ಪ್ರಧಾನಿ ಕಚೇರಿಗೆ ದೂರಿತ್ತರೂ ಅಭಿವೃದ್ಧಿಯಾಗದ ರಸ್ತೆ

ಚಿಕಾನ್‌ - ಸಾಲಿಮಕ್ಕಿ ಮಣ್ಣಿನ ರಸ್ತೆ; ವೈಶಾಖದಲ್ಲಿ ರೋಡು; ಮಳೆಗಾಲದಲ್ಲಿ ತೋಡು!

Team Udayavani, Jul 19, 2022, 12:20 PM IST

6

ಬಿಜೂರು: ಇದೊಂದು ಗ್ರಾಮೀಣ ಭಾಗದ ಸಾಮಾನ್ಯ. ಈ ರಸ್ತೆಯ ಸಮಸ್ಯೆ ಕುರಿತು ಗ್ರಾ.ಪಂ. ಮಾತ್ರವಲ್ಲ, ಹೊಸದಿಲ್ಲಿಯಲ್ಲಿರುವ ಪ್ರಧಾನಿ ಕಚೇರಿವರೆಗೂ ದೂರು ಹೋಗಿದೆ. ಆದರೆ ರಸ್ತೆಯ ಅಭಿವೃದ್ಧಿ ಮಾತ್ರ ಮರೀಚಿಕೆಯೇ ಆಗಿದೆ. ಆಳುವ ವರ್ಗ ರಸ್ತೆ ಸರಿಪಡಿಸುವ ಬದಲು ಏನೇನೋ ಸಮಜಾಯಿಷಿ ನೀಡಿ, ಜಾರಿಕೊಂಡರೆ ಇದನ್ನು ಆಶ್ರಯಿಸಿರುವ ಜನ ಮಾತ್ರ ನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ.

ಇದು ಬಿಜೂರು ಗ್ರಾ.ಪಂ. ವ್ಯಾಪ್ತಿಯ ಕಂಚಿಕಾನ್‌ ನಾರಂಬಳ್ಳಿ ಬಳಿಯಿಂದ ಸಾಲಿಮಕ್ಕಿ ಕಡೆಗೆ ಸಂಚರಿಸುವ ಮಣ್ಣಿನ ರಸ್ತೆಯ ದುಃಸ್ಥಿತಿಯ ಕಥೆ. ಕಂಚಿಕಾನ್‌ ಬಳಿಯಿಂದ ಸಾಲಿಮಕ್ಕಿಯವರೆಗೆ 2.5 ಕಿ.ಮೀ. ದೂರವಿದ್ದು, ಈ ಪೈಕಿ ಆರಂಭದ 250 ಮೀ. ಈ ಹಿಂದೆ ಕಾಂಕ್ರೀಟ್‌ ಆಗಿದ್ದು ಬಿಟ್ಟರೆ ಉಳಿದಂತೆ ಸಂಪೂರ್ಣ ರಸ್ತೆ ಮಣ್ಣಿನ ರಸ್ತೆಯಾಗಿದೆ. ಈ ರಸ್ತೆಯಲ್ಲಿ ಸುಮಾರು 500 ಮನೆಗಳಿದ್ದು, 250 ಮನೆಗಳಂತೂ ಇದೇ ರಸ್ತೆಯನ್ನು ಅವಲಂಬಿಸಿದೆ.

ತೋಡಿನಂತಾಗುವ ರಸ್ತೆ

ಈ ರಸ್ತೆಯು ಬೇಸಗೆಯಲ್ಲಿ ರೋಡಿನಂತಿದ್ದರೆ, ಮಳೆಗಾಲದಲ್ಲಿ ಮಾತ್ರ ಚರಂಡಿಯು ಇಲ್ಲದಿರುವ ಕಾರಣ ಮಳೆ ನೀರು ರಸ್ತೆಯಲ್ಲಿ ಹರಿಯುತ್ತಿರುವುದರಿಂದ ಅಕ್ಷರಶಃ ತೋಡಿನಂತಾಗುತ್ತದೆ. ಇನ್ನು ಅಲ್ಲಲ್ಲಿ ರಸ್ತೆಯುದ್ದಕ್ಕೂ ಕೆಸರುಮಯಗೊಂಡು, ಕೆಸರು ಗದ್ದೆಯಂತಾಗುತ್ತದೆ. ವಾಹನ ಸಂಚಾರ ಬಿಡಿ, ಕನಿಷ್ಠ ನಡೆದುಕೊಂಡು ಹೋಗಲು ಜನ, ಶಾಲೆಗೆ ಹೋಗುವ ಮಕ್ಕಳು ತುಂಬಾ ಕಷ್ಟಪಡುವಂತಾಗಿದೆ.

