ಪರೇಶ್ ಮೇಸ್ತ ಹತ್ಯೆ ಖಂಡಿಸಿ ಗಂಗೊಳ್ಳಿ ಪೇಟೆ ಬಂದ್
Team Udayavani, Dec 19, 2017, 1:15 PM IST
ಕುಂದಾಪುರ:ಪರೇಶ್ ಮೇಸ್ತ ಹತ್ಯೆ ಖಂಡಿಸಿ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಡಿ. 19 ಮಂಗಳವಾರ ಗಂಗೊಳ್ಳಿ ಪೇಟೆ, ತ್ರಾಸಿಭಾಗದಲ್ಲಿ ಬಂದ್ ಆಚರಿಸಲಾಗುತ್ತಿದೆ.
ಬೆಳಗ್ಗೆ 9 ಗಂಟೆಗೆ ಗಂಗೊಳ್ಳಿ ಬಂದರಿನ ಪೋರ್ಟ್ ಆಫೀಸ್ ಬಳಿಯಿಂದ ಕೊಡಪಾಡಿವರೆಗೆ ಬೃಹತ್ ಪ್ರತಿಭಟನ ಜಾಥಾ ನಡೆಸಿ,ಕೊಡಪಾಡಿ ಮೈದಾನದಲ್ಲಿ ಪ್ರತಿಭಟನ ಸಭೆ ನಡೆಸಲಾಯಿತು.
ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ವರ್ತಕರು ಹಾಗೂ ನಾಗರಿಕರು ಸ್ವಯಂಪ್ರೇರಿತ ಬಂದ್ ನಡೆಸಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಗಂಗೊಳ್ಳಿ ಹಾಗೂ
ಸುತ್ತಮುತ್ತಲಿನ ಪ್ರದೇಶಗಳ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.