ಬಿಜೆಪಿ ಗೆದ್ದಾಗೆಲ್ಲ ಬೈಂದೂರಿನ ಅಭಿವೃದ್ಧಿ ಹತ್ತು ಹೆಜ್ಜೆ ಮುಂದೆ : ಗುರುರಾಜ್‌ ಗಂಟಿಹೊಳೆ

ಕ್ಷೇತ್ರದಾದ್ಯಂತ ಬಿಜೆಪಿಯಿಂದ ಬೃಹತ್‌ ರೋಡ್‌ ಶೋ

Team Udayavani, May 7, 2023, 2:43 PM IST

1-aaa

ಕುಂದಾಪುರ: ಬೈಂದೂರು ಕ್ಷೇತ್ರದಲ್ಲಿ ಯಾವಾಗೆಲ್ಲ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೋ ಆವಾಗೆಲ್ಲ ಕ್ಷೇತ್ರದ ಅಭಿವೃದ್ಧಿ ಹತ್ತು ಹೆಜ್ಜೆ ಮುಂದೆ ಹೋಗಿದೆ. ಹಿಂದಿನ ಶಾಸಕರ ಅವಧಿಯಲ್ಲಿಯೂ 3,500 ಕೋ.ರೂ. ಅನುದಾನ ಹರಿದು ಬಂದಿದ್ದು, ಹಳ್ಳಿ- ಹಳ್ಳಿಗಳ ರಸ್ತೆ, ಚರಂಡಿ, ಕೆರೆ, ಸೇತುವೆ, ನೀರಾವರಿ ಸೌಲಭ್ಯಗಳ ಅಭಿವೃದ್ಧಿಗೆ ವರದಾನವಾಗಿದೆ. ಬಿಜೆಪಿ ಅಂದರೆ ಅಭಿವೃದ್ಧಿ. ಅಭಿವೃದ್ಧಿಯ ಪರ್ವವನ್ನೇ ತಂದದ್ದು ಬಿಜೆಪಿ. ಮುಂದೆಯೂ ಸಹಿತ ಅಭಿವೃದ್ಧಿಯೂ ಮುಂದುವರಿಯಲಿದೆ. ಅದಕ್ಕಾಗಿ ನನಗೊಂದು ಅವಕಾಶ ಕೊಡಿ ಎಂದು ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಮನವಿ ಮಾಡಿಕೊಂಡರು.

ಬೈಂದೂರು ಕ್ಷೇತ್ರದ ವಿವಿಧೆಡೆಗಳಲ್ಲಿ ಅವರು ಶುಕ್ರವಾರ ಹಾಗೂ ಗುರುವಾರ ನಡೆದ ಬೃಹತ್‌ ರೋಡ್‌ ಶೋಗಳಲ್ಲಿ ಪಾಲ್ಗೊಂಡು, ಮಾತನಾಡಿದರು.

ಉದ್ಯೋಗ- ಉದ್ಯಮ ಆದ್ಯತೆ
ನನ್ನ ಮೂಲಕ ಬೈಂದೂರಿನ ಅಭಿವೃದ್ಧಿ ಇನ್ನೊಂದು ಮಗ್ಗುಲಿಗೆ ಸಾಗಲಿದೆ. ಬೈಂದೂರಿನ ಜನರ ಆಶೀರ್ವಾದ ಮಾಡುವ ನಿರೀಕ್ಷೆಯಿದೆ. ರಸ್ತೆ, ನೆಟÌರ್ಕ್‌ನಂತಹ ಮೂಲಭೂತ ಸೌಕರ್ಯಗಳ ಸಮಸ್ಯೆಗಳು ಕೊನೆಗೊಳ್ಳಬೇಕು ಎನ್ನುವುದೇ ನನ್ನ ಪ್ರಥಮ ಆದ್ಯತೆ. ಅದಲ್ಲದೆ ಶಿಕ್ಷಣ ಪಡೆದು ದೂರ-ದೂರದ ಊರುಗಳಲ್ಲಿ ಉದ್ಯೋಗಕ್ಕೆ ತೆರಳದಂತೆ ಇಲ್ಲಿಯೇ ಉದ್ಯೋಗ ಸೃಷ್ಟಿ, ಉದ್ಯಮ ಆರಂಭಕ್ಕೆ ಪೂರಕ ವಾತಾವರಣ ನಿರ್ಮಿಸಿ ಕೊಡಲು ಪ್ರಯತ್ನ ಪಡುವೆ ಎಂದವರು ಭರವಸೆ ನೀಡಿದರು.

