ಇಂದಿನಿಂದ ಬೆಳಗಲಿದೆ ದೀಪಗಳ ಸಾಲು; ಚಂದದ ಗೂಡು ದೀಪಗಳಿಗೆ ಹೆಚ್ಚಿದ ಬೇಡಿಕೆ


Team Udayavani, Nov 13, 2020, 2:04 AM IST

kudಇಂದಿನಿಂದ ಬೆಳಗಲಿದೆ ದೀಪಗಳ ಸಾಲು; ಚಂದದ ಗೂಡು ದೀಪಗಳಿಗೆ ಹೆಚ್ಚಿದ ಬೇಡಿಕೆ

ವಾಸುದೇವ ಭಟ್‌ ಅವರು ತಯಾರಿಸಿದ ದೇಸೀ ಗೂಡುದೀಪಗಳು.

ಕುಂದಾಪುರ: ದೀಪಾವಳಿ ಹಬ್ಬ ಮನೆ-ಮನಗಳಲ್ಲಿ ಸಡಗರ ಮೂಡಿಸುತ್ತಿದೆ. ಮಾರುಕಟ್ಟೆಯಲ್ಲಿ ಬಹುತೇಕ ಎಲ್ಲ ವ್ಯಾಪಾರಗಳೂ ಚಿಗಿತುಕೊಂಡಿದ್ದು ದೀಪಾವಳಿಯನ್ನು ಜನರೂ ಉಲ್ಲಾಸದಿಂದ ಕಳೆಯಲು ಸಜ್ಜಾಗಿದ್ದಾರೆ.

“ಬೆಳಕಿನ ಹಬ್ಬ ದೀಪಾವಳಿ’ ಈ ಶಬ್ದವೇ ಸಡಗರ, ಸಂಭ್ರಮವನ್ನು ಸೂಚಿಸುತ್ತದೆ. ಎಳೆಯರಿಂದ ಹಿರಿಯರ ತನಕ, ಹೊಸದಾಗಿ ಮದುವೆಯಾದವರಿಂದ ಆರಂಭಿಸಿ ಹಳೆ ದಂಪತಿಯ ತನಕ ಸಂಭ್ರಮ ಮತ್ತು ನಿರೀಕ್ಷೆಗಳಿಂದ ಕಾದಿರುವ ಹಬ್ಬ. ದೀಪಾವಳಿ ಅಂದರೆ ಹಬ್ಬಮಾತ್ರವಲ್ಲ; ಅದು ಸಮಗ್ರ ಕುಟುಂಬಕ್ಕೆ ಆನಂದ ಮತ್ತು ಚೆ„ತನ್ಯವನ್ನು ನೀಡುವ ಸಂದರ್ಭ. ಸಮಗ್ರ ಕುಟುಂಬವನ್ನು ತನ್ನ ಪರಿಸರದ ಜತೆ ಬೆಸೆದು ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವಂತೆ ಮಾಡುವ ಸಂದರ್ಭವೂ ಹೌದು.

ಯಾವಾಗ ಆರಂಭ
ಅಶ್ವಯುಜ ಕೃಷ್ಣ ತ್ರಯೋದಶಿ (ಧನತ್ರಯೋದಶಿ), ಅಶ್ವಯುಜ ಕೃಷ್ಣ ಚತುರ್ದಶಿ (ನರಕಚತುರ್ದಶಿ), ಅಮಾವಾಸ್ಯೆ (ಲಕ್ಷ್ಮೀ ಪೂಜೆ) ಮತ್ತು ಆಶ್ವಯುಜ ಶುಕ್ಲ ಪಾಡ್ಯ (ಬಲಿಪಾಡ್ಯ) ಈ ನಾಲ್ಕು ದಿನಗಳ ಕಾಲ ದೀಪಾವಳಿಯನ್ನು ಆಚರಿಸಲಾಗುತ್ತದೆ. ಕೆಲವರು ತ್ರಯೋದಶಿಯನ್ನು ದೀಪಾವಳಿಯಲ್ಲಿ ಸೇರಿಸದೆ ಉಳಿದ 3 ದಿನಗಳನ್ನು ದೀಪಾವಳಿಯೆಂದು ಆಚರಿಸುತ್ತಾರೆ. ಗೋವತ್ಸದ್ವಾದಶಿ ಮತ್ತು ಸಹೋದರ ಬಿದಿಗೆಯು ದೀಪಾವಳಿಯ ಸಮಯದಲ್ಲಿಯೇ ಬರುತ್ತದೆ. ಆದುದರಿಂದ ಇದನ್ನು ದೀಪಾವಳಿಯೆಂದೇ ಪರಿಗಣಿಸಲಾಗುತ್ತದೆ.

