Fishing ಮತ್ಸ್ಯಕ್ಷಾಮ: ಮೀನುಗಾರಿಕೆಗೆ ಅಘೋಷಿತ ರಜೆ: ಸೀಸನ್‌ನಲ್ಲೇ ಭಾರೀ ಹೊಡೆತ

ಬೋಟು, ದೋಣಿಗಳು ದಡದಲ್ಲೇ ಲಂಗರು

Team Udayavani, Nov 22, 2023, 7:00 AM IST

Fishing ಮತ್ಸ್ಯಕ್ಷಾಮ: ಮೀನುಗಾರಿಕೆಗೆ ಅಘೋಷಿತ ರಜೆ: ಸೀಸನ್‌ನಲ್ಲೇ ಭಾರೀ ಹೊಡೆತ

ಕುಂದಾಪುರ: ಮತ್ಸ್ಯಕ್ಷಾಮದಿಂದ ಕರಾವಳಿಯ ಮೀನುಗಾರಿಕೆ ವಲಯ ಅಕ್ಷರಶಃ ತತ್ತರಿಸಿ ಹೋಗಿದೆ. ಕೆಲವು ದಿನಗಳಿಂದ ನಿರೀಕ್ಷಿತ ಪ್ರಮಾಣದ ಮೀನು ಸಿಗುತ್ತಿಲ್ಲ. ಇದರಿಂದ ಮಂಗಳೂರು, ಮಲ್ಪೆ, ಗಂಗೊಳ್ಳಿ, ಮರವಂತೆ ಸಹಿತ ಎಲ್ಲ ಕಡೆಗಳಲ್ಲಿ ಬಹುತೇಕ ಮೀನುಗಾರರು ಮೀನುಗಾರಿಕೆಗೆ ತೆರಳದೆ ಅಘೋಷಿತ ರಜೆ ಸಾರಿದ್ದಾರೆ.

ಹವಾಮಾನ ವೈಪರೀತ್ಯ, ಅವೈಜ್ಞಾನಿಕ ಮೀನುಗಾರಿಕೆ, ಇನ್ನಿತರ ಕಾರಣಗಳಿಂದ ವರ್ಷದಿಂದ ವರ್ಷಕ್ಕೆ ಮೀನಿನ ಸಂತತಿ ನಾಶವಾಗುತ್ತಿದ್ದು, ಇದು ಕರಾವಳಿಯ ಮೀನುಗಾರಿಕೆ ಕ್ಷೇತ್ರಕ್ಕೆ ಭಾರೀ ಹೊಡೆತವನ್ನೇ ನೀಡುತ್ತಿದೆ. ಕಳೆದೊಂದು ವಾರದಿಂದ ಮೀನುಗಾರಿಕೆ ನಡೆದುದಕ್ಕಿಂತ ನಡೆಯದೇ ಇರುವ ದಿನಗಳೇ ಹೆಚ್ಚು ಎನ್ನುವುದಾಗಿ ಮೀನುಗಾರರು.

ಸಂಕಷ್ಟದಲ್ಲಿ ಸಾವಿರಾರು ಕುಟುಂಬ
ದ.ಕ., ಉಡುಪಿ ಹಾಗೂ ಉ.ಕ. ಜಿಲ್ಲೆಗಳಲ್ಲಿ 9 ಸಾವಿರಕ್ಕೂ ಮಿಕ್ಕಿ ನಾಡದೋಣಿಗಳಿದ್ದು, 27 ಸಾವಿರಕ್ಕೂ ಅಧಿಕ ಮಂದಿ ನಾಡದೋಣಿಯನ್ನೇ ಅವಲಂಬಿಸಿದ್ದಾರೆ. ಉಡುಪಿಯಲ್ಲಿ 1,600ಕ್ಕೂ ಮಿಕ್ಕಿ ಹಾಗೂ ದ.ಕ.ದಲ್ಲಿ 1 ಸಾವಿರಕ್ಕೂ ಅಧಿಕ ಆಳಸಮುದ್ರ ಬೋಟುಗಳಿದ್ದು ಸಾವಿರಾರು ಮಂದಿ ಜೀವನೋಪಾಯಕ್ಕಾಗಿ ಮೀನುಗಾರಿಕೆ ಆಶ್ರಯಿಸಿದ್ದಾರೆ. ಸೀಸನ್‌ನಲ್ಲೇ ಮೀನುಗಾರಿಕೆಯಿಲ್ಲದೆ ಸಂಕಷ್ಟ ಅನುಭವಿಸುವಂತಾಗಿದೆ.

