ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ : ಕೆ.ಗೋಪಾಲ ಪೂಜಾರಿ

ಬೈಂದೂರು ಕ್ಷೇತ್ರಕ್ಕೆ ನಿಮ್ಮ ಕೊಡುಗೆಗಳೇನು ಎಂದು ಜನರಿಗೆ ತಿಳಿಸಲಿ

Team Udayavani, May 9, 2023, 4:01 PM IST

ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ : ಕೆ.ಗೋಪಾಲ ಪೂಜಾರಿ

ಬೈಂದೂರು: ಬೈಂದೂರು ಕ್ಷೇತ್ರದಲ್ಲಿ ಕೊನೆಯ ಹಂತ ಕಾಂಗ್ರೆಸ್‌ ಅಬ್ಬರದ ಚುನಾವಣಾ ಪ್ರಚಾರ ಕೈಗೊಂಡಿದೆ. ಸಿದ್ದಾಪುರ, ತಲ್ಲೂರು, ವಂಡ್ಸೆ, ಬೈಂದೂರು,ಉಪ್ಪುಂದ ಸೇರಿದಂತೆ ವಿವಿಧ ಕಡೆ ನಡೆದ ರೋಡ್‌ ಶೋಗಳಲ್ಲಿ ಜನಸಾಗರ ಸೇರಿದೆ.ಇದು ಕಾಂಗ್ರೆಸ್‌ ಕಾರ್ಯಕರ್ತರ ಹುಮ್ಮಸ್ಸನ್ನು ಹೆಚ್ಚಿಸಿದೆ.

ಪ್ರತಿ ವಾರ್ಡ್‌ಗಳಲ್ಲಿ ಅಚ್ಚುಕಟ್ಟಿನ ಪ್ರಚಾರ ಕೈಗೊಂಡಿರುವುದು ಮತ್ತು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಒಲವಿರುವ ಜೊತೆಗೆ ಅಭ್ಯರ್ಥಿ ಕೆ.ಗೋಪಾಲ ಪೂಜಾರಿ ಯವರನ್ನು ಈ ಬಾರಿ ಗೆಲ್ಲಿಸಬೇಕೆನ್ನುವ ಅನುಕಂಪ ಎದ್ದು ಕಾಣುತ್ತಿದೆ.

ಬೈಂದೂರು ಕ್ಷೇತ್ರದ ವಿವಿಧ ಕಡೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಕೆ.ಗೋಪಾಲ ಪೂಜಾರಿಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪರ ಅಲೆಯಿದೆ. ಸೋಲಿನ ಭೀತಿಯಿಂದ ಹತಾಶರಾದ ಬಿಜೆಪಿ ಸುಳ್ಳುಗಳ ಪ್ರಚಾರದ ಮೂಲಕ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ.ಆದರೆ ಬೈಂದೂರು ಕ್ಷೇತ್ರದ ಜನ ಬಿಜೆಪಿಯ ಸುಳ್ಳು ಪ್ರಚಾರಕ್ಕೆ ಬೆಲೆ ಕೊಡುವುದಿಲ್ಲ.

