ಭಯ-ಭೀತಿ ಬೇಡ; ಮುಂಜಾಗ್ರತೆ ಇರಲಿ

ಜಡ್ಕಲ್‌ -ಮುದೂರಿನಲ್ಲಿ ಡೆಂಗ್ಯೂ ಹೆಚ್ಚಳ

Team Udayavani, Apr 26, 2022, 11:27 AM IST

dengue

ಕುಂದಾಪುರ/ಕೊಲ್ಲೂರು: ಬೇಸಗೆಯಾದರೂ, ಆಗಾಗ್ಗೆ ಕಾಣಿಸುವ ಮಳೆಯಿಂದಾಗಿ ಡೆಂಗ್ಯೂ ಜ್ವರದ ಭೀತಿ ಎಲ್ಲೆಡೆ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟದ ತಪ್ಪಲಿನ ಜಡ್ಕಲ್‌, ಮುದೂರು ಭಾಗದಲ್ಲಿ ಕೆಲವು ದಿನಗಳಿಂದ ಡೆಂಗ್ಯೂ ಜ್ವರದ ಪ್ರಕರಣಗಳು ವ್ಯಾಪಕವಾಗಿ ಹೆಚ್ಚುತ್ತಿದ್ದು, ಜನರನ್ನು ಆತಂಕಕ್ಕೆ ಎಡೆ ಮಾಡಿದೆ.

ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಕೊಲ್ಲೂರು, ಜಡ್ಕಲ್‌, ಮುದೂರು, ಸೆಲ್ಕೋಡು ಮತ್ತಿತರ ಭಾಗಗಳಲ್ಲಿ ಕೆಲವು ದಿನಗಳಿಂದ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚುತ್ತಿವೆ. ಸದ್ಯ 56 ಸಕ್ರಿಯ ಪ್ರಕರಣಗಳಿದ್ದು, ಇನ್ನಷ್ಟು ಮಂದಿಯ ರಕ್ತದ ತಪಾಸಣೆ ಮಾಡಲಾಗಿದ್ದು, ಕೆಲವರದ್ದು ನೆಗೆಟಿವ್‌ ಬಂದಿದ್ದು, ಕೆಲವರದು ಬಾಕಿ ಇವೆ. ಇನ್ನು ಕೆಲವರು ಲಕ್ಷಣಗಳಿದ್ದರೂ ಮನೆಯಲ್ಲಿಯೇ ಇದ್ದು, ಚಿಕಿತ್ಸೆ ಪಡೆಯಲು ಹಿಂದೇಟು ಹಾಕುತ್ತಿರುವವರು ಇದ್ದಾರೆ.

ಜ್ವರ ಅಥವಾ ನೆಗಡಿಯಂತಹ ಗುಣಲಕ್ಷಣಗಳು ಕಂಡು ಬಂದರೆ ತತ್‌ಕ್ಷಣ ಸಮೀಪದ ಆಸ್ಪತ್ರೆಗಳಿಗೆ ಭೇಟಿ ನೀಡಿ, ಅಗತ್ಯ ಚಿಕಿತ್ಸೆ ಪಡೆಯಿರಿ. ಮನೆಯ ಆಸುಪಾಸು ಸ್ವಚ್ಛತೆ ಕಾಪಾಡಿಕೊಂಡರೆ, ಹರಡುವ ಪ್ರಮಾಣವನ್ನು ತಡೆಗಟ್ಟಬಹುದು.

ಕಾರಣವೇನು?

ಕುಂದಾಪುರ, ಬೈಂದೂರಿನ ಬೇರೆಲ್ಲೂ ಹೆಚ್ಚಾಗಿ ಕಾಣಿಸದ ಡೆಂಗ್ಯೂ ಪ್ರಕರಣ, ಜಡ್ಕಲ್‌, ಮುದೂರು ಭಾಗದಲ್ಲಿಯೇ ಹೆಚ್ಚಾಗಿ ಕಾಣಿಸಲು ಮುಖ್ಯ ಕಾರಣ ಆಗಾಗ ಮಳೆ ಬರುತ್ತಿರುವುದರಿಂದ ಅಡಿಕೆ ಮರದ ಹಾಳೆಗಳಲ್ಲಿ ನೀರು ನಿಲ್ಲುವುದು, ರಬ್ಬರ್‌ ಗೊರಟೆಗಳಲ್ಲಿ ನೀರು ನಿಲ್ಲುವುದರಿಂದ ಸೊಳ್ಳೆ ಉತ್ಪತ್ತಿಯಾಗಿ ಡೆಂಗ್ಯೂ ಹೆಚ್ಚುವ ಸಾಧ್ಯತೆ ಗಳಿರುತ್ತವೆ. ಆದ್ದರಿಂದ ರಬ್ಬರ್‌ ಗೊರಟೆಗಳಲ್ಲಿ, ಅಡಿಕೆ ಹಾಳೆಗಳಲ್ಲಿ ನೀರು ನಿಲ್ಲದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕಾಗಿದೆ.

ಗುಣಲಕ್ಷಣಗಳೇನು?

