ಕಾಸನಾಡಿ -ಬುಗುರಿಕಡು ರಸ್ತೆ ಅಭಿವೃದ್ಧಿಗೆ ಬೇಡಿಕೆ


Team Udayavani, Sep 13, 2021, 3:20 AM IST

ಕಾಸನಾಡಿ -ಬುಗುರಿಕಡು ರಸ್ತೆ ಅಭಿವೃದ್ಧಿಗೆ ಬೇಡಿಕೆ

ಹೆಮ್ಮಾಡಿ: ಸಂತೋಷನಗರ ಸಮೀಪದ ಕಾಸನಾಡಿ ಬೊಬ್ಬರ್ಯ ದೈವಸ್ಥಾನ ಬಳಿಯಿಂದ ಬುಗುರಿಕಡು ಹಾಲಾಡಿ ಬೊಬ್ಬರ್ಯ ದೈವಸ್ಥಾನದವರೆಗಿನ ರಸ್ತೆ ಸಂಪೂರ್ಣ ಹೊಂಡ-ಗುಂಡಿಮಯವಾಗಿದ್ದು, ವಾಹನ ಸಂಚಾರವೇ ದುಸ್ತರಗೊಂಡಿದೆ. ಸುಮಾರು 1 ಕಿ.ಮೀ. ಉದ್ದದ ರಸ್ತೆಯ ಡಾಮರೆಲ್ಲ ಕಿತ್ತು ಹೋಗಿದ್ದು, ಮಳೆ ನೀರು ರಸ್ತೆಯಲ್ಲಿಯೇ ಹರಿದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಹೆಮ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಸಂತೋಷನಗರದ ಮುಖ್ಯ ರಸ್ತೆಯಿಂದ ಬುಗುರಿಕಡುವರೆಗೆ ಒಟ್ಟು 2.4 ಕಿ.ಮೀ. ದೂರವಿದ್ದು, ಈ ಪೈಕಿ ಅಂದಾಜು 900 ಮೀ.ವರೆಗೆ ಈವರೆಗೆ ಅಭಿವೃದ್ಧಿಯಾಗಿದೆ. ಆದರೆ ಅಲ್ಲಿಂದ ಮುಂದಕ್ಕೆ ಈವರೆಗೆ ಅಭಿವೃದ್ಧಿಯಾಗದೆ ನನೆಗುದಿಗೆ ಬಿದ್ದಿದೆ.

15 ವರ್ಷಗಳ ಹಿಂದೆ ಡಾಮರು :

ಈ ಕಾಸನಾಡಿ ಬೊಬ್ಬರ್ಯ ದೈವಸ್ಥಾನ ಬಳಿಯಿಂದ ಬುಗುರಿಕಡು ಹಾಲಾಡಿ ಬೊಬ್ಬರ್ಯ ದೈವಸ್ಥಾನದವರೆಗಿನ ಸುಮಾರು 1 ಕಿ.ಮೀ. ದೂರದ ರಸ್ತೆಗೆ ಮೊದಲ ಬಾರಿಗೆ ಡಾಮರು ಕಾಮಗಾರಿಯಾಗಿದ್ದು ಸುಮಾರು 15 ವರ್ಷಗಳ ಹಿಂದೆ. ಅಲ್ಲಿಂದ ಇಲ್ಲಿಯವರೆಗೆ ಒಂದೇ ಒಂದು ಸಲವೂ ಮರು ಡಾಮರು ಕಾಮಗಾರಿಯೇ ಆಗಿಲ್ಲ. ಆಗಾಗ ರಸ್ತೆಯ ಹೊಂಡ- ಗುಂಡಿಗಳಿಗೆ ತೇಪೆ ಹಾಕಿದ್ದು ಬಿಟ್ಟರೆ, ಈವರೆಗೆ ಬೇರೆ ಯಾವುದೇ ಅಭಿವೃದ್ಧಿಯಾಗಿಲ್ಲ.

ರಸ್ತೆಯೇ ಚರಂಡಿ :

ಈ ರಸ್ತೆಯುದ್ದಕ್ಕೂ ಮಳೆ ನೀರು ಹರಿದು ಹೋಗಲು ಎರಡೂ ಕಡೆಗಳಲ್ಲಿಯೂ ಚರಂಡಿ ವ್ಯವಸ್ಥೆಯೇ ಇಲ್ಲ. ಹೀಗಾಗಿ ಮಳೆ ನೀರು ಪೂರ್ತಿ ರಸ್ತೆಯಲ್ಲಿಯೇ ಹರಿದು ಹೋಗುತ್ತಿದೆ. ರಸ್ತೆಯ ಹಲವೆಡೆಗಳಲ್ಲಿ ದೊಡ್ಡ – ದೊಡ್ಡ ಹೊಂಡ ಬಿದ್ದಿದ್ದು, ಮಳೆ ನೀರು ನಿಂತು ಗುಂಡಿಯು ಕಾಣದೆ ವಾಹನ ಸವಾರರು ಸಂಕಷ್ಟಪಡುವಂತಾಗಿದೆ.

