ಕರಾವಳಿ ಯುವಕರ ಕೈಹಿಡಿದ ಮೀನು ಕೃಷಿ:  ಪಂಜರದಲ್ಲಿ ಮೀನು ಸಾಕಾಣಿಕೆ ಯಶಸ್ಸು


Team Udayavani, May 28, 2023, 3:47 PM IST

ಕರಾವಳಿ ಯುವಕರ ಕೈಹಿಡಿದ ಮೀನು ಕೃಷಿ:  ಪಂಜರದಲ್ಲಿ ಮೀನು ಸಾಕಾಣಿಕೆ ಯಶಸ್ಸು

ಉಪ್ಪುಂದ: ಕರಾವಳಿಯ ಯುವಕರು ಪಂಜರ ಮೀನು ಕೃಷಿ ಮೂಲಕ ಸ್ವ ಉದ್ಯೋಗಕ್ಕೆ ಹೆಚ್ಚು ಒತ್ತು ನೀಡಿ ಯಶಸ್ಸು ಪಡೆಯುತ್ತಿದ್ದಾರೆ.

ಕರಾವಳಿಯಲ್ಲಿ ಮಂಗಳೂರು ಕೇಂದ್ರೀಯ ಸಮುದ್ರ ಮೀನುಗಾರಿಕೆ ಸಂಶೋಧನೆ ಸಂಸ್ಥೆ ಪಂಜರ ಮೀನು ಕೃಷಿ ಉತ್ಪಾದನೆಯ ತಂತ್ರಜ್ಞಾನ ಅಭಿವೃದ್ಧಿಪಡಿಸಿತ್ತು. 2008ರಲ್ಲಿ ಈ ವಿಧಾನವನ್ನು ಕರ್ನಾಟಕದಲ್ಲಿಯೇ ಮೊದಲ ಬಾರಿಗೆ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮಗಳಲ್ಲಿ ಆರಂಭಿಸಿತ್ತು. ಉಪ್ಪು ನೀರಿನ ಪ್ರದೇಶದಲ್ಲಿ ಪಂಜರ ಮೀನು ಕೃಷಿ ಮೀನುಗಾರರನ್ನು ಸೆಳೆಯುವಲ್ಲಿ ಸಫಲತೆ ಕಂಡಿದೆ. ಪ್ರಸ್ತುತ ಕೊಡೇರಿ, ಕರ್ಕಿಕಳಿ,  ತಾರಾಪತಿ ಭಾಗದಲ್ಲಿ 400ರಿಂದ 500 ಮಂದಿ ಪಂಜರ ಮೀನು ಕೃಷಿ ಸಾಕಣೆಯಲ್ಲಿ ತೊಡಗಿಸಿ ಕೊಂಡಿದ್ದಾರೆ.

ಜಪಾನ್‌ ದೇಶದಲ್ಲಿ ಪ್ರಾರಂಭ
ಸಮುದ್ರದಲ್ಲಿ ಪಂಜರದ ಕೃಷಿಯನ್ನು 1950ರಲ್ಲಿ ಪ್ರಥಮವಾಗಿ ಜಪಾನ್‌ ದೇಶ ಆರಂಭಿಸಿತ್ತು. ಬಳಿಕ 1980ರಲ್ಲಿ ಉತ್ತರ ಯೂರೋಪ್‌, ಉತ್ತರ ಅಮೆರಿಕಾ ಪಂಜರದಲ್ಲಿ ಸಾಲ್ಮನ್‌ ಮೀನು ಕೃಷಿ ಪ್ರಾರಂಭಿಸಿತ್ತು. ಪ್ರಪಂಚದಾದ್ಯಂತ ಇದರಲ್ಲಿ ಶೇ.90ರಷ್ಟು ಕುರುಡಿ ಮತ್ತು ಸೀ ಬ್ರಿàಮ್‌ ತಳಿಯನ್ನು ಉಪಯೋಗಿಸಲಾಗುತ್ತಿದೆ.ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ 2007ರಲ್ಲಿ ವಿಶಾಖಪಟ್ಟದಲ್ಲಿ ಸಿಎಂಎಫ್‌ಆರ್‌ಐ ಅವರು ಪಂಜರದಲ್ಲಿ ಮೀನು ಕೃಷಿಯನ್ನು ಪ್ರಾಯೋಗಿಕವಾಗಿ ನಡೆಸಿದರು. ಪ್ರಸ್ತುತ ಗುಜರಾತ್‌, ಮಹಾರಾಷ್ಟ್ರ, ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರ, ಒರಿಶಾಗಳಲ್ಲಿ ಯಶಸ್ವಿಯಾಗಿ ಮಾಡಲಾಗುತ್ತಿದೆ ಜಾಗ ಆಯ್ಕೆ ಪಂಜರಗಳನ್ನು ಸಿಹಿ ನೀರು, ಸಮುದ್ರ, ಹಿನ್ನೀರು, ಚೌಳು ನೀರು, ಅಳಿವೆಗಳಲ್ಲಿ ಅಳವಡಿಸಿ ಮೀನು ಸಾಕಾಣಿಕೆಗೆ ಸೂಕ್ತ. ನೀರಿನ ಆಳ 3-5 ಮೀಟರ್‌ ಇರಬೇಕು. ನೀರಿನ ಒಳ ಹರಿವು ನಿರಂತರವಾಗಿದ್ದಲ್ಲಿ ಕರಗಿದ ಆಮ್ಲಜನಕ ಯಥೇತ್ಛವಾಗಿ ದೊರಕುವುದಲ್ಲದೆ ಯಾವುದೇ ತ್ಯಾಜ್ಯ ಪಂಜರದಲ್ಲಿ ಉಳಿಯಲು ಬಿಡುವುದಿಲ್ಲ.

