ಪ್ರಾಣ ಭಯದ ಪಯಣ; ಕಾಲುಸಂಕದಲ್ಲಿ ನದಿ, ತೊರೆ ದಾಟುವ ಮಕ್ಕಳ ಕಾಳಜಿ ವಹಿಸಿ


Team Udayavani, Aug 9, 2022, 7:10 AM IST

ಪ್ರಾಣ ಭಯದ ಪಯಣ; ಕಾಲುಸಂಕದಲ್ಲಿ ನದಿ, ತೊರೆ ದಾಟುವ ಮಕ್ಕಳ ಕಾಳಜಿ ವಹಿಸಿ

ಕುಂದಾಪುರ: ಎಲ್ಲೆಡೆ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಮಲೆನಾಡು, ಕೊಲ್ಲೂರು ಘಾಟಿ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಬೈಂದೂರು ತಾಲೂಕಿನ ಹಲವೆಡೆಗಳಲ್ಲಿ ನದಿಗಳು, ಉಪನದಿ, ತೊರೆಗಳು ತುಂಬಿ ಹರಿಯುತ್ತಿವೆ. ಕರಾವಳಿಯ ಕುಂದಾಪುರ, ಬೈಂದೂರು, ಬೆಳ್ತಂಗಡಿ, ಸುಳ್ಯ, ಪುತ್ತೂರು, ಉಡುಪಿ ಮೊದಲಾದ ತಾಲೂಕುಗಳಲ್ಲದೆ ಮಲೆನಾಡು, ಕೊಡಗಿನ ಗ್ರಾಮೀಣ ಭಾಗದ ಹಲವೆಡೆ ಶಾಲಾ ಮಕ್ಕಳು ಕಾಲು ಸಂಕ, ಕಾಡಿನಂತಹ ದುರ್ಗಮ ಹಾದಿ ದಾಟಿ ಬರಬೇಕಾದ ಪರಿಸ್ಥಿತಿಯಿದೆ. ಇಂತಹ ಮಕ್ಕಳ ಬಗ್ಗೆ ಶಿಕ್ಷಕರು ಹೆತ್ತವರು ಹೆಚ್ಚಿನ ನಿಗಾ ವಹಿಸಬೇಕಾಗಿದೆ.

ನಿರಂತರ ಮಳೆಯಿಂದಾಗಿ ಅಡಿಕೆ ಮರ ಅಥವಾ ಇನ್ನಿತರ ಮರಗಳಿಂದ ನಿರ್ಮಿಸಿರುವ ಕಾಲುಸಂಕಗಳು ಜಾರುತ್ತಿವೆ. ಇಂತಹ ಕೆಲವು ಸಂಕಗಳಿಗೆ ಎರಡೂ ಕಡೆ ಆಧಾರ ಹಿಡಿಕೆ ಇರುವುದಿಲ್ಲ. ಸ್ವಲ್ಪ ಆಯತಪ್ಪಿದರೂ, ಉಕ್ಕಿ ಹರಿಯುವ ನದಿಗೆ ಬಿದ್ದು ನೀರುಪಾಲಾಗುವ ಭೀತಿ ಇಲ್ಲದಿಲ್ಲ. ಪುಟ್ಟ ಮಕ್ಕಳು ಪ್ರಾಣಭಯದಿಂದಲೇ ಸಾಗಬೇಕಾದ ಅನಿವಾರ್ಯ ಪರಿಸ್ಥಿತಿ.

ದೇಶ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿದೆ. ಆದರೆ ಇನ್ನೂ ಗ್ರಾಮೀಣ ಭಾಗದ ಹಳ್ಳಿಗಳು ನದಿ, ಹೊಳೆ ದಾಟಲು ಸರಿಯಾದ ಸೇತುವೆ, ಕಿರು ಸೇತುವೆಯಂತಹ ಮೂಲ ಸೌಕರ್ಯದಿಂದ ವಂಚಿತವಾಗಿವೆ. ಅನೇಕ ಕಡೆಗಳಲ್ಲಿ ಕಾಲು ಸಂಕವನ್ನೇ ದಾಟಿ ಬರುವ ಶಾಲಾ ವಿದ್ಯಾರ್ಥಿಗಳು ನೂರಾರು ಮಂದಿ ಇದ್ದಾರೆ. ಕಾಲು ಸಂಕ ದಾಟುವಾಗ ಜಾಗ್ರತೆ ಅಗತ್ಯ. ಕಾಲುಸಂಕ ಮಟ್ಟಸವಾಗಿ ಇರುವುದಿಲ್ಲ. ನಿತ್ಯವೂ ಬೆಳಗ್ಗೆ – ಸಂಜೆ ಇದೇ ಕಾಲು ಸಂಕ ದಾಟಿ ಬರುವ ಪುಟ್ಟ ವಿದ್ಯಾರ್ಥಿಗಳ ಬಗ್ಗೆ ಹೆತ್ತವರು, ಶಿಕ್ಷಕರು ಅತ್ಯಂತ ಹೆಚ್ಚಿನ ಜಾಗರೂಕತೆ ವಹಿಸಬೇಕಿದೆ.

