ಸೇತುವೆ ನಿರ್ಮಾಣಕ್ಕೆ 38 ಲಕ್ಷ ರೂ.ಅಂದಾಜುಪಟ್ಟಿ ಸಿದ್ಧ
Team Udayavani, Aug 22, 2019, 5:04 AM IST
ತೆಕ್ಕಟ್ಟೆ: ಬೇಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿರೆ ಹೊಳೆಗೆ ಅಡ್ಡಲಾಗಿರುವ ಕೋಣಬಗೆ -ಅಚ್ಲಾಡಿ ಸಂಪರ್ಕ ಸೇತುವೆ ಅಪಾಯದಲ್ಲಿದ್ದು ಮುರಿದು ಬೀಳುವಂತಿದೆ. ಈ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಉದಯವಾಣಿ ಜನಪರ ಕಾಳಜಿ ವಹಿಸಿ ಕುಸಿಯುವ ಭೀತಿಯಲ್ಲಿರುವ ಹಳೆಯ ಸೇತುವೆ ಎನ್ನುವ ಶೀರ್ಷಿಕೆಯಡಿಯಲ್ಲಿ ಆ. 12ರಂದು ಚಿತ್ರ ಸಹಿತ ವಿಸ್ತೃತ ವರದಿ ಪ್ರಕಟಿಸಿದ ಬೆನ್ನಲ್ಲಿಯೇ ಎಚ್ಚೆತ್ತುಕೊಂಡ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ ಕುಂದಾಪುರ ಇವರು ಆ.13ರಂದು ಹೊಸದಾಗಿ ಸೇತುವೆ ನಿರ್ಮಿಸಲು ಶಾಲಾ ಸಂಪರ್ಕ ಸೇತು ಯೋಜನೆ ಅಡಿಯಲ್ಲಿ ರೂ.38.00 ಲಕ್ಷದ ಅಂದಾಜುಪಟ್ಟಿ ತಯಾರಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ.
ಉದಯವಾಣಿ ವರದಿಯ ಆಧಾರದ ಮೇಲೆ ಸಾರ್ವಜನಿಕರ ಹಿತದೃಷ್ಟಿಯನ್ನು ಆಧಾರವಾಗಿರಿಸಿಕೊಂಡಿರುವ ಬೇಳೂರು ಗ್ರಾಮ ಪಂಚಾಯತ್ ಮಹತ್ವದ ನಿರ್ಣಯ ಕೈಗೊಂಡು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.ಉದಯವಾಣಿಯಲ್ಲಿ ಪ್ರಕಟಗೊಂಡ ವರದಿಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Kundapur: ಬೈಕ್ ಢಿಕ್ಕಿ; ಸ್ಕೂಟರ್ ಸವಾರೆಗೆ ಗಾಯ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ
ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