ನೆರೆ ಬಾಧಿತ ನಾವುಂದ: ಸಿಕ್ಕಿಲ್ಲ ಸರಿಯಾದ ಪರಿಹಾರ

ಮರು ಬಿತ್ತನೆಯೂ ಕೊಳೆತು ನಾಶ; ಪರಿಹಾರವೂ ಇಲ್ಲ

Team Udayavani, Sep 15, 2022, 11:44 AM IST

3

ನಾವುಂದ: ಕಳೆದ ಜುಲೈ ಹಾಗೂ ಆಗಸ್ಟ್‌ನಲ್ಲಿ ಸುರಿದ ಭಾರೀ ಮಳೆಯಿಂದ ನೆರೆಗೆ ತುತ್ತಾದ ಸೌಪರ್ಣಿಕಾ ನದಿ ತೀರದ ನಾವುಂದ ಗ್ರಾಮದಲ್ಲಿ ಭಾರೀ ಪ್ರಮಾಣದ ಆಸ್ತಿ-ಪಾಸ್ತಿ ಹಾನಿ, ಕೃಷಿ ನಾಶವಾಗಿ ನಷ್ಟ ಉಂಟಾಗಿದ್ದು, ಆದರೆ ಪರಿಹಾರ ಮಾತ್ರ ಕೆಲವರಿಗೆ ಸಿಕ್ಕಿಲ್ಲ. ಬೆಳೆ ನಷ್ಟ ಪರಿಹಾರ ಈವರೆಗೆ ಯಾರಿಗೂ ಸಿಕ್ಕಿಲ್ಲ.

ನಾವುಂದ ಗ್ರಾಮದ ಸಾಲ್ಬುಡ, ಅರೆಹೊಳೆ, ಕಂಡಿಕೇರಿ, ಬಾಂಗಿನ್‌ಮನೆ, ಕೆಳಾಬದಿ ಪರಿಸರದಲ್ಲಿ ಭಾರೀ ಮಳೆಯಿಂದಾಗಿ ಒಂದು ವಾರವಿಡೀ ನೆರೆ ಪರಿಸ್ಥಿತಿ ಉಂಟಾಗಿ, ಜನ ಮನೆಯಿಂದ ಹೊರಬಾರದ ಸ್ಥಿತಿ ನಿರ್ಮಾಣವಾಗಿತ್ತು. ನೆರೆಗೆ ಅಲ್ಲಿನ ನಿವಾಸಿಗರು ಅಕ್ಷರಶಃ ನಲುಗಿ ಹೋಗಿದ್ದರು. ಈ ವೇಳೆ ಅನೇಕ ಮನೆಗಳಿಗೆ ಹಾನಿಯಾಗಿದ್ದು, ಹೆಕ್ಟೇರ್‌ಗಟ್ಟಲೆ ಕೃಷಿ ಭೂಮಿ ಸಂಪೂರ್ಣ ಜಲಾವೃತಗೊಂಡು, ನಾಟಿ ಮಾಡಿದ ಭತ್ತದ ಪೈರು ಕೊಳೆತು ಹೋಗಿತ್ತು.

13 ಮನೆಗಳಿಗೆ ಹಾನಿ

ಜುಲೈ ಹಾಗೂ ಆಗಸ್ಟ್‌ನ ಮಳೆಗೆ ನಾವುಂದ ಗ್ರಾಮದಲ್ಲಿ ಒಟ್ಟು 13 ಮನೆಗಳಿಗೆ ಹಾನಿಯಾಗಿತ್ತು. ಈ ಪೈಕಿ 2 ಮನೆಗಳಿಗೆ ಸಂಪೂರ್ಣ ಹಾನಿ ಹಾಗೂ ಬಾಕಿ ಮನೆಗಳಿಗೆ ಭಾಗಶಃ ಹಾನಿಯಾಗಿತ್ತು. ಈ ಪೈಕಿ ಕೆಲವರಿಗೆ ಮಾತ್ರ ಪರಿಹಾರ ಸಿಕ್ಕಿದೆ. ಅದು ಭಾಗಶಃ ಹಾನಿಯಾದ ಸಂತ್ರಸ್ತರಿಗೆ 5 ಸಾವಿರ ರೂ. ಮಾತ್ರ ಸಿಕ್ಕಿದೆ. ಅದಕ್ಕಿಂತ ಹೆಚ್ಚಿನ ನಷ್ಟ ಉಂಟಾಗಿದೆ. ಆದರೆ ಪರಿಹಾರ ಮಾತ್ರ ಅರೆಕಾಸಿನಷ್ಟು ಕೊಟ್ಟಿದ್ದಾರೆ. ಇದರಿಂದ ದುರಸ್ತಿ ಹೇಗೆ ಸಾಧ್ಯ ಎನ್ನುವುದು ಸಂತ್ರಸ್ತರ ಅಳಲು.

