ಪ್ರತಿ ಬುಧವಾರ ಇನ್‌ಸ್ಪೆಕ್ಷನ್‌ ಡೇ: ಎ. 7ರಿಂದಲೇ ಜಾರಿ


Team Udayavani, Apr 2, 2021, 3:20 AM IST

ಪ್ರತಿ ಬುಧವಾರ ಇನ್‌ಸ್ಪೆಕ್ಷನ್‌ ಡೇ: ಎ. 7ರಿಂದಲೇ ಜಾರಿ

ಸಾಂದರ್ಭಿಕ ಚಿತ್ರ

ಉಡುಪಿ:  ರಾಜ್ಯ ಆರೋಗ್ಯ ಇಲಾಖೆಯ ಕಾರ್ಯಕ್ಷಮತೆಯನ್ನು ಮತ್ತಷ್ಟು ಬಲವರ್ಧಿಸುವ ಉದ್ದೇಶದಿಂದ ಇಲಾಖೆಯ ಅಧಿಕಾರಿಗಳಿಗೆ ಪ್ರತೀ ಬುಧವಾರ ಆರೋಗ್ಯ ಕೇಂದ್ರಗಳ ಇನ್‌ಸ್ಪೆಕ್ಷನ್‌(ಪರಿಶೀಲನೆ)ಗೆ ರಾಜ್ಯ ಸರಕಾರ ಆದೇಶಿಸಿದೆ. ಎ. 7 ರಿಂದಲೇ ಇದು ರಾಜ್ಯಾದ್ಯಂತ ಜಾರಿಗೆ ಬರಲಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರ ಸಹಿತ ವೈದ್ಯರ ಕಾರ್ಯಕ್ಷೇತ್ರ ವ್ಯಾಪ್ತಿಯಲ್ಲಿ ಈ ಪರಿಶೀಲನೆ ನಡೆಯಲಿದ್ದು ಎಲ್ಲ ಆರೋಗ್ಯ ಕೇಂದ್ರಗಳಿಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಆಯಾ ತಾಲೂಕು ಆರೋಗ್ಯಾಧಿಕಾರಿಗಳು ಭೇಟಿ ನೀಡಲಿದ್ದಾರೆ.

ಕಾರ್ಯಕ್ಷಮತೆಯಿಂದ ಪದೋನ್ನತಿ :

ಪ್ರತಿದಿನ ಡೈರಿ ಮೂಲಕ ಆ ದಿನ ಮಾಡಿದ ಕೆಲಸ ಕಾರ್ಯಗಳ ಬಗ್ಗೆ ಉಲ್ಲೇಖೀಸುವುದನ್ನು ಕಡ್ಡಾಯ ಗೊಳಿಸಲಾಗಿದೆ. ಪದೋನ್ನತಿ ಸಂದರ್ಭ ಇದನ್ನು ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಟಿಎ, ಡಿಎ ಸಹಿತ ಆ ದಿನದ ಎಲ್ಲ ವಿವರಗಳನ್ನು ಆ ಡೈರಿಯಲ್ಲಿ ನಮೂದಿಸುವಂತೆ ಸೂಚಿಸಲಾಗಿದೆ. ಈ ಮೂಲಕ ಎಲ್ಲ ಅಧಿಕಾರ ವೃಂದದವರು ಸದಾಕಾಲ ಕಾರ್ಯ ಪ್ರವೃತ್ತ ರಾಗುವಂತೆ ಮಾಡುವ ಉದ್ದೇಶ ಸರಕಾರದ್ದು.

ಯಾವುದೇ ಸಂದರ್ಭದಲ್ಲಿ  ಡೈರಿ ಪರಿಶೀಲನೆ :

ಪ್ರಗತಿ ಪರಿಶೀಲನೆ ಸಭೆ ಸಹಿತ ಸಚಿವರು ಭೇಟಿ ನೀಡುವ ಸಂದರ್ಭ ಆರೋಗ್ಯ ಇಲಾಖೆ ಅಧಿಕಾರಿಗಳ ಉತ್ತರಗಳು ಸಮರ್ಪಕವಾಗಿಲ್ಲದಿದ್ದರೆ ತಮ್ಮ ಡೈರಿಯನ್ನು ಅವರು ಪರಿಶೀಲಿಸಬಹುದಾಗಿದೆ.

ಭೇಟಿ ಸಂದರ್ಭ ಕಟ್ಟಡಗಳ ನ್ಯೂನತೆ, ಕಾಂಪೌಂಡ್‌ ವಾಲ್‌, ಅಲ್ಲಿನ ಸಿಬಂದಿಯ ಅಗತ್ಯತೆ, ಒಪಿಡಿ ಸರಿಯಾಗಿ ಕಾರ್ಯ ನಿರ್ವಹಿಸು ತ್ತಿದೆಯೇ, ಸಿಬಂದಿಯ ಹಾಜರಾತಿ ಪರಿಶೀಲನೆ, ಆಡಳಿತಾತ್ಮಕ ವಾಗಿರುವ ವೈಫ‌ಲ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಅಗತ್ಯ ಇರುವ ಸೌಲಭ್ಯಗಳನ್ನು ಒದಗಿಸಲು ಮುಂದಿನ ಕ್ರಮ ತೆಗೆದುಕೊಳ್ಳಲು ಆದ್ಯತೆ ನೀಡಬೇಕು.

