ಹೋರಾಟಕ್ಕೆ ಮತ್ತೆ ಕಾವು


Team Udayavani, Feb 15, 2021, 5:30 AM IST

Untitled-10

ಕೋಟ: ಫಾಸ್ಟ್ಯಾಗ್‌ ಕಡ್ಡಾಯವಾಗ ಲಿರುವ ಜತೆಗೆ ಕ್ಯಾಶ್‌ಲೈನ್‌ಗಳು, ಸ್ಥಳೀಯರಿಗೆ ಇರುವ ಟೋಲ್‌ ವಿನಾಯಿತಿಗಳು ಕೂಡ ಬಂದ್‌ ಆಗಲಿವೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾದು ಹೋಗುವ 2 ರಾಷ್ಟ್ರೀಯ ಹೆದ್ದಾರಿ ಗಳಲ್ಲಿ ತಲಪಾಡಿಯಲ್ಲಿ ಸ್ಥಳೀಯ ಪಂಚಾ ಯತ್‌ ವ್ಯಾಪ್ತಿ, ಹೆಜಮಾಡಿಯಲ್ಲಿ ಸ್ಥಳೀಯ ಗ್ರಾಮದವರು ಮತ್ತು ಪಡುಬಿದ್ರಿಯಲ್ಲಿ ಸ್ಥಳೀಯ ಟ್ಯಾಕ್ಸಿಗಳಿಗೆ ಶುಲ್ಕ ವಿನಾಯಿತಿ ಇದೆ. ಬೈಂದೂರು- ಶಿರೂರಿನಲ್ಲಿ ಸ್ಥಳೀಯ 5 ಕಿ.ಮೀ. ವ್ಯಾಪ್ತಿ, ಸಾಸ್ತಾನದಲ್ಲಿ ಕೋಟ ಜಿ.ಪಂ. ವ್ಯಾಪ್ತಿಯ ಎಲ್ಲ ವಾಹನಗಳಿಗೆ ವಿನಾಯಿತಿ ಇದೆ. ಆದರೆ ಫಾಸ್ಟ್ಯಾಗ್‌ ಕಡ್ಡಾಯವಾದ ಬಳಿಕ ಈ ಎಲ್ಲ ರಿಯಾಯಿತಿ ಗಳನ್ನು ರದ್ದುಪಡಿಸುವುದಾಗಿ ಎನ್‌ಎಚ್‌ಎಐ ಅಧಿಕಾರಿಗಳು ತಿಳಿಸಿದ್ದಾರೆ. 20 ಕಿ.ಮೀ. ವ್ಯಾಪ್ತಿಯ ಖಾಸಗಿ ಕಾರುಗಳಿಗೆ ನೀಡ ಲಾಗುವ 275 ರೂ. ಮಾಸಿಕ ಪಾಸ್‌ ವ್ಯವಸ್ಥೆ ಮಾತ್ರ ಇರಲಿದೆ ಎಂದಿದ್ದಾರೆ.

ವಿನಾಯಿತಿ ಮುಂದುವರಿಸಿ: ಆಗ್ರಹ ವಿನಾಯಿತಿಯನ್ನು ಮುಂದುವರಿಸಬೇಕು ಎನ್ನುವುದು ಸ್ಥಳೀಯರ ಆಗ್ರಹ. ಈ ನಿಟ್ಟಿನಲ್ಲಿ ಸ್ಥಳೀಯರಿಂದ ಹೋರಾಟ ಆರಂಭಗೊಂಡಿದೆ.

