Kundapura ತಹಶೀಲ್ದಾರ್ ವಿರುದ್ಧ ದೂರು
Team Udayavani, Dec 4, 2023, 8:53 PM IST
ಕುಂದಾಪುರ: ಸುಳ್ಳು ಜಾತಿ ಪ್ರಮಾಣ ಪತ್ರ ರದ್ದುಪಡಿಸುವಂತೆ ಕೋರಿಕೊಂಡ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ನಡೆದುಕೊಂಡಿಲ್ಲ ಎಂದು ಇಲ್ಲಿನ ತಹಶೀಲ್ದಾರ್ ವಿರುದ್ಧ ಖಾರ್ವಿ ಮೇಲ್ಕೇರಿ ನಿವಾಸಿ ಸತೀಶ್ ಖಾರ್ವಿ ಅವರು ಕಂದಾಯ ಸಚಿವರು ಹಾಗೂ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಇಲ್ಲಿನ ಕಸ್ಬಾ ನಿವಾಸಿ ಜಯಾನಂದ ಅವರು ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಂಡಿದ್ದಾರೆ. ಅದನ್ನು ರದ್ದು ಪಡಿಸಬೇಕೆಂದು ತಹಶೀಲ್ದಾರ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಶಾಲೆ ಸೇರ್ಪಡೆ ಸಂದರ್ಭ ತಂದೆ ಹೆಸರು ತಪ್ಪಾಗಿ ನಮೂದಾಗಿದ್ದು ತಂದೆಯ ಬದಲು ಅಜ್ಜನ ಹೆಸರು ನಮೂದಾಗಿತ್ತು. ಅನಂತರ ಅದನ್ನು ಸರಿಪಡಿಸಲಾಗಿದೆ ಎಂದು ಜಯಾನಂದ ಅವರು ಹೇಳಿದ್ದರು. ಆದರೆ ತಹಶೀಲ್ದಾರ್ ಗ್ರಾಮ ಲೆಕ್ಕಾಧಿಕಾರಿಯಿಂದ ಹಿಡಿದು ಕಂದಾಯ ಅಧಿಕಾರಿಯವರೆಗೆ ಎಲ್ಲ ರೀತಿಯ ವರದಿ ತರಿಸಿಕೊಂಡು ತಂದೆ ಹೆಸರನ್ನು ತಪ್ಪಾಗಿ ನೀಡಿದ ದಾಖಲೆಗಳನ್ನು ಪರಿಶೀಲಿಸಿಯೂ ಪ್ರಮಾಣಪತ್ರ ಊರ್ಜಿತದಲ್ಲಿಟ್ಟಿದ್ದಾರೆ.
ಇದು ವೈಯಕ್ತಿಕವಾಗಿ ಆರೋಪಿಗೆ ಸಹಾಯ ಮಾಡುವ ಉದ್ದೇಶದಂತಿದೆ. ಈ ಘಟನೆಯ ಬಳಿಕ ಪಡೆದ ಮಾಹಿತಿ ಹಕ್ಕಿನ ದಾಖಲೆಯಂತೆ ಕಲಿತ ಶಾಲೆಯಿಂದ ಪಡೆದ ಪ್ರಮಾಣಪತ್ರದಲ್ಲೂ ಜಾತಿ ವಿವರ ತಿದ್ದಿದ್ದಾಗಿದೆ. ಈ ಬಗ್ಗೆ ಶಿಕ್ಷಣಾಧಿಕಾರಿ ಖಚಿತಪಡಿಸಿ ಸ್ಪಷ್ಟನೆ ನೀಡಿದ್ದಾರೆ. ಆದ್ದರಿಂದ ಕ್ರಮ ಕೈಗೊಳ್ಳಬೇಕು ಎಂದು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ
ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ
SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ
Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ಗೆ ಗೆಲುವು
ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ
MUST WATCH
ಹೊಸ ಸೇರ್ಪಡೆ
ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ
ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್ ವುಡ್ ನಟಿ, ಕಾಂಗ್ರೆಸ್ ಮುಖಂಡೆ
ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್ಗೂ ಹಾನಿ