ಕಾರ್ಯಕ್ರಮಗಳ ಅನುಷ್ಠಾನ :

ಆರೋಗ್ಯ ಇಲಾಖೆ ಸಂದರ್ಭಕ್ಕನುಸಾರ ಜಾರಿಗೆ ತರುವ ನಿಯಮಾವಳಿಗಳು ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನ ವಾಗುತ್ತಿರುವ ಬಗ್ಗೆಯೂ ಮಾಹಿತಿ ಪಡೆದು ಕೊಳ್ಳಬೇಕು. ರೋಗ-ರುಜಿನಗಳು ಅಧಿಕವಾಗಿರುವ ಬಗ್ಗೆಯೂ ಸೂಕ್ತ ಮಾಹಿತಿ ಪಡೆದುಕೊಂಡು ಅದರ ನಿವಾರಣೆಗೆ ಕ್ರಮ ತೆಗೆದುಕೊಳ್ಳಬೇಕು. ಆರೋಗ್ಯ ಪರಿಕರಗಳು ಸಮರ್ಪಕವಾಗಿ ತಲುಪಿರುವ ಬಗ್ಗೆ ಮಾಹಿತಿ ತೆಗೆದುಕೊಳ್ಳಬೇಕು.

ಪರಿಶೀಲನೆ : 

ಪ್ರತೀ ದಿನ ಅಧಿಕಾರಿಗಳು ಆಯಾ ಆರೋಗ್ಯ ಕೇಂದ್ರಗಳಿಗೆ ಹೋಗಿ ಪರಿಶೀಲನೆ ನಡೆಸ ಬಹುದು. ಆದರೆ ಕೆಲವು ಮಂದಿ ಈ ನಿಯಮಾವಳಿಗಳನ್ನು ಪಾಲಿಸುತ್ತಿಲ್ಲ. ಈ ಕಾರಣಕ್ಕಾಗಿ ವಾರದಲ್ಲಿ ಒಂದು ದಿನವಾದರೂ ಕಡ್ಡಾಯವಾಗಿ ತೆರಳುವಂತೆ ಸೂಚನೆ ನೀಡಲಾಗಿದೆ. ಇದರಿಂದಾಗಿ ಆರೋಗ್ಯ ಕೇಂದ್ರಗಳ ಪ್ರಗತಿ, ರೋಗಿಗಳ ಬಗ್ಗೆ ಕಾಳಜಿ ಜತೆಗೆ ಅಧಿಕಾರಿ ಗಳ ಪದೋನ್ನತಿಗೂ ಸಹಕಾರ ಸಿಗಲಿದೆ.

06 : ಸಮುದಾಯ ಆರೋಗ್ಯ ಕೇಂದ್ರ

02 : ಸಮುದಾಯ ಆರೋಗ್ಯ ಕೇಂದ್ರ

01 : ಜಿಲ್ಲಾಸ್ಪತ್ರೆ

01 : ತಾಯಿ ಮತ್ತು ಮಕ್ಕಳ ಆಸ್ಪತ್ರೆ

61 : ಪ್ರಾಥಮಿಕ ಆರೋಗ್ಯ ಕೇಂದ್ರ

02 : ಅರ್ಬನ್‌ ಪ್ರೈಮರಿ ಸೆಂಟರ್‌

01 : ಎಫ್ಪಿಎಐ ಸಂಸ್ಥೆ

74 : ಒಟ್ಟು ಆರೋಗ್ಯ ಕೇಂದ್ರ

ರಾಜ್ಯದಲ್ಲಿ ಆರೋಗ್ಯ ಇಲಾಖೆಯ ಬಲವರ್ಧನೆಗೆ ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಸುಮಾರು 2 ಸಾವಿರ ವೈದ್ಯರ ನೇರ ನೇಮಕಾತಿ ಮಾಡಿದ್ದು, ಮುಂದಿನ 45 ದಿನಗಳೊಳಗೆ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಿತ ಸರಕಾರಿ ಆಸ್ಪತ್ರೆಗಳ ವೈದ್ಯರ ಕೊರತೆ ನೀಗಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಪ್ರತೀ ಬುಧವಾರ ಕಡ್ಡಾಯವಾಗಿ ಆರೋಗ್ಯಾಧಿಕಾರಿಗಳು ಇನ್‌ಸ್ಪೆಕ್ಷನ್‌ಗೆ ತೆರಳುವಂತೆ ಸೂಚಿಸಲಾಗಿದೆ. ಪ್ರಾಥಮಿಕ, ದ್ವಿತೀಯ, ತೃತೀಯ ಹಂತದ ಚಿಕಿತ್ಸೆಯನ್ನು ಉತ್ತಮಗೊಳಿಸುವುದು ಇದರ ಉದ್ದೇಶವಾಗಿದೆ. -ಡಾ| ಕೆ. ಸುಧಾಕರ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ  

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.