ಮರು ಬಿತ್ತನೆಯೂ ನಾಶ

ನಾವುಂದ ಒಂದೇ ಗ್ರಾಮದಲ್ಲಿ ಸಾಲ್ಬುಡ, ಅರೆಹೊಳೆ ಸುತ್ತಮುತ್ತಲಿನ ಪರಿಸರದಲ್ಲಿ ಸುಮಾರು 30 ಹೆಕ್ಟೇರ್‌ ಗದ್ದೆಯು ಮುಳುಗಡೆಯಾಗಿ, ನಾಟಿ ಮಾಡಿದ ಭತ್ತ ಕೊಳೆತು ಹೋಗಿತ್ತು. ಅದಾಗಿ ಇಲ್ಲಿನ ರೈತರು ದುಬಾರಿ ಬೆಲೆ ಅಂದರೆ 25 ಕೆಜಿ ಬಿತ್ತನೆ ಬೀಜಕ್ಕೆ 900 ರೂ. ತೆತ್ತು ಮರು ಬಿತ್ತನೆ ಮಾಡಿದ್ದು, ಆ ಬಳಿಕದ ಮಳೆಗೆ ಇದರಲ್ಲಿ ಬಹುಪಾಲು ಕೊಳೆತು ನಾಶವಾಗಿದೆ. ಒಟ್ಟಿನಲ್ಲಿ ಇದನ್ನೇ ನಂಬಿಕೊಂಡಿರುವ ಅನ್ನದಾತರಿಗೆ ಈ ಹಂಗಾಮಿನಲ್ಲಿ ಕಿಂಚಿತ್ತೂ ಕೈಗೆ ಸಿಗದಂತಾಗಿದೆ.

ಇನ್ನು ಅಧಿಕಾರಿಗಳ ಮಾಹಿತಿ ಪ್ರಕಾರ ಸುಮಾರು 90 ಎಕರೆ ಕೃಷಿ ಭೂಮಿಗೆ ಹಾನಿಯಾಗಿದ್ದು, ಈ ಭಾಗದ 100ಕ್ಕೂ ಮಿಕ್ಕಿ ಮಂದಿ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದು, ಈವರೆಗೆ ಒಂದು ರೂ. ಪರಿಹಾರವೂ ಯಾರಿಗೂ ಸಿಕ್ಕಿಲ್ಲ. ಇನ್ನು ಒಂದು ಜಾನುವಾರು ಸಾವನ್ನಪ್ಪಿದ್ದು, ಆ ಮನೆಯವರಿಗೂ ಯಾವುದೇ ಪರಿಹಾರ ಸಿಕ್ಕಿಲ್ಲ.

ರಸ್ತೆಗೂ ಹಾನಿ: ದುರಸ್ತಿಗೆ ಆಗ್ರಹ

ನೆರೆಯಿಂದಾಗಿ ನಾವುಂದ – ಅರೆಹೊಳೆ ಮುಖ್ಯ ರಸ್ತೆಯು ವಾರಗಟ್ಟಲೆ ಮುಳುಗಡೆಯಾಗಿದ್ದು, ಇದರಿಂದಾಗಿ ಹಲವು ಕಡೆಗಳಲ್ಲಿ ದೊಡ್ಡ – ದೊಡ್ಡ ಹೊಂಡ ಬಿದ್ದಿದೆ. ಪ್ರಾಕೃತಿಕ ವಿಕೋಪ ನಿಧಿಯಡಿ ಇದನ್ನು ದುರಸ್ತಿಪಡಿಸಬೇಕು ಮಾತ್ರವಲ್ಲದೆ ಪದೇ ಪದೆ ಮುಳುಗಡೆಯಾಗುವ ಈ ರಸ್ತೆಯನ್ನು 2-3 ಅಡಿ ಎತ್ತರಕ್ಕೇರಿಸಿದರೆ ಅನುಕೂಲವಾಗಬಹುದು ಎನ್ನುವುದು ಇಲ್ಲಿನ ಜನರ ಬೇಡಿಕೆಯಾಗಿದೆ.

