ವಿಶಿಷ್ಟ ಪ್ರಕರಣ; ಪೋಕ್ಸೋ ಆರೋಪಿಗೆ ಜಾಮೀನು ಮಂಜೂರು
Team Udayavani, Dec 8, 2018, 6:35 PM IST
ಕುಂದಾಪುರ: ಫೋಕ್ಸೋ ಕಾಯಿದೆಯಡಿ ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿದ್ದ ತಲ್ಲೂರು ಗ್ರಾಮದ ಕೋಟೆಬಾಗಿಲಿನ ನಿವಾಸಿ ಉದಯ್ ಗೆ ಉಡುಪಿಯ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ.
ಏನಿದು ಪ್ರಕರಣ:
ಆರೋಪಿಯು ಬಾಲಕಿಯೊಬ್ಬಳನ್ನು ಅಪಹರಿಸಿಕೊಂಡು ಹೋಗಿರುವುದಾಗಿ ಬಾಲಕಿಯ ತಾಯಿ ದೂರು ನೀಡಿದ್ದರು. ಪೊಲೀಸರು ಆರೋಪಿಯ ಪತ್ತೆಗೆ ಪ್ರಯತ್ನಿಸಿದ್ದ ಸಂದರ್ಭದಲ್ಲಿ ಆತ ಹಾಗೂ ಬಾಲಕಿ ಸಿಕ್ಕಿರಲಿಲ್ಲವಾಗಿತ್ತು.
ಪತ್ತೆಯಾದ ಮೇಲೆ ಅವರಿಬ್ಬರೂ ವಿವಾಹವಾಗಿ ಒಂದು ಮಗು ಇರುವುದು ಬೆಳಕಿಗೆ ಬಂದಿತ್ತು. 18 ವರ್ಷದ ಒಳಗಿನ ಬಾಲಕಿ ಜೊತೆ ದೈಹಿಕ ಸಂಪರ್ಕ ಬೆಳೆಸುವುದು ಅದು ಕಾನೂನಿನ ಪ್ರಕಾರ ಅತ್ಯಾಚಾರ ಎಂಬ ವ್ಯಾಖ್ಯಾನದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.
ಆಕೆಯ ವಿವಾಹ ಹಾಗೂ ಸಮ್ಮತಿಯನ್ನೂ ಪರಿಗಣಿಸುವಂತಿಲ್ಲ, ಇದೊಂದು ವಿಶಿಷ್ಟವಾದ ಪ್ರಕರಣವಾಗಿದ್ದು, ಮಾನವೀಯ ವಿಚಾರ ಒಳಗೊಂಡಿತ್ತು. ಪ್ರಕರಣದ ಬಗ್ಗೆ ಉಡುಪಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ವೆಂಕಟೇಶ ನಾಯ್ಕ ಅವರು ವಾದ, ಪ್ರತಿವಾದ ಆಲಿಸಿ ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿ ಪರ ಕುಂದಾಪುರದ ಹಿರಿಯ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