“ಕ್ವಾರಂಟೈನ್‌ ಕೇಂದ್ರಗಳ ನಿರ್ವಹಣೆಗೆ ಕಂಟ್ರೋಲ್‌ ರೂಂ’

ಅಧಿಕಾರಿಗಳ, ವಿವಿಧ ಪಕ್ಷಗಳ ಮುಖಂಡರ ಸಭೆ

Team Udayavani, May 18, 2020, 5:30 AM IST

“ಕ್ವಾರಂಟೈನ್‌ ಕೇಂದ್ರಗಳ ನಿರ್ವಹಣೆಗೆ ಕಂಟ್ರೋಲ್‌ ರೂಂ’

ಕುಂದಾಪುರ: ಕ್ವಾರಂಟೈನ್‌ ಕೇಂದ್ರಗಳ ಸಮರ್ಥ ನಿರ್ವಹಣೆಗೆ ತಾಲೂಕಿನಲ್ಲಿ ಕಂಟ್ರೋಲ್‌ ರೂಂ ತೆರೆಯಬೇಕು ಎಂದು ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೇಳಿದ್ದಾರೆ.

ಅವರು ರವಿವಾರ ಇಲ್ಲಿನ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಅಧಿಕಾರಿಗಳ, ವಿವಿಧಪಕ್ಷಗಳ ಮುಖಂಡರ ಸಭೆ ನಡೆಸಿ ಮಾತನಾಡಿದರು.

ವ್ಯವಸ್ಥೆಗಳು ಸಮರ್ಪಕವಾಗಿ ಇಲ್ಲದ ಹಾಸ್ಟೆಲ್‌ಗ‌ಳನ್ನು ಕ್ವಾರಂಟೈನ್‌ ಕೇಂದ್ರಗಳಾಗಿ ಮೀಸಲಿಡುವುದು ಬೇಡ, ಅಂತೆಯೇ ಶೌಚಾಲಯ, ವಿದ್ಯುತ್‌ ವ್ಯವಸ್ಥೆ ಸರಿಯಾಗಿಲ್ಲದ ಪ್ರಾಥಮಿಕ ಶಾಲೆಗಳನ್ನು ಕೂಡಾ ಮೀಸಲಿಡುವುದು ಬೇಡ ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ ಶಾಸಕರು, ಕ್ವಾರಂಟೈನ್‌ ಕೇಂದ್ರಗಳಲ್ಲಿ ಉಂಟಾಗುವ ಸಮಸ್ಯೆ, ಆಹಾರ ಇತ್ಯಾದಿಗಳ ವಿವರಗಳನ್ನು ಒದಗಿಸುವ ಸಲುವಾಗಿ ಕಂಟ್ರೋಲ್‌ ರೂಂ ತೆರೆಯಿರಿ ಎಂದರು.

