ಗಂಗೊಳ್ಳಿ : ವಾರದ ಸಂತೆಗಿಲ್ಲ ಸ್ವಂತ ಜಾಗ


Team Udayavani, Jun 21, 2019, 11:53 AM IST

kundapura-tdy-2..

ಕೆಸರಿನಲ್ಲೇ ನಡೆಯುತ್ತಿರುವ ಗಂಗೊಳ್ಳಿಯ ವಾರದ ಸಂತೆ.

ಗಂಗೊಳ್ಳಿ, ಜೂ. 20: ಅವಿಭಜಿತ ಕುಂದಾಪುರ ತಾಲೂಕಿನಲ್ಲಿಯೇ ದೊಡ್ಡ ಹಾಗೂ ಹೆಚ್ಚಿನ ಜನಸಂಖ್ಯೆ ಹೊಂದಿರುವ ಗ್ರಾಮವಾದ ಗಂಗೊಳ್ಳಿಯಲ್ಲಿ ಪ್ರತಿ ಬುಧವಾರ ನಡೆಯುವ ವಾರದ ಸಂತೆಗೆ ಇನ್ನೂ ಕೂಡ ಸ್ವಂತ ಜಾಗವಿಲ್ಲ. ಕಳೆದ 4 -5 ವರ್ಷಗಳಿಂದ ಖಾಸಗಿ ಜಾಗ ವೊಂದರಲ್ಲಿ ವಾರದ ಸಂತೆ ನಡೆಯುತ್ತಿದೆ.

ಗಂಗೊಳ್ಳಿಯ ಮುಖ್ಯ ರಸ್ತೆಯ ಪಕ್ಕ ಅರೆಕಲ್ಲು ಸಮೀಪ ವಾರದ ಸಂತೆ ನಡೆಯುತ್ತಿದೆ. ಮೊದಲಿಗೆ ಇಲ್ಲಿನ ನಗರೇಶ್ವರಿ ದೇವಸ್ಥಾನ ಸಮೀಪದ ಮುಖ್ಯ ರಸ್ತೆಯ ಎರಡೂ ಬದಿಗಳಲ್ಲಿ ವಾರದ ಸಂತೆ ಸುಮಾರು ಒಂದೂವರೆ ವರ್ಷಗಳ ಕಾಲ ನಡೆಯುತ್ತಿತ್ತು. ಆ ಬಳಿಕ ಇದು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತದೆ ಎನ್ನುವ ಕಾರಣಕ್ಕೆ ಅರೆಕಲ್ಲು ಸಮೀಪ ಖಾಸಗಿ ವ್ಯಕ್ತಿಯೊಬ್ಬರ ಜಾಗವೊಂದರಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ವಾರದ ಸಂತೆ ನಡೆಯುತ್ತಿದೆ.

ಇಷ್ಟು ವರ್ಷಗಳಿಂದ ವಾರದ ಸಂತೆ ನಡೆಯುತ್ತಿದ್ದರೂ, ಇಲ್ಲಿನ ಪಂಚಾಯತ್‌ ಆಗಲಿ ಅಥವಾ ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಂಘವಾಗಲಿ ಗಂಗೊಳ್ಳಿಯಲ್ಲಿ ಸಂತೆ ನಡೆಸಲು ಸ್ವಂತ ಜಾಗವನ್ನು ಗುರುತಿಸಿಲ್ಲ. ಸುಸಜ್ಜಿತ ಮಾರುಕಟ್ಟೆಗೆ ಬೇಕಾದ ಕಟ್ಟಡವಿಲ್ಲ. ಇಷ್ಟು ವರ್ಷಗಳಿಂದ ಇಲ್ಲಿ ಸಂತೆ ನಡೆಯುತ್ತಿದ್ದರೂ ಸೂಕ್ತವಾದ ಸರಕಾರಿ ಜಾಗವೊಂದನ್ನು ಗುರಿತಿಸಲು ಈವರೆಗೆ ಸಂಬಂಧಪಟ್ಟವರು ಯಾರೂ ಮುಂದಾಗಿಲ್ಲ.

ಸೂಕ್ತ ಸರಕಾರಿ ಜಾಗವಿಲ್ಲ:

ಇಲ್ಲಿ ಪ್ರತಿ ವಾರ ನಡೆಯುವ ಸಂತೆಗೆ ಸೂಕ್ತ ಜಾಗವನ್ನು ಒದಗಿಸಿಕೊಡಬೇಕು ಎನ್ನುವ ಯೋಜನೆಯಿದ್ದರೂ ಪಂಚಾಯತ್‌ ವ್ಯಾಪ್ತಿಯಲ್ಲಿ ಎಲ್ಲಿಯೂ ಸೂಕ್ತವಾದ ಸರಕಾರಿ ಜಾಗವಿಲ್ಲ. ರಥಬೀದಿಯಲ್ಲಿ ನಡೆಸುವುದು ಬೇಡ ಎಂದು ಸದಸ್ಯರೇ ಈ ಹಿಂದೆ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದಿನ ಗ್ರಾಮಸಭೆಯಲ್ಲಿಯೂ ಈ ಬಗ್ಗೆ ಚರ್ಚೆಯಾಗಿದ್ದು, ಈಗ ಸಂತೆ ನಡೆಯುವ ಜಾಗದವರೇ ವ್ಯಾಪಾರಿಗಳಿಂದ ಇಂತಿಷ್ಟು ಬಾಡಿಗೆ ರೂಪದಲ್ಲಿ ಸಂಗ್ರಹಿಸಿ ಪಂಚಾಯತ್‌ಗೆ ತಿಂಗಳಿಗೆ 2 ಸಾವಿರ ರೂ. ನೀಡುತ್ತಾರೆ. ಅದನ್ನು ಇನ್ನು 4 ಸಾವಿರ ರೂ. ಹೆಚ್ಚಿಸಿ ನಿರ್ಣಯ ಮಾಡಲಾಗಿದೆ. – ಚಂದ್ರಶೇಖರ್‌,ಪಿಡಿಒ ಗಂಗೊಳ್ಳಿ ಗ್ರಾ.ಪಂ.
ಕೆಸರಿನಲ್ಲೇ ವ್ಯಾಪಾರ:

ಮಳೆಗಾಲದಲ್ಲಿ ಅಂತೂ ಈಗ ನಡೆಯುತ್ತಿರುವ ಜಾಗದಲ್ಲಿ ತರಕಾರಿ, ಹಣ್ಣು, ಹೂವು, ದಿನಸಿ ವಸ್ತುಗಳನ್ನು ಕೆಸರಿನಲ್ಲೇ ಇಟ್ಟುಕೊಂಡು ಮಾರಾಟ ಮಾಡಬೇಕಾದ ಪರಿಸ್ಥಿತಿಯಿದೆ. ಸಂತೆಯ ಈ ದುಸ್ಥಿತಿಯಿಂದಾಗಿ ಮಳೆ ಬಂದರೆ ಖರೀದಿಗೆ ಗ್ರಾಹಕರು ಕೂಡ ಬರುವುದಿಲ್ಲ. ಸಂಬಂಧಪಟ್ಟವರು ವಾರದ ಸಂತೆಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟರೆ ಅನುಕೂಲವಾಗುತ್ತದೆ ಎನ್ನುವುದು ಇಲ್ಲಿಗೆ ಮಾರಾಟ ಮಾಡಲು ಬಂದ ವ್ಯಾಪಾರಿಯೊಬ್ಬರ ಅಭಿಪ್ರಾಯ.

 

.ವಿಶೇಷ ವರದಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.