ಬೈಂದೂರಿನಾದ್ಯಂತ ರೋಡ್‌ ಶೋ
ಬಿಜೆಪಿ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆ ಪರ ಬೈಂದೂರು ಕ್ಷೇತ್ರದಾದ್ಯಂತ ಕಳೆದೆರಡು ದಿನಗಳಿಂದ ಬೃಹತ್‌ ರೋಡ್‌ ಶೋಗಳು ನಡೆಯಿತು. ಈ ರೋಡ್‌ ಶೋಗೆ ಬಹುತೇಕ ಎಲ್ಲ ಕಡೆಗಳಿಂದಲೂ ಜನರಿಂದ, ಪಕ್ಷದ ಕಾರ್ಯಕರ್ತರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಉಪ್ಪಿನಕುದ್ರು, ತಲ್ಲೂರು, ಹಟ್ಟಿಯಂಗಡಿ, ಗುಲ್ವಾಡಿ, ನೇರಳಕಟ್ಟೆ ಪೇಟೆ, ನೆಂಪು, ಇಡೂರು, ಚಿತ್ತೂರು, ಆಲೂರು ಕ್ರಾಸ್‌, ನೂಜಾಡಿ ಕ್ರಾಸ್‌, ಬಗ್ವಾಡಿ ಕ್ರಾಸ್‌, ಕುಂದಬಾರಂದಾಡಿ, ಹಕ್ಲಾಡಿ, ಸೇನಾಪುರ, ಗುಡ್ಡೆಯಂಗಡಿ, ಪಡುಕೋಣೆ, ಮರವಂತೆ, ಶಿರೂರು, ಪಡುವರಿ, ಬೈಂದೂರು, ಯಡ್ತರೆ, ಗೋಳಿಹೊಳೆ, ಯಳಜಿತ್‌, ಅರೆಶಿರೂರು, ಕೊಲ್ಲೂರು, ಜಡ್ಕಲ್‌, ಸೆಳ್ಕೊàಡು, ಹಳ್ಳಿಹೊಳೆ, ಕಮಲಶಿಲೆ, ಆಜ್ರಿ, ಮೂಡುಬಗೆ, ಅಂಪಾರು, ಶಂಕರನಾರಾಯಣ ಮತ್ತಿತರ ಕಡೆಗಳಲ್ಲಿ ರೋಡ್‌ ಶೋ ನಡೆಯಿತು.

ನಟರಾದ ಪ್ರಮೋದ್‌ ಶೆಟ್ಟಿ, ಶೈನ್‌ ಶೆಟ್ಟಿ, ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ, ಬೈಂದೂರು ಬಿಜೆಪಿ ಉಸ್ತುವಾರಿ ಬ್ರಿಜೇಶ್‌ ಚೌಟ, ಪ್ರಮುಖರಾದ ಸುರೇಶ್‌ ಶೆಟ್ಟಿ, ಆನಂದ ಖಾರ್ವಿ, ರೋಹಿತ್‌ ಕುಮಾರ್‌ ಶೆಟ್ಟಿ, ಗೋವಿಂದ ಬಾಬು ಪೂಜಾರಿ, ಸದಾನಂದ ಉಪ್ಪಿನಕುದ್ರು, ಕರಣ್‌ ಪೂಜಾರಿ, ಮತ್ತಿತರರು ಪಾಲ್ಗೊಂಡಿದ್ದರು.