2.5 ಕಿ.ಮೀ.ಗೆ 12-13 ಕಿ.ಮೀ. ಸಂಚಾರ

ನಾರಂಬಳ್ಳಿ, ಕೊಡಿಕೇರಿ, ಕೆಲ್ಸಿಮನೆ, ಸಾಲಿಮಕ್ಕಿ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದೆ. ಇವರೆಲ್ಲ ಪಡಿತರ ತರಲು ಕಂಚಿಕಾನ್‌ಗೆ ಬರಬೇಕು. ಅಂದರೆ ಈ ಕಂಚಿಕಾನ್‌ – ಸಾಲಿಮಕ್ಕಿ ಮಾರ್ಗದಲ್ಲಿ 2.5 ಕಿ.ಮೀ. ದೂರವಿದೆ. ಆದರೆ ಹದಗೆಟ್ಟ ರಸ್ತೆಯಿಂದಾಗಿ ಸಾಲಿಮಕ್ಕಿ – ಉಪ್ಪುಂದ – ಕಂಚಿಕಾನ್‌ ಆಗಿ ಬರೋಬ್ಬರಿ 12-13 ಕಿ.ಮೀ. ದೂರದ ಬರಬೇಕಾದ ಅನಿವಾರ್ಯತೆ ಇಲ್ಲಿನ ಜನರದ್ದಾಗಿದೆ.

ಸ್ಪಂದನೆಯೇ ಇಲ್ಲ: ರಸ್ತೆ ಮೇಲೆ ನೀರು ನಿಂತು ಊರಿಗೆ ಯಾವುದೇ ವಾಹನಗಳು ಬರುತ್ತಿಲ್ಲ, ವಯೋವೃದ್ಧ, ಅನಾರೋಗ್ಯ ಪೀಡಿತರು, ಗರ್ಭಿಣಿಯರಿಗೆ ಆಸ್ಪತ್ರೆಗೆ ಹೋಗಲು ತುಂಬಾ ಸಮಸ್ಯೆಯಾಗುತ್ತಿದೆ. ಕಂಚಿಕಾನ್‌ ಶಾಲೆಗೆ ಹೋಗುವ ಅನೇಕ ಮಂದಿ ಮಕ್ಕಳಿದ್ದು, ಕೆಸರುಮಯ ರಸ್ತೆಯಲ್ಲಿ ನಡೆದುಕೊಂಡೇ ಹೋಗುವಂತಾಗಿದೆ. ರಿಕ್ಷಾದವರು ಬರಲು ಹಿಂದೇಟು ಹಾಕುತ್ತಿದ್ದಾರೆ. ಗ್ಯಾಸ್‌ ಸಿಲಿಂಡರ್‌ ವಾಹನ ಸಹ ಬಾರದೆ ಇರುವುದು ದೊಡ್ಡ ಸಮಸ್ಯೆಯಾಗಿದೆ. ಈ ರಸ್ತೆಯ ಸಮಸ್ಯೆ ಬಗ್ಗೆ ಅನೇಕ ಬಾರಿ ಗ್ರಾ.ಪಂ., ಜಿ.ಪಂ.ಗೆ ಮನವಿ ಮಾಡಿದರೂ ನಿಮ್ಮ ರಸ್ತೆ ನೋಂದಣಿಯೇ ಆಗಿಲ್ಲ, ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ, ಅನುದಾನ ಇಲ್ಲ ಎನ್ನುವ ಉಡಾಫೆ ಉತ್ತರ ನೀಡಿರುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ.

