ನಾವುಂದ; ಹೆಣ ಸುಡಲು 20 ಕಿ.ಮೀ. ಅಲೆದಾಟ!

ಗ್ರಾ.ಪಂ. ಇನ್ನೂ ಜಂಟಿ ಸರ್ವೇ ನಡೆಸಲು ಮುಂದಾಗಿಲ್ಲ.

Team Udayavani, Jan 10, 2023, 10:50 AM IST

ನಾವುಂದ; ಹೆಣ ಸುಡಲು 20 ಕಿ.ಮೀ. ಅಲೆದಾಟ!

ಕುಂದಾಪುರ: ನಾವುಂದ ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಶವಸಂಸ್ಕಾರಕ್ಕೆ ಶ್ಮಶಾನವಿಲ್ಲ. ಅಂತ್ಯ ಸಂಸ್ಕಾರ ಮಾಡಬೇಕಾದರೆ 20 ಕಿ.ಮೀ. ದೂರದ ಕುಂದಾಪುರದ ರುದ್ರಭೂಮಿಗೆ ಹೆಣವನ್ನು ಹೊತ್ತೂಯ್ಯಬೇಕಾದ ಅನಿವಾರ್ಯತೆ ಜನರದ್ದು. ಅಂಗೈಯಗಲ ಜಾಗವಿರುವ ಗ್ರಾಮಸ್ಥರ ಹೆಣಗಾಟ ಯಾರೂ ಕೇಳುವವರೇ ಇಲ್ಲದಂತಾಗಿದೆ.

ಬೈಂದೂರು ತಾಲೂಕಿನ ನಾವುಂದ ಗ್ರಾಮದಲ್ಲಿ ರುದ್ರಭೂಮಿಯಿಲ್ಲದೆ ಜನ ಹೆಣ ಸುಡಲು ಪರದಾಡುವಂತಾಗಿದೆ. ಅಲ್ಲಿಂದ ಸುಮಾರು 20 ಕಿ.ಮೀ. ದೂರದ ಕುಂದಾಪುರ ಪುರಸಭೆ ವ್ಯಾಪ್ತಿಯ ಸಂಗಮ್‌ ಬಳಿಯ ಹಿಂದೂ ರುದ್ರಭೂಮಿಗೆ ಹೆಣವನ್ನು ತಂದು ಸುಡುವಂತ ಪರಿಸ್ಥಿತಿಯಿದೆ.

ಹಿಂದೆ ಇತ್ತು, ಈಗಿಲ್ಲ
ನಾವುಂದ ಗ್ರಾಮದಲ್ಲಿ ಬಹಳ ವರ್ಷಗಳ ಹಿಂದೆ ಪಂಚಾಯತ್‌ ಕಚೇರಿಯ ಸಮೀಪದ ಸುಮಾರು ಜಾಗವೊಂದರಲ್ಲಿ ಶ್ಮಶಾನವಿತ್ತು. ಅಲ್ಲಿಯೇ ಎಲ್ಲ ಸಮುದಾಯದ ಜನರು ಅಂತ್ಯಸಂಸ್ಕಾರ ನೆರವೇರಿಸುತ್ತಿದ್ದರು. ಆದರೆ ಕಳೆದ 10 ವರ್ಷಗಳಿಂದ ಇಲ್ಲಿ ಶವಸಂಸ್ಕಾರ ನಡೆಯುತ್ತಿಲ್ಲ. ಈಗಲೂ ಆ ಜಾಗವು ರುದ್ರಭೂಮಿಗೆ ಕಾದಿರಿಸಲಾಗಿದೆ ಎನ್ನು ದಾಖಲೆಯಿದೆ. ಆದರೆ ಇದಕ್ಕೆ ಕೆಲವರ ತಕರಾರು ಇದ್ದು, ಅದಿನ್ನೂ ಇತ್ಯರ್ಥಗೊಂಡಿಲ್ಲ.