80ಕ್ಕೂ ಹೆಚ್ಚು ಮನೆ :

ಈ ಕಾಸನಾಡಿ, ಬುಗುರಿಕಡು ಭಾಗದ ಜನರು ಪಂಚಾಯತ್‌, ಪಡಿತರ, ಅಂಚೆ, ಬ್ಯಾಂಕ್‌, ಪೇಟೆ ಇನ್ನಿತರ ಎಲ್ಲ ಕೆಲಸ ಕಾರ್ಯಗಳಿಗೆ ಹೆಮ್ಮಾಡಿ ಪೇಟೆಯನ್ನೇ ಆಶ್ರಯಿಸಿದ್ದಾರೆ. ಇಲ್ಲಿನ ನಾಗರಿಕರು ಹೆಮ್ಮಾಡಿ ಪೇಟೆಗೆ ಬರಬೇಕಾದರೆ ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ. ಈ ಭಾಗದಲ್ಲಿ 80ಕ್ಕೂ ಹೆಚ್ಚು ಮನೆಗಳಿದ್ದು, ನಿತ್ಯ ನೂರಾರು  ವಾಹನಗಳು ಈ ಮಾರ್ಗದಲ್ಲಿ ಓಡಾಟ ನಡೆಸುತ್ತವೆ.

ನಾವು ಸಂತೋಷನಗರದಲ್ಲಿ ಅನೇಕ ವರ್ಷಗಳಿಂದ ರಿಕ್ಷಾ ಬಾಡಿಗೆಗೆ ಮಾಡಿಕೊಂಡಿದ್ದು, ಕಾಸನಾಡಿ, ಬುಗುರಿಕಡು ಕಡೆಗೆ ನಮಗೆ ಹೆಚ್ಚಿನ ಬಾಡಿಗೆ ಇರುವುದು. ಆದರೆ ಈ ಹೊಂಡ-ಗುಂಡಿಮಯ ಮಾರ್ಗದಲ್ಲಿ ನಿತ್ಯ ಸಂಚರಿಸುತ್ತಿರುವುದರಿಂದ ನಮಗೆ ಸಿಗುವ ಬಾಡಿಗೆ ಪೂರ್ತಿ ನಮ್ಮ ರಿಕ್ಷಾ ದುರಸ್ತಿಗೆ ಆಗುತ್ತದೆ. ಇಂಧನ ದರವೂ ದುಬಾರಿ, ಹೀಗೆ ಆದರೆ ಜೀವನ ಹೇಗೆ? ನಾವು ಬಿಟ್ಟರೆ ಬೇರೆ ಕಡೆಗಳ ವಾಹನಗಳು ಇಲ್ಲಿಗೆ ಬಾಡಿಗೆಗೆ ಬರಲು ಸಹ ಹಿಂದೇಟು ಹಾಕುತ್ತಾರೆ. ಆದಷ್ಟು ಬೇಗ ಈ ರಸ್ತೆಯ ಅಭಿವೃದ್ಧಿಯಾಗಲಿ.ಪ್ರಶಾಂತ್‌ ಪಡುಮನೆ, ರಿಕ್ಷಾ ಚಾಲಕರು

ಸಂತೊಷನಗರದಿಂದ ಬುಗುರಿಕಡು ರಸ್ತೆ ಅವ್ಯವಸ್ಥೆ ಬಗ್ಗೆ ಗಮನದಲ್ಲಿದ್ದು, ಈ ರಸ್ತೆಯ ಸುಮಾರು 1 ಕಿ.ಮೀ.ವರೆಗೆ ಈಗಾಗಲೇ ಅಭಿವೃದ್ಧಿ ಮಾಡಲಾಗಿದೆ. ಸಂಪೂರ್ಣ ರಸ್ತೆ ಅಭಿವೃದ್ಧಿ ಬಗ್ಗೆ  ಈಗಾಗಲೇ 50 ಲಕ್ಷ ರೂ. ಅನುದಾನಕ್ಕಾಗಿ ಸಂಬಂಧಪಟ್ಟ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಿ.ಎಂ. ಸುಕುಮಾರ್‌ ಶೆಟ್ಟಿ, ಬೈಂದೂರು ಶಾಸಕರು

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Lok Sabha poll 2024:ಕ್ಷೇತ್ರದ ಅಭಿವೃದ್ಧಿಗೆ ಪ್ರತ್ಯೇಕ ಪ್ರಣಾಳಿಕೆ:  ಜಯಪ್ರಕಾಶ್‌ ಹೆಗ್ಡೆ

Lok Sabha poll 2024:ಕ್ಷೇತ್ರದ ಅಭಿವೃದ್ಧಿಗೆ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.