಗ್ರಹಿಸಲಾಗುತ್ತಿದೆ. ಚಂದ್ರಶೇಖರ್‌ ಶೆಟ್ಟಿ ಸೂರ್ಗೋಳಿ, ಬೆಳ್ವೆ ಗ್ರಾ.ಪಂ. ಅಧ್ಯಕ್ಷ 

 

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.