
“ವಸತಿ’ ಮಕ್ಕಳಿಗೆ ಸುಲಭವಲ್ಲ ಸ್ಪರ್ಧಾತ್ಮಕ ಪರೀಕ್ಷೆ!
Team Udayavani, Jul 25, 2022, 8:10 AM IST

ಕುಂದಾಪುರ: ರಾಜ್ಯದ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿರುವ ಸಾವಿರಾರು ಮಂದಿ ಜೆಇಇ, ನೀಟ್, ಸಿಇಟಿ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಂದ ದೂರ ಉಳಿಯುತ್ತಿದ್ದಾರೆ. ಪರಿಣಾಮವಾಗಿ ಸರಕಾರಿ ಕೋಟಾದಡಿ ಎಂಜಿನಿಯರಿಂಗ್, ಮೆಡಿಕಲ್ ಓದುವ ಅರ್ಹತೆಯುಳ್ಳ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತರು ಮುನ್ನಲೆಗೆ ಬರದಂತಾಗಿದೆ.
ಶಾಲಾ, ಕಾಲೇಜುಗಳು :
ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯು ಕೇಂದ್ರದ ಜವಾಹರ್ ನವೋದಯ ಮಾದರಿ ಶಾಲೆ ಮಾದರಿಯಲ್ಲಿ 1996-97ರಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಆರಂಭಿಸಿತು. 385 ಮೊರಾರ್ಜಿ ದೇಸಾಯಿ, 157 ಕಿತ್ತೂರು ರಾಣಿ ಚೆನ್ನಮ್ಮ, 12 ಏಕಲವ್ಯ ಮಾದರಿ ಶಾಲೆ, 15 ಅಟಲ್ ಬಿಹಾರಿ ವಾಜಪೇಯಿ ಶಾಲೆ, 96 ಶ್ರೀಮತಿ ಇಂದಿರಾ ಗಾಂಧಿ , 96 ಡಾ| ಬಿ.ಆರ್. ಅಂಬೇಡ್ಕರ್, 4 ಹುತಾತ್ಮ ವಸತಿ ಶಾಲೆಗಳು, 4 ಎಸ್ಸಿ/ಎಸ್ಟಿ ಪ್ರತಿಭಾವಂತ ವಿದ್ಯಾರ್ಥಿನಿಯರ ವಸತಿ ಶಾಲೆ, 1 ಮಾಸ್ತಿ ವೆಂಕಟೇಶ ಅಯ್ಯಂಗಾರ್ ವಸತಿ ಶಾಲೆ ಸೇರಿ ಒಟ್ಟು 826 ಶಾಲೆಗಳಿವೆ. ಈಗ ಹೊಸದಾಗಿ 4 ನಾರಾಯಣ ಗುರು ವಸತಿ ಶಾಲೆಗಳೂ ಸೇರ್ಪಡೆಯಾಗಿವೆ. ಇದಲ್ಲದೇ ರಾಜ್ಯದಲ್ಲಿ 26 ಪದವಿ ಪೂರ್ವ ಕಾಲೇಜುಗಳಿವೆ. ಇವುಗಳಲ್ಲದೇ ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯಡಿ 95 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 8 ಸರಕಾರಿ ಮುಸ್ಲಿಂ ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಪ್ರತೀ ಶಾಲೆಗಳಲ್ಲಿ 250, ಕಾಲೇಜುಗಳಲ್ಲಿ 160 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಾರೆ.
ವೃತ್ತಿಪರ ಶಿಕ್ಷಣಕ್ಕೆ ಅವಶ್ಯ:
ವೃತ್ತಿಪರ ಶಿಕ್ಷಣ ಪಡೆಯಲು ಪ್ರಥಮ ಪಿಯುಸಿ ಯಿಂದಲೇ ಮಾರ್ಗದರ್ಶನದ ಅಗತ್ಯವಿದೆ. ದ.ಕ.ದಲ್ಲಿ ಶಾಲಾ ಮುಖ್ಯಸ್ಥರ ಆಸಕ್ತಿಯಿಂದ, ಪೋಷಕರ ಸಹಕಾರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಮಾರ್ಗದರ್ಶನ ನೀಡಲಾಗುತ್ತಿದೆ. ಸರಕಾರವೇ ಇದಕ್ಕೆ ವ್ಯವಸ್ಥೆ ಮಾಡಿದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ಕುರಿತಾದ ಪ್ರಸ್ತಾವನೆ ನನೆಗುದಿಯಲ್ಲೇ ಇದೆ.
ವೇತನ: ಪ್ರಸ್ತುತ ಗೌರವ ಶಿಕ್ಷಕರನ್ನು ಬೋಧನೆಗೆ ಬಳಸ ಲಾಗುತ್ತಿದ್ದು, ಶಿಕ್ಷಕರಿಗೆ ಮಾಸಿಕ 10 ಸಾವಿರ ರೂ., ಉಪನ್ಯಾಸಕರಿಗೆ 12 ಸಾವಿರ ರೂ. ನೀಡಲಾಗುತ್ತದೆ. ನರೇಗಾದಲ್ಲಿ 309 ರೂ. ನೀಡುವ ಸರಕಾರ ಶಿಕ್ಷಕರು, ಉಪನ್ಯಾಸಕರಿಗೆ ದಿನಕ್ಕೆ 333 ರೂ., 400 ರೂ. ವೇತನ ನೀಡುತ್ತಿದೆ.
ತಳವರ್ಗದ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅವಕಾಶಗಳಿಗೆ ನಮ್ಮ ಸರಕಾರದಲ್ಲಿ ಸದಾ ತೆರೆದ ಬಾಗಿಲು. ಮೊರಾರ್ಜಿ ಕಾಲೇಜುಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. – ಕೋಟ ಶ್ರೀನಿವಾಸ ಪೂಜಾರಿ ಸಮಾಜ ಕಲ್ಯಾಣ ಇಲಾಖೆ ಸಚಿವರು
–ಲಕ್ಷ್ಮೀ ಮಚ್ಚಿನ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚಿತ ಗಿಫ್ಟ್ ಗಳ ಮೇಲೆ ಚುನಾವಣಾ ಆಯೋಗದ ಕಣ್ಣು

ಜೆಡಿಎಸ್ ದ್ವಿತೀಯ ಪಟ್ಟಿ ಬಿಡುಗಡೆಗೆ ಸಿದ್ಧತೆ: ಫೆ. 8ರ ಆಸುಪಾಸು ಬಹಿರಂಗ ಸಾಧ್ಯತೆ

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ

130 ಕ್ಷೇತ್ರಗಳಿಗೆ ಒಂದೇ ಹೆಸರು? ಕಾಂಗ್ರೆಸ್ ಪಟ್ಟಿ ಸಿದ್ಧಪಡಿಸಲು ಇಂದು ಮಹತ್ವದ ಸಭೆ

ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

‘ಟಿಪ್ಪು ನಿಜ ಕನಸು’ ನಾಟಕದ ವಿರುದ್ದದ ದೂರು ಹಿಂಪಡೆದ ಅರ್ಜಿದಾರ: ಅಡ್ಡಂಡ ಸಂತಸ

‘ನಟ ಭಯಂಕರ’ನಿಗೆ ತಲೆಬಿಸಿ ತಂದ ರಾಸಲೀಲೆ ಸಿಡಿ..!

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್

ಎರಡು ಅದ್ಭುತ ಕ್ಯಾಚ್ ಗಳಿಂದ ಬೆರಗು ಮೂಡಿಸಿದ ಸೂರ್ಯಕುಮಾರ್; ವಿಡಿಯೋ ನೋಡಿ