ಬೈಂದೂರು ಕರಾವಳಿ ಹಾಗೂ ಮಲೆನಾಡು ಭಾಗಗಳನ್ನು ಹೊಂದಿದೆ.ಇಲ್ಲಿ ಪ್ರತಿ ಕುಟುಂಬಗಳು ಕೂಡ ಕಷ್ಟಪಟ್ಟು ಮೇಲೆ ಬಂದವರಾಗಿದ್ದಾರೆ.ನನ್ನ ಬಾಲ್ಯದಲ್ಲಿ ಊಟಕ್ಕೂ ಕೂಡ ಕಷ್ಟಪಡಬೇಕಾಗಿತ್ತು.ಹೋಟೆಲ್‌ಗ‌ಳಲ್ಲಿ ಕೂಲಿ ಮಾಡಿ ಮೇಲೆ ಬಂದ ನನಗೆ ಜೀವನದ ಕಷ್ಟದ ಇಂಚಿಂಚೂ ಕೂಡ ತಿಳಿದಿದೆ.ಆದರೆ ಆ ಕಷ್ಟಗಳನ್ನು ಮಾರ್ಕೆಟಿಂಗ್‌ ಮಾಡಿಕೊಂಡು ಜನರಲ್ಲಿ ಸುಳ್ಳು ಅಪಪ್ರಚಾರ ಮಾಡಿ ಚುನಾವಣೆ ಎದುರಿಸುವಂತ ಕೆಲಸ ನಾನು ಯಾವತ್ತು ಮಾಡಿಲ್ಲ. ಸತ್ಯ ಮತ್ತು ನ್ಯಾಯದ ಜೊತೆ ಜನರ ಬಳಿ ಮತಯಾಚಿಸಿದ್ದೇನೆ.ನನ್ನ ವ್ಯಕ್ತಿತ್ವ ಕ್ಷೇತ್ರದ ಪ್ರತಿ ಮನೆ ಮನೆಯ ಜನರಿಗೂ ತಿಳಿದಿದೆ.ಕ್ಷೇತ್ರಾದ್ಯಂತ ಕಾಂಗ್ರೆಸ್‌ ಪರ ಅಲೆ ಸುನಾಮಿಯಂತೆ ಎದ್ದಿದೆ.ಜನರಿಗೆ ಚುನಾವಣೆ ಬಂದಾಕ್ಷಣ ಪ್ರತ್ಯಕ್ಷವಾಗುವ ನಾಯಕರು ಬೇಕಿಲ್ಲ. ಕ್ಷೇತ್ರದ ಸೇವೆ ಮಾಡಿ ಸಂಕಷ್ಟಗಳಿಗೆ ಸದಾ ಸ್ಪಂಧಿಸುವ ನನ್ನ ಪ್ರಾಮಾಣಿಕ ವ್ಯಕ್ತಿತ್ವಕ್ಕೆ ಆಶೀರ್ವಾದ ಮಾಡುತ್ತಾರೆ.ಪ್ರಚಂಡ ಬಹುಮತದಿಂದ ಗೆಲ್ಲಿಸುತ್ತಾರೆ ಎಂದರು.

ಬೈಂದೂರು ಕ್ಷೇತ್ರಕ್ಕೆ ಗಂಟಿಹೊಳೆ ಕೊಡುಗೆ ಏನು,ಜನಸಾಮಾನ್ಯರ ಪ್ರಶ್ನೆ

ಬೈಂದೂರು ಕ್ಷೇತ್ರದಲ್ಲಿ ಸೋಶಿಯಲ್‌ ಮೀಡಿಯಾ ವಾರ್‌ ತಾರಕಕ್ಕೇರಿದೆ.ಜನಸಾಮಾನ್ಯರು ಮತ್ತು ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೈಂದೂರು ಕ್ಷೇತ್ರದಲ್ಲಿ ಗೋಪಾಲ ಪೂಜಾರಿಯವರು ವಯಕ್ತಿಕ ದೇಣಿಗೆ ನೀಡಿ ಅಭಿವೃದ್ದಿಪಡಿಸಿದಷ್ಟು ದೈವ,ದೇವಸ್ಥಾನಗಳಿಗೆ ನೀವು ಇನ್ನೂ ಬೇಟಿ ಕೂಡ ನೀಡಿಲ್ಲ. ಚುನಾವಣೆಯಲ್ಲಿ ಯಾವ ನೈತಿಕತೆಯಲ್ಲಿ ಮತ ಕೇಳುತ್ತೀರಿ.ಕೋವಿಡ್‌ ಸಂದರ್ಭದಲ್ಲಿ ಬೈಂದೂರು ಕ್ಷೇತ್ರದಲ್ಲಿ ನೀವು ಎಲ್ಲೂ ಕೂಡ ನೆರವಿಗೆ ಬಂದಿಲ್ಲ. ಬೈಂದೂರಿನ ವಿವಿಧ ಕಡೆ ಜಲಾವೃತಗೊಂಡಾಗ, ತಾಲೂಕು ಹೋರಾಟ ಸೇರಿದಂತೆ ಕನಿಷ್ಟ ಪಕ್ಷ ಗ್ರಾ.ಪಂ ಚುನಾವಣೆಯಲ್ಲೂ ಕೂಡ ಭಾಗವಹಿಸದ ನೀವು ಕಳೆದ ಐದು ವರ್ಷಗಳಲ್ಲಿ ಬೈಂದೂರು ಕ್ಷೇತ್ರಕ್ಕೆ ನಿಮ್ಮ ಕೊಡುಗೆಗಳೇನು ಎಂದು ಜನರಿಗೆ ತಿಳಿಸಲಿ ಎನ್ನುವುದು ಮುಖಂಡರ ಅಭಿಪ್ರಾಯವಾಗಿದೆ.