ಡೆಂಗ್ಯೂ ವೈರಸ್‌ನಿಂದ ಉಂಟಾಗುವ ಸೋಂಕು ಆಗಿದ್ದು, ಈಡಿಸ್‌ ಎಂಬ ಸೊಳ್ಳೆಯಿಂದ ಈ ರೋಗ ಹರಡುತ್ತವೆ. ತೀವ್ರ ಜ್ವರ, ತೀವ್ರ ತಲೆನೋವು, ಸ್ನಾಯುಗಳು, ಕೀಲು ನೋವಯ, ದೇಹದಲ್ಲಿ ಚಳಿ, ಅತಿಯಾದ ಬೆವರು, ನಿಶ್ಶಕ್ತಿ, ಆಯಾಸ, ಹಸಿವಾಗದಿರುವುದು, ಒಸಡುಗಳಲ್ಲಿ ರಕ್ತಸ್ರಾವ ಹಾಗೂ ವಾಂತಿ ಇದರ ಲಕ್ಷಣಗಳು.

ಚಿಕಿತ್ಸೆ ಪಡೆಯಲು ತ್ರಾಸ

ಮುದೂರು, ಜಡ್ಕಲ್‌ ಭಾಗದವರಿಗೆ 25-30 ಕಿ.ಮೀ. ದೂರದಲ್ಲಿ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದರೂ, ಅಲ್ಲಿಗೆ ತೆರಳುವುದು ತ್ರಾಸದಾಯಕ. ಬಹುತೇಕ ಮಂದಿ 35 ಕಿ.ಮೀ. ದೂರದ ಕುಂದಾಪುರಕ್ಕೆ ಬರುವಂತಾಗಿದೆ. ಅಲ್ಲಿಂದ ಬಂದು ಕುಂದಾಪುರದ ಸರಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು, ತೆರಳುವವರ ಸಂಖ್ಯೆಯೇ ಹೆಚ್ಚು. ಜ್ವರ, ನೆಗಡಿ ಮತ್ತಿತರ ಲಕ್ಷಣಗಳು ಇರುವವರು ಕಿ.ಮೀ.ಗಟ್ಟಲೆ ಕ್ರಮಿಸುವುದು ಕಷ್ಟಕರವಾಗುತ್ತಿದೆ ಎನ್ನುವುದು ಈ ಭಾಗದ ಜನರ ಅಳಲು.

ಆರೋಗ್ಯ ಶಿಬಿರಕ್ಕೆ ಬೇಡಿಕೆ

ಜಡ್ಕಲ್‌, ಮುದೂರು ಭಾಗದಲ್ಲಿ ಆಸ್ಪತ್ರೆಗೆ ತೆರಳಲು ದೂರ ಆಗುವುದರಿಂದ ಈ ಭಾಗದಲ್ಲಿಯೇ ಎಲ್ಲಿಯಾದರೂ ಒಂದಷ್ಟು ದಿನಗಳ ಕಾಲ ವಿಶೇಷ ಆರೋಗ್ಯ ಶಿಬಿರ ನಡೆಸಿ, ತಪಾಸಣೆ, ಚಿಕಿತ್ಸೆ ನೀಡಬೇಕು ಎನ್ನುವ ಬೇಡಿಕೆ ಇಲ್ಲಿನ ಜನರಿಂದ ಕೇಳಿ ಬಂದಿದೆ.

ಮನೆ- ಮನೆ ಜಾಗೃತಿ

ಈಗಾಗಲೇ ಕೊಲ್ಲೂರು, ಜಡ್ಕಲ್‌, ಮುದೂರು ಗ್ರಾಮಗಳ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯು ಆಶಾ ಕಾರ್ಯಕರ್ತೆಯರ ಮೂಲಕ, ಕೊಲ್ಲೂರು ಹಾಗೂ ಜಡ್ಕಲ್‌ ಗ್ರಾ.ಪಂ.ಗಳ ಪ್ರತಿನಿಧಿಗಳು ಮನೆ- ಮನೆಗೆ ಭೇಟಿ ನೀಡಿ, ಮನೆಯ ಪರಿಸರ ಸ್ವಚ್ಛತೆ, ನಿರ್ದಿಷ್ಟ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಜಾಗೃತಿ ವಹಿಸುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

ನಿರ್ಲಕ್ಷ್ಯ ಮಾಡಬೇಡಿ

ಜ್ವರದ ಲಕ್ಷಣಗಳು ಕಂಡು ಬಂದರೆ ದಯವಿಟ್ಟು ಯಾರೂ ಸಹ ನಿರ್ಲಕ್ಷ್ಯ ಮಾಡಬೇಡಿ. ಅಗತ್ಯ ಚಿಕಿತ್ಸೆ ಪಡೆಯಿರಿ. ಮನೆಯಲ್ಲಿಯೇ ಇದ್ದು, ಚಿಕಿತ್ಸೆ ಪಡೆಯಬೇಡಿ. ಸಮೀಪದ ಆಸ್ಪತ್ರೆಗೆ ತಿಳಿಸಿ. ನಾವು ಆರೋಗ್ಯ ಇಲಾಖೆಯಿಂದ ಕಳೆದ 3 ತಿಂಗಳಿನಿಂದ ಜಡ್ಕಲ್‌, ಮುದೂರು ಭಾಗದಲ್ಲಿ ಅಗತ್ಯ ಜಾಗೃತಿ, ಮನೆ – ಮನೆ ಭೇಟಿ ಮಾಡಿ, ಅರಿವು ಕಾರ್ಯ ಮಾಡಲಾಗಿದೆ. ಎ. 26ರಂದು ಡಿಸಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಡಾ| ನಾಗಭೂಷಣ ಉಡುಪ ಎಚ್‌., ಜಿಲ್ಲಾ ಆರೋಗ್ಯ ಮತ್ತು ಕುಟುಂಬ. ಕಲ್ಯಾಣಾಧಿಕಾರಿ ಉಡುಪಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.