ಗಂಗೊಳ್ಳಿಯಿಂದ ಬೈಂದೂರಿಗೆ ಬಸ್ ಸೇವೆಗಾಗಿ ಬೇಡಿಕೆ
Team Udayavani, Jun 26, 2022, 5:36 PM IST
ಗಂಗೊಳ್ಳಿ: ಉಡುಪಿ ಜಿಲ್ಲೆಯ ಪ್ರಮುಖ ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿಯಿಂದ ಬೈಂದೂರಿಗೆ ಬಸ್ ವ್ಯವಸ್ಥೆ ಇಲ್ಲ.
ಹೀಗಾಗಿ ಗಂಗೊಳ್ಳಿ-ಬೈಂದೂರು ನಡುವೆ ಕೆಎಸ್ ಆರ್ಟಿಸಿ ಬಸ್ ಸಂಚಾರ ಆರಂಭಿಸುವಂತೆ ಗಂಗೊಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ತೊಂದರೆ
ಬೈಂದೂರಿನಿಂದ ಗಂಗೊಳ್ಳಿಯ ವಿವಿಧ ಶಾಲಾ ಕಾಲೇಜುಗಳಿಗೆ ಬಹಳಷ್ಟು ವಿದ್ಯಾರ್ಥಿಗಳು ವಿದ್ಯಾರ್ಜನೆಗಾಗಿ ಬರುತ್ತಿದ್ದಾರೆ. ಮೀನುಗಾರರು, ಸಾರ್ವಜನಿಕರು, ಸರಕಾರಿ ಮತ್ತು ಖಾಸಗಿ ನೌಕರರು, ಉದ್ಯಮಿಗಳು ಅವರವರ ಕಾರ್ಯನಿಮಿತ್ತ ಗಂಗೊಳ್ಳಿಯಿಂದ ಬೈಂದೂರಿಗೆ ಪ್ರತಿನಿತ್ಯ ಸಂಚರಿಸುತ್ತಿದ್ದಾರೆ. ಆದರೆ ಗಂಗೊಳ್ಳಿಯಿಂದ ಬೈಂದೂರಿಗೆ ಮತ್ತು ಬೈಂದೂರಿನಿಂದ ಗಂಗೊಳ್ಳಿಗೆ ಯಾವುದೇ ಸರಕಾರಿ ಅಥವಾ ಖಾಸಗಿ ಬಸ್ ವ್ಯವಸ್ಥೆ ಇಲ್ಲ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು, ಮೀನುಗಾರರು ಸಹಿತ ನೂರಾರು ಮಂದಿ ಸಕಾಲ ದಲ್ಲಿ ಗಂಗೊಳ್ಳಿಗೆ ಬರಲು ಮತ್ತು ಸಕಾಲದಲ್ಲಿ ಮನೆ ತಲುಪಲು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.
ಸ್ಥಗಿತ
ಕೆಲವು ವರ್ಷಗಳ ಹಿಂದೆ ಗಂಗೊಳ್ಳಿ-ಬೈಂದೂರು ನಡುವೆ ಸಂಚಾರ ನಡೆಸುತ್ತಿದ್ದ ಖಾಸಗಿ ಬಸ್ಗಳು ಸಂಚಾರ ಸ್ಥಗಿತಗೊಳಿಸಿವೆ.ಬೈಂದೂರಿನಿಂದ ಗಂಗೊಳ್ಳಿಗೆ ಬರಲು ಎರಡೆರಡು ಬಸ್ಗಳನ್ನು ಬದಲಾಯಿಸಿ ಬರಬೇಕಿದೆ.
ನೇರ ಬಸ್ ವ್ಯವಸ್ಥೆ ಕಲ್ಪಿಸಿ
ಬೈಂದೂರಿನಿಂದ ಬರುವಾಗ ತ್ರಾಸಿ ಜಂಕ್ಷನ್ನಲ್ಲಿ ಬಸ್ ಇಳಿಯಬೇಕಿದ್ದು, ರಾಷ್ಟ್ರೀಯ ಹೆದ್ದಾರಿ-66 ದಾಟಲು ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರು ಜೀವ ಕೈಯಲ್ಲಿ ಹಿಡಿದು ದಾಟಬೇಕಾದ ಪರಿಸ್ಥಿತಿ ಇದೆ.