ಕಾರ್ಯಕರ್ತರೆ ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕರು:

ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ರಾಷ್ಟ್ರ,ರಾಜ್ಯ ನಾಯಕರು,ಸಿನಿಮಾ ತಾರೆಯರು ಸೇರಿ ಅನೇಕ ಸ್ಟಾರ್‌ ಪ್ರಚಾರಕರು ಬಂದಿದ್ದಾರೆ.ಆದರೆ ಬೈಂದೂರು ಕ್ಷೇತ್ರದ ಮನೆ ಮಗನಾದ ನನ್ನ ಬಗ್ಗೆ ಕ್ಷೇತ್ರದ ಜನರ ಪ್ರೀತಿಯ ಶ್ರೀರಕ್ಷೆಯಿದೆ.ನಮ್ಮ ಕಾರ್ಯಕರ್ತರೆ ಪಕ್ಷದ ಪಾಲಿನ ಸ್ಟಾರ್‌ ಪ್ರಚಾರಕರು. ಕಳೆದ ಚುನಾವಣೆಯಲ್ಲಿ ಸುತ್ತಾಡಲು ಕಷ್ಟವಿರಲಿಲ್ಲ.ಆದರೆ ಈ ಚುನಾವಣೆಯಲ್ಲಿ ಜಾಸ್ತಿ ನಡೆದಾಡಬಾರದು ಎಂದು ವೈದ್ಯರು ಹೇಳಿದರೂ ಕೂಡ ಗೋಪಾಲ ಪೂಜಾರಿಯವರು ಆರು ತಿಂಗಳಿನಿಂದ ಪ್ರಚಾರ ಕೈಗೊಂಡು ಐದು ಸಾವಿರ ಕಿ.ಮೀ ಅಧಿಕ ನಡೆದಿದ್ದಾರೆ. 246 ಬೂತ್‌ಗಳಲ್ಲಿ ಸಭೆ ನಡೆಸಿ ಮತದಾರರ ಮನದಾಳದ ಪ್ರೀತಿ ವಿಶ್ವಾಸಗಳಿಸಿದ್ದಾರೆ ಎಂದು ಪ್ರಚಾರ ಸಮಿತಿ ಅಧ್ಯಕ್ಷ ಡಾ.ಸುಬ್ರಹ್ಮಣ್ಯ ಭಟ್‌ ಹೇಳಿದ್ದಾರೆ.

ಕೆ.ಗೋಪಾಲ ಪೂಜಾರಿಯವರಿಗೆ ಮೀನುಗಾರರ ವಿಶೇಷ ಒಲವು:

ಕಳೆದ ಐದು ವರ್ಷಗಳಲ್ಲಿ ಕರಾವಳಿ ಭಾಗದಲ್ಲಿ ಮೀನುಗಾರರ ಬಹುತೇಕ ಯೋಜನೆಗಳು ಭರವಸೆಯಾಗಿಯೆ ಉಳಿದಿದೆ.ಸೀಮೆಎಣ್ಣೆ ಸೇರಿದಂತೆ ಬಂದರುಗಳ ನಿರ್ಲಕ್ಷದಿಂದ ಕರಾವಳಿ ಭಾಗದ ಮೀನುಗಾರರು ಸಂಕಷ್ಟದಲ್ಲಿದ್ದಾರೆ.ಕಾಂಗ್ರೆಸ್‌ ಅವಧಿಯಲ್ಲಿ ಜಾರಿಗೆ ತಂದ ಯೋಜನೆಗಳು ಬಿಜೆಪಿ ಅವಧಿಯಲ್ಲಿ ತಟಸ್ಥಗೊಂಡಿದೆ.

ಹೀಗಾಗಿ ಗಂಗೊಳ್ಳಿ, ಮರವಂತೆ, ಕೊಡೇರಿ, ಅಳ್ವೆಗದ್ದೆ ಮೀನುಗಾರಿಕಾ ಬಂದರುಗಳನ್ನು ಆಯ್ಕೆಯಾದ ಮೊದಲ ಹಂತದಲ್ಲಿ ಪ್ರಸ್ತಾವನೆ ಸಲ್ಲಿಸುತ್ತಾರೆ. ಕಾಂಗ್ರೇಸ್‌ ಪ್ರಣಾಳಿಕೆ ಪ್ರಕಾರ ಮೀನುಗಾರರಿಗೆ ಪ್ರತಿ ಲೀಟರ್‌ ಡಿಸೇಲ್‌ಗೆ 25 ರೂಪಾಯಿ ಸಬ್ಸಿಡಿ ತಿಂಗಳಿಗೆ 500 ಲೀಟರ್‌ ಸೀಮೆಎಣ್ಣೆ 94/ಸಿ ಯೋಜನೆ,ಅಕ್ರಮ -ಸಕ್ರಮ ಯೋಜನೆ ಸೇರಿದಂತೆ ಬಹುತೇಕ ಯೋಜನೆಗಳು ಈ ಬಾರಿ ಕರಾವಳಿ ಭಾಗದ ಮೀನುಗಾರರಿಗೆ ಭರವಸೆ ಕೊಟ್ಟಿದೆ.ಮತದಾರರು ಗೋಪಾಲ ಪೂಜಾರಿ ಬಗ್ಗೆ ವಿಶೇಷ ಒಲವು ಹೊಂದಿದ್ದಾರೆ ಎಂದು ಬೈಂದೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮದನ್‌ ಕುಮಾರ್‌ ಹೇಳಿದ್ದಾರೆ.

