ಕುಂದಾಪುರ : ಬಸ್ ಚಲಾಯಿಸಿದ್ದಕ್ಕೆ ಚಾಲಕನಿಗೆ ಸಹೋದ್ಯೋಗಿಯಿಂದ ಜೀವ ಬೆದರಿಕೆ!
Team Udayavani, Apr 10, 2021, 1:37 PM IST
ಕುಂದಾಪುರ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕೆ ಎಸ್ ಆರ್ ಟಿ ಸಿ ಬಸ್ ನೌಕರರು ಮುಷ್ಕರ ಕೈಗೊಂಡಿದ್ದು, ಅದಾಗಿಯೂ ಕುಂದಾಪುರದಲ್ಲಿ ಚಾಲಕರೊಬ್ಬರು ಬಸ್ ಚಲಾಯಿಸಿದ್ದಕ್ಕೆ ಅವರನ್ನು ನಿಂದಿಸಿ, ಜೀವ ಬೆದರಿಕೆ ಹಾಕಿದ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ಮೂಲತಃ ಹೊನ್ನಾವರದ ಹಾಮಕ್ಕಿ ಕೂಳಿಮನೆ ನಿವಾಸಿ, ಕುಂದಾಪುರದ ಡಿಪೋದ ಚಾಲಕ ನಾಗರಾಜ ಎಂ. ನಾಯ್ಕ ಅವರನ್ನು ಕುಂದಾಪುರದ ಡಿಪೋದ ಚಾಲಕ ಸಹೋದ್ಯೋಗಿ ರವಿ ಎಂಬುವವರು ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ.
ನಾಗರಾಜ ಅವರು ಏ. 7 ರಂದು ರಾತ್ರಿ 8.15 ರ ಸುಮಾರಿಗೆ ಕುಂದಾಪುರದಿಂದ ಮೈಸೂರಿಗೆ ಹೋಗಲು ಬಸ್ಸನ್ನು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಫ್ಲಾಟ್ ಫಾರಂನಲ್ಲಿ ತಂದು ನಿಲ್ಲಿಸಿದಾಗ ಸಹೋದ್ಯೋಗಿ ರವಿ ಕರೆ ಮಾಡಿ, ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿರುವುದಾಗಿ ದೂರು ನೀಡಿದ್ದಾರೆ. ಈ ಸಂಬಂಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