School College ಶಿಕ್ಷಕರು, ಸಿಬಂದಿ ನೇಮಕಕ್ಕೆ ನಿರ್ಣಯ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ

Team Udayavani, Dec 6, 2023, 11:31 PM IST

School College ಶಿಕ್ಷಕರು, ಸಿಬಂದಿ ನೇಮಕಕ್ಕೆ ನಿರ್ಣಯ

ಕೋಟ: ಕನ್ನಡ ಮಾಧ್ಯಮ ಶಾಲೆಗಳು ಉಳಿದರೆ ಕನ್ನಡ ಭಾಷೆ ಉಳಿದು, ಬೆಳೆಯಲು ಸಾಧ್ಯ. ಆದ್ದರಿಂದ ಅನುದಾನಿತ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಲ್ಲಿ ಖಾಲಿ ಹುದ್ದೆಗಳಿಗೆ ಶಿಕ್ಷಕ, ಉಪನ್ಯಾಸಕ ಮತ್ತು ಅಗತ್ಯ ಸಿಬಂದಿಯನ್ನು ನೇಮಿಸಿಕೊಳ್ಳಲು ಸರಕಾರ ಅನುಮತಿ ನೀಡಬೇಕು ಮತ್ತು ಅನುದಾನಿತ ಶಾಲಾ-ಕಾಲೇಜುಗಳ ಹುದ್ದೆಗಳನ್ನು ಅನುದಾನದ ವ್ಯಾಪ್ತಿಗೆ ತರಲು ಅಗತ್ಯ ತಿದ್ದುಪಡಿ ತರಬೇಕು ಎಂದು ಬುಧವಾರ ಕೋಟದಲ್ಲಿ ನಡೆದ 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ನಿರ್ಣಯವನ್ನು ಮಂಡಿಸಿ, ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಅನುಮೋದಿಸಿದರು. ನಿರ್ಣಯ ವನ್ನು ಜಿಲ್ಲಾ ಧಿಕಾರಿಗಳ ಮೂಲಕ ಸರಕಾರಕ್ಕೆ ಕಳುಹಿಸುವುದಾಗಿ ತೀರ್ಮಾನಿಸಲಾಯಿತು.ಸಾಹಿತ್ಯ ಚಿಂತಕ ಕಾಪು ರಾಘವೇಂದ್ರ ರಾವ್‌ ಸಮಾರೋಪ ಭಾಷಣ ಮಾಡಿ,ಕನ್ನಡ ಪ್ರೀತಿಯ ಮೂಲಕ ನಮ್ಮ ನಾಡು ನುಡಿಯನ್ನು ಕಟ್ಟಿ ಕೊಡುವ ಕೆಲಸವಾಗಬೇಕು ಎಂದರು.

ಸಮ್ಮೇಳನ ಶ್ಲಾಘನೀಯ
ಸಮ್ಮೇಳನಾಧ್ಯಕ್ಷ ಬಾಬು ಶಿವ ಪೂಜಾರಿ ಸಮ್ಮೇಳನದ ಬಗ್ಗೆ ಪ್ರತಿಸ್ಪಂದನೆ ನೀಡಿ, ಕಸಾಪದ ಚಟುವಟಿಕೆಗಳು, ತೆರೆದ ಮನಸ್ಸುಗಳು ಕನ್ನಡ ಉಳಿವಿಗೆ ಪ್ರಯ ತ್ನಿಸುತ್ತಿರುವುದು ಶ್ಲಾಘನೀಯ. ಕನ್ನಡದ ಮಾಧ್ಯಮ ಶಾಲೆಗಳು ಮುಚ್ಚುವಂತಹ ಪರಿಸ್ಥಿತಿ ಬಂದಿರುವುದು ವಿಷಾದನೀಯ. ಮುಂಬಯಿಯಲ್ಲಿನ ಕನ್ನಡ ಶಾಲೆಗಳು ಕೂಡ ಮುಚ್ಚಿದ್ದರೂ ಪರ್ಯಾಯವಾಗಿ ಕನ್ನಡ ಸಂಘಗಳ ಮೂಲಕ ಕನ್ನಡ ಪ್ರಗತಿಯಾಗುತ್ತಿರುವುದು ಸಂತಸದ ವಿಷಯ. ಈ ಸಮ್ಮೇಳನದ ಸಂಘಟನೆ ಅತ್ಯಂತ ಯಶಸ್ವಿಯಾಗಿದೆ ಎಂದರು.

ಗೀತಾನಂದ ಫೌಂಡೇಶನ್‌ ಪ್ರವರ್ತಕ ಆನಂದ ಸಿ. ಕುಂದರ್‌ ಸಾಧಕರನ್ನು ಸಮ್ಮಾನಿಸಿದರು.ಕಸಾಪ ಉಡುಪಿ ಜಿಲ್ಲಾ ಸ್ಥಾಪಕಾಧ್ಯಕ್ಷ ಎ.ಎಸ್‌.ಎನ್‌. ಹೆಬ್ಟಾರ್‌, ಕೋಟ ವಿದ್ಯಾ ಸಂಘದ ಅಧ್ಯಕ್ಷ ಸಿಎ ಪಿ. ಪ್ರಭಾಕರ ಮಯ್ಯ, ಕಾರ್ಯದರ್ಶಿ ಎಂ. ರಾಮದೇವ ಐತಾಳ, ಕಸಾಪ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಮನೋಹರ ಪಿ., ತಾಲೂಕು ಕಸಾಪ ಅಧ್ಯಕ್ಷರಾದ ಬ್ರಹ್ಮಾವರದ ರಾಮಚಂದ್ರ ಐತಾಳ, ಉಡುಪಿಯ ರವಿರಾಜ ಎಚ್‌.ಪಿ., ಕುಂದಾಪುರ ಡಾ| ಉಮೇಶ ಪುತ್ರನ್‌, ಕಾರ್ಕಳದದ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಕಾಪುವಿನ ಪುಂಡಲೀಕ ಮರಾಠೆ, ಹೆಬ್ರಿಯ ಶ್ರೀನಿವಾಸ ಭಂಡಾರಿ ಮತ್ತು ಬೈಂದೂರಿನ ಡಾ| ರಘು ನಾಯಕ್‌, ಸಂಘಟನ ಕಾರ್ಯದರ್ಶಿ ಪಿ.ವಿ. ಆನಂದ ಸಾಲಿಗ್ರಾಮ, ಪೂರ್ಣಿಮಾ ಜನಾರ್ದನ, ನರೇಂದ್ರ ಕುಮಾರ್‌ ಕೋಟ, ಕೋಟ ವಿವೇಕ ಕಾಲೇಜಿನ ಪ್ರಾಂಶುಪಾಲ ಜಗದೀಶ ನಾವಡ ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಶೆಟ್ಟಿ ಸ್ವಾಗತಿಸಿ, ಸತೀಶ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.