ಗಂಗೊಳ್ಳಿ ಜೆಟ್ಟಿ ಕುಸಿತದಿಂದ ಹಾನಿ; ಹೋರಾಟದ ಎಚ್ಚರಿಕೆ
Team Udayavani, Sep 29, 2022, 6:15 AM IST
ಗಂಗೊಳ್ಳಿ: ಇಲ್ಲಿನ ಮೀನುಗಾರಿಕ ಬಂದರು ಪ್ರದೇಶದಲ್ಲಿ ನಡೆಯುತ್ತಿರುವ ಜೆಟ್ಟಿ ನಿರ್ಮಾಣ ಕಾಮಗಾರಿ ಮೇಲೆ ಹಳೆ ಕಾಮಗಾರಿ ಶೇಷ ಬಿದ್ದ ಕಾರಣ ಹೊಸ ಜೆಟ್ಟಿಗೂ ಹಾನಿಯಾದ ಘಟನೆ ಬುಧವಾರ ಸಂಜೆ ಸಂಭವಿಸಿದೆ.
150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿದ್ದು, ಸಂಜೆ 5.30ರ ಹೊತ್ತಿಗೆ ಘಟನೆ ಸಂಭವಿಸಿದ ಬಳಿಕ ನಿರಂತರವಾಗಿ ಕುಸಿತವಾಗುತ್ತಿದ್ದರೂ ಕೂಡ ಸಂಬಂದಪಟ್ಟವರು ಗಮನ ಹರಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.
ಶಿವಮೊಗ್ಗ ಸಂಸದ ಹಾಗೂ ಬೈಂದೂರು ಶಾಸಕರ ಮುತುವರ್ಜಿಯಲ್ಲಿ 12.8 ಕೋ.ರೂ. ಅನುದಾನದಲ್ಲಿ ನೂತನ ಜೆಟ್ಟಿ ಕಾಮಗಾರಿ ನಡೆಯುತ್ತಿದೆ. ಹಳೆ ಜೆಟ್ಟಿ ಕುಸಿತದ ಕಾರಣ ಹೊಸ ಜೆಟ್ಟಿಯ ವಿನ್ಯಾಸ ಬದಲಿಸುವ ಕುರಿತು ಇಲಾಖೆ ಆಲೋಚಿಸುತ್ತಿದೆ. ಕಾಮಗಾರಿಗಾಗಿ ಹಳೆ ಜೆಟ್ಟಿಯ ಗೋಡೆ ನಡುವೆ ಯಿದ್ದ ರಾಡ್ ತುಂಡರಿಸಿದ್ದರಿಂದ ಕುಸಿತಕ್ಕೊಳಗಾಗಿದೆ. ಈಗ ನಡೆಯುತ್ತಿರುವ ಕಾಮಗಾರಿ ಮಾಡಿದ ಪಿಲ್ಲರ್ ಮೇಲೆ ಹಳೆ ಜೆಟ್ಟಿ ಬಿದ್ದ ಕಾರಣ ಪಿಲ್ಲರ್ ಕುಸಿದಿದೆ.
ಹೋರಾಟದ ಎಚ್ಚರಿಕೆ: ಸದ್ಯದ ಪರಿಸ್ಥಿತಿಯಲ್ಲಿ ಮೀನು ಖಾಲಿ ಮಾಡಲು ದೂರದ ಭಟ್ಕಳ ಮೊದಲಾ ದೆಡೆ ತೆರಳಬೇಕಾದ ಅನಿವಾರ್ಯವಿದೆ. ಹೀಗಾಗಿ ಈ ಸಮಸ್ಯೆಗೆ ಶೀಘ್ರ ಪರಿಹಾರವೊದಗಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ನಿಶ್ಚಿತ ಎಂದು ಗಂಗೊಳ್ಳಿಯ ಹಸಿ ಮೀನು ವ್ಯಾಪಾರಸ್ಥರ ಸಂಘದವರು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…