ಉದ್ಯಮಿ ಕಟ್ಟೆ ಭೋಜಣ್ಣ ಸಾವು ಪ್ರಕರಣ; ಆತ್ಮಹತ್ಯೆಗೆ ಪ್ರಚೋದನೆ: ಗಣೇಶ್‌ ಶೆಟ್ಟಿ ಬಂಧನ


Team Udayavani, May 28, 2022, 12:42 AM IST

ಉದ್ಯಮಿ ಕಟ್ಟೆ ಭೋಜಣ್ಣ ಸಾವು ಪ್ರಕರಣ; ಆತ್ಮಹತ್ಯೆಗೆ ಪ್ರಚೋದನೆ: ಗಣೇಶ್‌ ಶೆಟ್ಟಿ ಬಂಧನ

ಕುಂದಾಪುರ: ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್‌ ಯಾನೆ ಕಟ್ಟೆ ಭೋಜಣ್ಣ (79) ಆತ್ಮಹತ್ಯೆ ಪ್ರಕರಣ ಸಂಬಂಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮೊಳಹಳ್ಳಿ ಗಣೇಶ್‌ ಶೆಟ್ಟಿ ಅವರನ್ನು ಶುಕ್ರವಾರ ಕುಂದಾಪುರ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮತ್ತೋರ್ವ ಆರೋಪಿ ಎಚ್‌. ಇಸ್ಮಾಯಿಲ್‌ಗಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ.

ಉದ್ಯಮಿ ಗಣೇಶ್‌ ಶೆಟ್ಟರನ್ನು ಜೆಎಂಎಫ್‌ಸಿ ನ್ಯಾಯಾಧೀಶೆ ರೋಹಿಣಿ ಅವರ ನಿವಾಸದಲ್ಲಿಯೇ ಹಾಜರುಪಡಿಸಿದ್ದು, ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಕೋಟ್ಯಾಧಿಪತಿ ಕಟ್ಟೆ ಗೋಪಾಲಕೃಷ್ಣ ಅವರು ಮೇ 26ರ ಬೆಳಗ್ಗೆ ಮೊಳಹಳ್ಳಿ ಗಣೇಶ್‌ ಶೆಟ್ಟಿ ಅವರ ಮನೆಯ ಸಿಟೌಟ್‌ನಲ್ಲಿ ತನ್ನ ಪಿಸ್ತೂಲಿನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ಬರೆದ ಡೆತ್‌ನೋಟ್‌ ಪ್ರಕಾರ ಗಣೇಶ್‌ ಶೆಟ್ಟಿ ಹಾಗೂ ಎಚ್‌. ಇಸ್ಮಾಯಿಲ್‌ ಅವರು ಗೋಲ್ಡ್‌ ಜುವೆಲರಿ ಹೆಸರಿನಲ್ಲಿ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ 3.34 ಕೋ.ರೂ., 5 ಕೆ.ಜಿ ಚಿನ್ನ ಪಡೆದುಕೊಂಡಿದ್ದರು. ಇದರ ಬಡ್ಡಿ, ಅಸಲು ಸೇರಿ ಈಗ 9 ಕೋ.ರೂ. ಆಗಿದ್ದು, ಇದನ್ನು ನೀಡದೇ ಮೋಸ ಮಾಡಿರುವುದಾಗಿ ಬರೆದುಕೊಂಡಿದ್ದರು.

ಅಂತ್ಯಸಂಸ್ಕಾರ
ಕಟ್ಟೆ ಗೋಪಾಲಕೃಷ್ಣ ಅವರ ಮೃತದೇಹದ ಅಂತ್ಯ ಸಂಸ್ಕಾರ ಕುಂದಾಪುರದ ಚಿಕ್ಕನ್‌ಸಾಲ್‌ ರಸ್ತೆಯ ರುದ್ರಭೂಮಿಯಲ್ಲಿ ಶುಕ್ರವಾರ ನೆರವೇರಿತು. ವಿಧಾನ ಪರಿಷತ್‌ ಮಾಜಿ ಸಭಾಪತಿ ಪ್ರತಾಪ್‌ಚಂದ್ರ ಶೆಟ್ಟಿ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಡಾ| ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್‌, ಮಹಾಲಕ್ಷ್ಮೀ ಕೋ- ಆಪರೇಟಿವ್‌ ಬ್ಯಾಂಕ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಕಾಂಗ್ರೆಸ್‌ ಮುಖಂಡ ಮಲ್ಯಾಡಿ ಶಿವರಾಮ ಶೆಟ್ಟಿ, ಮೊಗವೀರ ಮುಖಂಡರಾದ ಗೋಪಾಲ್‌ ಮೆಂಡನ್‌, ಕೆ.ಕೆ. ಕಾಂಚನ್‌ ಅಂತಿಮ ದರ್ಶನ ಪಡೆದು, ಗೌರವ ಸಲ್ಲಿಸಿದರು.

ತನಿಖೆ ನಡೆಯುತ್ತಿದೆ
ಉದ್ಯಮಿ ಕಟ್ಟೆ ಗೋಪಾಲಕೃಷ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ. ಆತ್ಮಹತ್ಯೆಗೆ ಮುನ್ನ ಒಂದು ಡೆತ್‌ನೋಟ್‌ ಬರೆದಿಟ್ಟಿದ್ದು, ಅದರ ಆಧಾರದ ಮೇಲೆ ಮೊಳಹಳ್ಳಿ ಗಣೇಶ್‌ ಶೆಟ್ಟಿ ಮತ್ತು ಇಸ್ಮಾಯಿಲ್‌ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ. ಹಣದ ವ್ಯವಹಾರದ ಕುರಿತು ಡೆತ್‌ ನೋಟ್‌ನಲ್ಲಿ ಬರೆದಿಟ್ಟಿರುವುದು ಬಿಟ್ಟರೆ ಇನ್ನಾವುದೇ ದಾಖಲೆಗಳು ಇದುವರೆಗೆ ಇಲಾಖೆಗೆ ಲಭಿಸಿಲ್ಲ. ಇದರ ಬಗ್ಗೆ ಇನ್ನಷ್ಟೇ ಪರಿಶೀಲನೆ ನಡೆಸಬೇಕಾಗಿದೆ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಹೇಳಿದ್ದಾರೆ.

ನಷ್ಟದಲ್ಲಿದ್ದರೇ..?
ಹತ್ತಾರು ಉದ್ಯಮಗಳನ್ನು ಹೊಂದಿದ್ದ ಕಟ್ಟೆ ಗೋಪಾಲಕೃಷ್ಣ ಅವರು ಕೊರೊನಾದ ಅನಂತರ ಬೆಂಗಳೂರಿನಲ್ಲಿದ್ದ ಹೊಟೇಲ್‌ಉದ್ಯಮ, ವಸ್ತ್ರೋದ್ಯಮದÇÉೆಲ್ಲ ನಷ್ಟದಲ್ಲಿದ್ದರು ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.