Health Department ಮುದೂರು ಭಾಗದಲ್ಲಿ ಮಂಗಗಳ ಸಾವು; ಕಾಯಿಲೆ ಭೀತಿ

ಮಂಗಗಳ ಸಾವಾದರೆ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ

Team Udayavani, Nov 23, 2023, 6:35 AM IST

Health Department ಮುದೂರು ಭಾಗದಲ್ಲಿ ಮಂಗಗಳ ಸಾವು; ಕಾಯಿಲೆ ಭೀತಿ

ಕುಂದಾಪುರ: ಜಡ್ಕಲ್‌ ಗ್ರಾಮದ ಮುದೂರಿನ ಹಿಂಡಗಾನ್‌ನಲ್ಲಿ ಮರಿ ಸಹಿತ 3 ಮಂಗಗಳು ಸಾವನ್ನಪ್ಪಿವೆ. ಗಡಿ ಜಿಲ್ಲೆಯಾದ ಉತ್ತರ ಕನ್ನಡದಲ್ಲೂ ಮಂಗಗಳ ಸಾವಿನ ವರದಿಯಾಗಿದ್ದು, ಉಡುಪಿ ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಮಂಗನಕಾಯಿಲೆ ಆತಂಕ ಆವರಿಸಿದೆ. ಆದರೆ ಈ ಬಗ್ಗೆ ಆತಂಕ ಬೇಡ, ಒಂದಷ್ಟು ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವುದು ಮಾತ್ರ ಅವಶ್ಯ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಪ್ರತೀ ವರ್ಷ ಕುಂದಾಪುರ, ಬೈಂದೂರು, ಹೆಬ್ರಿ ಹಾಗೂ ಕಾರ್ಕಳ ತಾಲೂಕಿನ ಪಶ್ಚಿಮ ಘಟ್ಟದ ತಪ್ಪಲಿನ ಗ್ರಾಮಗಳು, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ತಾಲೂಕುಗಳ ಕಾಡಂಚಿನ ಊರುಗಳಲ್ಲಿ ಮಂಗನ ಕಾಯಿಲೆ ಭೀತಿ ಆವರಿಸುತ್ತದೆ. ಮಳೆ ಕಡಿಮೆಯಾದ ಕಾರಣ ಈ ವರ್ಷ ಬೇಗನೇ ಸಮಸ್ಯೆ ತಲೆದೋರಿದೆ.

ಆತಂಕ ಏಕೆ?
ಮಂಗಳ ಮೈಮೇಲಿನ ಉಣುಗುಗಳು ಈ ಕಾಯಿಲೆಯ ವಾಹಕಗಳು. ಮೇಯಲು ಕಾಡಿಗೆ ಹೋಗುವ ಜಾನುವಾರುಗಳು, ಕಟ್ಟಿಗೆ, ಕಾಡುತ್ಪತ್ತಿ ಸಂಗ್ರಹಕ್ಕಾಗಿ ಕಾಡಿಗೆ ಹೋಗುವ ಗ್ರಾಮೀಣ ಜನರಿಗೆ ಇಂತಹ
ಉಣುಗು ಕಡಿತದಿಂದ ಕಾಯಿಲೆ ಪಸರಿಸುತ್ತದೆ. ಲಕ್ಷಣ ಕಾಣಿಸಿಕೊಂಡ ಆರಂಭದಲ್ಲಿಯೇ ವೈದ್ಯರಲ್ಲಿಗೆ ಬಂದರೆ ಯಾವುದೇ ತೊಂದರೆಯಿಲ್ಲ.

2019ರ ಬಳಿಕ ಇಲ್ಲ
ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಕಾಣಿಸಿಕೊಂಡರೂ ಉಡುಪಿ ಜಿಲ್ಲೆಯಲ್ಲಿ 2019ರಿಂದ ಕಾಣಿಸಿ ಕೊಂಡಿಲ್ಲ. ಮೃತ ಮಂಗಗಳಲ್ಲೂ ಈ ಸೋಂಕು ಪತ್ತೆಯಾಗಿರಲಿಲ್ಲ.

