ಪ್ರಕೃತಿಯೊಂದಿಗೆ ಅಭಿವೃದ್ಧಿ-ಭವಿಷ್ಯ: ಎಸಿ ರಾಜು


Team Udayavani, Aug 15, 2021, 8:50 PM IST

ಪ್ರಕೃತಿಯೊಂದಿಗೆ ಅಭಿವೃದ್ಧಿ-ಭವಿಷ್ಯ: ಎಸಿ ರಾಜು

ಕುಂದಾಪುರ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂಭ್ರಮದಲ್ಲಿರುವ ನಾವೆಲ್ಲರೂ, ಪ್ರಕೃತಿಯ ಮುಂದೆ ನಮ್ಮ ಸೀಮಿತ ಸಾಮರ್ಥ್ಯ ಮತ್ತೆ ಮತ್ತೆ ಸಾಬೀತಾಗಿರುವುದನ್ನು ಮನಗಂಡು, “ಪ್ರಕೃತಿಯೊಂದಿಗೆ ಅಭಿವೃದ್ಧಿ ಮತ್ತು ಭವಿಷ್ಯ’ ಎನ್ನುವ ತತ್ವದ ಅಡಿ ಮುನ್ನಡೆಯಬೇಕಿದೆ. ಕರಾವಳಿಯ ನೆಲ- ಜಲದ ಸಂರಕ್ಷಣೆಯೊಂದಿಗೆ ಕೃಷಿ – ಪ್ರವಾಸೋದ್ಯಮ, ಯುವಜನ ಸಬಲೀಕರಣ – ಕೌಶಲಾಭಿವೃದ್ಧಿಯ ಕ್ಷೇತ್ರಗಳಿಗೆ ಆದ್ಯತೆ ನೀಡಲು ನಮ್ಮ ಆಡಳಿತ ಬದ್ಧ ಎಂದು ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಕೆ. ರಾಜು ಹೇಳಿದರು. ಅವರು ರವಿವಾರ ಕುಂದಾಪುರದ ಗಾಂಧಿ ಮೈದಾನದಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡಿದರು.

ಹೋರಾಟದ ಉತ್ಸಾಹ, ತ್ಯಾಗ ಭಾವನೆಗಳ ಮೂಲಕ ಹುತಾತ್ಮರನ್ನು ನೆನೆಯುತ್ತ, ಸವಾಲುಗಳನ್ನೆದುರಿಸುವ ಆವಶ್ಯಕತೆ ಹಿಂದೆಂದಿಗಿಂತಲೂ ಈಗ ಅಗತ್ಯವಾಗಿದೆ. ಪ್ರಧಾನಿಯವರ ಆಶಯದಂತೆ, 75ನೇ ವರ್ಷದ ಸ್ವಾತಂತ್ರ್ಯ ಹೋರಾಟ, 75 ರ ಯೋಜನೆಗಳು, 75ರ ಸಾಧನೆಗಳು, 75ರ ಕ್ರಿಯೆಗಳು ಹಾಗೂ 75ರ ಪರಿಹಾರ ಎನ್ನುವ ಐದು ಅಂಶಗಳತ್ತ ನಮ್ಮ ಮುಂದಿನ ರೂಪುರೇಷೆಯಾಗಿರುತ್ತದೆ. ಸ್ವಾತಂತ್ರ್ಯ ದ ಆಶಯವನ್ನು ಸರ್ವರಿಗೂ ತಲುಪಿಸುವ ನಿಟ್ಟಿನಲ್ಲಿ ಇನ್ನಷ್ಟು ದೃಢತೆಯ ಹೆಜ್ಜೆಗಳನ್ನಿಡುವ, ಸಂಕಲ್ಪ ತೊಡುವ ದಿನ ಇದಾಗಿದೆ ಎಂದವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪುರಸಭಾಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್‌ ಮಾತನಾಡಿ, ಗಾಂಧೀಜಿಯವರ ಅಹಿಂಸಾ ಚಳವಳಿಯಿಂದ ಆರಂಭಗೊಂಡು, ನೇತಾಜಿ, ಭಗತ್‌ಸಿಂಗ್‌ರಂತಹ ಯುವಕರ ಕ್ರಾಂತಿಕಾರಿ ಹೋರಾಟದ ಫಲವಾಗಿ ನಾವಿಂದು ಸ್ವತಂತ್ರರಾಗಿದ್ದೇವೆ. ಇವರಂತಹ ಇನ್ನೂ ಅನೇಕ ಮಹಾನ್‌ ದೇಶಭಕ್ತರ ತ್ಯಾಗ, ಬಲಿದಾನವನ್ನು ನಾವೆಲ್ಲರೂ ನೆನೆಯುವ ದಿನವಿದು ಎಂದವರು ಹೇಳಿದರು.

