Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಯಾವತ್ತೂ ಚಿತ್ರ ರಚನೆಯ ತರಗತಿಗಳಿಗೆ ಹೋದವಳಲ್ಲ

Team Udayavani, May 1, 2024, 5:27 PM IST

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಗಂಗೊಳ್ಳಿ: ಉತ್ತಮ ಹವ್ಯಾಸ ಎನ್ನುವಂತದ್ದು ಯಾವತ್ತಿಗೂ ಸಾಧನೆಯ ಹಾದಿಯಲ್ಲಿ ಹೊಸ ಹುಮ್ಮಸ್ಸನ್ನು ತಂದು ಕೊಡುತ್ತದೆ. ವಿಶೇಷವಾಗಿ ಚಿತ್ರಕಲೆಯಂತಹ ಹವ್ಯಾಸ ವಿದ್ಯಾರ್ಥಿ ಜೀವನದಲ್ಲಿ ಏಕಾಗ್ರತೆ ರೂಪಿಸಿಕೊಳ್ಳಲು ಹಾಗೂ ಕಲಿಕೆಗೆ ಪೂರಕವಾದ ಮನಸ್ಸನ್ನು ಹೊಂದಲು ಸಹಕರಿಯಾಗುತ್ತದೆ.

ಇಂತಹ ಚಿತ್ರಕಲೆಯನ್ನು ತನ್ನ ಎಳೆಯ ವಯಸ್ಸಿನಲ್ಲಿ ಹವ್ಯಾಸವಾಗಿಸಿಕೊಂಡು, ಸ್ವಯಂ ಪ್ರೇರಣೆಯಿಂದ ಚಿತ್ರ ರಚನೆಯಲ್ಲಿ ತೊಡಗಿಸಿಕೊಂಡು ತನ್ನೊಳಗಿದ್ದ ಚಿತ್ರಗಾರ್ತಿಯನ್ನು ಕೃತಿರೂಪಕ್ಕಿಳಿಸಿ ನೋಡುಗರು ಬೆರಗಾಗುವಂತೆ ಮೆಚ್ಚಿ ಹೊಗಳುವಂತೆ ಮಾಡಿರುವುದು ಕುಂದಾಪುರ ತಾಲೂಕಿನ ಗಂಗೊಳ್ಳಿಯ ಪ್ರತಿಭೆ ತುಳಸಿ.

ಗಂಗೊಳ್ಳಿಯ ಪ್ರಸಿದ್ಧ ಛಾಯಾ ಚಿತ್ರಗ್ರಾಹಕ ಗಣೇಶ ಪಿ. ವೆಲ್‌ಕಮ್‌ ಮತ್ತು ಉಪನ್ಯಾಸಕಿ ಮಾಲತಿ ದಂಪತಿಯ ಪುತ್ರಿ ತುಳಸಿ
ಯಾವತ್ತೂ ಚಿತ್ರ ರಚನೆಯ ತರಗತಿಗಳಿಗೆ ಹೋದವಳಲ್ಲ. ಯಾವುದೇ ಚಿತ್ರಕಲಾ ಶಿಕ್ಷಕರ ಬಳಿ ತರಬೇತಿ ಪಡೆದವರಲ್ಲ. ತಂದೆ ಗಣೇಶ ಅವರು ಬಿಡಿಸುತ್ತಿದ್ದ ಚಿತ್ರಗಳಿಂದ ಪ್ರೇರಣೆ ಸ್ಫೂರ್ತಿ ಪಡೆದು, ಹಾಗೆ ಸುಮ್ಮನೆ ಎನ್ನುವಂತೆ ಚಿತ್ರ ರಚನೆಯಲ್ಲಿ ತೊಡಗಿಸಿಕೊಂಡ ತುಳಸಿ ಅವರ ಕೈಯಲ್ಲಿ ಈಗ ಮೂಡಿ ಬರುತ್ತಿರುವ ಸುಂದರ ಚಿತ್ರಗಳು ನೋಡುಗರನ್ನು ಮಂತ್ರ
ಮುಗ್ದರನ್ನಾಗಿಸುತ್ತಿದೆ.

ಕೊರೊನಾ ಸಮಯದಲ್ಲಿ ಸಿಕ್ಕ ಬಿಡುವಿನ ವೇಳೆಯನ್ನು ಸದು ಪಯೋಗಪಡಿಸಿಕೊಂಡು ಸ್ವಯಂ ಪ್ರೇರಣೆಯಿಂದ ಚಿತ್ರ ರಚನೆಯಲ್ಲಿ ತೊಡಗಿಸಿಕೊಂಡಿದ್ದ ತುಳಸಿ, ಚಿತ್ರಕಲೆಯಲ್ಲಿ ಪಳಗಿರುವ ರೀತಿ ನಿಜಕ್ಕೂ ಅಚ್ಚರಿ ಮೂಡಿಸುತ್ತಿದೆ.