ಪ್ರತಿ ಜಿ.ಪಂ ವ್ಯಾಪ್ತಿಯಲ್ಲಿ ಗೋಶಾಲೆ:

ಧರ್ಮಜಾಗೃತಿ ಸೇರಿದಂತೆ ಅಭಿವೃದ್ದಿ ಬಗ್ಗೆ ಕಾಂಗ್ರೆಸ್‌ ಪಕ್ಷ ನೂರಕ್ಕೆ ನೂರು ಪ್ರಾಮಾಣಿಕ ಕರ್ತವ್ಯ ನಿರ್ವಹಿಸುತ್ತಿದೆ. ಜಾತ್ಯಾತೀತ ತತ್ವದೊಂದಿಗೆ ಸರ್ವರನ್ನು ಪ್ರೀತಿಯಿಂದ ಮುನ್ನೆಡೆಸುವ ಜೊತೆಗೆ ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಸರಕಾರದ ಅವಧಿಯಲ್ಲಿ ಪಶು ಆಸ್ಪತ್ರೆಗೆ ಸ್ವಂತ ಸ್ಥಳ ಮೀಸಲಿರಿಸಲಾಗಿದೆ ಹಾಗೂ ಅದರಲ್ಲಿ ಕಟ್ಟಡ ಕೂಡ ನಿರ್ಮಾಣವಾಗಿದೆ.ಎಲ್ಲಾ ಗ್ರಾಮದಲ್ಲಿ ಪಶು ಆಸ್ಪತ್ರೆ ಸೇವೆಯ ಜೊತೆಗೆ ಪ್ರತಿ ಜಿ.ಪಂ ವ್ಯಾಪ್ತಿಯಲ್ಲಿ ಗೋಶಾಲೆ ಆರಂಭಿಸುವ ಯೋಜನೆಯಿದೆ ಎಂದು ಗೋಪಾಲ ಪೂಜಾರಿ ತಿಳಿಸಿದ್ದಾರೆ.

ಬಿಜೆಪಿ ಸುಕುಮಾರ ಶೆಟ್ಟಿಯವರನ್ನು ನಿರ್ಲಕ್ಷಿಸಿದ ಬಿಜೆಪಿ:

ವಂಡ್ಸೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಶೆಟ್ಟಿ ಮಾತನಾಡಿ ಬೈಂದೂರು ಕ್ಷೇತ್ರ ವ್ಯಾಪ್ತಿ ಕಾಂಗ್ರೆಸ್‌ ಪರ ವ್ಯಾಪಕ ಬೆಂಬಲವಿದೆ. ಬಿಜೆಪಿಯಲ್ಲಿ ರಿಮೋಟ್‌ ಕಂಟ್ರೋಲ್‌ ವ್ಯವಸ್ಥೆ ಹೊಂದಿದೆ. ಬೆಂಗಳೂರಿನಲ್ಲಿ ಕುಳಿತ ಆರ್‌.ಎಸ್‌.ಎಸ್‌ ನಾಯಕರು ಕಷ್ಟಪಟ್ಟು ಪಕ್ಷ ಕಟ್ಟಿದ ನಾಯಕರನ್ನು ಕಂಟ್ರೋಲ್‌ ಮಾಡುವ ವ್ಯವಸ್ಥೆಯಿದೆ. ಕಾರ್ಯಕರ್ತರ ಶ್ರಮಕ್ಕೆ ಬೆಲೆಯಿಲ್ಲಾ. ಚುನಾವಣೆ ಮುಗಿದ ಬಳಿಕ ಸ್ಥಳೀಯ ನಾಯಕರು ಅತಂತ್ರ. ಹೀಗಾಗಿ ನೂರಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ.

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.