ಜಿಲ್ಲೆಯ ಗಡಿಯ ಒಳಗೆ ಎಷ್ಟು ಮಂದಿ ಆಗಮಿಸುತ್ತಾರೆ, ಎಷ್ಟು ಹೊತ್ತಿಗೆ ಆಗಮಿಸುತ್ತಾರೆ ಇತ್ಯಾದಿ ಮಾಹಿತಿ ಖಚಿತವಾಗಿ ದೊರೆಯುವುದಿಲ್ಲ. ಆದ್ದರಿಂದ ವ್ಯವಸ್ಥೆ ಮಾಡುವಾಗ ವಿಳಂಬ ಆಗುತ್ತಿದೆ. ಇದಕ್ಕಾಗಿ ಕ್ವಾರಂಟೈನ್‌ ಕೇಂದ್ರ ತಲುಪಿದ ಕೂಡಲೇ ಆಗಮಿಸಿದವರಿಗೆ ಉಪಾಹಾರ, ಊಟ ದೊರೆಯುವಂತೆ ಮಾಡಬೇಕು. ಅಲ್ಲದೇ ಆಗಮಿಸುವವರು ಕೂಡಾ ವ್ಯವಸ್ಥೆಯನ್ನು ದೂರುವ ಬದಲು ತುರ್ತು ಹಸಿವು ನೀಗಿಸಲು ಏನಾದರೂ ಆಹಾರ ಪದಾರ್ಥ ಇಟ್ಟುಕೊಂಡಿದ್ದರೆ ಸಮಸ್ಯೆಯಾಗುವುದಿಲ್ಲ. ಈಗಿನ್ನೂ ಹೊರರಾಜ್ಯಗಳಲ್ಲಿ ನೆಲೆಸಿದ ಈ ಊರಿನ ಶೇ.2ರಷ್ಟು ಜನ ಕೂಡಾ ಆಗಮಿಸಿಲ್ಲ. ಇನ್ನೂ ಎರಡು ಮೂರು ತಿಂಗಳ ಕಾಲ ಕ್ವಾರಂಟೈನ್‌ ಕೇಂದ್ರಗಳು ತೆರೆದಿದ್ದು ಬೇರೆ ರಾಜ್ಯಗಳಿಂದ ಜನ ಬರುತ್ತಲೇ ಇರುವ ಸಾಧ್ಯತೆಯಿದೆ. ಪಕ್ಷಭೇದ ಮರೆತು ಎಲ್ಲರೂ ಇವುಗಳ ನಿರ್ವಹಣೆಗೆ ನೆರವಾಗಲಿದ್ದಾರೆ ಎಂದರು.

ಅಧಿಕಾರಿಗಳನ್ನು ಬೈಯಬೇಡಿ. ಅವರ ಕಷ್ಟಗಳನ್ನೂ ಅರಿಯಿರಿ. ಓಟು ಹಾಕಿಸಿಕೊಂಡದ್ದಕ್ಕಾಗಿ ಜನಪ್ರತಿನಿಧಿಗಳಾದ ನಾವು ಎಲ್ಲವನ್ನೂ ಕೇಳಿಸಿಕೊಳ್ಳಬೇಕಾಗುತ್ತಿ¤ದೆ. ಆದರೆ ಸ್ಥಳೀಯವಾಗಿಯೂ ಆಗುವ ಸಮಸ್ಯೆಗಳನ್ನು ಗಮನದಲ್ಲಿರಿಸಿಕೊಳ್ಳಿ ಎಂದು ಕ್ವಾರಂಟೈನ್‌ಗೆ ಬರುವವರಿಗೆ ಶಾಸಕರು ಕಿವಿಮಾತು ಹೇಳಿದರು.

ಅಕ್ಷರದಾಸೋಹದ ಬಿಸಿಯೂಟ, ಬಿಸಿಎಂ ಹಾಸ್ಟೆಲ್‌ಗ‌ಳಲ್ಲಿ ಉಳಿಕೆಯಾದ ಅಕ್ಕಿ, ಬೇಳೆಯನ್ನು ಕ್ವಾರಂಟೈನ್‌ ಕೇಂದ್ರದಲ್ಲಿ ಇರುವವರ ಬಳಕೆಗೆ ನೀಡಲು ಅನುವು ಮಾಡಿಕೊಡುವಂತೆ ಶಾಸಕರು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸಭೆಯಿಂದಲೇ ದೂರವಾಣಿ ಮೂಲಕ ಮನವಿ ಮಾಡಿದರು.

