ಕಾರ್ಪೋರೇಟ್ ಫಾರ್ಮಿಂಗ್ ರೈತರ ಬದುಕನ್ನು ಕಿತ್ತುಕೊಳ್ಳಲಿದೆ: ಪಿ.ಸಾಯಿನಾಥ್

ತಾನು ಬೆಳೆದ ಬೆಳೆಗೆ ಬೆಲೆ ನಿಗದಿಪಡಿಸುವ ಅಧಿಕಾರ ರೈತನಿಗೆ ಇಲ್ಲ

Team Udayavani, Feb 15, 2020, 6:00 PM IST

Sainath-03

ಕುಂದಾಪುರ: ಕಾರ್ಪೋರೇಟ್ ಫಾರ್ಮಿಂಗ್ ಅನ್ನು ದೇಶದ ಎಲ್ಲೆಡೆ ಅನುಷ್ಠಾನಗೊಳಿಸಿದರೆ ರೈತರ ಬದುಕುವ ಹಕ್ಕನ್ನೇ ಕಿತ್ತುಕೊಂಡಂತಾಗುತ್ತದೆ. ಭಾರತದ ಕೃಷಿ ಕ್ಷೇತ್ರವನ್ನು ಕಾರ್ಪೋರೇಟ್ ಫಾರ್ಮಿಂಗ್ ಹೈಜಾಕ್ ಮಾಡಿದೆ ಎಂದು ಮ್ಯಾಗ್ಸಸೆ ಪ್ರಶಸ್ತಿ ವಿಜೇತ ಪತ್ರಕರ್ತ ಪಿ.ಸಾಯಿನಾಥ್ ಕಳವಳ ವ್ಯಕ್ತಪಡಿಸಿದರು.

ಅವರು ಶುಕ್ರವಾರ ಕುಂದಾಪುರ ಜ್ಯೂನಿಯರ್ ಕಾಲೇಜಿನ ಕಲಾಮಂದಿರದಲ್ಲಿ ಸಮುದಾಯ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ್ದ “ಕಾರ್ಪೋರೇಟ್ ಫಾರ್ಮಿಂಗ್ ಮತ್ತು ಭಾರತದ ಕೃಷಿ ಬಿಕ್ಕಟ್ಟುಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾತನಾಡಿದರು.

ಭೂಮಿ ಮಾತ್ರ ಕಾರ್ಪೋರೇಟ್ ಕೈಯಲ್ಲಿಲ್ಲ ಎಂಬುದನ್ನು ಹೊರತುಪಡಿಸಿದರೆ, ಇನ್ನುಳಿದಂತೆ ಗೊಬ್ಬರ, ಕೀಟನಾಶಕ, ಬೀಜ, ನೀರು, ರೈತರು ಬೆಳೆದ ಉತ್ಪನ್ನಗಳಿಗೆ ಬೆಲೆ ನಿಗದಿಪಡಿಸುದು ಕೂಡಾ ಕಾರ್ಪೋರೇಟ್ ಕಂಪನಿಗಳ ಕೈಯಲ್ಲಿದೆ. ತಾನು ಬೆಳೆದ ಬೆಳೆಗೆ ಬೆಲೆ ನಿಗದಿಪಡಿಸುವ ಅಧಿಕಾರ ರೈತನಿಗೆ ಇಲ್ಲ ಎಂದರು.

ನೆರೆಯ ಮಹಾರಾಷ್ಟ್ರಕ್ಕೆ ನಬಾರ್ಡ್ ಶೇ.53ರಷ್ಟು ಕೃಷಿ ಸಾಲವನ್ನು ಮುಂಬೈ ನಗರಕ್ಕೆ ಕೊಟ್ಟಿತ್ತು. ವಿಪರ್ಯಾಸವೆಂದರೆ ಮುಂಬೈ ನಗರದಲ್ಲಿ ರೈತರು ಎಲ್ಲಿದ್ದಾರೆ? ಆದರೆ ನಬಾರ್ಡ್ ತಾನು ಕೊಟ್ಟ ಸಾಲವನ್ನು ಸಮರ್ಥಿಸಿಕೊಂಡಿದೆ. ಯಾಕೆಂದರೆ ಈ ಹಣವನ್ನು ಅರ್ಬನ್ ಅಂಡ್ ಮೆಟ್ರೋ ಬ್ಯಾಂಕ್ ಬ್ರ್ಯಾಂಚ್ ಮೂಲಕ ಕೃಷಿ ಉದ್ಯಮದ ಕಂಪನಿಗಳಿಗೆ ಸಾಲ ನೀಡುವ ಯೋಜನೆ ಇದಾಗಿದೆ ಎಂದು ವಿವರಿಸಿದರು.

1991ರಿಂದ 2007ರವರೆಗೆ 3.15 ಲಕ್ಷ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಇದರಲ್ಲಿ ಮಹಿಳಾ ರೈತರ ಹೆಸರು ಸೇರ್ಪಡೆಗೊಂಡಿಲ್ಲ ಎಂದು ತಿಳಿಸಿದರು. 50 ಲಕ್ಷ ರೈತರು ಜಮೀನು ಕಳೆದುಕೊಂಡು ಕೃಷಿ ಕಾರ್ಮಿಕರಾಗಿದ್ದಾರೆ ಎಂದು ತಿಳಿಸಿದರು.

ಶಿಕ್ಷಕ ಉದಯ್ ಗಾಂವ್ಕರ್ ಅತಿಥಿಗಳನ್ನು ಸ್ವಾಗತಿಸಿದರು. ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಟ್ರಸ್ಟಿ ರಾಜಾರಾಂ ತಲ್ಲೂರು ಅವರು ಸತೀಶ್ ಆಚಾರ್ಯ ರಚಿಸಿದ ಪಿ.ಸಾಯಿನಾಥ್ ಅವರ ಕ್ಯಾರಿಕೇಚರ್ ಅನ್ನು ನೀಡಿ ಗೌರವಿಸಿದರು. ಮತ್ತೊಬ್ಬ ಕಲಾವಿದ ಚಂದ್ರಶೇಖರ್ ಶೆಟ್ಟಿ ಸಾಯಿನಾಥ್ ಅವರಿಗೆ ಕ್ಯಾರಿಕೇಚರ್ ನೀಡಿ ಗೌರವಿಸಿದರು. ಅಶೋಕ್ ತೆಕ್ಕಟ್ಟೆ ವಂದಿಸಿದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.