ಶುಲ್ಕ ವಿನಾಯಿತಿಗೆ ಪಟ್ಟು ಹಿಡಿಯಲು ಕಾರಣ :

ಸ್ಥಳೀಯ ವಾಣಿಜ್ಯ, ಖಾಸಗಿ ವಾಹನಗಳು ದಿನಕ್ಕೆ ಹತ್ತಾರು ಬಾರಿ ಟೋಲ್‌ ಮೂಲಕ ಸಂಚರಿಸಬೇಕಿದೆ. ಪ್ರತೀ ಬಾರಿ ಟೋಲ್‌ ಪಾವತಿಸುವುದು ವೆಚ್ಚದ ದೃಷ್ಟಿಯಿಂದಲೂ ಪ್ರಾಯೋಗಿಕ ವಾಗಿಯೂ ಅಸಾಧ್ಯ. ಸ್ಥಳೀಯ 20 ಕಿ.ಮೀ. ವ್ಯಾಪ್ತಿಯ ಖಾಸಗಿ ಕಾರುಗಳಿಗೆ ಮಾಸಿಕ ಪಾಸ್‌ ವ್ಯವಸ್ಥೆ ಇದ್ದರೂ ತಿಂಗಳ ಪ್ರಥಮ ದಿನವೇ ಕಡ್ಡಾಯವಾಗಿ ಪಾಸ್‌ ಪಡೆಯಬೇಕೆಂಬ ನಿಯಮವಿದೆ. ತಿಂಗಳ ಕೊನೆಯ 2 ದಿನಗಳಿರುವಾಗ ಪಾಸ್‌ ಖರೀದಿಸಿದರೆ ಎರಡೇ ದಿನಗಳಲ್ಲಿ ಪಾಸ್‌ ಅವಧಿ ಮುಗಿಯಲಿದೆ. ಇದರಿಂದ ಯಾವುದೇ ಲಾಭವಿಲ್ಲ ಎನ್ನುವುದು ಸ್ಥಳೀಯರ ವಾದ.

ಸಾಸ್ತಾನದ ರಾ.ಹೆ. ಹೋರಾಟ ಸಮಿತಿಯವರು ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಮನವಿ ಸಲ್ಲಿಸಿದ್ದಾರೆ. ನಮ್ಮ ಮನವಿಯನ್ನು ತಿರಸ್ಕರಿಸಿ ಫೆ. 15ರ ಮಧ್ಯರಾತ್ರಿಯಿಂದ ಸ್ಥಳೀಯರಿಂದಲೂ ಟೋಲ್‌ ವಸೂಲಿ ಆರಂಭಿಸಿದಲ್ಲಿ ಕರ ನಿರಾಕರಿಸಿ ವಾಹನಗಳನ್ನು ಟೋಲ್‌ನಲ್ಲೇ ನಿಲ್ಲಿಸಲು ಕರೆ ನೀಡುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ರವಿವಾರ ಸಂಜೆ ಹೆದ್ದಾರಿ ಜಾಗೃತಿ ಸಮಿತಿಯ ಸದಸ್ಯರು, ಜಿಲ್ಲೆಯ ಮೂರು ಟೋಲ್‌ಗ‌ಳ ಪ್ರಬಂಧಕ ಶಿವಪ್ರಸಾದ್‌ ರೈ ಮತ್ತು ಸಿಬಂದಿಯ ಜತೆ ಕೋಟ ಪೊಲೀಸ್‌ ಠಾಣಾಧಿಕಾರಿಗಳು, ಬ್ರಹ್ಮಾವರ ವೃತ್ತ ನಿರೀಕ್ಷಕರ ಸಮ್ಮುಖದಲ್ಲಿ ಮಾತುಕತೆ ನಡೆಯಿತು. ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ದಿಶಾ ಸಭೆ ನಡೆಸಿ ಪರಿಹಾರ ಸೂಚಿಸುವುದಾಗಿ ತಿಳಿಸಿದ್ದು, ಆ ಸಭೆಯ ಬಳಿಕ ವಿನಾಯಿತಿ ಬಗ್ಗೆ ನಿರ್ಧಾರ ಕೈಗೊಳ್ಳಬೇಕು. ಅಲ್ಲಿಯ ತನಕ ಸ್ಥಳೀಯರಿಗೆ ಶುಲ್ಕ ಕಡ್ಡಾಯಗೊಳಿಸಬಾರದು ಎಂದು ಜಾಗೃತಿ ಸಮಿತಿಯವರು ಆಗ್ರಹಿಸಿದ್ದಾರೆ. ಈ ಬಗ್ಗೆ ಉನ್ನತ ಅಧಿಕಾರಿಗಳ ಜತೆ ಚರ್ಚೆ ನಡೆಸಿ ನಿರ್ಧಾರ ತಿಳಿಸುವುದಾಗಿ ಟೋಲ್‌ ಅಧಿಕಾರಿಗಳು ಹೇಳಿದ್ದಾರೆ.