ತಹಶೀಲ್ದಾರ್‌ ತಿಪ್ಪೇಸ್ವಾಮಿ, ಶಿಕ್ಷಣ ಇಲಾಖೆಯ ಸದಾನಂದ ಬೈಂದೂರು, ಅರುಣ್‌ ಕುಮಾರ್‌, ಬಿಸಿಎಂ ಇಲಾಖೆಯ ಬಿ.ಎಸ್‌. ಮಾದಾರ್‌, ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಪರಿಸರ ಎಂಜಿನಿಯರ್‌ ರಾಘವೇಂದ್ರ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹರಿಪ್ರಸಾದ್‌ ಕಾನ್ಮಕ್ಕಿ, ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿ, ಜ್ಯೋತಿ ಪುತ್ರನ್‌, ಕೋಣಿ ಕೃಷ್ಣದೇವ ಕಾರಂತ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕಿರಣ್‌ ಕೊಡ್ಗಿ, ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮುಖಂಡರಾದ ಗುಣರತ್ನ, ಸುರೇಶ್‌ ಶೆಟ್ಟಿ ಕಾಡೂರು, ಸುರೇಶ್‌ ಶೆಟ್ಟಿ ಬೀಜಾಡಿ, ಸುನಿಲ್‌ ಶೆಟ್ಟಿ, ಸಂತೋಷ್‌ ಶೆಟ್ಟಿ, ದಿವಾಕರ ಕಡ್ಗಿ, ಸುಧೀರ್‌, ಭಾಸ್ಕರ ಬಿಲ್ಲವ, ಮೋಹನದಾಸ ಶೆಣೈ, ಸದಾನಂದ ಬಳ್ಕೂರು, ಅರುಣ್‌ ಬಾಣ, ಗಿರೀಶ್‌ ಕುಂದಾಪುರ, ಅಶೋಕ್‌ ಪೂಜಾರಿ ಕೋಡಿ, ಕೃಷ್ಣ ಗೊಲ್ಲ ಅಧಿಕಾರಿ ವಿನಯ್‌ ಕುಮಾರ್‌, ಕಾಂಗ್ರೆಸ್‌ನ ಇಚ್ಛಿತಾರ್ಥ ಶೆಟ್ಟಿ, ವಿಜಯ ಪುತ್ರನ್‌,ಬಿಜೆಪಿಯ ಮೋಹನದಾಸ ಶೆಣೈ, ಉದಯ ನಾಯ್ಕ, ಸಂಪತ್‌ ಕುಮಾರ್‌ ಶೆಟ್ಟಿ,ಭರತ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಒಟ್ಟು 13 ಕೇಂದ್ರಗಳು
ಕುಂದಾಪುರ ಹೋಬಳಿಯಲ್ಲಿ 492 ಜನ 13 ಕೇಂದ್ರಗಳಲ್ಲಿದ್ದು, ಇದರಲ್ಲಿ ಪುರಸಭೆ ವ್ಯಾಪ್ತಿಯಲ್ಲಿ 8 ಕೇಂದ್ರಗಳಿವೆ. 200 ತಟ್ಟೆಗಳನ್ನು ಸರಕಾರದಿಂದ ನೀಡಲಾಗಿದ್ದು ಎಲ್ಲ ಕ್ವಾರಂಟೈನ್‌ ಕೇಂದ್ರಗಳ ಕಸ ವಿಲೇವಾರಿ ಜವಾಬ್ದಾರಿಯನ್ನು ಒಂದೇ ಸಂಸ್ಥೆ ನಿರ್ವಹಿಸಲಿದೆ. ಇನ್ನಷ್ಟು ಕಡೆ ಕ್ವಾರಂಟೈನ್‌ ಕೇಂದ್ರಗಳನ್ನು ತೆರೆಯಲಿದ್ದು, ಅಲ್ಲಿಗೆ ಸ್ಥಳೀಯವಾಗಿ ಆಹಾರ ಒದಗಿಸಲು ಸ್ಥಳೀಯರ ಉಸ್ತುವಾರಿ ವಹಿಸಲು ನಿರ್ಧರಿಸಲಾಯಿತು. ಪ್ರಸ್ತುತ ಆನೆಗುಡ್ಡೆ ದೇವಾಲಯ ಊಟವನ್ನು, ಪೇಟೆ ವೆಂಕಟರಮಣ ದೇಗುಲದ ವತಿಯಿಂದ ಉಪಾಹಾರವನ್ನೂ ನೀಡಲಾಗುತ್ತಿದೆ ಎಂದು ಶಾಸಕರು ತಿಳಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.