ಅಪಾಯ ಆಹ್ವಾನಿಸುತ್ತಿದೆ ಅಪಾಯಕಾರಿ ತಿರುವು
ಕಟ್ಬೆಲ್ತೂರು ರೈಲ್ವೇ ಮೇಲ್ಸೆತುವೆ
Team Udayavani, Oct 25, 2021, 6:02 AM IST
ಹೆಮ್ಮಾಡಿ: ಕೊಲ್ಲೂರು – ಹೆಮ್ಮಾಡಿ ಮುಖ್ಯ ರಸ್ತೆಯ ಕಟ್ಬೆಲ್ತೂರಿನಲ್ಲಿರುವ ರೈಲ್ವೇ ಮೇಲ್ಸೆತುವೆಯ ತಿರುವು ಅಪಾಯಕಾರಿಯಾಗಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಈ ತಿರುವನ್ನು ಸರಿಪಡಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎನ್ನುವುದಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಹೆಮ್ಮಾಡಿಯಿಂದ ಕೊಲ್ಲೂರುವರೆಗಿನ ಜಿಲ್ಲಾ ಮುಖ್ಯ ರಸ್ತೆಯ ದ್ವಿಪಥ ಹಾಗೂ ಇನ್ನಿತರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿಯೊಂದಿಗೆ ಈ ತಿರುವನ್ನು ಸಹ ಅಭಿವೃದ್ಧಿಪಡಿಸಿ, ಮುಕ್ತ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎನ್ನುವ ಬೇಡಿಕೆ ನಾಗರಿಕರದ್ದಾಗಿದೆ.
ಆದಷ್ಟು ಬೇಗ ಈ ತಿರುವಿನ ಬಗ್ಗೆ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸಿ, ಅವಘಢ ಸಂಭವಿಸುವ ಮುನ್ನ ಎಚ್ಚೆತ್ತುಕೊಂಡು ಈ ತಿರುವನ್ನು ಸರಿಪಡಿಸಬೇಕು ಎನ್ನುವುದಾಗಿ ಸ್ಥಳೀಯರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ದಾಂಡೇಲಿ: ಕಾಳಿ ನದಿ ದಂಡೆಯ ಮೇಲೆ ಮೀನು ಹಿಡಿಯುತ್ತಿದ್ದ ಬಾಲಕನನ್ನು ಎಳೆದೊಯ್ದ ಮೊಸಳೆ.!
ಅಪಾಯವೇನು ?
ಹೆಮ್ಮಾಡಿ ಕಡೆಯಿಂದ ಕೊಲ್ಲೂರು ಕಡೆಗೆ ಸಂಚರಿಸುವಾಗ ಈ ರೈಲ್ವೇ ಮೇಲ್ಸೆತುವೆಯ ತಿರುವಿನಲ್ಲಿ ಹೆಮ್ಮಾಡಿ ಕಡೆಯಿಂದ ಸಂಚರಿಸುವವರಿಗೆ ಕೊಲ್ಲೂರು ಕಡೆಯಿಂದ ವಾಹನಗಳು ಬರುತ್ತಿರುವುದು ಕಾಣಿಸುವುದಿಲ್ಲ. ಇದಲ್ಲದೆ ಮೇಲ್ಸೆತುವೆಯ ಮೇಲೆ ಹುಲ್ಲು, ಗಿಡ ಗಂಟಿ ಬೆಳೆದಿದೆ. ಇದು ಅಪಘಾತಕ್ಕೂ ದಾರಿ ಮಾಡಿಕೊಟ್ಟಂತಿದೆ. ಈ ಹಿಂದೆ ಇಲ್ಲಿ ಸಾಕಷ್ಟು ಅವಘಢಗಳು ಸಂಭವಿಸಿದ್ದು, ಪ್ರಾಣಿಹಾನಿ ಸಹ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ
Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ
Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್: ಮತ್ತೆ ನಕ್ಸಲರ ಸದ್ದು?
Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು
Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