ತೂಫಾನ್‌ ನಿರೀಕ್ಷೆಯಲ್ಲಿ ನಾಡದೋಣಿ ಮೀನುಗಾರರು


Team Udayavani, Jun 25, 2021, 5:30 AM IST

ತೂಫಾನ್‌ ನಿರೀಕ್ಷೆಯಲ್ಲಿ ನಾಡದೋಣಿ ಮೀನುಗಾರರು

ಕುಂದಾಪುರ:  ಇಷ್ಟೊತ್ತಿಗೆ ಆರಂಭವಾಗಬೇಕಿದ್ದ ನಾಡದೋಣಿ ಮೀನುಗಾರಿಕೆಗೆ ಕಡಲಿನಲ್ಲಿ ಪೂರಕ ವಾತಾವರಣವಿಲ್ಲದ ಕಾರಣ ವಿಳಂಬ ವಾಗಿದೆ. ಗಂಗೊಳ್ಳಿ, ಮರವಂತೆ, ಬೈಂದೂರು ವಲಯದ ನಾಡದೋಣಿ ಮೀನುಗಾರರು ಇನ್ನೊಂದು ತೂಫಾನ್‌ನ

ನಿರೀಕ್ಷೆಯಲ್ಲಿದ್ದು, ಜುಲೈ ಮೊದಲ  ವಾರ ಕಡಲಿಗಿಳಿಯುವ ಸಾಧ್ಯತೆಗಳಿವೆ. ಕಳೆದ ತೌಖ್ತೆ ಚಂಡಮಾರುತದ ವೇಳೆ  ದೊಡ್ಡ ಮಟ್ಟದ ತೂಫಾನ್‌ ಕಾಣಿಸಿಕೊಂಡಿದ್ದು, ಮುಂಗಾರು ಆರಂಭ ದಲ್ಲಿಯೂ ಒಂದು ಬಾರಿ ಕಡಲು ಪ್ರಕ್ಷುಬ್ಧಗೊಂಡಿತ್ತು. ಆದರೆ ಈಗ ಮತ್ತೆ ಮಳೆ ಕಡಿಮೆಯಾಗಿದ್ದು, ಕಡಲು ಶಾಂತವಾಗಿದೆ. ಇದು ಮೀನುಗಾರಿಕೆಗೆ ಪೂರಕ ವಾಗಿಲ್ಲದ ಕಾರಣ, ಇನ್ನೊಂದು ತೂಫಾನ್‌ಗೆ ಕಾಯುತ್ತಿದ್ದಾರೆ.

ಸಾಮಾನ್ಯವಾಗಿ ನಾಡದೋಣಿ ಮೀನು ಗಾರರು ಗಂಗಾ ಪೂಜೆಯಾದ ಬಳಿಕ ಕಡಲಿಗಿಳಿಯುತ್ತಾರೆ. ಈ ಬಾರಿ ಅಲ್ಲಲ್ಲಿ ಸಣ್ಣ ಮಟ್ಟಿಗೆ ಪೂಜೆ ನೆರವೇರಿಸಲಾಗಿದ್ದು, ಮಲ್ಪೆ, ಗಂಗೊಳ್ಳಿ, ಉಪ್ಪುಂದ ಭಾಗ ಗಳಲ್ಲಿ ಈಗಾಗಲೇ ಸಣ್ಣ (ಸಿಂಗಲ್‌ ದೋಣಿ) ದೋಣಿಗಳು ಸಮುದ್ರಕ್ಕೆ ಇಳಿದಿದ್ದರೂ, ಸಾಕಷ್ಟು ಪ್ರಮಾಣದಲ್ಲಿ ಮೀನು ದೊರೆತಿಲ್ಲ. ಆದರೆ ಜೋಡು (ಮೂರು ದೋಣಿಗಳಿರುತ್ತವೆ) ದೋಣಿಯ ಮೀನುಗಾರಿಕೆ ಇನ್ನೂ ಆರಂಭವಾಗಬೇಕಷ್ಟೆ.

2 ಸಾವಿರಕ್ಕೂ ಮಿಕ್ಕಿ ದೋಣಿಗಳು:

ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಕೋಡಿ, ಗಂಗೊಳ್ಳಿ, ಕಂಚುಗೋಡು, ಹೊಸಪೇಟೆ, ಮರವಂತೆ, ಕೊಡೇರಿ, ಉಪ್ಪುಂದ, ಶಿರೂರು ಭಾಗದಲ್ಲಿ, ಕೋಡಿಕನ್ಯಾನ, ಮಲ್ಪೆ, ಹೆಜಮಾಡಿ ಭಾಗದಲ್ಲಿಯೂ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ನಡೆಯು ತ್ತದೆ. ಗಂಗೊಳ್ಳಿ ವಲಯದಲ್ಲಿ ಸುಮಾರು 600 ನಾಡದೋಣಿಗಳಿದ್ದರೆ, ಬೈಂದೂರು ವಲಯದಲ್ಲಿ 1,500ಕ್ಕೂ ಮಿಕ್ಕಿ ನಾಡದೋಣಿಗಳಿವೆ.

ಪ್ರಕ್ಷುಬ್ಧಗೊಂಡರೆ ಲಾಭ :ಕಡಲಾಳದಲ್ಲಿ ತೂಫಾನ್‌ ಎದ್ದ ಬಳಿಕ ಕಡಲು ಪ್ರಕ್ಷುಬ್ಧಗೊಳ್ಳುತ್ತದೆ.  ನದಿ, ಹೊಳೆಗಳ ನೀರು, ಅದ ರೊಂದಿಗೆ ತ್ಯಾಜ್ಯವೆಲ್ಲ ಸಮುದ್ರಕ್ಕೆ ಸೇರುವುದರಿಂದ ಆಹಾರಕ್ಕಾಗಿ ವಿವಿಧ ಜಾತಿಯ ಮೀನುಗಳು ಕಡಲ ತೀರದತ್ತ ಧಾವಿಸುತ್ತವೆ. ತೂಫಾನ್‌ ಎದ್ದರೆ ಮಾತ್ರ ನಾಡದೋಣಿಗಳಿಗೆ ಉತ್ತಮ ಪ್ರಮಾಣದಲ್ಲಿ ಮೀನು ಸಿಗುತ್ತದೆ. ಇಲ್ಲದಿದ್ದರೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎನ್ನುತ್ತಾರೆ ಮೀನುಗಾರರು.

ನಾಡದೋಣಿಗಳಿಗೆ ಕಡಲಿಗಿಳಿಯಲು ಈಗಿನ ಪರಿಸ್ಥಿತಿ ಅಷ್ಟೇನೂ ಚೆನ್ನಾಗಿಲ್ಲ. ಕೆಲವು ಕಡೆಗಳಲ್ಲಿ ಸಣ್ಣ ದೋಣಿಗಳು ಮೀನುಗಾರಿಕೆಗೆ ತೆರಳಿದ್ದರೂ ಅಷ್ಟೇನೂ  ಮೀನು  ದೊರೆತಿಲ್ಲ. ಹಾಗಾಗಿ ಪರಿಸ್ಥಿತಿ ಗಮನಿಸಿ, ಇನ್ನೊಂದು ತೂಫಾನ್‌ ಆದರೆ  ಆ ಕೂಡಲೇ ಎಲ್ಲ ನಾಡದೋಣಿಗಳು ಕಡಲಿಗಿಳಿಯಬಹುದು.ಮಂಜು ಬಿಲ್ಲವ, ಆನಂದ ಖಾರ್ವಿ, ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷರು, ಗಂಗೊಳ್ಳಿ – ಬೈಂದೂರು

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.