ಹೇರಿಕುದ್ರು: ಕುಡಿಯುವ ನೀರಿನ ಸಮಸ್ಯೆ; ಶಾಶ್ವತ ಪರಿಹಾರ ಮರೀಚಿಕೆ

ಕಾಮಗಾರಿಗೆ ಟೆಂಡರ್‌ ಕರೆದು ಎರಡೂವರೆ ವರ್ಷ ; ಇನ್ನೂ ಕೈಗೂಡದ ಕುಡಿಯುವ ನೀರಿನ ಯೋಜನೆ

Team Udayavani, Oct 28, 2022, 12:31 PM IST

5

ಕುಂದಾಪುರ: ಆನಗಳ್ಳಿ ಗ್ರಾಮದ, ಕುಂದಾಪುರ ನಗರದಿಂದ ಕೆಲವೇ ಮೀಟರ್‌ಗಳ ದೂರವಿರುವ ದ್ವೀಪ ಪ್ರದೇಶವಾದ ಹೇರಿಕುದ್ರು ಭಾಗದ ಜನ ಹಲವಾರು ವರ್ಷಗಳಿಂದ ಮಳೆಗಾಲ ಸಹಿತ ವರ್ಷವಿಡೀ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಇನ್ನೂ ಶಾಶ್ವತ ಪರಿಹಾರ ಮಾತ್ರ ಮರೀಚಿಕೆಯಾಗಿದೆ.

ಜಲಜೀವನ್‌ ಮಿಷನ್‌ ಯೋಜನೆಯಡಿ ಕೇಂದ್ರ ಸಚಿವೆ, ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಯತ್ನದಿಂದಾಗಿ 50 ಲಕ್ಷ ರೂ. ಅನುದಾನ ಮಂಜೂರಾಗಿತ್ತು. ಟೆಂಡರ್‌ ಆಗಿ ಎರಡೂವರೆ ವರ್ಷ ಕಳೆದರೂ, ಇನ್ನೂ ಪೈಪ್‌ ಲೈನ್‌ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಇದಕ್ಕೆ ಮುಖ್ಯ ಕಾರಣ ಹೇರಿಕುದ್ರು ಸೇತುವೆ ಮೇಲೆ ನೀರಿನ ಪೈಪ್‌ಲೈನ್‌ ಹಾಕಲು ಹೆದ್ದಾರಿ ಪ್ರಾಧಿಕಾರವು ನಿರಕ್ಷೇಪಣ ಪತ್ರವನ್ನು ನೀಡಲು ಮೀನಾಮೇಷ ಎಣಿಸುತ್ತಿರುವುದು.

ಸಾವಿರಕ್ಕೂ ಮಿಕ್ಕಿ ಮಂದಿಗೆ ಸಮಸ್ಯೆ

ಹೇರಿಕುದ್ರು ಒಂದು ದ್ವೀಪ ಪ್ರದೇಶವಾಗಿದ್ದು, ಸಮುದ್ರದ ತಟದಿಂದ 600 ಮೀ. ದೂರದಲ್ಲಿ ಇರುವ ಒಂದು ಕುದ್ರುವಾಗಿದೆ. ಇಲ್ಲಿನ ಜನರು ವರ್ಷದ ಬಹುತೇಕ ದಿನಗಳಲ್ಲಿ ಉಪ್ಪು ನೀರು ಅಥವಾ ಒಗರು ನೀರನ್ನೇ ಬಳಸುವಂತಾಗಿದೆ. ಇಲ್ಲಿ ಸುಮಾರು 200 ಮನೆಗಳಿದ್ದು, 1,110 ಕ್ಕೂ ಮಿಕ್ಕಿ ಜನರಿದ್ದಾರೆ. ಸಾಮಾನ್ಯವಾಗಿ ಎಲ್ಲ ಕಡೆಗಳಲ್ಲಿ ಬೇಸಗೆಯಲ್ಲಿ ನೀರಿನ ಸಮಸ್ಯೆಯಿದ್ದರೆ, ಇಲ್ಲಿ ಮಳೆಗಾಲದಲ್ಲಿಯೇ ಈ ಸಮಸ್ಯೆ ಜಾಸ್ತಿ.

3 ಕಡೆಗಳಲ್ಲಿ ನೀರು ಸುತ್ತುವರಿದಿರುವುದರಿಂದ, ಸಮುದ್ರವು ಹತ್ತಿರವಿರುವುದರಿಂದ ಅನೇಕ ವರ್ಷಗಳಿಂದ ಇಲ್ಲಿನ ಜನ ನೀರಿನ ಸಮಸ್ಯೆಯಿಂದ ಹೈರಾಣಾಗಿದ್ದಾರೆ. ಹಿಂದೆ ಬಸ್ರೂರು ಟ್ಯಾಂಕ್‌ನಿಂದ ಇಲ್ಲಿಗೆ ನೀರು ಬರುತ್ತಿತ್ತು. ಗ್ರಾ.ಪಂ. ಮಾಜಿ ಸದಸ್ಯ ಹೇರಿಕುದ್ರು ಗಂಗಾಧರ ಶೆಟ್ಟಿ ಅವರ ನೇತೃತ್ವದಲ್ಲಿ ಹೊಳೆಯಲ್ಲಿ ಪೈಪ್‌ಲೈನ್‌ ಹಾಕಿ ತಾತ್ಕಾಲಿಕವಾಗಿ ನೀರು ಕೊಡಲಾಗುತ್ತಿತ್ತು.

