ಟ್ಯಾಂಕರ್‌ ನೀರಿಗೆ ಬೇಡಿಕೆ: ಕೊರ್ಗಿ ಸಾಗಿನಗುಡ್ಡೆಯಲ್ಲಿ ನೀರಿನ ಸಮಸ್ಯೆ


Team Udayavani, Mar 27, 2024, 3:08 PM IST

ಟ್ಯಾಂಕರ್‌ ನೀರಿಗೆ ಬೇಡಿಕೆ: ಕೊರ್ಗಿ ಸಾಗಿನಗುಡ್ಡೆಯಲ್ಲಿ ನೀರಿನ ಸಮಸ್ಯೆ

ತೆಕ್ಕಟ್ಟೆ: ಕೊರ್ಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಸಾಗಿನಗುಡ್ಡೆಯಲ್ಲಿ ಪರಿಶಿಷ್ಟ ಕಾಲಿನಿಯ ನಿವಾಸಿಗಳು ಸೇರಿದಂತೆ ಸುಮಾರು 50 ಮನೆಗಳಿಗೆ ಕುಡಿಯುವ ನೀರಿಗೆ ತತ್ವಾರ ಎದುರಾಗಿದ್ದು, ಗ್ರಾ.ಪಂ.ನಿಂದ ಸರಬರಾಜಾಗುವ ಪ್ರಮುಖ ಬಾವಿ ಹಾಗೂ
ಮೆಕ್ಕೆಮನೆ ಮದಗದಲ್ಲಿನ ಅಂತರ್ಜಲ ಮಟ್ಟವು ಸಂಪೂರ್ಣ ಬತ್ತಿಹೋಗಿದ್ದರಿಂದ ಬಿಸಿಲ ಬೇಗೆ ಒಂದೆಡೆಯಾದರೆ ಮತ್ತೊಂದೆಡೆಯಲ್ಲಿ ಎಪ್ರಿಲ್‌, ಮೇ ತಿಂಗಳನ್ನು ಹೇಗೆ ಎದುರಿಸುವುದು ಎನ್ನುವ ಆತಂಕ ಸ್ಥಳೀಯ ನಿವಾಸಿಗಳನ್ನು ಕಾಡತೊಡಗಿದೆ.

ನಳ್ಳಿ ನೀರು: ಅಸಮರ್ಪಕ ಪೂರೈಕೆ ಇಲ್ಲಿನ ಹೊಸಮಠ ಜನತಾ ಕಾಲನಿಯಲ್ಲಿ ಜಲ ಜೀವನ ಮಿಷನ್‌ ಅಡಿಯಲ್ಲಿ ನಿರ್ಮಾಣವಾದ ಬೃಹತ್‌ ಬಾವಿಯಿಂದ ಮುಂಜಾನೆ ಗ್ರಾ.ಪಂ. ಪೂರೈಕೆ ಮಾಡುತ್ತಿದೆ. ಬಾವಿಯಲ್ಲಿನ ನೀರಿನ ಮಟ್ಟ ಸಂಪೂರ್ಣ ಕುಸಿತಗೊಂಡ ಹಿನ್ನೆಲೆ ಈ ಪರಿಸರದ ಸಾಗಿನಗುಡ್ಡೆ, ಚಾರುಕೊಟ್ಟಿಗೆ ಹಾಗೂ ಹೊಸ ಮಠದ 50ಕ್ಕೂ ಅಧಿಕ ಮನೆಗಳಿಗೆ ನಳ್ಳಿ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ ಎನ್ನುವುದು ಸ್ಥಳೀಯರಾದ ಶ್ರೀದೇವಿ ಅವರ ಅಭಿಪ್ರಾಯ.

