ಕೋವಿಡ್ ಗೆದ್ದವರು; ಅಧೀರನಾದದ್ದು ಸಹಜ, ಈಗ ಸದೃಢನಾಗಿದ್ದೇನೆ

ಕುಂದಾಪುರ ಸಂಚಾರ ಠಾಣೆಯ ಎಎಸ್‌ಐ ಸುರೇಶ್ ಧೀರ ನುಡಿ

Team Udayavani, Jul 25, 2020, 8:26 AM IST

ಕೋವಿಡ್ ಗೆದ್ದವರು; ಅಧೀರನಾದದ್ದು ಸಹಜ, ಈಗ ಸದೃಢನಾಗಿದ್ದೇನೆ

ರೋಗಿ ಎಂದು ಉಪೇಕ್ಷಿಸುವ ಬದಲು ಧೈರ್ಯ ತುಂಬುವ ಕೆಲಸವೇ ಅರ್ಧ ರೋಗ ಗುಣಪಡಿಸುತ್ತದೆ. ನನಗೆ ಎಲ್ಲ ಮೇಲಧಿಕಾರಿಗಳು ನಿತ್ಯವೂ ಕರೆ ಮಾಡಿ ಆರೋಗ್ಯ ವಿಚಾರಿಸುತ್ತಿದ್ದರು.

ಕುಂದಾಪುರ: ವಾರಗಳ ಹಿಂದೆಯಷ್ಟೇ ಶಿರ್ವದಿಂದ ಕುಂದಾಪುರಕ್ಕೆ ವರ್ಗವಾಗಿತ್ತು. ಅವಿಭಜಿತ ಕುಂದಾಪುರ ತಾಲೂಕಿನಲ್ಲಿ ಅತೀ ಹೆಚ್ಚಿನ ಕೊರೊನಾ ಸೋಂಕು ಪೀಡಿತರು ಇದ್ದಾರೆ ಎಂದು ತಿಳಿದಿತ್ತು. ಧೈರ್ಯ ಮಾಡಿ ಜೂ.18ಕ್ಕೆ ಕುಂದಾಪುರದಲ್ಲಿ ಕೆಲಸಕ್ಕೆ ಹಾಜರಾದೆ. ಹೈವೇ ಪೆಟ್ರೋಲ್‌ ವಾಹನದಲ್ಲಿ 8 ದಿನ ಕರ್ತವ್ಯ ನಿರ್ವಹಿಸಿದ್ದೆ. ಜು.4ರಂದು ಶೀತ ಆರಂಭವಾಯಿತು. ಅದಾಗಲೇ ಠಾಣೆಯಲ್ಲಿ ಒಬ್ಬರಿಗೆ ಪಾಸಿಟಿವ್‌ ಬಂದಿತ್ತು. ಆ ಅನುಮಾನದಿಂದ ತಪಾಸಣೆ ಮಾಡಿಸಿಕೊಳ್ಳಲು ಹಿರಿಯ ಅಧಿಕಾರಿಗಳು ಸಲಹೆ ನೀಡಿದರು. ಜು.6ರಂದು ಗಂಟಲ ದ್ರವ ಮಾದರಿ ನೀಡಲಾಯಿತು. ಈ ವೇಳೆ ಹೋಂ ಕ್ವಾರಂಟೈನ್‌ನಲ್ಲಿದ್ದೆ. ಜು.13ಕ್ಕೆ ಪಾಸಿಟಿವ್‌ ಎಂದು ವರದಿ ಬಂತು. ಆಗ ಸ್ವಲ್ಪ ಧೈರ್ಯಗುಂದಿತು. ಆಸ್ಪತ್ರೆಗೆ ಕರೆದೊಯ್ಯಲು ಮೂರು ದಿನಗಳಾದರೂ ಆ್ಯಂಬುಲೆನ್ಸ್‌ ಬಾರದೇ ಇದ್ದಾಗ ಅಧೀರನಾಗತೊಡಗಿದೆ. ಆದರೆ ಪೊಲೀಸ್‌ ಸೇವೆಯಲ್ಲಿದ್ದ ಕಾರಣ ಮನಸ್ಸು ವಿಚಲಿತವಾಗಲಿಲ್ಲ. ಹಾಗಾಗಿ ಧೈರ್ಯ ತಂದುಕೊಂಡೆ. ಜು.17ಕ್ಕೆ ಮಣಿಪಾಲ ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಾದೆ ಎಂದು ಕೊರೊನಾ ಗೆದ್ದಿರುವ ಕುಂದಾಪುರ ಸಂಚಾರ ಠಾಣೆಯ ಎಎಸ್‌ಐ ಸುರೇಶ್‌ ಅವರು ತನ್ನ ಅನುಭವವನ್ನು ಹಂಚಿಕೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಅನೇಕರು ಭಯದ ವಾತಾವರಣದಲ್ಲಿ ಇದ್ದರು. ಅವರನ್ನೆಲ್ಲ ನೋಡಿದಾಗ ನನಗೂ ಅರೆಕ್ಷಣ ಅಳುಕು ಮೂಡಿದ್ದು ಸುಳ್ಳಲ್ಲ. ಆದರೆ ಧೈರ್ಯ ಮಾಡಿಕೊಂಡೆ. ಯಾವುದೇ ರೋಗಲಕ್ಷಣಗಳು ಇರಲಿಲ್ಲ. ಆಗಾಗ ವೈದ್ಯರು, ದಾದಿಯರು ಬಂದು ವಿಚಾರಿಸಿಕೊಂಡು ಹೋಗುತ್ತಿದ್ದರು. ಸಮಯಕ್ಕೆ ಸರಿಯಾಗಿ ಊಟ, ತಿಂಡಿ, ಚಹಾ, ಹಣ್ಣು, ವಿಟಮಿನ್‌ ಮಾತ್ರೆ, ಸ್ನಾನಕ್ಕೆ ಬಿಸಿನೀರು ಎಲ್ಲ ದೊರೆಯುತ್ತಿತ್ತು. ಇವೆಲ್ಲದರಿಂದ ನನ್ನಲ್ಲಿ ಮನೋಸ್ಥೈರ್ಯ ತುಂಬಿತು. ಅಲ್ಲಿದ್ದ ಇತರ ಸೋಂಕಿತರಿಗೂ ನಾನೇ ಧೈರ್ಯ ಹೇಳತೊಡಗಿದೆ. ಪೊಲೀಸ್‌ ಎಂಬ ನೆಲೆಯಲ್ಲೋ ಏನೋ ಅವರಿಗೂ ನನ್ನ ಮಾತುಗಳ ಮೇಲೆ ವಿಶ್ವಾಸ ಮೂಡಿತು. ಎಸ್‌ಪಿ, ಎಎಸ್‌ಪಿ, ಎಸ್‌ಐ ಮೊದಲಾದವರು ಪ್ರತಿನಿತ್ಯ ಕರೆ ಮಾಡಿ ಕಾಳಜಿಯಿಂದ ನನ್ನ ಆರೋಗ್ಯ ವಿಚಾರಿಸುತ್ತಿದ್ದರು. ಇದರಿಂದ ನಾನು ಮತ್ತಷ್ಟು ನಿರಾಳನಾದೆ. ಐದೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ತಲುಪಿದೆ. ಮನೆಗೆ ಬಂದ ಬಳಿಕ ನೆಲನೆಲ್ಲಿ ಕಷಾಯ, ಉಪ್ಪು, ಅರಶಿನ ಮಿಶ್ರಣವನ್ನು ಹದ ಬಿಸಿನೀರಿಗೆ ಹಾಕಿ ಗಂಟಲು ಶುಚಿಗೊಳಿಸುತ್ತಿದ್ದೇನೆ ಎನ್ನುತ್ತಾರೆ ಸುರೇಶ್‌.