ವಿಳಂಬ ಯಾಕೆ?

ಜಲಜೀವನ್‌ ಮಿಷನ್‌ನಡಿ 50 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಅದರಂತೆ ಪುರಸಭೆ ವ್ಯಾಪ್ತಿಯ ಚಿಕ್ಕನ್‌ಸಾಲ್‌ನಲ್ಲಿರುವ ಟ್ಯಾಂಕ್‌ನಿಂದ ಹೇರಿಕುದ್ರುವಿಗೆ ಸುಮಾರು 1 ಕಿ.ಮೀ. ದೂರದವರೆಗೆ ಪೈಪ್‌ಲೈನ್‌ ಮೂಲಕ ನೀರು ಪೂರೈಸುವ ಯೋಜನೆ ರೂಪಿಸಲಾಗಿದೆ. ಈಗ ಸೇತುವೆಯವರೆಗೆ ಪೈಪ್‌ಲೈನ್‌ ಆಗಿದೆ. ಅಲ್ಲಿಂದ ಮುಂದಕ್ಕೆ ಸೇತುವೆ ಮೇಲೆ ಹೆದ್ದಾರಿ ಪ್ರಾಧಿಕಾರದ ನಿರಕ್ಷೇಪಣ ಪತ್ರದ ಅಗತ್ಯವಿದ್ದು, ಅದಕ್ಕೆ ಈಗಾಗಲೇ ಪಂಚಾಯತ್‌ ರಾಜ್‌ ಇಲಾಖೆಯಿಂದ 2 ಲಕ್ಷ ರೂ. ರಾಯಧನ, 2.90 ಲಕ್ಷ ರೂ. ಬ್ಯಾಂಕ್‌ ಗ್ಯಾರಂಟಿ ಕಟ್ಟಿ 3-4 ತಿಂಗಳು ಕಳೆದಿವೆ. ಇನ್ನೂ ಪ್ರಾಧಿಕಾರದಿಂದ ಹಲವಾರು ದಾಖಲೆಗಳನ್ನು ಕೇಳುತ್ತಿರುವುದರಿಂದ ಈ ಪ್ರಕ್ರಿಯೆ ವಿಳಂಬವಾಗಿದೆ.

ಸೇತುವೆ ಮೇಲೆ ಹಾಕಲು ಮನವಿ

ಪ್ರಾಧಿಕಾರದ ಅನುಮತಿ ಸಿಗಲು ವಿಳಂಬ ಆಗುತ್ತಿರುವುದರಿಂದ, ಟೆಂಡರ್‌ ಗುತ್ತಿಗೆ ಅವಧಿ ಮುಗಿಯುತ್ತ ಬರುತ್ತಿರುವುದರಿಂದ ತಾತ್ಕಾಲಿಕವಾಗಿ ಸೇತುವೆ ಕೆಳಗಿನಿಂದ ಹಾಕುವ ಪ್ರಸ್ತಾವವನ್ನು ಪಂಚಾಯತ್‌ ಮುಂದಿಟ್ಟಿತ್ತು. ಆದರೆ ಈ ಬಗ್ಗೆ ಕರೆದ ವಿಶೇಷ ಸಭೆಯಲ್ಲಿ ಹೇರಿಕುದ್ರು ಜನರು, ಶಾಶ್ವತ ಪರಿಹಾರ ನೆಲೆಯಲ್ಲಿ ಸೇತುವೆ ಮೇಲಿನಿಂದಲೇ ಪೈಪ್‌ ಲೈನ್‌ ಹಾಕುವಂತೆ ಅಭಿಪ್ರಾಯ ವ್ಯಕ್ತವಾಯಿತು.