ಪಂಜರದ ನಿರ್ಮಾಣ
ಸಾಮಾನ್ಯವಾಗಿ ಆಯತಾಕಾರದ 6×2 ಮೀ. ಗಾತ್ರದ ಜಿ.ಐ. ಪೈಪ್‌ಗ್ಳಿಂದ ತಯಾರಿಸಲಾದ ಪಂಜರವನ್ನು ಉಯೋಗಿಸಲು ಯೋಗ್ಯವಾಗಿರುತ್ತದೆ. ಪಂಜರದ ಹೊರ ಪದರ ನಿರ್ಮಾಣಕ್ಕೆ ಎಚ್‌.ಡಿ.ಪಿ.ಇ. ಮೆಷ್‌ 48 ಎಂ.ಎಂ. ಬಳಸಲಾಗುತ್ತದೆ. ಒಳ ಪದರವನ್ನು ಮೆಷ್‌ 18 -20 ಎಂ.ಎಂ. ಗಾತ್ರದ ನೆಟ್‌ಅನ್ನು ಉಪಯೋಗಿಸಲಾಗುತ್ತದೆ.

ಮೀನುಗಳ ಪಾಲನೆ
ಸಣ್ಣ ಮೀನುಗಳನ್ನು ಪ್ರಥಮವಾಗಿ ನರ್ಸರಿ ಕೆರೆಗಳಲ್ಲಿ ಬಿತ್ತನೆ ಮಾಡಿ, ಸುಮಾರು 2 ತಿಂಗಳ ಕಾಲ ಪ್ರತೀ 15 ದಿನಗಳಿಗೊಮ್ಮೆ ಗ್ರೇಡಿಂಗ್‌ ಮಾಡಿ ಬೆಳೆಸಲಾಗುತ್ತದೆ. ಕುರುಡಿ ಮೀನುಗಳಲ್ಲಿ ಕ್ಯಾನಿಬಾಲಿಸಂ ಅಂದರೆ ದೊಡ್ಡ ಗಾತ್ರದ ಮೀನು ಚಿಕ್ಕ ಗಾತ್ರದ ಮೀನು ಮರಿಗಳನ್ನು ತಿನ್ನುವುದರಿಂದ ಗ್ರೇಡಿಂಗ್‌ ಮಾಡುವುದು ಅತೀ ಆವಶ್ಯಕ. ಇಲ್ಲಿ 18-20 ಗ್ರಾಂ ಗಾತ್ರದ ವರೆಗೆ ಬೆಳೆಸಲಾಗುತ್ತದೆ. ಬಳಿಕ ಹಿನೀ°ರಿನ ಪ್ರದೇಶದ ಒಂದು ಪಂಜರದಲ್ಲಿ 1,000 ಮೀನು ಮರಿಗಳನ್ನು ಬಿತ್ತನೆ ಮಾಡಿ 16 ತಿಂಗಳು ಬೆಳೆಸಲಾಗುತ್ತದೆ.

ಆಹಾರ ಕ್ರಮ
ಬೆಳಗ್ಗೆ, ಸಂಜೆ ಆಹಾರ ನೀಡಬೇಕು. ಮೊದಲೆರಡು ತಿಂಗಳು ಸಿಗಡಿ ಆಹಾರ ಸ್ಟಾರ್ಟರ್‌ 1 ಮತ್ತು 2 ಕೊಡಲಾಗುತ್ತದೆ. ಅನಂತರ ಎರಡು ತಿಂಗಳು ಬೂತಾಯಿ ಮೀನು ಅಥವಾ ಇತರ ಮೀನುಗಳನ್ನು ಸಣ್ಣದಾಗಿ ಕತ್ತರಿಸಿ ನೀಡಲಾಗುತ್ತದೆ. ಮೀನಿನ ಬೆಳವಣಿಗೆಗೆ ಅನುಸಾರವಾಗಿ ಶೇ. 2-3ರಷ್ಟು ಆಹಾರ ನೀಡಲಾಗುತ್ತದೆ. ನಾಲ್ಕು ತಿಂಗಳ ಅನಂತರ ಹದಿನೈದು ದಿನಕ್ಕೆ ಅಥವಾ ತಿಂಗಳಿಗೆ ಕೊಡುವ ಆಹಾರದ ಪ್ರಮಾಣ ಹೆಚ್ಚಿಸಬೇಕು. 6 ತಿಂಗಳ ಬಳಿಕ ದೇಹದ ತೂಕದ ಶೇ. 10ರಷ್ಟು ಪ್ರಮಾಣದ ಆಹಾರ ನೀಡಬೇಕು.