ಇದನ್ನೂ ಓದಿ:ವಿದೇಶಗಳಲ್ಲೂ ಸ್ವಾತಂತ್ರ್ಯ ಸಂಭ್ರಮ : ಭಾರತಕ್ಕೆ ಶುಭ ಹಾರೈಕೆ

ಈ ಸಂದರ್ಭದಲ್ಲಿ ಕುಂದಾಪುರ ಉಪ ವಿಭಾಗದ ಪೊಲೀಸ್‌ ಉಪಾಧೀಕ್ಷಕ ಶ್ರೀಕಾಂತ್‌ ಕೆ., ಕಾರ್ಯನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್‌, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಕುಸುಮಾಕರ್‌ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಜಯ ಎಸ್‌. ಪೂಜಾರಿ, ಪುರಸಭೆ ಉಪಾಧ್ಯಕ್ಷ ಸಂದೀಪ್‌ ಖಾರ್ವಿ, ಮಾಜಿ ಉಪಾಧ್ಯಕ್ಷ ರಾಜೇಶ್‌ ಕಾವೇರಿ, ಸ್ಥಾಯೀ ಸಮಿತಿ ಅಧ್ಯಕ್ಷ ಶೇಖರ್‌, ಸದಸ್ಯರಾದ ದೇವಕಿ ಸಣ್ಣಯ್ಯ, ಪುಷ್ಪಾ ಶೇಟ್‌, ಪ್ರಭಾಕರ್‌ ವಿ., ಸಂತೋಷ್‌ ಕುಮಾರ್‌ ಶೆಟ್ಟಿ, ಶ್ವೇತಾ ಸಂತೋಷ್‌, ವನಿತಾ ಎಸ್‌. ಬಿಲ್ಲವ, ಅಬು ಮಹಮ್ಮದ್‌, ಚಂದ್ರಶೇಖರ್‌ ಖಾರ್ವಿ, ಗಿರೀಶ್‌, ರತ್ನಾಕರ್‌ ಸೇರೆಗಾರ್‌, ಕಮಲಾ ಮಂಜುನಾಥ್‌ ಪೂಜಾರಿ, ಶ್ರೀಧರ ಶೇರೆಗಾರ್‌, ನಗರ ಠಾಣೆ ಎಸ್‌ಐ ಸದಾಶಿವ ಗವರೋಜಿ, ಗ್ರಾಮಾಂತರ ಠಾಣೆ ಎಸ್‌ಐಗಳಾದ ಸುಧಾ ಪ್ರಭು, ನಿರಂಜನ್‌, ಮತ್ತಿತರ ತಾಲೂಕು ಮಟ್ಟದ ಅಧಿಕಾರಿಗಳು, ಇಲಾಖಾ ಸಿಬಂದಿ, ಜನಪ್ರತಿನಿಧಿಗಳು, ಶಿಕ್ಷಕರು, ಕೊರೊನಾ ವಾರಿಯರ್, ಸಾರ್ವಜನಿಕರು ಉಪಸ್ಥಿತರಿದ್ದರು.

ಕುಂದಾಪುರ ತಹಶೀಲ್ದಾರ್‌ ಕಿರಣ್‌ ಗೌರಯ್ಯ ಸ್ವಾಗತಿಸಿ, ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ಕೆ.ಎಸ್‌. ವಂದಿಸಿದರು. ಶಿಕ್ಷಕ ಚಂದ್ರಶೇಖರ್‌ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು.

ಉಮಾಬಾೖ ನಮ್ಮ ಹೆಮ್ಮೆ
ಗಾಂಧೀಜಿ- ನೇತಾಜಿ, ಪಟೇಲ್‌- ಸಾವರ್ಕರ್‌ರಂತಹ ಮಹಾನ್‌ ನಾಯಕರ ಮುಂದಾಳ್ವತದಲ್ಲಿ ಕರಾ ವಳಿಯು ಸ್ವಾತಂತ್ರÂ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಮಹತ್ವದ ಪಾತ್ರ ವಹಿಸಿತ್ತು. ತಿಲಕ್‌ರಿಂದ ಪ್ರೇರಿತರಾಗಿ, ಸೇವಾದಳದ ಮುಖ್ಯಸ್ಥರಾಗಿ, ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನದ ಸಂಘಟಕರಾಗಿ, ಕಸ್ತೂರ್ಬಾ ಟ್ರಸ್ಟ್‌ನ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಮಹಾನ್‌ ಸ್ವಾತಂತ್ರÂ ಪ್ರೇಮಿ ಉಮಾ ಬಾೖ ಕುಂದಾಪುರ ಅವರ ನಿಸ್ವಾರ್ಥ ಸೇವಾ ಪರಂಪರೆ, ನಮಗೆಲ್ಲರಿಗೂ ಹೆಮ್ಮೆ ಹಾಗೂ ಅಭಿಮಾನದ ಸಂಗತಿ ಎಂದು ಎಸಿ ಕೆ. ರಾಜು ಅವರು ಪ್ರತಿಪಾದಿಸಿದರು.

ಕೋವಿಡ್‌ ವಾರಿಯರ್ ಗೆ ಸಮ್ಮಾನ
ಕೋವಿಡ್‌ ವಾರಿಯರ್ ಳಾದ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಶುಶ್ರೂಷಕಿ ನಯನಾ, ಬಿದ್ಕಲ್‌ಕಟ್ಟೆಯ ಆಶಾ ಕಾರ್ಯಕರ್ತೆ ಅನ್ನಪೂರ್ಣಾ, ಕೋಡಿಯ ಆಶಾ ಕಾರ್ಯಕರ್ತೆ ಸಾಧು, ಪುರಸಭೆಯ ಪೌರ ಕಾರ್ಮಿಕರಾದ ರಾಜೇಶ್‌, ಸಂತೋಷ್‌, ಕಂದಾಯ ಇಲಾಖೆಯ ಜಪ್ತಿ ಗ್ರಾಮ ಕರಣಿಕ ಪ್ರಕಾಶ ಸುವರ್ಣ, ಹೊಂಬಾಡಿ- ಮಂಡಾಡಿ ಗ್ರಾಮ ಸಹಾಯಕ ಭೋಜ ಮೊಗವೀರ, ಕುಂದಾಪುರ ನಗರ ಠಾಣಾ ಎಎಸ್‌ಐ ಸುಧಾಕರ್‌, ಗಂಗೊಳ್ಳಿ ಪಿಡಿಒ ಉಮಾಶಂಕರ್‌ ಅವರನ್ನು ಸಮ್ಮಾನಿಸಲಾಯಿತು.

 

ಟಾಪ್ ನ್ಯೂಸ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.