ಕಠಿನ ಕಾನೂನು ಅಗತ್ಯ
ಬುಲ್‌ಟ್ರಾಲ್‌, ಲೈಟ್‌ ಫಿಶಿಂಗ್‌ನಿಂದ ಮೊಟ್ಟೆ ಸಹಿತ ಮೀನಿನ ಮರಿಗಳ ನಾಶ ಆಗುತ್ತಿದೆ. ಈ ಅವಧಿಯಲ್ಲಿ ನಿಜವಾಗಿಯೂ ರಾತ್ರಿ ವೇಳೆ ಪರ್ಸಿನ್‌ ಬೋಟುಗಳಿಗೆ ಉತ್ತಮ ಮೀನುಗಾರಿಕೆ ಇರುತ್ತಿತ್ತು. ಆದರೆ ಮೀನಿನ ಸಂತತಿಯೇ ಕಡಿಮೆ ಆಗುತ್ತಿರುವುದು ಆತಂಕಕಾರಿ ಸಂಗತಿ. ಸಣ್ಣ ಬಲೆ ನಿಷೇಧ, ಅವೈಜ್ಞಾನಿಕ ಮೀನುಗಾರಿಕೆ ಬಗ್ಗೆ ಸರಕಾರ, ಅಧಿಕಾರಿಗಳು ಕಠಿನ ಕಾನೂನುಗಳನ್ನು ಜಾರಿಗೆ ತರಬೇಕಾಗಿದೆ ಎನ್ನುತ್ತಾರೆ ಉತ್ತರ ಕರ್ನಾಟಕದ ಮೀನುಗಾರ ಮಹೇಶ್‌.

ದರವೂ ದುಬಾರಿ
ಮೀನಿನ ಬರದಿಂದಾಗಿ ಮಾರುಕಟ್ಟೆಗಳಲ್ಲಿ ಎಲ್ಲ ವಿಧದ ಮೀನಿನ ದರವೂ ದುಬಾರಿಯಾಗಿದೆ. ಹೆಚ್ಚಾಗಿ ಸಿಗುತ್ತಿರುವ ಬಂಗುಡೆ ಕೆ.ಜಿ.ಗೆ 200 ರೂ. ಇದೆ. ಇನ್ನು ಬೂತಾಯಿ 120 ರೂ., ಅಂಜಲ್‌ಗೆ 700 ರೂ., ಪಾಂಪ್ಲೆಟ್‌ಗೆ 1 ಸಾವಿರ ರೂ., ಕೊಡ್ಡಾಯಿ (ಕೊಡ್ವಾಯಿ)ಗೆ 250 ರೂ., ಬೊಂಡಾಸ್‌ಗೆ 250 ರೂ. ವರೆಗೆ ಏರಿಕೆಯಾಗಿದೆ.