ಈಕೆಯ ಕರಗಳಲ್ಲಿ ಅರಳಿದ ಕೃಷ್ಣ, ಗಣೇಶ, ಬುದ್ಧ, ಮುದುಕಿ, ಸನ್ಯಾಸಿ, ಹಂಸ, ವೃದ್ಧ, ಪ್ರಕೃತಿ ಮೊದಲಾದ ಚಿತ್ರಗಳು ಈಕೆಯ ಕಲಾ ಪ್ರೌಢಿಮೆಯನ್ನು ಸಾರಿ ಹೇಳುತ್ತದೆ. ಬೆಣಚುಕಲ್ಲಿನಲ್ಲಿ ವೈವಿಧ್ಯಮಯವಾದ ಆಕರ್ಷಕ ಚಿತ್ರಗಳನ್ನು ಬಿಡಿಸಿರುವ ಈಕೆ,
ಮಹಾಭಾರತದ ವಿವಿಧ ಸನ್ನಿವೇಶ, ಮಹಿಳೆಯರ ಮೇಲಿನ ದೌರ್ಜನ್ಯ, ನೀರಿನ ಸಮಸ್ಯೆ ಮೊದಲಾದವುಗಳ ಬಗ್ಗೆ ಬಿಡಿಸಿದ ಚಿತ್ರಗಳು ಕಲಾಸಕ್ತರ ಗಮನ ಸೆಳೆದು ವಿಶೇಷ ಮೆಚ್ಚುಗೆಗೆ ಪಾತ್ರವಾಗಿದೆ. ಪೆನ್ಸಿಲ್‌ ಮತ್ತು ಬಣ್ಣಗಳಿಂದಲೇ ಭಾವಗಳನ್ನು ತೆರೆದಿಡುವ ಈಕೆಯ ಕಲಾ ಪ್ರೌಢಿಮೆ ಅಭಿನಂದನೀಯ.

ಸ್ಪರ್ಧೆಯ ಕಡೆಗೆ ಹೆಚ್ಚು ಆಸಕ್ತಿ ತೋರಿಸದ ತುಳಸಿ, ಚಿತ್ರ ಬಿಡಿಸುವುದರಲ್ಲೇ ಮನಸ್ಸಿಗೆ ನೆಮ್ಮದಿ ಖುಷಿ, ಸಂತೃಪ್ತಿ ಸಿಗುತ್ತದೆ ಅಷ್ಟು
ಸಾಕು ಎನ್ನುವ ವಿನೀತ ಭಾವ ಹೊಂದಿದ್ದಾಳೆ. ನವೀನ ಕಲ್ಪನೆ ಹಾಗೂ ಸೃಜನಶೀಲತೆಯನ್ನು ಮೇಳೈಸಿಕೊಂಡು ಮತ್ತಷ್ಟು ಈ ನಿಟ್ಟಿನಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡುವ ಹಂಬಲ ಈಕೆಗಿದೆ. ಮೊಬೈಲ್‌, ರೀಲ್ಸ್‌, ಟಿವಿ, ಸಾಮಾಜಿಕ ಜಾಲತಾಣಗಳ ಭರಾಟೆಯಲ್ಲಿ ಕಳೆದುಹೋಗಿರುವ ಇಂದಿನ ವಿದ್ಯಾರ್ಥಿಗಳಿಗೆ ತುಳಸಿಯಂತಹ ಪ್ರತಿಭೆಗಳು ನಿಜಕ್ಕೂ ಪ್ರೇರಣೆ ಆಗಬಲ್ಲರು.

ಗಮನ ಸೆಳೆದ ರಾಮನ ಚಿತ್ರ
ತುಳಸಿ, ಅವರ ಕೈಯಲ್ಲಿ ಅರಳಿದ ಅಯೋಧ್ಯೆ ಶ್ರೀರಾಮ ಮಂದಿರದ ಶ್ರೀ ಬಾಲರಾಮನ ಚಿತ್ರ ಎಲ್ಲರನ್ನೂ ಮಂತ್ರ ಮುಗ್ಧರನ್ನಾಗಿಸಿದೆ. ಅಯೋಧ್ಯೆ ಶ್ರೀ ರಾಮ ಮಂದಿರದ ಬಾಲರಾಮನ ವಿಗ್ರಹದ ಪ್ರತಿರೂಪದಂತಿರುವ ಈ ಚಿತ್ರ ನೋಡುತ್ತಿದ್ದರೆ ಎಂಥವರು ಕೂಡ ಕೈ ಮುಗಿಯುವಂತಿದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಮೂರು ಕಡಲಾಮೆ ರಕ್ಷಣೆ

Kundapura ಮೂರು ಕಡಲಾಮೆ ರಕ್ಷಣೆ

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Uppunda ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Kundapura – Byndoor ಹೆದ್ದಾರಿ: ನಾಲ್ಕು ಅಂಡರ್‌ಪಾಸ್‌ಗೆ ಒಪ್ಪಿದ ಗಡ್ಕರಿ

Uppunda ಶಾರ್ಟ್ ಸರ್ಕ್ಯೂಟ್: ಅಂಗಡಿ ಭಸ್ಮ

Uppunda ಶಾರ್ಟ್ ಸರ್ಕ್ಯೂಟ್: ಅಂಗಡಿ ಭಸ್ಮ

Kolluru Mookambika: ದರ್ಶನ್‌ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

Kollur Mookambika: ದರ್ಶನ್‌ ಬಂಧಮುಕ್ತಿಗಾಗಿ ಮೂಕಾಂಬಿಕೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.