ರಸ್ತೆ ದಾಟುವ ಸಂದರ್ಭ ಅನೇಕ ಅಪಘಾತಗಳು ನಡೆದಿದ್ದು, ಹಲವರು ಪ್ರಾಣ ಕಳೆದುಕೊಂಡ ಘಟನೆಗಳೂ ನಡೆದಿದೆ. ಹೀಗಾಗಿ ಗಂಗೊಳ್ಳಿ-ಬೈಂದೂರು ನಡುವೆ ನೇರ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಓಡಾಟ
ಕುಂದಾಪುರ ಗಂಗೊಳ್ಳಿ ನಡುವೆ ಅನೇಕ ಖಾಸಗಿ ಬಸ್ಸುಗಳು ಓಡಾಡುತ್ತವೆ. ಅಂತೆಯೇ ಕೆಎಸ್ಆರ್ಟಿಸಿ ನರ್ಮ್ ಬಸ್ಗಳ ಓಡಾಟ ಇವೆ. ಇದರಿಂದಾಗಿ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗುತ್ತಿದೆ. ಇದೇ ಮಾದರಿಯಲ್ಲಿ ಬೈಂದೂರಿಗೂ ಬಸ್ ಬೇಡಿಕೆ ಇಡಲಾಗಿದೆ.
ಗಂಗೊಳ್ಳಿ-ಬೈಂದೂರು ನಡುವೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸುವಂತೆ ಈಗಾಗಲೇ ಅನೇಕ ಶಾಲಾ ಕಾಲೇಜುಗಳು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಶಾಸಕರು ಹಾಗೂ ಇನ್ನಿತರ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಈ ಎಲ್ಲ ತೊಂದರೆಗಳನ್ನು ಪರಿಹರಿಸಲು ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳ ಅನುಕೂಲ ಕ್ಕಾಗಿ ಪ್ರತಿನಿತ್ಯ ಗಂಗೊಳ್ಳಿ-ಬೈಂದೂರು ನಡುವೆ ಕೆಎಸ್ಆರ್ಟಿಸಿ ಗ್ರಾಮೀಣ ಬಸ್ ಸಂಚಾರವನ್ನು ಪ್ರಾರಂಭಿಸಬೇಕೆಂದು ಮತ್ತು ಗಂಗೊಳ್ಳಿ-ಬೆ„ಂದೂರು ನಡುವೆ ಸಂಚಾರ ಸ್ಥಗಿತಗೊಳಿಸಿರುವ ಖಾಸಗಿ ಬಸ್ಗಳ ಪರವಾನಿಯನ್ನು ರದ್ದುಗೊಳಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಸರಕಾರಿ ಬಸ್ ಬರಲಿ; ಕಳೆದ ಕೆಲವು ವರ್ಷಗಳಿಂದ ಗಂಗೊಳ್ಳಿ- ಬೈಂದೂರು ನಡುವೆ ನೇರ ಬಸ್ ವ್ಯವಸ್ಥೆ ಇಲ್ಲ. ಸಂಚಾರ ನಡೆಸುತ್ತಿದ್ದ ಖಾಸಗಿ ಬಸ್ಗಳು ಕೂಡ ಸಂಚಾರ ಸ್ಥಗಿತಗೊಳಿಸಿವೆ. ಇದರಿಂದ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಮೀನುಗಾರರು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರತಿನಿತ್ಯ ಗಂಗೊಳ್ಳಿ-ಬೈಂದೂರು ನಡುವೆ ಕೆಎಸ್ಆರ್ಟಿಸಿ ಗ್ರಾಮೀಣ ಬಸ್ ಸಂಚಾರವನ್ನು ಪ್ರಾರಂಭಿಸಬೇಕು. – ಎಚ್.ಎಸ್. ಚಿಕ್ಕಯ್ಯ ಪೂಜಾರಿ, ಅಧ್ಯಕ್ಷರು, ನಾಗರಿಕ ಹೋರಾಟ ಸಮಿತಿ, ಗಂಗೊಳ್ಳಿ
ಪ್ರಸ್ತಾವನೆ ಇಲ್ಲ: ಗಂಗೊಳ್ಳಿ-ಬೈಂದೂರು ನಡುವೆ ಕೆಎಸ್ ಆರ್ಟಿಸಿ ಬಸ್ ಸಂಚಾರ ಆರಂಭಿಸುವ ಬಗ್ಗೆ ಯಾವುದೇ ಪ್ರಸ್ತಾವನೆ ಮನವಿಗಳು ಬಂದಿಲ್ಲ. ಚಾಲಕ, ನಿರ್ವಾಹಕರ ಕೊರತೆ ಇರುವುದರಿಂದ ಚಾಲಕ ನಿರ್ವಾಹಕರ ನೇಮಕಾತಿ ನಡೆದ ಬಳಿಕ ಗಂಗೊಳ್ಳಿ-ಬೈಂದೂರು ನಡುವೆ ಕೆಎಸ್ಆರ್ ಟಿಸಿ ಬಸ್ ಸಂಚಾರ ಆರಂಭಿಸಲು ಪರಿಶೀಲನೆ ನಡೆಸಲಾಗುವುದು. – ನಾಗರಾಜ್, ಎಟಿಎಸ್, ಕೆಎಸ್ಆರ್ಟಿಸಿ ಕುಂದಾಪುರ ಘಟಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