ಬಂಗುಡೆ ಮಾತ್ರ ಅಲ್ಪ ಪ್ರಮಾಣದಲ್ಲಿ ಲಭ್ಯ
ಋತುವಿನ ಆರಂಭದಲ್ಲಿ ಚಂಡಮಾರುತ, ಮಳೆಯಿಂದಾಗಿ ಅಡ್ಡಿಯಾಗಿದ್ದರೆ, ಈಗ ಮಳೆ, ಪರಿಸ್ಥಿತಿ ತಕ್ಕ ಮಟ್ಟಿಗೆ ಅನುಕೂಲವಿದ್ದರೂ ಮೀನೇ ಸಿಗದ ಪರಿಸ್ಥಿತಿ ಇದೆ. ಆಗಸ್ಟ್‌ನಿಂದ ಸೆಪ್ಟಂಬರ್‌, ಅಕ್ಟೋಬರ್‌, ನವೆಂಬರ್‌, ಡಿಸೆಂಬರ್‌ನಲ್ಲಿ ಮಂಗಳೂರು, ಮಲ್ಪೆ, ಗಂಗೊಳ್ಳಿ, ಮರವಂತೆ, ಭಟ್ಕಳ, ಕಾರವಾರ ಸೇರಿದಂತೆ ಕರಾವಳಿ ಭಾಗದಲ್ಲಿ ಉತ್ತಮ ಮೀನುಗಾರಿಕೆ ಆಗುತ್ತದೆ. ಆದರೆ ಈ ಬಾರಿ ಮಾತ್ರ ಬಂಗುಡೆ ಬಿಟ್ಟರೆ ಬೇರೆ ಬೂತಾಯಿ, ಅಂಜಲ್‌, ಪಾಂಪ್ಲೆಟ್‌ನಂತಹ ಮೀನುಗಳು ಸಿಗುತ್ತಿಲ್ಲ. ಅದರಲ್ಲೂ ಬಿಳಿ ಅಂಜಲ್‌ ಅಂತೂ ಸಿಕ್ಕೇ ಇಲ್ಲ ಎನ್ನುತ್ತಿದ್ದಾರೆ ಮೀನುಗಾರರು.

ಪ್ರತಿಕೂಲ ಹವಾಮಾನ ಕಾರಣ
ಪ್ರತಿಕೂಲ ಹವಾಮಾನದಿಂದಾಗಿ ಎಲ್ಲೆಡೆ ಮೀನಿನ ಲಭ್ಯತೆ ಕಡಿಮೆಯಾಗಿದೆ. ಹಿಂಗಾರು ಮಳೆ ಮುಗಿದ ಬಳಿಕ ಮತ್ತೆ ಸರಿಯಾಗಬಹುದು. ಡಿಸೆಂಬರ್‌ನಿಂದ ಮತ್ತೆ ಉತ್ತಮ ಮೀನುಗಾರಿಕೆ ಆಗುವ ನಿರೀಕ್ಷೆಯಿದೆ ಎಂದು ಉಡುಪಿ ಜಿಲ್ಲಾ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ವಿವೇಕ್‌ ಆರ್‌. ತಿಳಿಸಿದ್ದಾರೆ.

ಯಾಕೋ ಮೀನು ಸಿಗುವ ಪ್ರಮಾಣ ತುಂಬಾ ಕುಸಿದಿದೆ. ಕಳೆದ ವರ್ಷವೂ ಹೀಗೆ ಎರಡು ತಿಂಗಳು ಇರಲಿಲ್ಲ. ಡಿಸೆಂಬರ್‌ನಲ್ಲಿ ಚೇತರಿಸಿಕೊಂಡಿತ್ತು. ಪರ್ಸಿನ್‌ ಬೋಟುಗಳು, ದೋಣಿಯವರು ತೆರಳುತ್ತಿಲ್ಲ. ದಿನಾ ಹೋಗಿ ಬರುವ ಕೆಲ ಸಣ್ಣ ಟ್ರಾಲ್‌ ಬೋಟುಗಳು ಮಾತ್ರ ತೆರಳುತ್ತಿವೆ. ಹೆಚ್ಚಿನ ಬೋಟುಗಳಿಗೆ ಡೀಸೆಲ್‌ ಖರ್ಚಿನಷ್ಟು ಸಹ ಮೀನು ಸಿಗದೇ ಇರುವುದರಿಂದ ತೀರದಲ್ಲೇ ನಿಲ್ಲಿಸಿ ಉತ್ತಮ ದಿನಕ್ಕಾಗಿ ಕಾಯುತ್ತಿದ್ದೇವೆ.
– ಬಸವ ಖಾರ್ವಿ, ಗಂಗೊಳ್ಳಿ ತ್ರಿಸೆವೆಂಟಿ ಮೀನುಗಾರರ ಸಂಘದ ಅಧ್ಯಕ್ಷ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.