ಸಮಸ್ಯೆಗಳು
ಹೊಸಮಠ ಜನತಾ ಕಾಲನಿಯ ಸುತ್ತಮುತ್ತಲ ಭಾಗದಲ್ಲಿ ಈಗಿರುವ ಸುಮಾರುನಾಲ್ಕೈದು ಕೊಳವೆಬಾವಿಗಳು ಕೂಡ ನಿಷ್ಪ್ರಯೋಜಕವಾಗಿದೆ. ಕೊರ್ಗಿ ಸಾಗಿನಗುಡ್ಡೆಯಲ್ಲಿ ಸುಮಾರು 25 ವರ್ಷದ ಹಳೆಯ ಶಿಲೆಕಲ್ಲು ಬಾವಿಯ ಕೆಸರು ಕಾಣುವಷ್ಟು ನೀರಿದೆ. ಆದರೆ ಬಾವಿ ಶಿಥಿಲಗೊಂಡಿದ್ದು ಅಪಾಯದ ಸ್ಥಿತಿಯಲ್ಲಿದೆ.

ಹೂಳು ತೆಗೆಯುವ ಕಾರ್ಯ
ಈ ಹಿಂದೆ ಸಾಗಿನಗುಡ್ಡೆ ಪರಿಸರದಲ್ಲಿ ಜಲ ಜೀವನ ಮಿಷನ್‌ ಅಡಿಯಲ್ಲಿ ನಿರ್ಮಾಣವಾದ ಬೃಹತ್‌ ಬಾವಿಯ ಅಂತರ್ಜಲ ಸಂಪೂರ್ಣ ಕುಸಿದಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಮುಖಂಡರಾದ ಗೋಪಾಲ ಶೆಟ್ಟಿ, ನಿಶ್ಚಿತ್‌ ಶೆಟ್ಟಿ ಗ್ರಾ.ಪಂ. ಸದಸ್ಯರಾದ ದಿನೇಶ್‌ ಮೊಗವೀರ ಚಾರುಕೊಟ್ಟಿಗೆ, ಪ್ರಮೋದ ಕೆ.ಶೆಟ್ಟಿ ಹಾಗೂ ಪಾರ್ವತಿ ಅವರು ಸಮಸ್ಯೆಗಳಿಗೆ ತಾತ್ಕಾಲಿಕ ಪರಿಹಾರ ಕಲ್ಪಿಸುವ ನಿಟ್ಟಿನಿಂದ ತಮ್ಮ ಸ್ವಂತ ಖರ್ಚಿನಲ್ಲೇ ಬಾವಿಯಲ್ಲಿ ಶೇಖರಣೆಯಾದ ಹೂಳು ತೆಗೆಯುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಶಾಶ್ವತ ಪರಿಹಾರ ಅಗತ್ಯ

ಕುರುವಾಡಿ ಮದಗಕ್ಕೆ ವಾರಾಹಿ ಕಾಲುವೆ ನೀರು ಹರಿಸುವ ಮಹತ್ವದ ಕಾರ್ಯವಾದಲ್ಲಿ ಸುತ್ತಮುತ್ತಲಿನ ಕಾಳಾವರ, ಕೊರ್ಗಿ, ಕೆದೂರು ಹಾಗೂ ಶಾನಾಡಿ ಗ್ರಾಮಗಳಲ್ಲಿನ ಅಂತರ್ಜಲ ಮಟ್ಟ ಸಂಪೂರ್ಣ ವೃದ್ಧಿಯಾಗಿ, ಗ್ರಾಮದ ನೀರಿನ ಸಮಸ್ಯೆಗಳಿಗೆ ಶ್ವತವಾದ ಪರಿಹಾರ ಕಂಡುಕೊಳ್ಳಬಹುದು ಎಂದು ಕೊರ್ಗಿ ಗ್ರಾ.ಪಂ. ಸದಸ್ಯ ದಿನೇಶ್‌ ಮೊಗವೀರ ಚಾರುಕೊಟ್ಟಿಗೆ ಆಗ್ರಹಿಸಿದ್ದಾರೆ.

*ಟಿ.ಲೋಕೇಶ್‌ ಆಚಾರ್ಯ, ತೆಕ್ಕಟ್ಟೆ

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Uppunda ಶಾರ್ಟ್ ಸರ್ಕ್ಯೂಟ್: ಅಂಗಡಿ ಭಸ್ಮ

Uppunda ಶಾರ್ಟ್ ಸರ್ಕ್ಯೂಟ್: ಅಂಗಡಿ ಭಸ್ಮ

Kolluru Mookambika: ದರ್ಶನ್‌ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

Kollur Mookambika: ದರ್ಶನ್‌ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.