ಅಭಿವೃದ್ಧಿಯೇ ಗಂಟಿಹೊಳೆ ಗೆಲುವಿಗೆ ಶ್ರೀ ರಕ್ಷೆ

ಬೈಂದೂರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಮಾಡಿರುವ ಅಭೂತಪೂರ್ವ ಅಭಿವೃದ್ಧಿ ಕಾರ್ಯಗಳೇ ಬಿಜೆಪಿ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆ ಗೆಲುವಿಗೆ ಶ್ರೀ ರಕ್ಷೆಯಾಗಲಿದೆ. ಕ್ಷೇತ್ರದಾದ್ಯಂತ ಗುರುರಾಜ್‌ ಹಾಗೂ ಬಿಜೆಪಿಗೆ ಜನರು ನೀಡುತ್ತಿರುವ ಬೆಂಬಲವು ಖಂಡಿತ ಗೆಲುವಿಗೆ ಸಹಕಾರಿಯಾಗಲಿದೆ. ಅಭಿವೃದ್ಧಿ ಕಾರ್ಯ, ಹಿಂದುತ್ವ, ಯುವ ಚಿಂತನೆ, ಶೈಕ್ಷಣಿಕ, ಪ್ರವಾಸೋದ್ಯಮ, ಮೀನುಗಾರಿಕೆ, ಉದ್ಯೋಗ ಸೃಷ್ಟಿ, ಕೈಗಾರಿಕೆಗಳಿಗೆ ಉತ್ತೇಜನದಂತಹ ದೂರದೃಷ್ಟಿ ಚಿಂತನೆ ಅವರಲ್ಲಿದೆ.
– ಕೆ. ಲಕ್ಷ್ಮಿನಾರಾಯಣ, ಬೈಂದೂರಿನ ಮಾಜಿ ಶಾಸಕರು

ಹಳ್ಳಿ-ಹಳ್ಳಿಗಳಲ್ಲಿ ಸುತ್ತಾಡಿದಾಗ ಜನರಿಂದ ಅಪಾರ ಪ್ರೀತಿ ವ್ಯಕ್ತವಾಗುತ್ತಿದ್ದು, ಅದನ್ನು ಇಟ್ಟುಕೊಂಡು ಋಣವನ್ನು ತೀರಿಸುವ ಸೇವೆ ಮಾಡುವೆ. ಸುಕುಮಾರ್‌ ಶೆಟ್ರಾ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಭರವಸೆಗಳ ಪೈಕಿ ಶೇ. 90 ರಷ್ಟನ್ನು ಈಡೇರಿಸಿದ್ದಾರೆ. ನಮಗೆ ರಸ್ತೆ ಬಂದಿದ್ದು, ಬಿ.ವೈ. ರಾಘವೇಂದ್ರ ಹಾಗೂ ಸುಕುಮಾರ್‌ ಶೆಟ್ಟರಿಂದಾಗಿ ಅನ್ನುವ ಮಾತುಗಳು ಹಳ್ಳಿ-ಹಳ್ಳಿಗಳಲ್ಲಿ ಕೇಳಿ ಬರುತ್ತಿದೆ. ಇನ್ನುಳಿದ ಶೇ. 10 ರಷ್ಟು ಬಾಕಿಯಿದ್ದು, ಅದನ್ನು ಪೂರೈಸುವ ಜತೆಗೆ, ಇನ್ನಷ್ಟು ಅಭಿವೃದ್ದಿಯ ಕಲ್ಪನೆ ಸಾಕಾರಗೊಳ್ಳಲಿದೆ.
– ಗುರುರಾಜ್‌ ಗಂಟಿಹೊಳೆ, ಬಿಜೆಪಿ ಅಭ್ಯರ್ಥಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.