ಕುರುಡಿ ಮೀನು ಸಾಕಣೆಯಿಂದ ಬೇರೆ ಮೀನುಗಳ ಸಾಕಾಣಿಕೆಗೆ ಪ್ರಯತ್ನ ಮಾಡಬಹುದು. (ಕೊಕ್ಕರ್‌, ಕೆಂಬೇರಿ, ಕೋಬಿಯಾ) ಸ್ಥಳೀಯವಾಗಿ ದೊರಕುವ ಸಣ್ಣ ಮೀನುಗಳ ನರ್ಸರಿ ಪಾಲನೆ ಮೀನು ಕೃಷಿಯಲ್ಲಿ ತೊಡಗಿಸಿಕೊಳ್ಳಬಹುದು.

ವಿವಿಧ ತಳಿಗಳು
ಕುರುಡಿ ಮೀನು, ಕೆಂಬೇರಿ ಮೀನು, ಕೋಬಿಯಾ ಪ್ರಮುಖ ತಳಿಗಳು. ಆದರೆ ಎಲ್ಲ ತಳಿಗಳ ಮರಿಗಳು ಸಿಗುವುದಿಲ್ಲ. ಕುರುಡಿ ಮೀನು ಮರಿಗಳನ್ನು ರಾಜೀವ್‌ ಗಾಂಧಿ ಸೆಂಟರ್‌ ಫಾರ್‌ ಅಕ್ವಾ ಕಲ್ಚರ್‌ (ಆರ್‌ಜೆಸಿಎ) ವಿಶಾಖ ಪಟ್ಟಣ/ ಚೆನ್ನೈನಲ್ಲಿ ಲಭ್ಯ. ಅಲ್ಲಿಂದ 2.5 ಸೆಂ.ಮೀ., 5.5 ಸೆಂ.ಮೀ. ಗಾತ್ರದ ಮರಿಗಳನ್ನು ಖರೀದಿಸಲಾಗುತ್ತದೆ. ಮೀನು ಮರಿಗಳ ಮೌಲ್ಯವು ಗಾತ್ರಕ್ಕೆ ತಕ್ಕಂತೆ ಇರುತ್ತದೆ. ಸ್ಥಳೀಯ ವಾತಾವರಣಕ್ಕೆ ಕುರುಡಿ ಮೀನು ಬೇಗ ಹೊಂದಿಕೊಳ್ಳುತ್ತದೆ, ಅತೀ ಬೇಡಿಕೆ, ಬೆಲೆಯುಳ್ಳ ತಳಿ, ಹೆಚ್ಚು ಇಳುವರಿ, ಶೀಘ್ರ ಬೆಳವಣಿಗೆ, ಸ್ಥಳೀಯ ಆಹಾರಕ್ಕೆ ಹೊಂದಿಕೊಳ್ಳುತ್ತದೆ. 0-40 ಪಿ.ಪಿ.ಟಿ. ವರೆಗೂ ಉಪ್ಪಿನಂಶ ತಡೆದುಕೊಳ್ಳಬಲ್ಲದು. ಸಿಹಿ ನೀರಿನಲ್ಲೂ ಸಾಕಬಹುದು.

ಮರಿ ಉತ್ಪನ್ನ ಕೇಂದ್ರ ನಿರ್ಮಿಸಿ
ಮೀನುಗಾರಿಕೆ ವೃತ್ತಿ ಜತೆಗೆ ಪಂಜರದ ಮೀನು ಸಾಕಾಣಿಕೆ ಮಾಡುತ್ತಿದ್ದು ಲಾಭದಾಯಕವಾಗಿದೆ. ಸರಕಾರ ಕರ್ನಾಟಕದಲ್ಲಿ ಮರಿ ಉತ್ಪನ್ನ ಕೇಂದ್ರ ನಿರ್ಮಾಣ ಮಾಡಿದರೆ ಇನ್ನಷ್ಟು ಅನುಕೂಲವಾಗುತ್ತದೆ.
-ಚಂದ್ರ ಖಾರ್ವಿ ಉಪ್ಪುಂದ

-ಕೃಷ್ಣ ಬಿಜೂರು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.