ಕುಂಬಾರಿಕೆ ಮೇಲೂ ಕೋವಿಡ್ 19 ಕರಿನೆರಳು

ಮಾರಾಟ, ಸಾಗಾಟ ಸಾಧ್ಯವಿಲ್ಲದೆ ಸಂಕಷ್ಟಕ್ಕೀಡಾದ ಕುಟುಂಬಗಳು

Team Udayavani, Apr 11, 2020, 4:47 PM IST

ಕುಂಬಾರಿಕೆ ಮೇಲೂ ಕೋವಿಡ್ 19 ಕರಿನೆರಳು

ಕುಂದಾಪುರ : ದೊಡ್ಡ ದೊಡ್ಡ ಐಟಿ-ಬಿಟಿ ಕಂಪೆನಿಗಳು ಮಾತ್ರವಲ್ಲದೆ ಕುಂಬಾರಿಕೆ, ಬುಟ್ಟಿ ನೇಯ್ಗೆಯಂತಹ ಗುಡಿ ಕೈಗಾರಿಕೆಗಳ ಮೇಲೂ ಕೋವಿಡ್ 19 ಕರಿನೆರಳು ಬಿದ್ದಿದ್ದು, ಕುಲಕಸುಬಾಗಿಸಿರುವ ಕರಾವಳಿ ಭಾಗದ ನೂರಾರು ಕುಟುಂಬಗಳನ್ನು ಕಂಗಲಾಗಿಸಿದೆ.

ನಿತ್ಯ ಮಣ್ಣಿನ ಪಾತ್ರೆ, ಸಲಕರಣೆಗಳನ್ನು ಮನೆಯಲ್ಲೇ ತಯಾರಿಸಿ, ಮನೆ ಮನೆಗೆ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಕುಂಬಾರರ ಜೀವನ ದುಸ್ತರವೆನಿಸಿದೆ. ಆಧುನಿಕ ಕಾಲದಲ್ಲಿ ಮಣ್ಣಿನ ಪಾತ್ರೆಗಳು ಬೇಡಿಕೆ ಕಳೆದುಕೊಂಡಿದ್ದರೂ ಶ್ರಮಕ್ಕೆ ತಕ್ಕಷ್ಟು ಆದಾಯ ಪಡೆಯುತ್ತಿದ್ದರು.

ಪರಿಕರಗಳು ಮಾರಾಟವಾಗದೆ ಬಾಕಿ
ಆದರೆ ಕೋವಿಡ್ 19 ಹಿನ್ನೆಲೆಯಲ್ಲಿ ದೇಶವೇ ಲಾಕ್‌ಡೌನ್‌ ಆಗಿರುವುದರಿಂದ ಕಳೆದ 2-3 ವಾರಗಳಿಂದ ಯಾವುದೇ ವ್ಯಾಪಾರ – ವಹಿವಾಟು ನಡೆಯುತ್ತಿಲ್ಲ. ಇದರಿಂದ ಬೇಡಿಕೆಯಿದೆ ಎಂದು ತಯಾರಿಸಿದ ಸಾಕಷ್ಟು ಮಣ್ಣಿನ ಪರಿಕರಗಳು ಮನೆಯಲ್ಲಿಯೇ ರಾಶಿ ಬಿದ್ದಿದೆ. ಖರೀದಿಸುವವರಿಲ್ಲ. ಪ್ರಮುಖ ಮಾರುಕಟ್ಟೆಯಾಗಿದ್ದ ವಾರದ ಸಂತೆಗಳು ಎಲ್ಲಿಯೂ ನಡೆಯುತ್ತಿಲ್ಲ. ಇದು ಕುಂಬಾರಿಕೆ ಮೇಲೆ ಭಾರೀ ಪರಿಣಾಮ ಬೀರಿದೆ.