ದ.ಕ., ಉಡುಪಿ ಟೋಲ್‌:  ಪ್ರಸ್ತುತ ಫಾಸ್ಟ್ಯಾಗ್‌ ಸಂಚಾರ

ಪ್ರದೇಶ   ಫಾಸ್ಟ್ಯಾಗ್‌ ಸಂಚಾರ ಪ್ರಮಾಣ (ಶೇ.)

ಹೆಜಮಾಡಿ              72

ಸಾಸ್ತಾನ 71

ತಲಪಾಡಿ 60

ಬೈಂದೂರು ಶಿರೂರು              68

ಬ್ರಹ್ಮರಕೂಟ್ಲು          89

ಸುರತ್ಕಲ್‌               90

ಫ್ರೀ ಲೇನ್‌ ಹೊರತುಪಡಿಸಿ

ಸ್ಥಳೀಯರಿಗೆ ಶುಲ್ಕ ವಿನಾಯಿತಿ ಮುಂದುವರಿಯ ಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದು, ಸಭೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಭೆ ನಡೆಯುವ ತನಕ ಟೋಲ್‌ ಕಡ್ಡಾಯಗೊಳಿಸಬಾರದು. ಮನವಿಯನ್ನು ತಿರಸ್ಕರಿಸಿದರೆ ಸ್ಥಳೀಯರು ಕರ ನಿರಾಕರಿಸಲಿದ್ದಾರೆ.. ಪ್ರತಾಪ್‌ ಶೆಟ್ಟಿ ಸಾಸ್ತಾನ,  ಹೆದ್ದಾರಿ ಜಾಗೃತಿ ಸಮಿತಿ ಪ್ರಮುಖರು

ಕೇಂದ್ರ ಸರಕಾರದ ಆದೇಶದಂತೆ ಫಾಸ್ಟ್ಯಾಗ್‌ ಕಡ್ಡಾಯವಾಗುತ್ತಿದೆ. ಹಿಂದಿನ ಎಲ್ಲ ರಿಯಾಯಿತಿಗಳನ್ನು ರದ್ದುಪಡಿಸಲಾಗುವುದು. ಸ್ಥಳೀಯ ಖಾಸಗಿ ಕಾರಿನವರು ಮಾಸಿಕ ಪಾಸ್‌ ಖರೀದಿಸಬೇಕು. ಇನ್ನೂ

ಫಾಸ್ಟ್ಯಾಗ್‌ಅಳವಡಿಸಿಕೊಳ್ಳದವರು ಟೋಲ್‌ಗ‌ಳಲ್ಲಿ ವಾಹನದ ಆರ್‌.ಸಿ., ಆಧಾರ್‌, ಪಾನ್‌ಕಾರ್ಡ್‌ ಪ್ರತಿ ಹಾಜರುಪಡಿಸಿ ಸ್ಥಳದಲ್ಲೇ ಫಾಸ್ಟ್ಯಾಗ್‌ ಪಡೆಯಬಹುದು.  ಶಿಶುಮೋಹನ್‌,  ಎನ್‌ಎಚ್‌ಎಐ ಯೋಜನ ನಿರ್ದೇಶಕ

 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.