ಪರ – ವಿರೋಧ

ಇಷ್ಟು ವರ್ಷ ಹೊಳೆಯಲ್ಲಿ ಪೈಪ್‌ಲೈನ್‌ ಕೆಳಗಡೆಯಿಂದ ಹಾಕುತ್ತಿರುವುದರಿಂದ ಪೈಪ್‌ಗೆ ಮರಳುಗಾರಿಕೆ, ಮೀನುಗಾರಿಕೆ ದೋಣಿಗಳಿಂದ ಹಾನಿಯಾಗುತ್ತಿದ್ದು, ಈಗ ಮತ್ತೆ ಕೆಳಗಿಂದ ಪೈಪ್‌ ಲೈನ್‌ ಹಾಕಿದರೆ ಮತ್ತೆ ಸರಿಪಡಿಸಲು ಅದಕ್ಕೂ ಹೆಚ್ಚುವರಿ ಅನುದಾನ ಅಗತ್ಯವಿದೆ. ಅದಕ್ಕೆ ಶಾಶ್ವತ ಪರಿಹಾರವೆಂಬಂತೆ ಸೇತುವೆ ಮೇಲಿನಿಂದಲೇ ಪೈಪ್‌ ಲೈನ್‌ ಮಾಡಿ ಎನ್ನುವುದಾಗಿ ತಾ.ಪಂ. ಮಾಜಿ ಅಧ್ಯಕ್ಷ ಭಾಸ್ಕರ ಬಿಲ್ಲವ, ಗ್ರಾ.ಪಂ. ಮಾಜಿ ಸದಸ್ಯ ಗಂಗಾಧರ್‌ ಶೆಟ್ಟಿ, ಸಮಾಜ ಸೇವಕ ಅಭಿಜಿತ್‌ ಪೂಜಾರಿ ಹೇರಿಕುದ್ರು ಒತ್ತಾಯಿಸಿದ್ದಾರೆ. ಸೇತುವೆ ಮೇಲಿನಿಂದ ಪೈಪ್‌ಲೈನ್‌ ಮಾಡಲು ಸಂಸದರ ಮೂಲಕ ಅನೇಕ ಸಮಯಗಳಿಂದ ಪ್ರಯತ್ನಿಸುತ್ತಿದ್ದು, ಅನುಮತಿ ಪ್ರಕ್ರಿಯೆ ಕೊನೆಯ ಹಂತದಲ್ಲಿದೆ. ತಾತ್ಕಾಲಿಕವಾಗಿ ಸೇತುವೆ ಕೆಳಗಡೆಯಿಂದ ಹಾಕುವ ತೀರ್ಮಾನ ಮಾಡಲಾಗಿತ್ತು. ಆ ಬಳಿಕ ಮತ್ತೆ ಸರಿಪಡಿಸಬಹುದು ಎಂದು ನಿರ್ಧರಿಸಲಾಗಿತ್ತು ಎನ್ನುವುದಾಗಿ ಬಿಜೆಪಿ ಮುಖಂಡ ಸುನೀಲ್‌ ಶೆಟ್ಟಿ ಹೇರಿಕುದ್ರು ಸ್ಪಷ್ಟಪಡಿಸಿದ್ದಾರೆ.

ಸಚಿವ ಗಡ್ಕರಿಗೂ ಮನವಿ

ಹೇರಿಕುದ್ರು ಭಾಗದ ಜನರ ನೀರಿನ ಸಮಸ್ಯೆ ಕುರಿತಂತೆ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೂ ಮನವಿ ಸಲ್ಲಿಸಲಾಗಿದ್ದು, ಇದಕ್ಕೆ ಸ್ಪಂದಿಸಿದ ಅವರು, ನೀರಿನ ಸಮಸ್ಯೆ ಮೂಲ ಅಗತ್ಯವಾಗಿದ್ದು, ಶೀಘ್ರ ಪರಿಶೀಲಿಸಿ, ತೆಗೆದುಕೊಂಡ ಕ್ರಮದ ಬಗ್ಗೆ ಮಾಹಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ಸಚಿವರೇ ಸೂಚಿಸಿದರೂ ಇನ್ನೂ ಕಾಮಗಾರಿ ಮಾತ್ರ ಕೈಗೂಡಿಲ್ಲ.

2 ತಿಂಗಳ ಕಾಲಾವಕಾಶ: ಹೇರಿಕುದ್ರು ನೀರಿನ ಪೈಪ್‌ಲೈನ್‌ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಶೇಷ ಸಭೆ ನಡೆಸಿ, ಚರ್ಚಿಸಲಾಗಿದೆ. ಹೆದ್ದಾರಿ ಪ್ರಾಧಿಕಾರದ ಅನುಮತಿ ಬಗ್ಗೆಯೂ ಎಲ್ಲ ಪ್ರಯತ್ನಗಳು ಆಗುತ್ತಿದೆ. ಶಾಸಕರು, ಸಂಸದರ ಪ್ರಯತ್ನದಿಂದ ಶೀಘ್ರ ಆಗುವ ನಿರೀಕ್ಷೆಯಿದೆ. ಎಂಜಿನಿಯರ್‌ ಹಾಗೂ ಸಂಬಂಧಪಟ್ಟ ಅಧಿಕಾರಿ ವರ್ಗದವರಿಗೆ ನಾವು 2 ತಿಂಗಳ ಕಾಲಾವಕಾಶ ನೀಡಿದ್ದೇವೆ. ಅದರೊಳಗೆ ಈ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. – ಲಾರೆನ್ಸ್‌ ಡಿಸೋಜಾ, ಅಧ್ಯಕ್ಷರು, ಆನಗಳ್ಳಿ ಗ್ರಾ.ಪಂ.

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.