ಅವಿಭಜಿತ ಕುಂದಾಪುರ ತಾಲೂಕಿನ ಆಲೂರಲ್ಲಿ 6 ಕುಟುಂಬಗಳು, ಕಾಲೊ¤àಡಿನಲ್ಲಿ 4-5 ಕುಟುಂಬಗಳು ಸೇರಿದಂತೆ ವಕ್ವಾಡಿ, ವಾಲೂ¤ರು, ಉಡುಪಿಯ ಬ್ರಹ್ಮಾವರ, ಪೆರ್ಡೂರು, ಆಜ್ರಿ, ಹೆಬ್ರಿ ಮತ್ತಿತರ ಕಡೆಗಳಲ್ಲಿ ಒಟ್ಟಾರೆ ಉಡುಪಿ ಜಿಲ್ಲೆಯಲ್ಲಿ 35 ಕುಟುಂಬಗಳು ಹಾಗೂ ದ.ಕ. ಜಿಲ್ಲೆಯ ಬೆಳ್ತಂಗಡಿ, ಪುತ್ತೂರು ಮತ್ತಿತರ ಕಡೆಗಳಲ್ಲಿ ಸೇರಿದಂತೆ ಸುಮಾರು 150 ಕುಟುಂಬಗಳ ಸುಮಾರು 300 ಕ್ಕೂ ಹೆಚ್ಚು ಮಂದಿ ಕುಂಬಾರಿಕೆಯನ್ನು ಕುಲಕಸುಬಾಗಿ ಮಾಡುತ್ತಿದ್ದಾರೆ.

ನಾವು ಖರೀದಿಸುತ್ತೇವೆ
ಈಗಾಗಲೇ ನಮ್ಮ ಸಂಘದಿಂದ 60 ವರ್ಷ ಮೇಲ್ಪಟ್ಟವರಿಗೆ ತಿಂಗಳಿಗೆ 500 ರೂ. ಅಂತೆ ಪಿಂಚಣಿ ನೀಡಲಾಗುತ್ತಿದೆ. ಮಣ್ಣಿನ ಪರಿಕಗಳನ್ನು ನಮ್ಮ ಸಂಘದ ಮೂಲಕವೇ ಪೆರ್ಡೂರಿನಲ್ಲಿರುವ ಶೋರೂಂನಲ್ಲಿ ಖರೀದಿ ಮಾಡಲು ವ್ಯವಸ್ಥೆ ಮಾಡಲಾಗುವುದು.
– ಸಂತೋಷ್‌ ಕುಲಾಲ್‌, ಅಧ್ಯಕ್ಷರು, ಕುಂಬಾರರ ಗುಡಿ ಕೈಗಾರಿಕೆ ಸಹಕಾರಿ ಸಂಘ ಉಡುಪಿ

ಮಾರುಕಟ್ಟೆಯಿಲ್ಲ
ನಾವು ಒಟ್ಟಿಗೆ 5-6 ಮಂದಿ ಸೇರಿ ಕುಂಬಾರಿಕೆ ವೃತ್ತಿಯನ್ನು ಮಾಡುತ್ತಿದ್ದೇವೆ. ಕಳೆದ ಒಂದು ತಿಂಗಳಿನಿಂದ ಸರಿಯಾದ ವಹಿವಾಟಿಲ್ಲ. ಬೇಸಗೆಯಲ್ಲಿ ಮಾರುಕಟ್ಟೆ ನಿರೀಕ್ಷೆಯಿಂದ ಪರಿಕರ ತಯಾರಿಸಿಟ್ಟಿದ್ದೆವು. ಆದರೀಗ ಮಾರಾಟ, ಸಾಗಾಟ ಸಾಧ್ಯವಿಲ್ಲ. ಇದರಿಂದ ಅಂದಾಜು 1.20 ಲಕ್ಷ ರೂ. ಗೂ ಅಧಿಕ ನಷ್ಟ ಸಂಭವಿಸಿದೆ. ಮಳೆಗಾಲ ಶುರುವಾದರೆ ಮಾರುಕಟ್ಟೆ ಇಲ್ಲ. ಇದರಿಂದ ಡಿಸೆಂಬರ್‌ವರೆಗೆ ಕಷ್ಟವಾಗಲಿದೆ.
– ರಘುರಾಮ ಕುಲಾಲ್‌, ಆಲೂರು

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.