ಶೀತ, ಜ್ವರ ಕಾಣಿಸಿಕೊಂಡಾಗ ಭಯಪಟ್ಟರೆ ಅದು ಮತ್ತಷ್ಟು ಹೆಚ್ಚಾಗಬಹುದು. ಅಂತಹ ಭಯ ಅನಗತ್ಯ. ಸೋಂಕು ಪೀಡಿತನಾದಾಗ ಇಲಾಖೆಯ ಹಿರಿಯ ಅಧಿಕಾರಿಗಳು ನನಗೆ ಧೈರ್ಯ ತುಂಬಿದರು. ನಾನು ಆಸ್ಪತ್ರೆಯಲ್ಲಿದ್ದವರಿಗೆ, ಮನೆಯವರಿಗೆ ಧೈರ್ಯ ತುಂಬಿದೆ. ಈಗ ಎಲ್ಲರಿಗೂ ಧೈರ್ಯ ಹೇಳುವಷ್ಟು ಸದೃಢನಾಗಿದ್ದೇನೆ.
-ಸುರೇಶ್‌, ಎಎಸ್‌ಐ, ಸಂಚಾರ ಠಾಣೆ, ಕುಂದಾಪುರ

ಜಾಗೃತಿ ಮೂಡಿಸುವ ಪ್ರಯತ್ನ:ಡಿಸಿ
ಕೊರೊನಾ ಸೋಂಕಿನಿಂದ ಗುಣಮುಖರಾಗಿರುವವರ ಬಗ್ಗೆ ಉದಯವಾಣಿಯಲ್ಲಿ ಪ್ರಕಟಗೊಳ್ಳುತ್ತಿರುವ “ಕೊರೊನಾ ಗೆದ್ದವರು’ ಧನಾತ್ಮಕ ಚಿಂತನೆಯ ವರದಿಗಳು ಜನರಲ್ಲಿ ಜಾಗೃತಿ ಮೂಡಿಸುತ್ತಿರುವುದು ಒಂದು ಉತ್ತಮ ಪ್ರಯತ್ನ. ಕೊರೊನಾ ಸೋಂಕಿತರಲ್ಲಿ ಇರುವ ಅನಗತ್ಯ ಭಯ ನಿವಾರಣೆಯಾಗಿ ಅವರಲ್ಲಿ ಧೈರ್ಯ ತುಂಬುವಲ್ಲಿ ಕೊರೊನಾದಿಂದ ಗುಣಮುಖರಾದವರು ಹೇಳುವ ಧೈರ್ಯದ ಮಾತುಗಳು ಈ ಹಂತದಲ್ಲಿ ಮಹತ್ವದ್ದಾಗಿರುತ್ತದೆ.
-ಸಿಂಧೂ ಬಿ.ರೂಪೇಶ್‌, ಜಿಲ್ಲಾಧಿಕಾರಿ ದಕ್ಷಿಣ ಕನ್ನಡ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.