ವಾರದ ಸಂತೆಯಲ್ಲಿಯೂ ತುಟ್ಟಿಯಾದ ತರಕಾರಿ


Team Udayavani, Nov 21, 2021, 6:43 AM IST

ವಾರದ ಸಂತೆಯಲ್ಲಿಯೂ ತುಟ್ಟಿಯಾದ ತರಕಾರಿ

ಕುಂದಾಪುರ  /   ಉಡುಪಿ/ಮಂಗಳೂರು: ರಾಜ್ಯದೆಲ್ಲೆಡೆ ನಿರಂತರ ಧಾರಾಕಾರ ಮಳೆಯಿಂದಾಗಿ ಹೊಲದಲ್ಲೇ ತರಕಾರಿ ಕೊಳೆಯುತ್ತಿದೆ. ಬೇಡಿಕೆಯಷ್ಟು ತರಕಾರಿ ಮಾರುಕಟ್ಟೆಗೆ ಪೂರೈಕೆಯಾಗದಿರುವ ಕಾರಣ ಬೆಲೆ ಗಗನಕ್ಕೇರುತ್ತಿದೆ.

ಟೊಮೇಟೊ, ತೊಂಡೆಕಾಯಿ, ಶುಂಠಿ, ಬೀನ್ಸ್‌, ಬದನೆ, ಬೆಂಡೆಕಾಯಿ, ಸೌತೆಕಾಯಿ ದರ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಮಳೆಯಿಂದಾಗಿ ಬಹುತೇಕ ತರಕಾರಿ ಬೆಳೆಗೆ ಹಾನಿಯಾಗಿದ್ದು, ಬಹು ಬೇಡಿಕೆಯ ತರಕಾರಿಗಳು ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ.

ಶತಕದ ಬಾರಿಸಿದ ಟೊಮೇಟೊ:

4-5 ದಿನಗಳ ಹಿಂದೆ 60-70ರ ಆಸುಪಾಸಿನಲ್ಲಿದ್ದ ಒಂದು ಕೆಜಿ ಟೊಮೇಟೊ ದರ ಈಗ ಶತಕದ ಗಡಿ ದಾಟಿದೆ. ಶನಿವಾರ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯೆಲ್ಲೆಡೆ ಕಿಲೋಗೆ 100 ರೂ.ಗಳಂತೆ ಮಾರಾಟವಾಯಿತು. ಉತ್ತಮ ಗುಣಮಟ್ಟದ ಟೊಮೇಟೊ ಅಭಾವ ಕಂಡು ಬಂತು. ಕುಂದಾಪುರ ಸಂತೆಯಲ್ಲಿ ಸ್ವಲ್ಪ ಮಟ್ಟಿಗೆ ಹಾನಿಗೀಡಾಗಿರುವ ಟೊಮೆಟೋ ಹಣ್ಣುಗಳನ್ನು ಕೆಲವರು ಕೆಜಿಗೆ 50 ರೂ.ಗಳಂತೆ ಮಾರುತ್ತಿದ್ದರು. 40 ಇದ್ದ ತೊಂಡೆಗೆ 120 ರೂ.!

ತಿಂಗಳ ಹಿಂದೆ ಕೇವಲ 40 ರೂ. ಇದ್ದ ತೊಂಡೆಕಾಯಿಗೆ ಈಗ 100ರಿಂದ 120 ರೂ. ವರೆಗೆ ಬೇಡಿಕೆ ಬಂದಿದೆ. ಬೇಡಿಕೆಯಷ್ಟು ಪೂರೈಕೆಯಾಗುತ್ತಿಲ್ಲ; ಬೆಲೆ ಮಾತ್ರ ಏರುಗತಿಯಲ್ಲಿ ಸಾಗಿದೆ. ಇನ್ನು ಬೀನ್ಸ್‌, ಅಲಸಂಡೆ, ಕ್ಯಾರೆಟ್‌ ಬೆಲೆ 80 ರೂ. ಆಸುಪಾಸಿನಲ್ಲಿವೆ. ತೊಂಡೆಕಾಯಿ 120 ರೂ., ನುಗ್ಗೆ 120 ರೂ., ಅಲಸಂಡೆ 100 ರೂ., ಕೊತ್ತಂಬರಿ ಸೊಪ್ಪು 120 ರೂ. ಇದೆ ಎಂದು ಉಡುಪಿಯ ತರಕಾರಿ ವ್ಯಾಪಾರಿ ಶಫೀಕ್‌ ತಿಳಿಸಿದ್ದಾರೆ.

ಚಿಕ್ಕಮಗಳೂರು, ಕಡೂರು, ಬೆಳಗಾವಿ, ಹಾಸನ ಮತ್ತು ಬೆಂಗಳೂರಿನಿಂದ ತರಕಾರಿ ನಿರೀಕ್ಷಿತ ಪ್ರಮಾಣದಲ್ಲಿ ಬರುತ್ತಿಲ್ಲ. ಜತೆಗೆ ಡೀಸೆಲ್‌ ದರವೂ ದುಬಾರಿಯಾಗಿರುವುದು ದಿನೇ ದಿನೆ ತರಕಾರಿ ಬೆಲೆ ಏರಲು ಕಾರಣ ಎಂದು ಹೆಮ್ಮಾಡಿಯ ತರಕಾರಿ ವ್ಯಾಪಾರಿ ವಿದ್ಯಾಕರ ಪೂಜಾರಿ ತಿಳಿಸಿದ್ದಾರೆ.

ಶುಭ ಸಮಾರಂಭಕ್ಕೂ ಹೊರೆ :

ದಸರಾ, ದೀಪಾವಳಿ ಮುಗಿದಿದ್ದು ಬಹುತೇಕ ಕಡೆಗಳಲ್ಲಿ ಮದುವೆ, ಗೃಹ ಪ್ರವೇಶ, ಪೂಜೆ ಸಹಿತ ಹತ್ತಾರು ಶುಭ ಸಮಾರಂಭಗಳು ನಡೆಯುತ್ತಿವೆ. ಅದಕ್ಕೆಂದು ಕೆಲವರು ಸಂತೆಗೆಂದು ತರಕಾರಿ ಖರೀದಿಗೆ ಬಂದಿದ್ದರೆ, ಅಲ್ಲಿ ಅಗತ್ಯದಷ್ಟು ಸಿಗದೆ ನಿರಾಶೆ ಅನುಭವಿಸಿದ್ದು ಕಂಡುಬಂತು.

ಕಳೆದ 3-4 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. ಸಾಮಾನ್ಯವಾಗಿ 50-60 ರ ಆಸುಪಾಸಿನಲ್ಲಿದ್ದ ತರಕಾರಿಗಳ ಬೆಲೆ ಈಗ 70-80ರ ಗಡಿ ದಾಟಿದೆ. ಮಳೆಯಿಂದಾಗಿ ಅಂಗಡಿಗಳಿಗೆ ತರಕಾರಿ ಸರಬರಾಜು ಶೇ. 10ರಿಂದ 15ರಷ್ಟು ಕಡಿಮೆಯಾಗಿದೆ. – ರವಿಚಂದ್ರ ಶೆಟ್ಟಿ ಮಂಗಳೂರು ಹಾಪ್‌ಕಾಮ್ಸ್‌ ವ್ಯವಸ್ಥಾಪಕ 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.