“ಮೀನುಗಾರಿಕೆ ಸಾಲ ಮರುಪಾವತಿಗೆ ಪೀಡಿಸುವಂತಿಲ್ಲ’

 ಕೋಟ ಗ್ರಾಮ ಪಂಚಾಯತ್‌: ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಭೆ

Team Udayavani, May 30, 2020, 5:27 AM IST

“ಮೀನುಗಾರಿಕೆ ಸಾಲ ಮರುಪಾವತಿಗೆ ಪೀಡಿಸುವಂತಿಲ್ಲ’

ಕೋಟ: ಮೀನುಗಾರಿಕೆ ಸಾಲ ಮನ್ನಾಕ್ಕೆ ಸರಕಾರದಿಂದ ಹಣ ಬಿಡುಗಡೆಯಾದ ಮೇಲೂ ಕೆಲವೊಂದು ಬ್ಯಾಂಕ್‌ಗಳು ಸಾಲ ಮರುಪಾವತಿಗೆ ಒತ್ತಾಯ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಯಾವುದೇ ಬ್ಯಾಂಕ್‌ಗಳು ಈ ರೀತಿ ಪೀಡಿಸುವಂತಿಲ್ಲ ಮತ್ತು ಮೀನುಗಾರರು ಇದಕ್ಕೆ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಕೋಟ ಗ್ರಾ.ಪಂ. ಸಭಾಂಗಣದಲ್ಲಿ ಮೇ 29ರಂದು ನಡೆದ ಗ್ರಾ.ಪಂ. ವ್ಯಾಪ್ತಿಯ ಕುಂದು ಕೊರತೆಗಳ ಸಭೆಯಲ್ಲಿ ಅವರು ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸಿದರು. ಗ್ರಾ.ಪಂ. ಅಧ್ಯಕ್ಷೆ ವನಿತಾ ಶ್ರೀಧರ ಆಚಾರ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ವಾರಾಹಿ ಕಾಲುವೆಯ ನೀರು ಗಿಳಿಯಾರು ಭಾಗಕ್ಕೆ ಸರಿಯಾಗಿ ತಲುಪಿಲ್ಲ, ಪ್ರಸ್ತುತ ಬರುತ್ತಿರುವ ನೀರು ಚೆಕ್‌ ಡ್ಯಾಮ್‌ಗಳಲ್ಲಿ ಸಂಗ್ರಹವಾದುದಾಗಿದ್ದು, ಜಲಮಟ್ಟದ ಏರಿಕೆಗೆ ಇದು ಸಾಕಾಗು ವುದಿಲ್ಲ. ಆದ್ದರಿಂದ ವಾರಾಹಿ ನೀರನ್ನು ಬಿಡುಗಡೆ ಮಾಡಬೇಕು ಎಂದು ಗ್ರಾ.ಪಂ. ಸದಸ್ಯೆ ಜ್ಯೋತಿ ಭರತ್‌ ಕುಮಾರ್‌ ಮನವಿ ಮಾಡಿದರು. ಈ ಕುರಿತು ಕ್ರಮಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವುದಾಗಿ ಸಚಿವರು ತಿಳಿಸಿದರು.

ಸಂಬಳವಾಗಿಲ್ಲ
ಮೂರು ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸರಿಯಾಗಿ ಸಂಬಳವಾಗಿಲ್ಲ. ಇದರಿಂದ ಸಾಕಷ್ಟು ಸಮಸ್ಯೆಯಾಗುತ್ತಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ತಿಳಿಸಿದರು.

ಕೋವಿಡ್‌-19 ಸಮಸ್ಯೆ ಎದುರಿಸಲು ಗ್ರಾ.ಪಂ. ಹಾಗೂ ಆರೋಗ್ಯ ಕಾರ್ಯ ಕರ್ತರು ಕೈಗೊಂಡ ಕ್ರಮಗಳ ಕುರಿತು ಸಚಿವರು ವಿಚಾರಿಸಿದರು. ಪಿಡಿಒ ಸುರೇಶ್‌, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವಿಶ್ವನಾಥ, ಗ್ರಾ.ಪಂ. ಉಪಾಧ್ಯಕ್ಷ ರಾಜಾರಾಮ್‌ ಶೆಟ್ಟಿ, ಕೋಟ ಪೊಲೀಸ್‌ ಠಾಣಾಧಿಕಾರಿ ರಾಜಶೇಖರ್‌ ಉಪಸ್ಥಿತರಿದ್ದರು.

ಪಿಡಿಒಗಳ ಭಡ್ತಿಗೆ ಮನವಿ
ನೂತನವಾಗಿ ಅಸ್ತಿತ್ವಕ್ಕೆ ಬಂದ ತಾ.ಪಂ.ಗಳಿಗೆ ಯೋಜನಾಧಿಕಾರಿ, ಸಹಾಯಕ ನಿರ್ದೇಶಕರನ್ನು ನೇಮಕ ಮಾಡುವ ಸಂದರ್ಭ ಉತ್ತಮ ಸಾಧನೆ ಹಾಗೂ ಕಾರ್ಯದಕ್ಷತೆ ತೋರಿದ ಪಿಡಿಒಗಳನ್ನು ಪರಿಗಣಿಸಿ ಭಡ್ತಿ ನೀಡಬೇಕು. ಇದಕ್ಕೆ ಸಹಾಯವಾಗುವಂತೆ ಕಾನೂನಿನಲ್ಲಿ ತಿದ್ದುಪಡಿ ತರಬೇಕು ಎಂದು ಕೋಟ ಗ್ರಾ.ಪಂ. ಪಿಡಿಒ ಸುರೇಶ್‌ ಅವರು ಸಚಿವರಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.