ಪ್ರಧಾನಿಗೆ ದೂರು

ಈ ರಸ್ತೆ ಅವ್ಯವಸ್ಥೆಯ ಬಗ್ಗೆ ಸ್ಥಳೀಯಾಡಳಿತ ಸ್ಪಂದಿಸದೇ, ನಿರ್ಲಕ್ಷ್ಯ ವಹಿಸಿರುವುದರ ವಿರುದ್ಧ ಬೇಸತ್ತು, ಕಳೆದ ವರ್ಷದ ಆ.21ರಂದು ಇಲ್ಲಿನ ಸ್ಥಳೀಯರಾದ ಸುಬ್ರಹ್ಮಣ್ಯ ಕೊಡಿಕೇರಿ ಅವರು ಪ್ರಧಾನಿ ಕಚೇರಿಗೆ ಇಮೇಲ್‌ ಮೂಲಕ ದೂರು ಸಲ್ಲಿಸಿದ್ದರು. ಅಲ್ಲಿಂದ ಉಡುಪಿ ಜಿ.ಪಂ.ಗೆ ಪರಿಶೀಲಿಸುವಂತೆ ಸೂಚನೆ ಬಂದಿತ್ತು. ಅವರು ಗ್ರಾ.ಪಂ.ಗೆ ಕೇಳಿದ್ದು, ಪಂಚಾಯತ್‌ನಿಂದ ಈ ರಸ್ತೆ ಇನ್ನೂ ನೋಂದಣಿ ಆಗಿಲ್ಲ ಎನ್ನುವ ಉತ್ತರ ಕಳುಹಿಸಿ, ಜಾರಿಕೊಂಡಿದ್ದಾರೆ. ನಿತ್ಯ ನೂರಾರು ಮಂದಿ ಓಡಾಡುವ ರಸ್ತೆಯ ಬಗ್ಗೆ ಪ್ರಧಾನಿ ಕಚೇರಿವರೆಗೆ ದೂರು ನೀಡಿದರೂ ಸ್ಥಳೀಯಾಡಳಿತ ಮಾತ್ರ ಇದನ್ನು ಗಂಭೀರವಾಗಿ ಪರಿಗಣಿಸದೆ ಮೀನಾ ಮೇಷ ಎಣಿಸುತ್ತಿರುವುದು ಮಾತ್ರ ಸೋಜಿಗ.

ಮಳೆಯಿಂದಾಗಿ ವಿಳಂಬ: ಉದ್ಯೋಗ ಖಾತರಿ ಯೋಜನೆಯಲ್ಲಿ 50 ಲಕ್ಷ ರೂ. ಕಾಮಗಾರಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. 4 ಲಕ್ಷ ರೂ. ಅನುದಾನದಲ್ಲಿ ಸುವರ್ಣ ಗ್ರಾಮ ಯೋಜನೆಯಡಿ ಕಾಂಕ್ರೀಟ್‌ ರಸ್ತೆ ಹಾಗೂ ಇನ್ನಷ್ಟು ಹೆಚ್ಚಿನ ಅನುದಾನಕ್ಕೆ ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ಮಳೆಯಾಗಿದ್ದರಿಂದ ಕಾಮಗಾರಿ ಆರಂಭ ವಿಳಂಬಗೊಂಡಿದೆ. – ರಮೇಶ್‌ ವಿ. ದೇವಾಡಿಗ, ಬಿಜೂರು ಗ್ರಾ.ಪಂ.ಅಧ್ಯಕ್ಷರು

ಯಾರದೂ ವಿರೋಧವಿಲ್ಲ: ಇದು 40 ವರ್ಷಗಳಿಗೂ ಹೆಚ್ಚು ಕಾಲದಿಂದ ಇರುವ ರಸ್ತೆಯಾಗಿದ್ದು, ತುಂಬಾ ಹಿಂದೆಯೇ ಪಂ. ರಸ್ತೆಯನ್ನಾಗಿ ಮಾಡಿ ಎಂದು ಗ್ರಾಮಸ್ಥರು ಮನವಿ ಕೊಟ್ಟಿದ್ದರು. ದಾನ ಪತ್ರಗಳನ್ನು ಸಹ ನೀಡಿರುವ ಮಾಹಿತಿ ಇದೆ. ಆದರೆ ಆ ದಾಖಲೆ ಈಗ ಪಂ. ಬಳಿ ಇಲ್ಲ. ಆದರೆ ಈಗಲೂ ಆಸುಪಾಸಿನ ಜಾಗದವರು ಯಾರದೂ ವಿರೋಧವಿಲ್ಲ. ಎಲ್ಲರಿಗೂ ಈ ರಸ್ತೆ ಅಗತ್ಯವಿರುವುದರಿಂದ ಆದಷ್ಟು ಶೀಘ್ರ ಅಭಿವೃದ್ಧಿಪಡಿಸಲಿ. ಈಗ ತುರ್ತಾಗಿ ಸಂಚಾರಕ್ಕೆ ಅನುಕೂಲವಾಗುವಂತೆ ಮಾಡಲಿ. – ನರಸಿಂಹ ದೇವಾಡಿಗ, ಸ್ಥಳೀಯರು

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.