ವಂಡ್ಸೆ ಪೇಟೆಯಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ


Team Udayavani, May 6, 2021, 5:20 AM IST

ವಂಡ್ಸೆ ಪೇಟೆಯಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ

ವಂಡ್ಸೆ: ಬೈಂದೂರು ತಾಲೂಕಿನ ಪ್ರಮುಖ ಕೇಂದ್ರವಾಗಿರುವ ವಂಡ್ಸೆಯಲ್ಲಿ ಕುಡಿಯುವ ನೀರಿನ  ಅಭಾವ ತೀವ್ರವಾಗಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ. ವರ್ಷವೂ ಇಲ್ಲಿ ನೀರಿನ ಅಭಾವವಿದ್ದು, ಈ ವರೆಗೂ ಪರಿಹಾರ ಕಾಣದೆ ಇರುವುದರಿಂದ ಜನರ ಗೋಳು ತಪ್ಪಿಲ್ಲ.

ಬಹುತೇಕ ಬಾವಿಗಳ ನೀರು ಉಪ್ಪು  :

ಅನೇಕ ಕಡೆ ಬಾವಿಗಳಲ್ಲಿ ನೀರು ಉಪ್ಪಾಗಿದೆ. ಇವುಗಳನ್ನು ಬಳಸಲು ಸಾಧ್ಯವಾಗುವುದಿಲ್ಲ. ನದಿಯ ನೀರೂ ಉಪ್ಪಾಗಿರುವುದರಿಂದ ಜನರು ಸಮಸ್ಯೆ ಬಗೆ ಹರಿಸಲು ಪಂಚಾಯತ್‌ ಮೊರೆ ಹೋಗಿದ್ದಾರೆ.

ಬತ್ತಿ ಹೋದ ಬಾವಿಗಳು :

ಆಯ್ದ ಪ್ರದೇಶಗಳಲ್ಲಿ 8 ತೆರೆದ ಬಾವಿಗಳನ್ನು ನಿರ್ಮಿಸ ಲಾಗಿದೆ. ಈ ಬಾರಿ ಅಷ್ಟೂ ಬಾವಿಗಳು ನೀರಿಲ್ಲದೆ ಬತ್ತಿ ಹೋಗಿವೆ. ಜತೆಗೆ ಜನರ ಅನುಕೂಲಕ್ಕಾಗಿ 15 ಕೊಳವೆ ಬಾವಿ ನಿರ್ಮಿಸಲಾಗಿದೆ. ಆದರೆ ಕೆಲವುದರಲ್ಲಿ ನೀರಿನ ಸಮಸ್ಯೆ ಇದೆ. 120 ನಳ್ಳಿ ನೀರು ಸಂಪರ್ಕ ವ್ಯವಸ್ಥೆ ಮಾಡಲಾಗಿದ್ದರೂ ಅವುಗಳಿಗೆ ಸಮರ್ಪಕವಾಗಿ ನೀರು ಸರಬರಾಜು ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಗ್ರಾಮಸ್ಥರು ಸಮರ್ಪಕವಾಗಿ ನೀರು ಸರಬರಾಜು ಮಾಡಲಾಗದ ಪರಿಸ್ಥಿತಿಯಿಂದ ಗ್ರಾಮಸ್ಥರು ನೀರಿಗಾಗಿ ವಲಸೆ ಹೋಗಬೇಕಾದ ಸಂದಿಗ್ಧತೆ ಇದೆ. 3329 ಜನಸಂಖ್ಯೆ ಹೊಂದಿರುವ ವಂಡ್ಸೆ ಗ್ರಾ.ಪಂ.ವ್ಯಾಪ್ತಿಯ ನಿವಾಸಿಗಳ ಬೇಸಗೆಯಲ್ಲಿನ ನೀರಿನ ಪರದಾಟಕ್ಕೆ ಇನ್ನೂ ಮುಕ್ತಿ ದೊರಕಿಲ್ಲ.

ಎಲ್ಲೆಲ್ಲಿ ನೀರಿನ ಬರ? :

ವಂಡ್ಸೆ ಪೇಟೆ, ಹರಾವರಿ, ಉದ್ದಿನಬೆಟ್ಟು, ಮಾವಿನಕಟ್ಟೆ, ಆತ್ರಾಡಿ, ಬಳಿಗೇರಿ, ಹೆಸಿನಗದ್ದೆ ಮುಂತಾದೆಡೆ ನೀರಿನ ತೀವ್ರ ಸಮಸ್ಯೆಯಿದೆ. ಇಲ್ಲಿನ ನಿವಾಸಿಗಳು ದುಬಾರಿ ಬೆಲೆಗೆ ನೀರು ತರಿಸಿಕೊಳ್ಳಬೇಕಾಗಿದೆ.

ಟೆಂಡರ್‌ಗೆ “ನೋ’ :

ಲೀಟರ್‌ ನೀರಿಗೆ 10 ರಿಂದ 12 ಪೈಸೆ,  ಜಿಪಿಎಸ್‌ ಇರುವ ವಾಹನ, ಪ್ರತಿ ಸಂಚಾರಕ್ಕೆ ಮೂರು ನಿಮಿಷ ವೀಡಿಯೋ ಚಿತ್ರೀಕರಣ ಹೀಗೆ ಸರಕಾರದ ನೀರಿನ ಟೆಂಡರ್‌ನಲ್ಲಿ ಷರತ್ತುಗಳಿದ್ದು ಈ ಕಾರಣದಿಂದ ನಿಗದಿತ ದರಕ್ಕೆ ನೀರು ಪೂರೈಕೆಗೆ ಟೆಂಡರ್‌ ಹಾಕಲು ಟ್ಯಾಂಕರ್‌ ಮಾಲಕರು ಮುಂದೆ ಬರುತ್ತಿಲ್ಲ. ಇದರಿಂದ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ.

ಜನತಾ ಕಾಲನಿಗೆ ಪ್ರತ್ಯೇಕ ವ್ಯವಸ್ಥೆ :

ಹಲವು ವರ್ಷಗಳಿಂದ ಬೇಸಗೆಯಲ್ಲಿ ನೀರಿಗೆ ಪರದಾಡುತ್ತಿದ್ದ ಮೂಕಾಂಬಿಕಾ ಜನತಾ ಕಾಲನಿ ನಿವಾಸಿಗಳಿಗೆ ಗ್ರಾ.ಪಂ. ಪ್ರತ್ಯೇಕ ಬೋರ್‌ವೆಲ್‌ ಹಾಕಿ, ಪೈಪ್‌ಲೈನ್‌ ಜೋಡಿಸಿ ನೀರಿನ ಸಮಸ್ಯೆ ಬಗೆಹರಿಸಿದೆ.

ಟೆಂಡರ್‌ ಹಾಕಲು ಯಾರೂ ಮುಂದಾಗುತ್ತಿಲ್ಲ. ನೀರು ಸರಬರಾಜಿಗೆ ಅಡ್ಡಿಯಾದಲ್ಲಿ  ದಾನಿಗಳ ಸಹಕಾರದಿಂದ ಮನೆಗಳಿಗೆ ನೀರು ಸರಬರಾಜು ಮಾಡಲಾಗುವುದು  – ಉದಯಕುಮಾರ ಶೆಟ್ಟಿ,   ಅಧ್ಯಕ್ಷರು,ವಂಡ್ಸೆ ಪಂಚಾಯತ್‌

 

-ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.