ಶಾಶ್ವತ ಪರಿಹಾರಕ್ಕೆ ಸಕಾಲ

ಕಳೆದ ಹಲವಾರು ವರ್ಷಗಳಿಂದ ಈ ಸಾಲ್ಬುಡ, ಅರೆಹೊಳೆ ಪ್ರದೇಶವು ನೆರೆಗೆ ತುತ್ತಾಗುತ್ತಿದೆ. ಸೌಪರ್ಣಿಕಾ ನದಿ ತೀರದ ಸಾಲ್ಬುಡ, ಕಂಡಿಕೇರಿ, ಕೆಳಾಬದಿ, ಅರೆಹೊಳೆ, ಬಾಂಗಿನ್‌ಮನೆಯುದ್ದಕ್ಕೂ ನದಿ ದಂಡೆ ನಿರ್ಮಿಸಬೇಕಿದೆ. ಅದಲ್ಲದೆ ಅರೆಹೊಳೆಯ ರೈಲ್ವೇ ಕೆಳ ಸೇತುವೆ ಬಳಿ ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಮಾಡಿಕೊಡಬೇಕಿದೆ. ನೆರೆಗೆ ತುತ್ತಾಗುವ 30-40 ಮನೆಗಳಿಗೆ ಅಲ್ಲಿಂದ ಬೇರೆ ಕಡ ತಲಾ 2 ಸೆನ್ಸ್‌ ನಿವೇಶನ ನೀಡಿದರೆ ಸುರಕ್ಷತಾ ಸ್ಥಳದಲ್ಲಿ ಮನೆ ನಿರ್ಮಿಸಿಕೊಳ್ಳಬಹುದು. ನಾವುಂದ ಗ್ರಾಮದಲ್ಲೊಂದು ಶಾಶ್ವತ ಜಾನುವಾರು ಶೆಡ್‌ ಅಗತ್ಯವಿದೆ. ಈಗ ಶಾಶ್ವತ ಪರಿಹಾರ ಕಾಮಗಾರಿ ಕೈಗೊಳ್ಳಲು ಸಕಾಲವಾಗಿದೆ.

ಬೆಳೆ ಪರಿಹಾರ ಸಿಗಲಿ: ಮಳೆಯಿಂದಾಗಿ ದುಬಾರಿ ಬೆಲೆ ಕೊಟ್ಟು ಖರೀದಿಸಿದ ಮರು ಬಿತ್ತನೆ ಬೀಜವು ನಾಶವಾಗಿದೆ. ಮೊದಲ ಬಾರಿಗೆ ನಾಶವಾಗಿದ್ದರಿಂದ ಪರಿಹಾರವೂ ಸಿಕ್ಕಿಲ್ಲ. ಆದಷ್ಟು ಬೇಗ ಕೊಡುವಂತಹ ವ್ಯವಸ್ಥೆ ಮಾಡಲಿ. ಮಳೆಯಿಂದಾಗಿ ರಸ್ತೆಗೆ ಹಾನಿಯಾಗಿದ್ದು, ಅದನ್ನು ದುರಸ್ತಿ ಮಾಡಲಿ. ಇದರೊಂದಿಗೆ ಈಗಿನಿಂದಲೇ ಶಾಶ್ವತ ಪರಿಹಾರ ಕೈಗೊಳ್ಳುವ ಪ್ರಯತ್ನ ಮಾಡಲಿ. – ರಾಜೇಶ್‌ ಸಾಲ್ಬುಡ, ಸ್ಥಳೀಯ ಗ್ರಾ.ಪಂ. ಸದಸ್ಯ

ಪರಿಶೀಲಿಸಿ ಕ್ರಮ: ಮನೆಗಳಿಗೆ ಹಾನಿಯಾದ ಬಗ್ಗೆ ಬಹುತೇಕ ಎಲ್ಲರಿಗೂ ಪರಿಹಾರ ನೀಡಲಾಗಿದೆ. ಇನ್ನೂ ಬಾಕಿ ಇದ್ದರೆ ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು. ರಸ್ತೆ ದುರಸ್ತಿ, ಕೃಷಿ ಹಾನಿ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಬಳಿ ಮಾತನಾಡಲಾಗುವುದು. – ಶ್ರೀಕಾಂತ್‌ ಎಸ್‌. ಹೆಗ್ಡೆ, ಬೈಂದೂರು ತಹಶೀಲ್ದಾರ್‌   

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.