ಜಾಗೃತಿ
ಆರೋಗ್ಯ ಇಲಾಖೆಯಿಂದ ಮಂಗನ ಕಾಯಿಲೆ ಕುರಿತು ಎಚ್ಚರಿಕೆ ನೀಡುವ ಕರಪತ್ರಗಳನ್ನು ಕಾಡಂಚಿನ ಮನೆಗಳಿಗೆ ಹಂಚಲಾಗುತ್ತಿದೆ. ಆರೋಗ್ಯ ಶಿಬಿರ, ಇನ್ನಿತರ ಕಾರ್ಯಕ್ರಮಗಳಲ್ಲೂ ಜಾಗೃತಿ ಮೂಡಿಸಲಾಗುತ್ತಿದೆ. ಕಾಡಿಗೆ ಹೋಗುವ ವರು ಡಿಎಂಪಿ ತೈಲ ಹಚ್ಚಿಕೊಂಡು ಹೋಗುವಂತೆ ಹೇಳಲಾಗುತ್ತಿದೆ. ಆತಂಕ ಇರುವ ಗ್ರಾಮಗಳಲ್ಲಿ ಯಾರಿಗಾದರೂ ಜ್ವರ ಬಂದಿದ್ದರೆ ಸ್ಥಳೀಯ ಆರೋಗ್ಯ ಕೇಂದ್ರದವರು ನಿಗಾ ವಹಿಸುತ್ತಿದ್ದಾರೆ.

ಮುನ್ನೆಚ್ಚರಿಕೆ ಕ್ರಮಗಳೇನು?
– ಮಂಗಗಳ ಸಾವು ಸಂಭವಿಸಿದರೆತತ್‌ಕ್ಷಣ ಸ್ಥಳೀಯ ಗ್ರಾ.ಪಂ., ಆರೋಗ್ಯ ಇಲಾಖೆ, ಪಶು ವೈದ್ಯರು ಅಥವಾ ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿ.
– ಜ್ವರ ಇದ್ದಲ್ಲಿ ನಿರ್ಲಕ್ಷé ತೋರದೆ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಅಥವಾ ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿ.
-ಮಂಗಗಳಿಗೆ ಕಚ್ಚಿದ ಉಣುಗು ಮನುಷ್ಯರಿಗೆ ಕಚ್ಚಿದಾಗ ಈ ಕಾಯಿಲೆ ಬರುವುದರಿಂದ ಕಾಡಿಗೆ ಹೋಗುವಾಗ ಡಿಎಂಪಿ ಎನ್ನುವ ಎಣ್ಣೆ ಹಚ್ಚಿಕೊಂಡು ಹೋಗುವುದು ಉತ್ತಮ. ಜಾನುವಾರುಗಳನ್ನು ಮೇಯಲು ಬಿಡುವಾಗಲೂ ಎಚ್ಚರಿಕೆ ಅಗತ್ಯ.
-ಯಾವುದೇ ಕಾರಣಕ್ಕೂ ಮಂಗಗಳನ್ನು ಕೊಲ್ಲದಿರಿ. ಅದು ಅನಾವಶ್ಯಕ ಗೊಂದಲ ಸೃಷ್ಟಿಸುತ್ತದೆ.

ಪಶ್ಚಿಮ ಘಟ್ಟದ ತಪ್ಪಲಿನ ಗ್ರಾಮಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ, ಜಾಗೃತಿ ಕೈಗೊಳ್ಳಲಾಗಿದೆ. ಜನರಲ್ಲಿ ಯಾವುದೇ ಭಯ ಬೇಡ. ಕಾಡಿಗೆ ಹೋಗುವ ಜನರು, ಜಾನುವಾರುಗಳ ಬಗ್ಗೆ ಮುನ್ನೆಚ್ಚರಿಕೆ ಇರಲಿ. ಜ್ವರ ಬಂದಲ್ಲಿ ನಿಗಾ ವಹಿಸಿ.
– ಡಾ| ಪ್ರೇಮಾನಂದ, ಕುಂದಾಪುರ ತಾಲೂಕು ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.