ನಗರ ಪ್ರದೇಶ ಮಾತ್ರವಲ್ಲದೆ, ಗ್ರಾಮೀಣ ಭಾಗದ ಜನರಿಗೆ ಸುಗಮ ಸಂಚಾರಕ್ಕೆ ಸೌಲಭ್ಯ ಕಲ್ಪಿಸಬೇಕಾದುದು ಸರಕಾರ ಹಾಗೂ ಸ್ಥಳೀಯ ಆಡಳಿತಗಳ ಆದ್ಯ ಕರ್ತವ್ಯ ಹಾಗೂ ಹೊಣೆಗಾರಿಕೆಯೂ ಹೌದು. ಆದರೆ ಜವಾಬ್ದಾರಿ ಮರೆತ ಕಾರಣದಿಂದಾಗಿ ಈ ರೀತಿಯ ಅವಘಢಗಳು ಆಗಾಗ ಸಂಭವಿಸುತ್ತಲೇ ಇರುತ್ತವೆ. ಹೀಗಾಗಿ ಇಂತಹ ಪರಿಸ್ಥಿತಿ ಇರುವ ಕಡೆಗಳಲ್ಲಿ ಮಕ್ಕಳನ್ನು ಕಳುಹಿಸುವ ಕಡೆಗಳಲ್ಲಿ ಹೆತ್ತವರು ಹಾಗೂ ಶಿಕ್ಷಕರು ಮೈಯೆಲ್ಲ ಕಣ್ಣಾಗಿಕೊಂಡು ಎಚ್ಚರವಹಿಸಬೇಕಾಗಿದೆ.

ಶಾಲಾ ಸಂಪರ್ಕ ಸೇತು
2018ರಲ್ಲಿ ಮಲೆನಾಡಿನ ಶಾಲೆಯೊಂದರ ವಿದ್ಯಾರ್ಥಿ ಕಾಲುಸಂಕ ದಾಟುವಾಗ ಬಿದ್ದು ನೀರಿನಲ್ಲಿ ಕೊಚ್ಚಿಹೋದುದನ್ನು ಗಮನಿಸಿ ಆಗಿನ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಶಾಲಾ ಸಂಪರ್ಕ ಸೇತು ಯೋಜನೆಯನ್ನು ಜಾರಿಗೆ ತಂದಿದ್ದರು. ಆ ಬಳಿಕ ಬಿಜೆಪಿ ಸರಕಾರ ಈ ಯೋಜನೆಯನ್ನು “ಗ್ರಾಮ ಬಂಧು ಸೇತು’ವಾಗಿ ಮುಂದುವರಿಸಿದೆ.

ಫಂಡಿಜೆ ವಾಳ್ಯದ ಘಟನೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಿಟ್ಟಡೆ ಗ್ರಾಮದ ಫಂಡಿಜೆ ವಾಳ್ಯದಲ್ಲಿ 2018ರಲ್ಲಿ ಮಳೆಗಾಲದ ಸಂದರ್ಭ ಕಾಲುಸಂಕ ದಾಟುವಾಗ ಸುಜಯ್‌ ಎಂಬಾತ ಜಾರಿ ಬಿದ್ದಿದ್ದ. ಜತೆಗಿದ್ದ ಸಹಪಾಠಿ ಆದಿತ್ಯ ತತ್‌ಕ್ಷಣ ಆತನ ಕಾಲನ್ನು ಹಿಡಿದು ಸಾಕಷ್ಟು ಹೊತ್ತು ನೇತಾಡುವ ಸ್ಥಿತಿಯಲ್ಲೇ ಹಿಡಿದಿಟ್ಟುಕೊಂಡು ಜೀವ ರಕ್ಷಿಸಿದ್ದ. ಬಳಿಕ ಮಕ್ಕಳ ಕೂಗು ಕೇಳಿ ಊರವರು ಧಾವಿಸಿ ಬಂದು ಇಬ್ಬರನ್ನೂ ರಕ್ಷಿಸಿದ್ದರು. ಆದಿತ್ಯನ ಸಾಹಸವನ್ನು ಸರಕಾರ ಗುರುತಿಸಿ ಪುರಸ್ಕರಿಸಿತ್ತು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.