ಮಂದಗತಿಯಲ್ಲಿ ಎಲ್ಲೂರು ಸಬ್‌ ಸ್ಟೇಷನ್‌ ಕಾಮಗಾರಿ

ಅರಣ್ಯ, ಮೆಸ್ಕಾಂ ಇಲಾಖೆಗಳ ಸೀಮಾ ರೇಖೆ ಗೊಂದಲ ನಿವಾರಣೆಗೆ ಜಂಟಿ ಸರ್ವೆ

Team Udayavani, Sep 16, 2020, 7:31 AM IST

eLLUR

ಹಾಲ್ಕಲ್‌ ಸಮೀಪದ ಎಲ್ಲೂರು ಸಬ್‌ ಸ್ಟೇಷನ್‌ ನಿರ್ಮಾಣ ಕಾಮಗಾರಿ.

ಕೊಲ್ಲೂರು: ಬಹಳಷ್ಟು ವರ್ಷಗಳಿಂದ ಲೋವೋಲ್ಟೆàಜ್‌ ಬಾಧೆಯಿಂದ ಬಳಲುತ್ತಿರುವ ಕೊಲ್ಲೂರು, ಜಡ್ಕಲ್‌, ಮುದೂರು, ಹಾಲ್ಕಲ್‌, ಇಡೂರು ಪರಿಸರದ ನಿವಾಸಿಗಳಿಗೆ ಎಲ್ಲೂರು ಸಬ್‌ ಸ್ಟೇಷನ್‌ ನಿರ್ಮಾಣ ಕಾಮಗಾರಿ ಇನ್ನೂ ಪೂರ್ಣಗೊಳ್ಳದಿರುವುದು ನಿರಾಸೆ ಉಂಟುಮಾಡಿದೆ.

ಕಳೆದ 5 ವರ್ಷಗಳಿಂದ ಎಲ್ಲೂರು ಸಬ್‌ ಸ್ಟೇಷನ್‌ ನಿರ್ಮಾಣ ಕಾಮಗಾರಿ ಆರಂಭಗೊಂಡಿದ್ದರೂ ಈ ವರೆಗೆ ಅದು ಪೂರ್ತಿಯಾಗಿಲ್ಲ. ಅರಣ್ಯ ಹಾಗೂ ಮೆಸ್ಕಾಂ ಇಲಾಖೆಗಳ ನಡುವಿನ ತಾಂತ್ರಿಕ ಸಮಸ್ಯೆ ನಿಭಾಯಿಸುವಲ್ಲಿ 2 ಇಲಾಖೆಗಳು ಒಡಂಬಡಿಕೆಗೆ ಬಾರದಿರುವುದು ಇನ್ನಷ್ಟು ಜಟಿಲವಾಗಿ ಉಳಿದಿದೆ.

ಅರಣ್ಯ ಇಲಾಖೆಯ ಅನುಮತಿಯ ನಿರೀಕ್ಷೆ
ಬೈಂದೂರು ಮೆಸ್ಕಾಂ ಇಲಾಖೆಯ ಅ ಧಿಕಾರಿಗಳು 3 ಬಾರಿ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿ ವಿದ್ಯುತ್‌ ಕಂಬಗಳ ಜೋಡಣೆ ಹಾಗೂ ವಿದ್ಯುತ್‌ ತಂತಿಗಳ ಅಳವಡಿಕೆಗೆ ಅನುಮತಿ ನೀಡುವಂತೆ ವಿನಂತಿಸಿದ್ದರು. ಆದರೆ ಅರಣ್ಯ ಇಲಾಖೆ ಕೇಳಿರುವ ಜಿಪಿಎಸ್‌ ಮ್ಯಾಪ್‌ ಸ್ಟ್ರಕ್ಚರ್‌ ಹಾಗೂ ಇನ್ನಿತರ ವಿಚಾರಗಳಿಗೆ ಅನು ಮತಿ ದೊರೆಯದಿರುವುದು ಮತ್ತಷ್ಟು ವಿಳಂಬಕ್ಕೆ ಕಾರಣವಾಗಿದೆ.

ಡಿ.ಎಫ್‌.ಒ. ಹಾಗೂ ಮೆಸ್ಕಾಂ ಅ ಧಿಕಾರಿಗಳು ಇದೀಗ ಜಂಟಿ ಸರ್ವೆ ಮಾಡಿದ್ದು ಅಭಯಾರಣ್ಯ ಕಡಿಮೆ ಇರುವ ಕಂಬದಕೋಣೆಯ ಮಾರ್ಗವಾಗಿ ಕಾಲ್ತೋಡು ಮೂಲಕ ವಿದ್ಯುತ್‌ ತಂತಿ ಸಂಪರ್ಕ ವ್ಯವಸ್ಥೆಗೆ ಅನುಮತಿ ದೊರಕಿದ್ದು ಕಾಮಗಾರಿ ಆರಂಭಗೊಂಡಿದೆ.

