![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Crime; ಕ್ಯಾಸನಮಕ್ಕಿ: ಮನೆಗೆ ಬೆಂಕಿ ಹೆಚ್ಚಿ ವ್ಯಕ್ತಿ ಪರಾರಿ
ಮೊಬೈಲ್ ಜಾಡು ಹಿಡಿದು ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು
Team Udayavani, May 10, 2024, 10:02 AM IST
![4-thekkatte](https://www.udayavani.com/wp-content/uploads/2024/05/4-thekkatte-620x372.jpg)
ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಯಡಾಡಿ ಮತ್ಯಾಡಿ ಗ್ರಾಮದ ಕ್ಯಾಸನಮಕ್ಕಿ ಎಂಬಲ್ಲಿ ವ್ಯಕ್ತಿಯೋರ್ವ ರಾತ್ರಿ ವೇಳೆ ಪಾನಮತ್ತನಾಗಿ ಬಂದು ಮನೆಗೆ ಬೆಂಕಿ ಹೆಚ್ಚಿದ ಘಟನೆ ಮೇ 9ರ ಮುಂಜಾನೆ ಸಂಭವಿಸಿದೆ.
ಕ್ಯಾಸನಮಕ್ಕಿ ನಿವಾಸಿ ಶುಭಲತಾ ಹಾಗೂ ಹಾಲಾಡಿ ಮಾವಿನ ಕೊಡ್ಲುವಿನ ನಿವಾಸಿ ದಿನೇಶ್ ಮೊಗವೀರ (36) ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, 7 ತಿಂಗಳ ಮಗು ಹೊಂದಿದ್ದರು. ಆದರೆ ದಿನೇಶ್ ಮೊಗವೀರ ಅವರು ಮೇ 8ರ ರಾತ್ರಿ ಪಾನಮತ್ತನಾಗಿ ಬಂದು ಪತ್ನಿ ಹಾಗೂ ಅವರ ಮನೆಯವರ ಜತೆಗೆ ಅನುಚಿತವಾಗಿ ವರ್ತಿಸಿ ಗಲಾಟೆಗೆ ಮುಂದಾಗಿದ್ದಾನೆ. ಗಲಾಟೆ ನಿಲ್ಲಿಸಲು ಸಾಧ್ಯವಾಗದಿದ್ದಾಗ 112ಕ್ಕೆ ತುರ್ತುಕರೆ ಮಾಡಿ ದೂರು ನೀಡಿದರು. ಈ ಸಂದರ್ಭದಲ್ಲಿ ಕೋಟ ಪೊಲೀಸ್ ಎಎಸ್ಐ ಜಯಪ್ರಕಾಶ್ ರೈ ಹಾಗೂ ಸಿಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೂ ಕೂಡ ಅಡ್ಡಿಪಡಿಸಿದ್ದಾನೆ.
ಎಎಸ್ಐ ಸಮಯ ಪ್ರಜ್ಞೆ ಪ್ರಕರಣದ ಗಂಭೀರತೆಯನ್ನು ಅರಿತ ಪೊಲೀಸರು ತಾಯಿ ಮತ್ತು ಮಗುವಿನ ಸುರಕ್ಷತೆಯ ದೃಷ್ಟಿಯಿಂದ ಬೇರೆಡೆಗೆ ಸ್ಥಳಾಂತರಿಸಲು ಮನೆಯವರಿಗೆ ತಿಳಿಸಿದರು. ಮನೆಯಲ್ಲಿ ಯಾರು ಇಲ್ಲದಿರುವುದನ್ನು ಅರಿತ ದಿನೇಶ್ ಮೊಗವೀರ ಮನೆಯ ಬಾಗಿಲು ಮುರಿದು ಬೆಂಕಿ ಹೆಚ್ಚಿಸಿದ್ದಾನೆ ಎಂದು ಹೇಳಲಾಗಿದ್ದು, ಪರಿಣಾಮ ಇಡೀ ಮನೆಯೇ ಸಂಪೂರ್ಣ ಬೆಂಕಿಯ ಕೆನ್ನಾಲಿಗೆಗೆ ಗುರಿಯಾಗಿದೆ.
ಬೆಂಕಿ ಹೊತ್ತಿಕೊಂಡು ಉರಿದ ಪರಿಣಾಮ ಮನೆಯೊಳಗಿದ್ದ ಸುಮಾರು ರೂ.1ಲಕ್ಷಕ್ಕೂ ಅಧಿಕ ಮೊತ್ತದ ಹೊಟೇಲ್ನ ಸಾಮಗ್ರಿಗಳು, ವಿದ್ಯುತ್ ಸಂಪರ್ಕ ಹೆಂಚು, ಪಕ್ಕಾಸು, ದವಸ ಧಾನ್ಯಗಳು, ಬಟ್ಟೆ, ಕಪಾಟು ಬೆಂಕಿಗೆ ಆಹುತಿಯಾಗಿದೆ.
ತಲೆಮರಿಸಿಕೊಂಡಿದ್ದ ದಿನೇಶ್ ಮೊಗವೀರನಿಗಾಗಿ ಕೋಟ ಪೊಲೀಸರು ಅವನ ಮೊಬೈಲ್ ಜಾಡು ಹಿಡಿದು ಶೋಧಕಾರ್ಯಕ್ಕೆ ಮುಂದಾದರು. ತದನಂತರ ಹಾಲಾಡಿ ಪರಿಸರದಲ್ಲಿಯೇ ವ್ಯಕ್ತಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದರು. ಕೋಟ ಪೊಲೀಸ್ ಠಾಣೆಯ ಠಾಣಾಧಿಕಾರಿ ತೇಜಸ್ವಿ, ಪೊಲೀಸ್ ಸಿಬಂದಿ ಸ್ಥಳಕ್ಕೆ ಧಾವಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.