ಈ ಸಲ ಕೆಲವರು ನ. 13ರಂದು ಚತುರ್ದಶಿ ಆರಂಭ ಮಾಡಿಕೊಂಡು 15ಕ್ಕೆ ಹಬ್ಬ ಮುಗಿಸುತ್ತಾರೆ. ಇನ್ನು ಕೆಲವರು 16ಕ್ಕೆ ಪಾಡ್ಯ ಆಚರಿಸುತ್ತಾರೆ. ಕೆಲವು ಪಂಚಾಂಗದ ಪ್ರಕಾರ ನ.16ರಂದು ಪಾಡ್ಯದ ಅವಧಿ 10.33ಗಳಿಗೆಯಿದ್ದು ಉಪರಿ ಬಿದಿಗೆ ಬಂದ ಕಾರಣ ಪಾಡ್ಯ ಆಚರಣೆ 15ರಂದೇ ಬರುತ್ತದೆ ಎನ್ನಲಾಗುತ್ತಿದೆ.

ಮಾರುಕಟ್ಟೆ ಚೇತರಿಕೆ
ಬಟ್ಟೆ ಅಂಗಡಿಗಳಲ್ಲಿ ಗ್ರಾಹಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಹಾಗೆಯೇ ಸ್ವದೇಶೀ ಗೂಡುದೀಪಗಳ ಬೇಡಿಕೆ ಕಳೆದ ವರ್ಷದಂತೆಯೇ ಇದೆ. ಈಗಾಗಲೇ ಬಹುತೇಕ ಅಂಗಡಿಗಳಲ್ಲಿ ಒಂದು ಸುತ್ತು ವ್ಯಾಪಾರ ಮುಗಿದಿದೆ. ಇನ್ನಷ್ಟು ಆರ್ಡರ್‌ ಹಾಕಬೇಕೇ ಬೇಡವೇ ಎಂಬ ಲೆಕ್ಕಾಚಾರದಲ್ಲಿದ್ದಾರೆ. ಆದರೆ ಚೌತಿ, ನವರಾತ್ರಿಗೆ ಹೋಲಿಸಿದರೆ ದೀಪಾವಳಿ ವ್ಯಾಪಾರಿಗಳ ಗಲ್ಲಾದಲ್ಲಿ ಬೆಳಕು ಕಾಣಿಸುವಂತೆ ಮಾಡಿದೆ.

ಆತ್ಮನಿರ್ಭರ ವ್ಯಾಪಾರ
ಗೂಡುದೀಪಗಳ ತಯಾರಿಕೆಗೆ ಸ್ಥಳೀಯವಾಗಿ ಒತ್ತು ನೀಡಲಾಗುತ್ತಿದೆ. ಹಣತೆ ತಯಾರಿ, ಖರೀದಿಗೂ ವ್ಯಾಪಾರಿಗಳು ಸ್ಥಳೀಯರಿಗೆ ಪ್ರಾಮುಖ್ಯ ನೀಡುತ್ತಿದ್ದಾರೆ. ಗೋಮಯ ದೀಪ ಇನ್ನೂ ಇಲ್ಲಿನ ಮಾರುಕಟ್ಟೆಗೆ ಬಂದಿಲ್ಲ. ಮಣ್ಣಿನ ಹಣತೆಗೆ ಹೆಚ್ಚಿನ ಬೇಡಿಕೆಯಿದೆ ಎನ್ನುತ್ತಾರೆ ವ್ಯಾಪಾರಿಗಳು. “ಉದಯವಾಣಿ’ ಈ ಬಾರಿ ಗೂಡುದೀಪದ ಸ್ಪರ್ಧೆ ಆಯೋಜಿಸಿದ್ದು , ಗೂಡುದೀಪ ತಯಾರಿ ಕುರಿತಾಗಿಯೂ ಓದುಗರಿಗೆ ಮಾಹಿತಿ ನೀಡಿದೆ.

ದೇಸೀದೀಪ
ನಾವು ಚೀನ ಗೂಡುದೀಪಗಳನ್ನು ತರುತ್ತಿಲ್ಲ. ದೇಸೀ ದೀಪಗಳಿಗೆ ಆದ್ಯತೆ ನೀಡುತ್ತಿದ್ದೇವೆ. ಬೇಡಿಕೆ ಕಡಿಮೆಯಾಗಿಲ್ಲ. ಎಲ್ಲ ಸಂಕಷ್ಟ ಮುಗಿದು ನಾಡಿನ ಜನತೆ ದೀಪಾವಳಿ ಸಂಭ್ರಮದಿಂದ ಆಚರಿಸುವಂತಾಗಿದೆ.
-ಶೋಭಾ ಭಂಡಾರ್‌ಕಾರ್‌ ವ್ಯಾಪಾರಿ, ಕುಂದಾಪುರ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.