ಪ್ರತೀ ಸಭೆಯಲ್ಲೂ ಚರ್ಚೆ
ನಾವುಂದ ಗ್ರಾಮಕ್ಕೆ ಹಿಂದೂ ರುದ್ರಭೂಮಿ ಬೇಕು ಎನ್ನುವ ಬಗ್ಗೆ ಪ್ರತೀ ಗ್ರಾಮಸಭೆಗಳಲ್ಲೂ ಚರ್ಚೆಯಾಗುತ್ತಿದೆ. ಜಾಗದ ಗೊಂದಲ ಇರುವುದನ್ನು ಜಂಟಿ ಸರ್ವೇ ನಡೆಸಿ, ಸರಿಪಡಿಸಬೇಕು ಎನ್ನುವುದಾಗಿ ಸದಸ್ಯರು ಒತ್ತಾಯಿಸುತ್ತಿದ್ದರೂ, ಗ್ರಾ.ಪಂ. ಇನ್ನೂ ಜಂಟಿ ಸರ್ವೇ ನಡೆಸಲು ಮುಂದಾಗಿಲ್ಲ.

ದುಬಾರಿ ವೆಚ್ಚ
ನಾವುಂದ ಗ್ರಾಮದಲ್ಲಿ ಬಹುತೇಕ ಬಡ ವರ್ಗದವರೇ ಹೆಚ್ಚಿದ್ದು, ಮನೆ ಕಟ್ಟಿಕೊಳ್ಳುವಷ್ಟೇ ಜಾಗ ಇರುವುದು. ಅವರೆಲ್ಲ ತಮ್ಮ ಮನೆಯವರು ಸಾವನ್ನಪ್ಪಿದರೆ, 20 ಕಿ.ಮೀ. ದೂರದ ಕುಂದಾಪುರಕ್ಕೆ ಹೆಣವನ್ನು ಹೊತ್ತುಕೊಂಡು ಬರಬೇಕು. ವಾಹನ ವೆಚ್ಚ, ಕಟ್ಟಿಗೆ, ರುದ್ರಭೂಮಿ ಶುಲ್ಕವೆಲ್ಲ ಸೇರಿ, 5ರಿಂದ 6 ಸಾವಿರ ರೂ. ಬೇಕಾಗುತ್ತದೆ. ಇದನ್ನು ಭರಿಸಲು ಕಷ್ಟ ಪಡುವವರು ಬಹಳಷ್ಟು ಮಂದಿಯಿದ್ದಾರೆ. ಕೊರೊನಾ ಸಮಯದಲ್ಲೂ ಅನೇಕ ಮನೆಯವರು ಅಂತ್ಯಸಂಸ್ಕಾರಕ್ಕಾಗಿ ಪರದಾಡಿದ್ದಾರೆ.

ಆದಷ್ಟು ಬೇಗ ಆಗಲಿ
ನಾವುಂದ ಗ್ರಾಮದಲ್ಲಿ ಆದಷ್ಟು ಬೇಗ ಹಿಂದೂ ರುದ್ರಭೂಮಿ ಆಗಲಿ. ದೂರದ ಕುಂದಾಪುರಕ್ಕೆ ಹೋಗುವ ಸಂಕಟ ಬೇಗ ಮುಗಿಯಲಿ. ಬಡವರ ಪಾಲಿನ ಬೇಡಿಕೆ ಶೀಘ್ರ ಈಡೇರಲಿ.
-ಸತೀಶ್‌ ನಾವುಂದ, ಗ್ರಾಮಸ್ಥರು

ಶೀಘ್ರ ಜಂಟಿ ಸರ್ವೇ
ನಾವುಂದ ಗ್ರಾ.ಪಂ.ನಲ್ಲಿ ಜಾಗದ ಗೊಂದಲ ಇರುವುದರಿಂದ ಹಿಂದೂ ರುದ್ರಭೂಮಿ ಮಾಡಲು ಸಾಧ್ಯವಾಗಿಲ್ಲ. ಈಗಾಗಲೇ ಗೊತ್ತು ಮಾಡಿರುವ ಜಾಗವನ್ನು ಪರಿಶೀಲನೆ ನಡೆಸಲಾಗಿದೆ. ಆದಷ್ಟು ಬೇಗ ಜಂಟಿ ಸರ್ವೇ ನಡೆಸಿ, ಶ್ಮಶಾನಕ್ಕಾಗಿ ಅಗತ್ಯ ಕ್ರಮಕೈಗೊಳ್ಳಲಾಗುವುದು.
– ಭಾರತಿ, ಬೈಂದೂರು ತಾ.ಪಂ. ಕಾರ್ಯನಿರ್ವಹಣಾಧಿಕಾರಿ

ಜನಸಂಖ್ಯೆ 6,000+, ಮತದಾರರು 5,749, ಮನೆಗಳು 1,039

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.