ಅರಣ್ಯ ಇಲಾಖೆಯ 16 ಹೆಕ್ಟೇರ್‌ ಭೂಮಿ
ಬೈಂದೂರು ಹಾಗೂ ಕಂಬದಕೋಣೆ ಮಾರ್ಗವಾಗಿ ಕೊಲ್ಲೂರಿಗೆ ಸಾಗುವ ಮುಖ್ಯ ರಸ್ತೆಯ ಬಹುತೇಕ ಭೂಮಿ ಅರಣ್ಯ ಇಲಾಖೆಯ ಸ್ವಾಮ್ಯದಲ್ಲಿದೆ. ಅರಣ್ಯ ಇಲಾಖೆಯ ಕಟ್ಟು ನಿಟ್ಟಾದ ಕಾನೂನು ಮೆಸ್ಕಾಂ ಇಲಾಖೆಗೆ ನುಂಗಲಾರದ ತುತ್ತಾಗಿದೆ. ಯೋಜನೆ ಅನುಷ್ಠಾನಗೊಳಿಸಲು ತಾಂತ್ರಿಕ ಕಾರಣಗಳು ತಡೆಯಾಗಿದ್ದರೂ ಕಂಬದ ಕೋಣೆಯ ಮಾರ್ಗವಾಗಿ ಎಲ್ಲೂರು ಸಬ್‌ ಸ್ಟೇಷನ್‌ ಕಾಮಗಾರಿ ಪೂರ್ಣಗೊಳಿಸಿ ಕಾರ್ಯಾರಂಭಗೊಳಿಸಲು ಇಲಾಖೆಯ ಪ್ರಯತ್ನ ನಡೆಯುತ್ತಿದೆ.

10 ಕೋ.ರೂ. ವೆಚ್ಚದ ಯೋಜನೆ
2017ರಲ್ಲಿ ಆರಂಭಗೊಂಡ ಎಲ್ಲೂರು ಸಬ್‌ ಸ್ಟೇಷನ್‌ ನಿರ್ಮಾಣ ಕಾಮಗಾರಿ ಆಮೆನಡಿಗೆ ಯಲ್ಲಿ ಸಾಗುತ್ತಿರುವುದು ಈ ಭಾಗದ ನಿವಾಸಿಗಳಿಗೆ ನಿರಾಶೆ ಉಂಟುಮಾಡಿದೆ. ಗುತ್ತಿಗೆದಾರರು ಕಾಮಗಾರಿಯನ್ನು ಪೂರ್ಣಗೊಳಿಸಲು ವಿಳಂಬ ನೀತಿ ಅನುಸರಿಸುತ್ತಿದ್ದಾರೆಯೇ ಎಂಬ ಶಂಕೆ ಮೂಡಿಬರುತ್ತಿದೆ. ಹಾಲ್ಕಲ್‌ನಲ್ಲಿ ಸಬ್‌ ಸ್ಟೇಷನ್‌ ಆರಂಭಗೊಂಡಲ್ಲಿ 3 ಫೀಡರ್‌ ಗಳ ಬಳಕೆ ಮೂಲಕ ಕೊಲ್ಲೂರು, ಹಾಲ್ಕಲ್‌, ಜಡ್ಕಲ್‌, ಮುದೂರು, ಮೈಕಳ, ತಗ್ಗರ್ಸೆ ಹಾಗೂ ಎಲ್ಲೂರು ಭಾಗದ ಗ್ರಾಮಸ್ಥರಿಗೆ ಪೂರ್ಣ ಪ್ರಮಾಣದ ವಿದ್ಯುತ್‌ ಒದಗಿಸಿದಂತಾಗುವುದು.

ಅಧಿಕಾರಿಗಳಿಗೆ ಸೂಚನೆ
ಎಲ್ಲೂರು ಸಬ್‌ ಸ್ಟೇಷನ್‌ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ನಡೆಸಿ ಪೂರ್ಣಗೊಳಿಸಿ ಕೊಲ್ಲೂರು, ಗೋಳಿಹೊಳೆ, ಜಡ್ಕಲ್‌, ಮುದೂರು ಮುಂತಾದ ಭಾಗದ ನಿವಾಸಿಗಳಿಗೆ ಹಗಲಿರುಳು ಪೂರ್ಣ ಪ್ರಮಾಣದ ವಿದ್ಯುತ್‌ ಸರಬರಾಜು ಒದಗಿಸುವಂತೆ ಅಧಿ ಕಾರಿಗಳಿಗೆ ಸೂಚನೆ ನೀಡಿದ್ದೇನೆ, ಅನುಷ್ಠಾನಗೊಳಿಸಲು ವಿಳಂಬವಾದಲ್ಲಿ ಸರಕಾರದ ಗಮನ ಸೆಳೆಯಲಾಗುವುದು.
-ಬಿ.ಎಂ. ಸುಕುಮಾರ್‌ ಶೆಟ್ಟಿ, ಶಾಸಕರು ಬೈಂದೂರು

8 ತಿಂಗಳಲ್ಲಿ ಕಾರ್ಯಾರಂಭ
ಆರಣ್ಯ ಇಲಾಖೆಗೆ 3 ಬಾರಿ ಮನವಿ ಸಲ್ಲಿಸಿ ಅಗತ್ಯದ ದಾಖಲೆಗಳನ್ನು ನೀಡಲಾಗಿದೆ. ಇದೀಗ ಕಂಬದಕೋಣೆ ಮಾರ್ಗವಾಗಿ ಕಾಲ್ತೋಡು ಮೂಲಕ ರಾಜ್ಯ ಹೆದ್ದಾರಿಯಲ್ಲಿ ಸಂಪರ್ಕ ತಂತಿಗಳ ಜೋಡಣೆ ಕಾಮಗಾರಿ ನಡೆಯುತ್ತಿದೆ. ಮುಂದಿನ 8 ತಿಂಗಳಲ್ಲಿ ಎಲ್ಲೂರು ಸಬ್‌ ಸ್ಟೇಷನ್‌ ಕಾರ್ಯಾರಂಭಗೊಳ್ಳುವುದು.
-ರಾಕೇಶ್‌, ಕಾರ್ಯನಿರ್ವಾಹಕ, ಎಂಜಿನಿಯರ್‌ ಮೆಸ್ಕಾಂ

ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.